ಅಪರಾಧ

ಇರಾನ್‌ ಹಡಗನ್ನು ವಶಪಡಿಸಿಕೊಂಡ ಅಮೆರಿಕ : ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಳ

ಅಮೆರಿಕದ ದಾಳಿಗೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಇರಾನ್‌ ಎಚ್ಚರಿಕೆ ಟೆಹ್ರಾನ್‌ : ಸಂಧಾನಕ್ಕೆ ಬರುವುದಿಲ್ಲ ಎಂದು ಇರಾನ್‌ ಹೇಳಿದ ಬೆನ್ನಿಗೆ ಅಮೆರಿಕ ಸೇನೆ ಇರಾನ್ ಧ್ವಜ ಹೊಂದಿದ್ದ ಸರಕು ಹಡಗೊಂದನ್ನು ವಶಪಡಿಸಿಕೊಂಡಿದ್ದು, ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೆ ಉಲ್ಬಣಗೊಂಡಿದೆ. ಈ ಘಟನೆ ಶಾಂತಿ ಪ್ರಕ್ರಿಯೆಯನ್ನು ಸಂಪೂರ್ಣ ಹದಗೆಡಿಸಲಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಟೌಸ್ಕಾ ಎಂಬ ಇರಾನ್ ಹಡಗು ಓಮನ್ ಸಮುದ್ರದ ಬಳಿ ಅಮೆರಿಕ ನೌಕಾಪಡೆಯ ಎಚ್ಚರಿಕೆಗಳನ್ನು ನಿರ್ಲಕ್ಷಿಸಿತು ಎಂದು […]

ಇರಾನ್‌ ಹಡಗನ್ನು ವಶಪಡಿಸಿಕೊಂಡ ಅಮೆರಿಕ : ಹಾರ್ಮುಜ್‌ನಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಳ Read More »

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮನೆ ಮೇಲೆ ಇ.ಡಿ. ದಾಳಿ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿ ಶೋಧ ಕಾರ್ಯ ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ಗೆ ಜಾರಿ ನಿರ್ದೇಶನಾಲಯ ಶಾಕ್ ಕೊಟ್ಟಿದೆ. ಶಾಸಕರ ಮನೆ ಸೇರಿದಂತೆ 17 ಸ್ಥಳಗಳಲ್ಲಿ ಇ.ಡಿ. ದಾಳಿ ನಡೆಸಿದೆ. ಹ್ಯಾರಿಸ್ ಬಿಡಿಎ ಅಧ್ಯಕ್ಷರೂ ಆಗಿದ್ದಾರೆ. ಇವರ ಪುತ್ರ ಮೊಹಮ್ಮದ್ ನಲಪಾಡ್ ಕಾಂಗ್ರೆಸ್ ಯುವ ಮುಖಂಡ. ಇವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ. ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಹ್ಯಾಕರ್ ಶ್ರೀಕಿ ಜೊತೆಯಲ್ಲಿ ಆರ್ಥಿಕ ಸಂಬಂಧ ಹೊಂದಿದ್ದ

ಕಾಂಗ್ರೆಸ್‌ ಶಾಸಕ ಹ್ಯಾರಿಸ್‌ ಮನೆ ಮೇಲೆ ಇ.ಡಿ. ದಾಳಿ Read More »

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ

ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪಿಗಳು ಮಂಗಳೂರು: ನಗರ ಜಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬೃಹತ್ ಪ್ರಮಾಣದ ಎಂಡಿಎಂಎ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಪೆರ್ಮಾನ್ನೂರು ಪಿಲಾರು ಹೊಸಗದ್ದೆ ಮನೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ (40) ಮತ್ತು ನಜರತ್ ಅಲಿ (37) ಬಂಧಿತ ಆರೋಪಿಗಳು. ಬೈಕ್‌ನಲ್ಲಿ ಎಂಡಿಎಂಎ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಕಂಕನಾಡಿ ನಗರ ಠಾಣಾ ಪೊಲೀಸರು ಆರೋಪಿಗಳನ್ನು

46.50 ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ : ಇಬ್ಬರ ಬಂಧನ Read More »

ಶುರುವಾಗುವ ಮೊದಲೇ ಮುರಿದು ಬಿದ್ದ ಎರಡನೇ ಸುತ್ತಿನ ಸಂಧಾನ

ಅಮೆರಿಕೆ ಜೊತೆಗೆ ಮಾತುಕತೆಗೆ ಬರುವುದಿಲ್ಲ ಎಂದು ದೃಢಪಡಿಸಿದ ಇರಾನ್‌ ಟೆಹ್ರಾನ್‌: ಅಮೆರಿಕ ಮತ್ತು ಇರಾನ್‌ ನಡುವಿನ ಎರಡನೇ ಸುತ್ತಿನ ಶಾಂತಿ ಒಪ್ಪಂದ ಮಾತುಕತೆ ಶುರುವಾಗುವುದಕ್ಕೂ ಮೊದಲೇ ಮುರಿದು ಬಿದ್ದಿದೆ. ಅಮೆರಿಕದೊಂದಿಗೆ ಏಪ್ರಿಲ್ 20ರಂದು ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಎರಡನೇ ಸುತ್ತಿನ ಶಾಂತಿ ಮಾತುಕತೆಯನ್ನು ನಡೆಸಲು ಇರಾನ್ ಅಧಿಕೃತವಾಗಿ ನಿರಾಕರಿಸಿದೆ. ಅಮೆರಿಕ ಅತಿಯಾದ ಬೇಡಿಕೆಗಳು, ಅಪ್ರಾಯೋಗಿಕ ನಿರೀಕ್ಷೆಗಳು ಮತ್ತು ಪದೇಪದೆ ಬದಲಾಗುತ್ತಿರುವ ನಿಲುವುಗಳಿಂದಾಗಿ ಮಾತುಕತೆಯಿಂದ ಹಿಂದೆ ಸರಿಯುತ್ತಿರುವುದಾಗಿ ಇರಾನ್ ತಿಳಿಸಿದೆ. ಭಾನುವಾರ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಇರಾನ್‌ನ

ಶುರುವಾಗುವ ಮೊದಲೇ ಮುರಿದು ಬಿದ್ದ ಎರಡನೇ ಸುತ್ತಿನ ಸಂಧಾನ Read More »

ಫಾಲ್ಸ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಯುವಕರು ಸೆರೆ

ಮೇ 10ರಂದು ವಿವಾಹವಾಗಲಿದ್ದ ಓರ್ವ ಆರೋಪಿ ಬೆಳ್ತಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರಗೈದ ಆರೋಪದಲ್ಲಿ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಡುರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್(26) ಬಂಧಿತ ಆರೋಪಿಗಳು. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ 15 ವರ್ಷದ ಬಾಲಕಿಯನ್ನು ಆರೋಪಿಗಳು ಪುಸಲಾಯಿಸಿ ಏ.16ರಂದು ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಕರೆದೊಯ್ದು ಅತ್ಯಾಚಾರ ಮಾಡಿರುವ ಬಗ್ಗೆ ಸಂತ್ರಸ್ತೆ ಮನೆಯವರಿಗೆ ತಿಳಿಸಿದ್ದಾಳೆ. ಈ

ಫಾಲ್ಸ್‌ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ : ಇಬ್ಬರು ಯುವಕರು ಸೆರೆ Read More »

50ಕ್ಕೂ ಅಧಿಕ ಮಹಿಳಾ ಅಧಿಕಾರಿಗಳ ಬ್ಲ್ಯಾಕ್‌ಮೇಲ್‌ : ಆರೋಪಿ ಸೆರೆ

ಉದ್ಯಮಿಯ ಸೋಗುಹಾಕಿ ಪರಿಚಯ ಮಾಡಿಕೊಂಡು ವಂಚಿಸುತ್ತಿದ್ದ ಯುವಕ ಬೆಂಗಳೂರು: ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಆರೋಪಿ ಕೃಪಲಾನಿ (36) ಎಂಬಾತ ಪ್ರೀತಿ, ಮದುವೆ ಹೆಸರಲ್ಲಿ ದೈಹಿಕ ಸಂಪರ್ಕ ಬೆಳೆಸಿ ಇನ್ನೂ 50 ಮಂದಿಗೆ ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೃಪಲಾನಿ ಮೇಲಿದೆ. ಆರೋಪಿ ಕೃಪಲಾನಿ ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಸುಮಾರು ಆರೇಳು ವರ್ಷಗಳಿಂದ ಅಕೆಯ ಮೇಲೆ

50ಕ್ಕೂ ಅಧಿಕ ಮಹಿಳಾ ಅಧಿಕಾರಿಗಳ ಬ್ಲ್ಯಾಕ್‌ಮೇಲ್‌ : ಆರೋಪಿ ಸೆರೆ Read More »

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು

ಬರ್ತ್‌ಡೇ ಪಾರ್ಟಿಯಲ್ಲಿ ಸಂಭವಿಸಿದ ದುರಂತ ಶಿವಮೊಗ್ಗ: ಹುಟ್ಟುಹಬ್ಬದ ಪಾರ್ಟಿಯಲ್ಲಿ ಯುವಕನೊಬ್ಬ ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಸಾವನ್ನಪ್ಪಿದ ಘಟನೆ ಕುಂಸಿ ಸಮೀಪದ ಚೆನ್ನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಸಚಿನ್ (21) ಎಂದು ಗುರುತಿಸಲಾಗಿದೆ. ಗ್ರಾಮಸ್ಥರೊಬ್ಬರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ ಗ್ರಾಮದ ಹೊರವಲಯದ ನಿರ್ಮಾಣ ಹಂತದ ಮನೆಯೊಂದರ ಬಳಿ ನಾನ್‌ವೆಜ್​ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಚಿನ್ ಊಟ ಮುಗಿಸಿಕೊಂಡು ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದ್ದ ನಿರ್ಮಾಣ ಹಂತದ ಮನೆಯೊಳಗೆ ತೆರಳಿದ್ದನು. ಊಟದ ಬಳಿಕ ಉಳಿದವರೆಲ್ಲರೂ ತಮ್ಮ

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಯುವಕ ಸಾವು Read More »

ಗಂಡನ ಬ್ಯಾಂಕ್ ಲಾಕರಿನಿಂದ ಚಿನ್ನ ಎಗರಿಸಿದ ಪತ್ನಿ: ದೂರು ದಾಖಲು

ಉಡುಪಿ: ಗಂಡ ಹೆಂಡತಿ ಒಂದೇ ಮನೆಯಲ್ಲಿ ಇದ್ದರೂ ಬೇರೆ ಬೇರೆಯಾಗಿ ವಾಸಿಸುತ್ತಿದ್ದು, ಇದೀಗ ಪತಿ ತನ್ನ ಪತ್ನಿಯ ವಿರುದ್ಧ ಚಿನ್ನ ಕದ್ದ ಆರೋಪ ಹೊರಿಸಿದ್ದಾರೆ. ಪತ್ನಿ ವನಿತಾ ಅವರು ಮನೆಯ ಕಪಾಟಿನಲ್ಲಿದ್ದ ಬ್ಯಾಂಕ್ ಲಾಕರ್ ‌ಕೀ ಕದ್ದು ಚಿನ್ನ ಎಗರಿಸಿದ್ದಾಗಿ ಪತಿ ಉಚ್ಚಿಲದ ಕಿರಣ್ ಕುಮಾರ್ ಅವರು ಆರೋಪಿಸಿರುವುದಾಗಿದೆ. ಈ ಬಗ್ಗೆ ಉಡುಪಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಲೆಕ್ಟಿಕಲ್ ಇಂಜಿನಿಯರ್ ಆಗಿ ಕೆಲಸ ಮಾಡುವ ಕಿರಣ್ ಕುಮಾ‌ರ್ ಅವರು ವನಿತಾ ಎಂಬುವವರೊಂದಿಗೆ 2016 ರಲ್ಲಿ

ಗಂಡನ ಬ್ಯಾಂಕ್ ಲಾಕರಿನಿಂದ ಚಿನ್ನ ಎಗರಿಸಿದ ಪತ್ನಿ: ದೂರು ದಾಖಲು Read More »

ಭದ್ರತಾ ಪಡೆಗಳ ಕಾರ್ಯಾಚರಣೆ: ಮಹಿಳಾ ನಕ್ಸಲ್ ಕಮಾಂಡರ್ ಸೇರಿ ನಾಲ್ವರು ನಕ್ಸಲರ ಹತ್ಯೆ

ನವದೆಹಲಿ: ಜಾರ್ಖಂಡ್‌ನ ಪಿಪರ್ವಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮಹಿಳಾ ನಕ್ಸಲ್ ಕಮಾಂಡರ್ ಸೇರಿದಂತೆ ನಾಲ್ಕು ಮಂದಿ ನಕ್ಸಲರು ಮೃತಪಟ್ಟಿದ್ದಾರೆ. ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ತಲೆೆಗ 15 ಲಕ್ಷ ರೂ. ಬಹುಮಾನ ಘೋಷಣೆಯಾಗಿದ್ದ ಶಹದಿಯೋ ಮಹ್ತೋ ಮತ್ತು ಮಹಿಳಾ ನಕ್ಸಲ್ ನತಾಶಾ ಸಾವನ್ನಪ್ಪಿದ್ದಾರೆ ಎನ್ನುವುದನ್ನು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರದೇಶದಲ್ಲಿ ನಕ್ಸಲರಿರುವ ಬಗ್ಗೆ ಖಚಿತ ಮಾಹಿತಿಯನ್ವಯ ಈ ದಾಳಿ ನಡೆಸಲಾಗಿದೆ. ಕೋಬ್ರಾ ಬೆಟಾಲಿಯನ್‌ನ ಸೈನಿಕರು ಛತ್ರ-ಹಜಾರಿಬಾಗ್ ಗಡಿಯಲ್ಲಿ ಶೋಧ

ಭದ್ರತಾ ಪಡೆಗಳ ಕಾರ್ಯಾಚರಣೆ: ಮಹಿಳಾ ನಕ್ಸಲ್ ಕಮಾಂಡರ್ ಸೇರಿ ನಾಲ್ವರು ನಕ್ಸಲರ ಹತ್ಯೆ Read More »

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ವಿಟ್ಲ : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಈತನ ವಿರುದ್ಧ 36 ಸಲ ಬಂಧನ ವಾರಂಟ್‌ ಜಾರಿಯಾಗಿತ್ತು ಎನ್ನಲಾಗಿದೆ. ಏ.16ರಂದು ಅಬ್ಬಾಸ್ ವಿದೇಶದಿಂದ ಹಿಂತಿರುಗುವಾಗ ಇಮಿಗ್ರೇಶನ್ ವಿಭಾಗದ ಸಹಕಾರದಿಂದ, ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿ ಮೋಹನ ಮತ್ತು ವೆಂಕಪ್ಪ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

error: Content is protected !!
Scroll to Top