ಅಪರಾಧ

ಟ್ರಂಪ್‌ ಪುತ್ರಿಯ ಹತ್ಯೆಗೆ ಸಂಚು : ಇರಾನ್‌ನ ಉಗ್ರ ಸೆರೆ

ಇರಾನ್‌ ಕಮಾಂಡರ್ ಖಾಸೆಮ್ ಸುಲೈಮಾನಿ ಹತ್ಯೆಗೆ ಪ್ರತೀಕಾರ ತೀರಿಸಲು ಹೊಂಚು ಹಾಕಿದ್ದ ಉಗ್ರ ವಾಷಿಂಗ್ಟನ್‌: ಇರಾನ್‌ನ ಪ್ರಭಾವಿ ಕಮಾಂಡರ್ ಖಾಸೆಮ್ ಸುಲೈಮಾನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳುವ ಉದ್ದೇಶದಿಂದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಅವರನ್ನು ಹತ್ಯೆ ಮಾಡಲು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC)ನಿಂದ ತರಬೇತಿ ಪಡೆದ ಉಗ್ರನೊಬ್ಬನನ್ನು ಬಂಧಿಸಲಾಗಿದೆ. ಈ ಹತ್ಯಾ ಸಂಚಿಗೆ ಸಂಬಂಧಿಸಿದಂತೆ ಮೊಹಮ್ಮದ್ ಬಾಕರ್ ಸಾದ್ ದಾವೂದ್ ಅಲ್-ಸಾದಿ (32) ಎಂಬ ಶಂಕಿತ ಉಗ್ರನನ್ನು ಇತ್ತೀಚೆಗೆ ಬಂಧಿಸಲಾಗಿದ್ದು, […]

ಟ್ರಂಪ್‌ ಪುತ್ರಿಯ ಹತ್ಯೆಗೆ ಸಂಚು : ಇರಾನ್‌ನ ಉಗ್ರ ಸೆರೆ Read More »

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲ ವ್ಯಕ್ತಿ ಸೆರೆ

ಪುಣೆಯ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿರುವ ಆರೋಪಿ ಪುಣೆ: ಮಹತ್ವದ ಬೆಳವಣಿಗೆಯಲ್ಲಿ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮತ್ತೊಂದು ಬಂಧನ ಮಾಡಿದ್ದಾರೆ. ಕೇಂದ್ರೀಯ ತನಿಖಾ ಸಂಸ್ಥೆ (CBI) ಅಧಿಕಾರಿಗಳು NEET UG 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆಯನ್ನು ಆಯ್ದ ವಿದ್ಯಾರ್ಥಿಗಳಿಗೆ ಸೋರಿಕೆ ಮಾಡಿದ ಆರೋಪದ ಮೇಲೆ ಪುಣೆಯ ಉಪನ್ಯಾಸಕಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಉಪನ್ಯಾಸಕಿಯನ್ನು ಮನಿಶಾ ಸಂಜಯ್ ಹವಾಲ್ದಾರ್ ಎಂದು ಗುರುತಿಸಲಾಗಿದ್ದು, ಅವರು ಪ್ರಸ್ತುತ ಪುಣೆಯ ಸೇಠ್

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆಯ ಮೂಲ ವ್ಯಕ್ತಿ ಸೆರೆ Read More »

ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಪುತ್ತೂರು: ಕುಣಿಗಲ್ ಸಮೀಪ ಬೈಕ್ ಮತ್ತು ಕೋಳಿ ಸಾಗಾಟ ವಾಹನ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯವಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತನನ್ನು ಬೆಳ್ಳಾರೆಯ ವಾಸುದೇವ ರೈ – ಶರ್ಮಿಳಾ ವಿ. ರೈ ದಂಪತಿ ಪುತ್ರ ಸೂರಜ್ ರೈ (27) ಎಂದು ಗುರುತಿಸಲಾಗಿದೆ. ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದ ಸೂರಜ್ ಬೆಂಗಳೂರಿಗೆ ತೆರಳುವ ಸಂದರ್ಭದಲ್ಲಿ ಅವರ ಬೈಕ್ ಮತ್ತು ಕೋಳಿ ಸಾಗಾಟದ ವಾಹನದ ನಡುವೆ ಕುಣಿಗಲ್ ಸಮೀಪ ಅಪಘಾತವಾಗಿತ್ತು. ಈ ದುರ್ಘಟನೆಯಲ್ಲಿ

ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು Read More »

ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ: ಪಾಣೆಮಂಗಳೂರು ನೂತನ ಸೇತುವೆಯ ಕೆಳಭಾಗದಲ್ಲಿ ನೇತ್ರಾವತಿ ನದಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿದೆ. ಮೃತನನ್ನು ಗೂಡಿನ ಬಳಿ ನಿವಾಸಿ ಇರ್ಫಾನ್ (36) ಎಂದು ಗುರುತಿಸಲಾಗಿದೆ. ಸೇತುವೆ ಕೆಳಭಾಗದಲ್ಲಿ ಇಂದು ಮುಂಜಾನೆ ಇರ್ಫಾನ್ ಶವ ಸಿಕ್ಕಿದೆ. ಬಂಟ್ವಾಳ ಪುರಸಭಾ ಪೌರ ಕಾರ್ಮಿಕರು ತ್ಯಾಜ್ಯ ನಿರ್ವಹಣೆ ಮಾಡುತ್ತಿದ್ದ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ಮೃತದೇಹ ಕಂಡಿದೆ. ಶವವನ್ನು ಸ್ಥಳೀಯರು ನದಿಯಿಂದ ಮೇಲಕ್ಕೆತ್ತಿ, ಗುರುತು ಪತ್ತೆಗಾಗಿ ಬಂಟ್ವಾಳ‌ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿತ್ತು. ಬಳಿಕ ಮೃತ ವ್ಯಕ್ತಿಯ ಗುರುತು

ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ Read More »

ಅಜ್ಜಿ ಮನೆಯಲ್ಲಿದ್ದ ಯುವತಿಗೆ ‌ಕುಡುಕ ಮಾವನಿಂದ ಹಲ್ಲೆ: ಪ್ರಕರಣ ದಾಖಲು

ಕಡಬ: ತನ್ನ ಅಜ್ಜಿ ಮನೆಯಲ್ಲಿ ವಾಸವಿದ್ದ ಯುವತಿಯೊಬ್ಬಳ ಮೇಲೆ ಮದ್ಯದ ಅಮಲಿನಲ್ಲಿದ್ದ ಮಾವ‌ಅವಾಚ್ಯ ಶಬ್ದಗಳಿಂದ ನಿಂದಿಸಿ, ಹೊಟ್ಟೆಗೆ ಒದ್ದು ಹಲ್ಲೆ ನಡೆಸಿ ವಿಕೃತಿ ಮೆರೆದ ಘಟನೆ ಕೊಡಿಂಬಾಳದ ಬಳ್ಳಿಕಜೆ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆರೋಪಿ ಬಿಜು ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಯುವತಿಯನ್ನು ‌ಸೋನ್ವಿ(22) ಎಂದು ಗುರುತಿಸಲಾಗಿದೆ. ಈಕೆ ತನ್ನ ತಾಯಿಯ ಮರಣದ ನಂತರ ತನ್ನ ಅಜ್ಜಿಯ ಜೊತೆಗೆ ಅವರ ಮನೆಯಲ್ಲಿ ವಾಸವಿದ್ದಳು. ಆರೋಪಿ ಬಿಜು ಬೆಳ್ತಂಗಡಿಯ ಕಡಿರುದ್ಯಾವರ ನಿವಾಸಿಯಾಗಿದ್ದು

ಅಜ್ಜಿ ಮನೆಯಲ್ಲಿದ್ದ ಯುವತಿಗೆ ‌ಕುಡುಕ ಮಾವನಿಂದ ಹಲ್ಲೆ: ಪ್ರಕರಣ ದಾಖಲು Read More »

ಭೀಕರ ಗುಂಡಿನ ದಾಳಿ : 6 ಪೊಲೀಸರ ಸಹಿತ 25 ಮಂದಿ ಸಾವು

ಕಾರ್ಮಿಕರನ್ನು ಸಾಲಾಗಿ ನಿಲ್ಲಿಸಿ ಗುಂಡಿಕ್ಕಿ ಕೊಂದ ಬಂದೂಕುಧಾರಿಗಳು ವಾಷಿಂಗ್ಟನ್ : ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಹಾಗೂ ಗ್ಯಾಂಗ್‌ವಾರ್​ಗಳಿಂದ ಸದಾ ಸುದ್ದಿಯಲ್ಲಿರುವ ಹೊಂಡುರಾಸ್ ಕರಾವಳಿ ಪ್ರದೇಶದಲ್ಲಿ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಎರಡು ಪ್ರತ್ಯೇಕ ಘಟನೆಯಲ್ಲಿ 6 ಮಂದಿ ಪೊಲೀಸರು ಸೇರಿ 25 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹೊಂಡುರಾಸ್ ಎಂಬುದು ಮಧ್ಯ ಅಮೆರಿಕದಲ್ಲಿರುವ ಮತ್ತೊಂದು ದೇಶವಾಗಿದೆ. ಮೊದಲ ಆಘಾತಕಾರಿ ಘಟನೆ ಉತ್ತರ ಹೊಂಡುರಾಸ್‌ನ ಟ್ರುಜಿಲ್ಲೊದಲ್ಲಿ ನಡೆದಿದೆ. ಭೂಮಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಹಕ್ಕುಗಳಿಗಾಗಿ ದಶಕಗಳಿಂದ ಸಂಘರ್ಷ ನಡೆಯುತ್ತಿರುವ ಈ

ಭೀಕರ ಗುಂಡಿನ ದಾಳಿ : 6 ಪೊಲೀಸರ ಸಹಿತ 25 ಮಂದಿ ಸಾವು Read More »

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ, ಇನ್ನೋರ್ವ ಪರಾರಿ

ವಧಿಸಲು ಎರಡು ಜಾನುವಾರುಗಳ ಅಕ್ರಮ ಸಾಗಾಟ ವಿಟ್ಲ: ಇಲ್ಲಿನ ಕೊಳ್ನಾಡು ಸಮೀಪ ಪಂಜರಕೋಡಿ ಎಂಬಲ್ಲಿ ಪಿಕಪ್ ವಾಹನದಲ್ಲಿ ವಧಿಸುವ ಉದ್ದೇಶದಿಂದ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ವಿಟ್ಲ ಪೊಲೀಸರು ಪತ್ತೆ ಮಾಡಿ ವಾಹನ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಇನ್ನೋರ್ವ ಆರೋಪಿ ಬಶೀರ್ ಬಂತಾ ಪರಾರಿಯಾಗಿದ್ದಾನೆ‌ ಎಂದು ಪೊಲೀಸರು ತಿಳಿಸಿದ್ದು, ಚಾಲಕ ಬಾಳೆಪುಣಿ ನಿವಾಸಿ ಹನೀಫ್ (44) ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಮೇ 21ರಂದು ಬೆಳಗ್ಗೆ ಅಕ್ರಮ ಗೋ ಸಾಗಾಟದ ಮಾಹಿತಿ ಪಡೆದ ಪೊಲೀಸರು ಪಂಜರಕೋಡಿ ಎಂಬಲ್ಲಿಗೆ

ಜಾನುವಾರು ಅಕ್ರಮ ಸಾಗಾಟ : ಓರ್ವ ಸೆರೆ, ಇನ್ನೋರ್ವ ಪರಾರಿ Read More »

ಕಾಣೆಯಾಗಿದ್ದ ಆಟೋ ಚಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ

ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಕುಟುಂಬಸ್ಥರು ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ. ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಅವರ ಮೃತದೇಹ ಎಂದು ತಿಳಿದು ಬಂದಿದೆ. ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ನದಿಯಲ್ಲಿ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ಪೊಲೀಸರು ಹಾಗೂ ಗೂಡಿನ‌ಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ, ಗುರುತು ಪತ್ತೆ

ಕಾಣೆಯಾಗಿದ್ದ ಆಟೋ ಚಾಲಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ Read More »

ಮಂಗಳೂರು : ಧರೆ ಕುಸಿದು ಕಾಂಟ್ರಾಕ್ಟರ್‌ ಸಾವು

ಕುಸಿವ ಭೀತಿಯಲ್ಲಿದ್ದ ಧರೆಗೆ ತಡೆಗೋಡೆ ನಿರ್ಮಿಸುವಾಗ ಸಂಭವಿಸಿದ ದುರಂತ ಮಂಗಳೂರು: ನಗರದಲ್ಲಿ ಮಳೆಗಾಲಕ್ಕೂ ಮೊದಲೇ ಭೂಕುಸಿತ ಘಟನೆ ಸಂಭವಿಸಿದೆ. ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಕುಂಟಿಕಾನ ಸಮೀಪದ ಲೋಹಿತ್ ನಗರದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಧರೆ ಜರಿತ ದುರಂತದಲ್ಲಿ ಕಂಟ್ರಾಕ್ಟರ್ ಒಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಉರ್ವ ಅಶೋಕನಗರ ನಿವಾಸಿ ಆಂಟನಿ ಮಸ್ಕರೇನಸ್ (65) ಎಂದು ಗುರುತಿಸಲಾಗಿದೆ. ಮೇ 21ರಂದು ಸುಮಾರು ಮಧ್ಯಾಹ್ನ ವೇಳೆಗೆ ಮನೆಯೊಂದರ ಹಿಂಭಾಗದಲ್ಲಿ ಆವರಣ ಗೋಡೆ ನಿರ್ಮಾಣಕ್ಕೆ ಅಳತೆ ಮಾಡುವ ಕಾರ್ಯ ನಡೆಯುತ್ತಿತ್ತು. ಮಳೆಗಾಲದಲ್ಲಿ

ಮಂಗಳೂರು : ಧರೆ ಕುಸಿದು ಕಾಂಟ್ರಾಕ್ಟರ್‌ ಸಾವು Read More »

ಮನೆಗೆ ನುಗ್ಗಿ ಹಲ್ಲೆ : ಆರೋಪಿ ಸೆರೆ

ಬೆಳ್ತಂಗಡಿ : ಹಳೆ ದ್ವೇಷದಲ್ಲಿ ಅತ್ತೆ ಮನೆಗೆ ಹೋಗಿ ಅವಾಚ್ಯ ಶಬ್ದಗಳಿಂದ ಬೈದು ಬಳಿಕ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಕರಣ ಆರಂಬೋಡಿ ಗ್ರಾಮದ ದೇಲೋಡಿಯಲ್ಲಿ ನಡೆದಿದ್ದು ಪ್ರಕರಣದ‌ ಆರೋಪಿ ಪ್ರಸನ್ನ ಕುಮಾರ್ (33) ಎಂಬಾತನನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಪ್ರಸನ್ನ ಕುಮಾರ್ ದೂರುದಾರ ಸುಜಾತ ಅವರ ಗಂಡನ ತಮ್ಮನಾಗಿದ್ದು ಈತ ಸುಜಾತ ಹಾಗೂ ಆಕೆಯ ತಾಯಿಯದಿಗೆ ಪೂರ್ವ ದ್ವೇಷ ಹೊಂದಿದ್ದು ಆಗಾಗ ತಾಯಿ ಮಗಳಿಗೆ ನಿಮ್ಮನ್ನು ಕೊಲೆ ಮಾಡುವುದಾಗಿ ಹೇಳುತ್ತಿದ್ದ. ಇದೇ ವಿಚಾರದಲ್ಲಿ

ಮನೆಗೆ ನುಗ್ಗಿ ಹಲ್ಲೆ : ಆರೋಪಿ ಸೆರೆ Read More »

error: Content is protected !!
Scroll to Top