ಅಪರಾಧ

ಶಾಲಾ ಮಕ್ಕಳನ್ನು ಅಪಹರಿಸಲು ಬಂದ ದುಷ್ಕರ್ಮಿಗಳ ತಂಡ | ಮಕ್ಕಳ ಧೈರ್ಯ ಕಂಡು ಪರಾರಿಯಾದ ತಂಡ

ಮುಲ್ಕಿ: ದುಷ್ಕರ್ಮಿಗಳ ತಂಡವೊಂದು ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಯತ್ನಿಸಿದ್ದು, ಮಕ್ಕಳ ಧೈರ್ಯ ಕಂಡು ದುಷ್ಕರ್ಮಿಗಳ ತಂಡ ಸ್ಥಳದಿಂದ ಪರಾರಿಯಾದ ಘಟನೆ ಮುಲ್ಕಿಯಲ್ಲಿ ನಡೆದಿದೆ. ಕಾರಿನಲ್ಲಿ ಬಂಡ ತಂಡ ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಮಕ್ಕಳಿಗೆ ಚಾಕೊಲೇಟ್ ಅಸೆ ತೋರಿಸಿ ಕಾರಿನಲ್ಲಿ ಕುಳಿತುಕೊಳ್ಳಲು ಹೇಳಿದ್ದಾರೆ. ಇದಕ್ಕೆ ಮಕ್ಕಳು ಬಗ್ಗಲಿಲ್ಲ, ಕೂಡಲೇ ತಂಡದಲ್ಲಿ ಒಬ್ಬ ಚಾಕು ತೋರಿಸಿದಾಗ ಮಕ್ಕಳು ಧೈರ್ಯದಿಂದ ಶಾಲೆಗೆ ಓಡಿ ಹೋಗಿ ಶಾಲಾ ಪ್ರಾಂಶುಪಾಲರಿಗೆ ದೂರು ನೀಡಿದ್ದಾರೆ. ಶಾಲಾ ಪ್ರಾಂಶುಪಾಲರು ಸಹಿತ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದಾಗ […]

ಶಾಲಾ ಮಕ್ಕಳನ್ನು ಅಪಹರಿಸಲು ಬಂದ ದುಷ್ಕರ್ಮಿಗಳ ತಂಡ | ಮಕ್ಕಳ ಧೈರ್ಯ ಕಂಡು ಪರಾರಿಯಾದ ತಂಡ Read More »

ಆನಡ್ಕ – ಪುತ್ತೂರು  ಬಸ್‍ ಮತ್ತೆ ಸ್ಥಗಿತ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ತಯರಾದ ಪ್ರಯಾಣಿಕರು

ಪುತ್ತೂರು :  ಆನಡ್ಕದಿಂದ ಪುತ್ತೂರಿಗೆ ಹಲವು ಸಮಯಗಳಿಂದ ಬಾರದೆ ಇದ್ದ ಬಸ್ಸಿನ ಸಂಚಾರವನ್ನು ಗ್ರಾಮಸ್ಥರ ಪ್ರತಿಭಟನೆಯ ಎಚ್ಚರಿಕೆಗೆ ಮಣಿದು ಆರಂಭಗೊಳಿಸಿದರಾದರೂ ಇದೀಗ ಮತ್ತೆ ಬಸ್ ಸಂಚಾರ ಸ್ಥಗಿತಗೊಂಡಿರುವ ಬಗೆ ಪ್ರಯಾಣಿಕರು ದಿಗ್ಭ್ರಮೆ ವ್ಯಕ್ತ ಪಡಿಸಿದ್ದು, ಪ್ರತಿಭಟನೆಗೆ ಸಿದ್ದತೆ ನಡೆಯುತ್ತಿದೆ ಎಂದು ಕೇಳಿಬಂದಿದೆ.   ಆನಡ್ಕ – ಪುತ್ತೂರು  ಭಾಗಕ್ಕೆ ಬೆಳಗ್ಗೆ 8:00 ಗಂಟೆಗೆ ಹೊರಡುವ ಬಸ್‍ ಇಲ್ಲ ಎಂಬ ಮಾಹಿತಿ ಒಂದು ವಾರದ ಹಿಂದೆ ಕೇಳಿದ್ದೇವೆ. ಇದರಿಂದ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ತೆರಳಲು ಸಮಸ್ಯೆಗಳಾಗಿವೆ. ಈ ಕಾರಣ ಬಸ್‍

ಆನಡ್ಕ – ಪುತ್ತೂರು  ಬಸ್‍ ಮತ್ತೆ ಸ್ಥಗಿತ | ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ತಯರಾದ ಪ್ರಯಾಣಿಕರು Read More »

ಹೀರೋಯಿನ್‌ ಮಾಡುತ್ತೇವೆ ಎಂದು ನಂಬಿಸಿ ಮಾಜಿ ಮುಖ್ಯಮಂತ್ರಿ ಮಗಳಿಗೆ 4 ಕೋ.ರೂ ವಂಚನೆ

ಬಾಲಿವುಡ್‌ ಸಿನಿಮಾಗಳಲ್ಲಿ ಅವಕಾಶ ನೀಡುವ ಆಮಿಷವೊಡ್ಡಿ ಮೋಸ ಮುಂಬಯಿ : ಬಾಲಿವುಡ್‌ ಸಿನಿಮಾಗಳಲ್ಲಿ ಹೋರೊಯಿನ್‌ ಮಾಡುತ್ತೇವೆ ಎಂದು ನಂಬಿಸಿ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪುತ್ರಿ ಆರುಷಿ ನಿಶಾಂಕ್‌ಗೆ ವಂಚಕರು 4 ಕೋಟಿ ರೂ. ಪಂಗನಾಮ ಪ್ರಕರಣ ಬೆಳಕಿಗೆ ಬಂದಿದೆ. ಮುಂಬಯಿಯ ಜುಹು ಪ್ರದೇಶದ ಇಬ್ಬರು ವ್ಯಕ್ತಿಗಳು ಚಲನಚಿತ್ರ ನಿರ್ಮಾಪಕರೆಂದು ಹೇಳಿಕೊಂಡು ಆರುಷಿಯಿಂದ 4 ಕೋಟಿ ರೂ. ಸುಲಿಗೆ ಮಾಡಿದ್ದಾರೆ. ಆರುಷಿಗೆ ಬಾಲ್ಯದಿಂದಲೇ ನಟನೆಯತ್ತ ಆಕರ್ಷಣೆಯಿತ್ತು. ಈಗಾಗಲೇ

ಹೀರೋಯಿನ್‌ ಮಾಡುತ್ತೇವೆ ಎಂದು ನಂಬಿಸಿ ಮಾಜಿ ಮುಖ್ಯಮಂತ್ರಿ ಮಗಳಿಗೆ 4 ಕೋ.ರೂ ವಂಚನೆ Read More »

ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಣ : ಎಸ್‌ಐಟಿಯಿಂದ ನಾಲ್ವರ ಬಂಧನ

ಪ್ರಸಿದ್ಧ ಡೈರಿಗಳ ಮಾಲೀಕರನ್ನು ಬಂಧಿಸಿ ವಿಚಾರಣೆ ತಿರುಪತಿ: ಹಿಂದೂಗಳ ಪವಿತ್ರ ಯಾತ್ರಾತಾಣ ತಿರುಪತಿ ತಿರುಮಲದಲ್ಲಿ ನಡೆದಿದೆ ಎನ್ನಲಾದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ನಾಲ್ವರನ್ನು ಬಂಧಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ ಮುರಳೀರಾಂಬ, ವಿಶಾಖಪಟ್ಟಣಂ ಡಿಐಜಿ ಗೋಪಿನಾಥ್ ಜೆಟ್ಟಿ, ಗುಂಟೂರು ಐಜಿ ಸರ್ವಶ್ರೇಷ್ಠಿ ತ್ರಿಪಾಠಿ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿ ಸತ್ಯಕುಮಾರ್ ಪಾಂಡಾ ನೇತೃತ್ವದ ತಂಡ ನಾಲ್ವರು

ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಣ : ಎಸ್‌ಐಟಿಯಿಂದ ನಾಲ್ವರ ಬಂಧನ Read More »

ಭದ್ರತಾ ಪಡೆ ಎನ್‌ಕೌಂಟರ್‌ಗೆ 12 ನಕ್ಸಲರು ಬಲಿ

ರಾಯ್‌ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ 12 ನಕ್ಸಲರು ಹತರಾಗಿದ್ದಾರೆ. ಇದರೊಂದಿಗೆ ನಕ್ಸಲ್‌ ನಿಗ್ರಹ ಹೋರಾಟದಲ್ಲಿ ಭದ್ರತಾ ಪಡೆಗಳಿಗೆ ಮತ್ತೊಂದು ಜಯ ಲಭಿಸಿದೆ. ಕಳೆದ ವಾರವಷ್ಟೇ ಎಂಟು ನಕ್ಸಲರು ಗುಂಡಿಗೆ ಬಲಿಯಾದ ಬೆನ್ನಿಗೆ ಈ ಎನ್‌ಕೌಂಟರ್ ನಡೆದಿದೆ. ಜನವರಿ 31 ರಂದು ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದು ಎಂಟು ಮಾವೋವಾದಿಗಳು ಸಾವನ್ನಪ್ಪಿದ್ದರು.ಪಶ್ಚಿಮ ಬಸ್ತಾರ್​ನಲ್ಲಿ ನಕ್ಸಲರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಶುಕ್ರವಾರ ಕಾರ್ಯಾಚರಣೆ ಆರಂಭಿಸಲಾಗಿತ್ತು. ಜಿಲ್ಲಾ

ಭದ್ರತಾ ಪಡೆ ಎನ್‌ಕೌಂಟರ್‌ಗೆ 12 ನಕ್ಸಲರು ಬಲಿ Read More »

ಅಕ್ರಮ ಜುಗಾರಿ ಅಡ್ಡೆಗೆ ಬಂಟ್ವಾಳ ಪೊಲೀಸರಿಂದ ದಾಳಿ | 10 ಮಂದಿ ಬಂಧನ, ನಗದು, ಸೊತ್ತುಗಳು ವಶ

ಬಿ.ಸಿ.ರೋಡ್: ಅಕ್ರಮ ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಬಂಧಿಸಿ, ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಕೊಡ್ಮಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ  ಆಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಇಬ್ಬರು ಪರಾರಿಯಾಗಿದ್ದು,ಉಳಿದಂತೆ ಆರೋಪಿಗಳಾದ ಲ್ಯಾನ್ಸಿ ರೋಡ್ರಿಗಸ್‌, ಸಂಶುದ್ದೀನ್‌,

ಅಕ್ರಮ ಜುಗಾರಿ ಅಡ್ಡೆಗೆ ಬಂಟ್ವಾಳ ಪೊಲೀಸರಿಂದ ದಾಳಿ | 10 ಮಂದಿ ಬಂಧನ, ನಗದು, ಸೊತ್ತುಗಳು ವಶ Read More »

ಯಕ್ಷಗಾನ ಸ್ತ್ರೀ ವೇಷಧಾರಿಯ ಹನಿಟ್ರ್ಯಾಪ್‌ ಬಲೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಅರ್ಚಕ

ರಾತೋರಾತ್ರಿ ಕಲಾವಿದನನ್ನು ಬಂಧಿಸಿ ಕರೆದೊಯ್ದ ಕಾಸರಗೋಡು ಪೊಲೀಸರು ಮಂಗಳೂರು: ಯಕ್ಷಗಾನದ ಪ್ರಸಿದ್ಧ ಸ್ತ್ರೀ ವೇಷಧಾರಿಯೊಬ್ಬರು ಕಾಸರಗೋಡಿನ ಸಮೀಪದ ಅರ್ಚಕರೊಬ್ಬರನ್ನು ಹನಿಟ್ರ್ಯಾಪ್‌ ಬಲೆಗೆ ಬೀಳಿಸಿ 10 ಲಕ್ಷಕ್ಕೂ ಅಧಿಕ ಹಣ ವಸೂಲು ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾರೆ ಎನ್ನಲಾಗಿದೆ. ಪ್ರಸಿದ್ಧ ಮೇಳಗಳಲ್ಲಿ ಸ್ತ್ರೀ ಪಾತ್ರ ನಿರ್ವಹಣೆ ಮಾಡುತ್ತಿದ್ದ ಅಶ್ವಥ್‌ ಆಚಾರ್ಯ ಆರೋಪಿ ಎನ್ನಲಾಗಿದೆ.ಯಕ್ಷಗಾನ ಕಲಾವಿದನೊಬ್ಬ ಎಸಗಿರುವ ಈ ಕೃತ್ಯದಿಂದ ಇಡೀ ಯಕ್ಷಗಾನ ಲೋಕವೇ ತಲೆತಗ್ಗಿಸುವಂತೆ ಆಗಿದೆ ಎಂದು ಅನೇಕರು ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿಕ್ರಿಯಿಸಿದ್ದಾರೆ.ಅಶ್ವಥ್‌ ಆಚಾರ್ಯ ಫೇಸ್‌ಬುಕ್‌ನಲ್ಲಿ ಕಾಸರಗೋಡು ಸಮೀಪದ

ಯಕ್ಷಗಾನ ಸ್ತ್ರೀ ವೇಷಧಾರಿಯ ಹನಿಟ್ರ್ಯಾಪ್‌ ಬಲೆಗೆ ಬಿದ್ದು 10 ಲಕ್ಷ ಕಳೆದುಕೊಂಡ ಅರ್ಚಕ Read More »

ತಂದೆಯ ಶವವನ್ನೇ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಇನ್‌ಸ್ಪೆಕ್ಟರ್‌

ದೌರ್ಜನ್ಯದ ದೂರು ಕೊಟ್ಟವರ ವಿರುದ್ಧವೇ ಕಿರುಕುಳ ನೀಡಿ ಸಾವಿಗೆ ಕಾರಣರಾದದ್ದಕ್ಕೆ ಆಕ್ರೋಶ ಬೆಂಗಳೂರು: ಪೊಲೀಸ್​ ಇನ್‌ಸ್ಪೆಕ್ಟರ್‌ ಒಬ್ಬರು ತನ್ನ ತಂದೆಯ ಶವವನ್ನೇ ಪೊಲೀಸ್‌ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗದ ಹಾರುಗೇರಿಯಲ್ಲಿ ಇಂದು ಮುಂಜಾನೆ ಹೊತ್ತು ನಡೆದಿದೆ. ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ಹಾರುಗೇರಿ ಪೊಲೀಸ್​ ಠಾಣೆ ಪಿಎಸ್​ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಿದವರು. ಜನವರಿ10ರಂದು ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ತಂದೆ

ತಂದೆಯ ಶವವನ್ನೇ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಇನ್‌ಸ್ಪೆಕ್ಟರ್‌ Read More »

ಬಾಲಿವುಡ್‌ ನಟ ಸೋನು ಸೂದ್‌ ವಿರುದ್ಧ ಬಂಧನ ವಾರಂಟ್‌

ಕೋವಿಡ್‌ ಕಾಲದ ಆಪತ್ಬಾಂಧವ ಮಾಡಿದ ಅಪರಾಧ ಏನು ಗೊತ್ತೆ? ಮುಂಬಯಿ: ಬಾಲಿವುಡ್‌ನ ಜನಪ್ರಿಯ ವಿಲನ್‌ ಸೋನು ಸೂದ್‌ ವಿರುದ್ಧ ಪಂಜಾಬಿನ ನ್ಯಾಯಾಲಯ ಬಂಧನ ವಾರಂಟ್‌ ಜಾರಿಗೊಳಿಸಿದೆ. ಲೂಧಿಯಾನ ಮ್ಯಾಜಿಸ್ಟ್ರೇಟ್ ರಮಣಪ್ರೀತ್ ಕೌರ್ ಅವರು ಈ ವಾರಂಟ್ ಹೊರಡಿಸಿದ್ದಾರೆ. ಲೂಧಿಯಾನ ಮೂಲದ ವಕೀಲ ರಾಜೇಶ್ ಖನ್ನಾ ಅವರು ಮೋಹಿತ್ ಶುಕ್ಲಾ ವಿರುದ್ಧ 10 ಲಕ್ಷ ರೂ. ವಂಚನೆ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ನಕಲಿ ರಿಜಿಕಾ ನಾಣ್ಯದಲ್ಲಿ ಹೂಡಿಕೆ ಮಾಡುವಂತೆ ಆಮಿಷವೊಡ್ಡಿ ವಂಚಿಸಿದ ಆರೋಪ ಮೋಹಿಲ್‌ ಶುಕ್ಲಾ ವಿರುದ್ಧ

ಬಾಲಿವುಡ್‌ ನಟ ಸೋನು ಸೂದ್‌ ವಿರುದ್ಧ ಬಂಧನ ವಾರಂಟ್‌ Read More »

ಕಾಡಿನಲ್ಲಿ ಹೂತಿಟ್ಟಿದ್ದ ಬಂದೂಕು, ಮದ್ದುಗುಂಡುಗಳು ಪತ್ತೆ

ಶರಣಾಗಿರುವ ನಕ್ಸಲ್‌ ರವೀಂದ್ರನ ಬಂದೂಕು ಎಂಬ ಶಂಕೆ ಕಾರ್ಕಳ: ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮದ ತಿರುಗುಣಿಬೈಲು ಸಮೀಪ ಅರಣ್ಯದಲ್ಲಿ ಎಸ್.ಬಿ.ಎ.ಎಲ್ ಬಂದೂಕೊಂದು ಪತ್ತೆಯಾಗಿದ್ದು, ಇದು ಶರಣಾಗತ ನಕ್ಸಲ್ ರವೀಂದ್ರನಿಗೆ ಸೇರಿದ ಬಂದೂಕು ಎನ್ನಲಾಗಿದೆ. ಮಣ್ಣಿನಡಿಯಲ್ಲಿ ಹೂತಿಟ್ಟಿದ್ದ ಬಂದೂಕು ಹಾಗೂ ಜೀವಂತ ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂದೂಕು ಹಾಗೂ ಜೀವಂತ ಗುಂಡುಗಳು ಅಪರಿಚಿತರದ್ದು ಎಂದು ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರು ನಕ್ಸಲರು ಶರಣಾದಾಗ ಸಿಕ್ಕ ಬಂದೂಕಿಗಳಿಗೂ ಪೊಲೀಸರು ಅಪರಿಚಿತರದ್ದು ಎಂದು ಹಣೆಪಟ್ಟಿ ಕಟ್ಟಿದ್ದರು. ಶರಣಾದ ನಕ್ಸಲರನ್ನು ಕಾನೂನಿನ

ಕಾಡಿನಲ್ಲಿ ಹೂತಿಟ್ಟಿದ್ದ ಬಂದೂಕು, ಮದ್ದುಗುಂಡುಗಳು ಪತ್ತೆ Read More »

error: Content is protected !!
Scroll to Top