ಅಪರಾಧ

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ

ಮಂಗಳೂರು: ಸುರತ್ಕಲ್‌ ಸಮೀಪ ಕುಳಾಯಿ ಹೊಸಬೆಟ್ಟುವಿನಲ್ಲಿ 2014ರಲ್ಲಿ ನಡೆದ ಕೊಲೆ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. 2014ರ ಫೆಬ್ರವರಿ 8ರಂದು ಸಂಜೆ 4ರಿಂದ ರಾತ್ರಿ 8ರ ನಡುವೆ ಕುಳಾಯಿ ಹೊಸಬೆಟ್ಟು ಕೋರ್ದಬ್ಬು ಕಲದ ಬಳಿ ವಾಸವಾಗಿದ್ದ ಸುಮತಿ ಪ್ರಭು ಅವರನ್ನು ಕುತ್ತಿಗೆಗೆ ಚೂರಿಯಿಂದ ಇರಿದು ಕೊಲೆ ಮಾಡಿ, ಅವರ ಮೈಮೇಲಿದ್ದ ಸುಮಾರು 3.80 ಲಕ್ಷ ಮೌಲ್ಯದ 192 ಗ್ರಾಂ (24 ಪವನ್) ಬಂಗಾರದ ಆಭರಣಗಳನ್ನು ದರೋಡೆ […]

ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಸೆರೆ Read More »

ಊಟ ಮಾಡಿ ಮಲಗಿದ್ದ ಯುವತಿ ಬೆಳಗಾಗುವಾಗ ನಾಪತ್ತೆ

ಮಂಗಳೂರು : ನರಿಂಗಾನ ಗ್ರಾಮದ 19 ವರ್ಷದ ಯುವತಿಯೊಬ್ಬಳು ತನ್ನ ಮನೆಯಿಂದ ಮೇ 4ರ ಬೆಳಗಿನ ಜಾವದಿಂದ ಕಾಣೆಯಾಗಿದ್ದಾಳೆ ಎಂದು ದೂರು ನೀಡಲಾಗಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆಕೆಯ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಕಾಣೆಯಾದ ಹುಡುಗಿಯನ್ನು ಇಬ್ರಾಹಿಂ ಎಂ ಅವರ ಮಗಳು ರಾಭಿಯತುಲ್ ಅಧಭಿಯ ಎಂದು ಗುರುತಿಸಲಾಗಿದೆ. ಆಕೆಯ ತಂದೆ ನೀಡಿದ ದೂರಿನ ಪ್ರಕಾರ, ಮೇ 3ರಂದು ರಾತ್ರಿ 10 ಗಂಟೆ ಸುಮಾರಿಗೆ ಊಟ ಮಾಡಿದ ನಂತರ ಮಲಗಲು ಹೋಗಿದ್ದಳು. ಸೋಮವಾರ ಬೆಳಗಿನ

ಊಟ ಮಾಡಿ ಮಲಗಿದ್ದ ಯುವತಿ ಬೆಳಗಾಗುವಾಗ ನಾಪತ್ತೆ Read More »

ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆ: ಅಶ್ರಫ್‌ನಿಗೆ ಧರ್ಮದೇಟು ‌ನೀಡಿದ ಎರಡನೇ ಪತ್ನಿಯ ತಾಯಿ

ಪುತ್ತೂರು: ಮೊದಲು ಮದುವೆಯಾಗಿರುವ ‌ಸಂಗತಿಯನ್ನು ರಹಸ್ಯವಾಗಿಟ್ಟು, ಎರಡನೇ ಮದುವೆ ಮಾಡಿಕೊಂಡ ವ್ಯಕ್ತಿಗೆ ಆತನ ಎರಡನೇ ಪತ್ನಿಯ ಕಡೆಯವರು ಮನೆಯೊಂದರಲ್ಲಿ ಕೂಡಿ ಹಾಕಿ, ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಕೆಮ್ಮಿಂಜೆಯ ಬೆಳ್ಳಗುಡ್ಡೆ ನಿವಾಸಿ ಮಹಮ್ಮದ್ ಅಶ್ರಫ್ (35) ಎಂದು ಗುರುತಿಸಲಾಗಿದೆ. ಆರೋಪಿ ಅಶ್ರಫ್‌ಗೆ ಖತೀಜಮ್ಮ ಜೊತೆಗೆ ಮೊದಲೇ ಮದುವೆ ನಡೆದಿದ್ದರೂ, ಅದನ್ನು ರಹಸ್ಯವಾಗಿಟ್ಟು ಮೂಡಬಿದ್ರೆಯ ಐಸಮ್ಮ ಎಂಬವರ ಪುತ್ರಿ ರುಬಿಯಾ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದ. ಈ ವಿಚಾರ ತಿಳಿದ ಖತೀಜಮ್ಮ ಅಶ್ರಫ್ ವಿರುದ್ಧ ಪುತ್ತೂರು ಮಹಿಳಾ ಪೊಲೀಸರಿಗೆ ದೂರು

ಮೊದಲ ಮದುವೆ ಮುಚ್ಚಿಟ್ಟು ಎರಡನೇ ಮದುವೆ: ಅಶ್ರಫ್‌ನಿಗೆ ಧರ್ಮದೇಟು ‌ನೀಡಿದ ಎರಡನೇ ಪತ್ನಿಯ ತಾಯಿ Read More »

ನಡುರಸ್ತೆಯಲ್ಲಿ ನಿಂತು ಪೊಲೀಸರನ್ನು ನಿಂದಿಸಿದ ಮಹಿಳೆ ವಿರುದ್ಧ ದೂರು

ಟ್ರಾಫಿಕ್‌ ನಿಯಂತ್ರಿಸುತ್ತಿದ್ದ ಪೊಲೀಸರ ಜೊತೆ ಕಿರಿಕ್‌ ಮಾಡಿದ ಮಹಿಳೆ ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಎಂಬ ಮಹಿಳೆ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ ರಜಾ ದಿನವಾಗಿದ್ದರಿಂದ ಕಟೀಲು ದೇವಸ್ಥಾನದಲ್ಲಿ ಭಕ್ತರ ದಟ್ಟಣೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಮಲ್ಲಿಗೆಯಂಗಡಿ ಜಂಕ್ಷನ್‌ನಲ್ಲಿ ದೊಡ್ಡ ವಾಹನಗಳನ್ನು ಕಿನ್ನಿಗೋಳಿಯತ್ತ ತಿರುಗಿಸಲಾಗುತ್ತಿತ್ತು ಮತ್ತು ಸಣ್ಣ ವಾಹನಗಳನ್ನು ಮಾತ್ರ ದೇವಸ್ಥಾನದ ಕಡೆಗೆ ಬಿಡಲಾಗುತ್ತಿತ್ತು. ಮಧ್ಯಾಹ್ನದ ವೇಳೆಗೆ ಟೆಂಪೋ ಟ್ರಾವೆಲರ್‌ನಲ್ಲಿ ಪ್ರಯಾಣಿಸುತ್ತಿದ್ದ

ನಡುರಸ್ತೆಯಲ್ಲಿ ನಿಂತು ಪೊಲೀಸರನ್ನು ನಿಂದಿಸಿದ ಮಹಿಳೆ ವಿರುದ್ಧ ದೂರು Read More »

ಬಂಟ್ವಾಳ : ವಾಹನ ಸಹಿತ 42 ಲ.ರೂ. ಡ್ರಗ್ಸ್‌ ವಶ; ಇಬ್ಬರ ಬಂಧನ

ಬಂಟ್ವಾಳ: ಎಂ.ಡಿ.ಎಂ.ಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಅವರಿಂದ 42,30,000 ರೂ. ಮೌಲ್ಯದ 423 ಗ್ರಾಂ ಎಂ.ಡಿ.ಎಂ.ಎ ವಶಪಡಿಸಿಕೊಂಡಿದ್ದಾರೆ. ಮೇ 2ರಂದು ಸಂಜೆ ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ ಅವರಿಗೆ ಎಂ.ಡಿ.ಎಂ.ಎ ಸಾಗಾಟದ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ಮಂಚಿ ಗ್ರಾಮದ ಪಂಜಾಲ ಕ್ರಾಸ್ ಬಳಿ ತಪಾಸಣೆ ನಡೆಸಿದರು. ಈ ವೇಳೆ KA-20-Z-9585 ಸಂಖ್ಯೆಯ ಬೊಲೆರೋ ವಾಹನವನ್ನು ತಡೆದು ಪರಿಶೀಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರನ್ನು ವಿಚಾರಣೆಗೊಳಪಡಿಸಲಾಯಿತು. ಅವರು

ಬಂಟ್ವಾಳ : ವಾಹನ ಸಹಿತ 42 ಲ.ರೂ. ಡ್ರಗ್ಸ್‌ ವಶ; ಇಬ್ಬರ ಬಂಧನ Read More »

ಬಂಟ್ವಾಳ : 2.38 ಲಕ್ಷ ರೂ. ನಕಲಿ ನೋಟು ವಶ, ಇಬ್ಬರ ಬಂಧನ

ಬಂಟ್ವಾಳ: 2.38 ಲಕ್ಷ ರೂ. ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಮೊಹಮ್ಮದ್ ಸಮೀರ್ (28) ಮತ್ತು ಮೊಹಮ್ಮದ್ ಇರ್ಫಾನ್ (26) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಟ್ವಾಳ ತಾಲೂಕಿನಲ್ಲಿ ನಕಲಿ ನೋಟುಗಳ ಚಲಾವಣೆಯ ಬಗ್ಗೆ ದೊರೆತ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ನಡೆಸಿದ ಕಾರ್ಯಾಚರಣೆಯ ನಂತರ ಬಂಧಿಸಲಾಗಿದೆ. ಹೆಚ್ಚಿನ ಮೌಲ್ಯದ ನಕಲಿ ನೋಟುಗಳನ್ನು ಹೊಂದಿದ್ದ ಆರೋಪಿಗಳು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಮೂರು

ಬಂಟ್ವಾಳ : 2.38 ಲಕ್ಷ ರೂ. ನಕಲಿ ನೋಟು ವಶ, ಇಬ್ಬರ ಬಂಧನ Read More »

ದುಬೈಯಿಂದ ಗಂಡ ಪಾರ್ಸಲ್‌ ಕಳುಹಿಸಿದ ಕಥೆ ನಂಬಿ 6.84 ಲ.ರೂ. ಕಳೆದುಕೊಂಡ ಮಹಿಳೆ

ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ಮೋಸ ಮಂಗಳೂರು : ದುಬೈನಿಂದ ಪತಿ ಕಳುಹಿಸಿದ ಪಾರ್ಸೆಲ್ ಪಡೆಯಲು ಹಣ ನೀಡಬೇಕು ಎಂಬ ವಂಚಕರ ಮಾತು ನಂಬಿದ ಮಹಿಳೆಯೊಬ್ಬರು ಬರೋಬ್ಬರಿ 6,84,500 ರೂ. ವಂಚಕರಿಗೆ ನೀಡಿ ಮೋಸ ಹೋಗಿದ್ದಾರೆ. ಈ ಬಗ್ಗೆ ಹಣ ಕಳಕೊಂಡ ಮಹಿಳೆ ನೀಡಿದ ದೂರಿನಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಮಂಗಳೂರಿನಲ್ಲಿ ವಾಸವಾಗಿದ್ದು ಪತಿ ದುಬೈನಲ್ಲಿ ಕೆಲಸ ಮಾಡುತ್ತಾರೆ. ಅಲ್ಲಿಂದ ತನಗೆ ಬೇಕಾಗುವ ವಸ್ತುಗಳನ್ನು ಪಾರ್ಸೆಲ್ ಮೂಲಕ ಕಳುಹಿಸುತ್ತಿದ್ದರು. ಏ.21ರಂದು ಸಂಜೆ ತಾನು

ದುಬೈಯಿಂದ ಗಂಡ ಪಾರ್ಸಲ್‌ ಕಳುಹಿಸಿದ ಕಥೆ ನಂಬಿ 6.84 ಲ.ರೂ. ಕಳೆದುಕೊಂಡ ಮಹಿಳೆ Read More »

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಜೈಲು

ಕೃತ್ಯ ನಡೆದ ಐದೇ ತಿಂಗಳಲ್ಲಿ ಪ್ರಕಟವಾದ ತೀರ್ಪು ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ದಯಾನಂದ ಮೂಲ್ಯ (44) ಎಂಬಾತನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿ ಎಸ್‌ಸಿ-2) ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರು 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿದ್ದಾರೆ. ಕೃತ್ಯ ನಡೆದ ಐದೇ ತಿಂಗಳಲ್ಲಿ ತೀರ್ಪು ಪ್ರಕಟವಾಗಿರುವುದು ವಿಶೇಷವಾಗಿದೆ. 2025ರ ನ.16ರಂದು ಮಧ್ಯಾಹ್ನ 2ಕ್ಕೆ ಏಳು ವರ್ಷ ಪ್ರಾಯದ ಬಾಲಕಿ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗೆ 20 ವರ್ಷ ಜೈಲು Read More »

ಹೆಂಡತಿ ಪರಾರಿಯಾದ ನೋವಿನಲ್ಲಿ ಮಕ್ಕಳಿಬ್ಬರನ್ನು ಕೊಂದು ಅರ್ಚಕ ಆತ್ಮಹತ್ಯೆ

ಸಾಕಿ ಬೆಳೆಸಿದ ಯುವಕನ ಜೊತೆಗೆ ಓಡಿಹೋದ ಹೆಂಡತಿ ತುಮಕೂರು: ತಾನೇ ಸಾಕಿ ಬೆಳೆಸಿದ ಸಂಬಂಧಿಕ ಯುವಕನೊಂದಿಗೆ ತನ್ನ ಪತ್ನಿ ಪಲಾಯನ ಮಾಡಿದ ನೋವಿನಲ್ಲಿ ಅರ್ಚಕರೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಕುಣಿಗಲ್ ತಾಲೂಕಿನ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕ ಶಿವಣ್ಣ (40) ಎಂದು ಗುರುತಿಸಲಾಗಿದೆ. ಅವರು ಮಕ್ಕಳಾದ ಜೀವನ್ (10) ಹಾಗೂ ಪ್ರಾಣೇಶ್ (5) ಕತ್ತುಹಿಸುಕಿ

ಹೆಂಡತಿ ಪರಾರಿಯಾದ ನೋವಿನಲ್ಲಿ ಮಕ್ಕಳಿಬ್ಬರನ್ನು ಕೊಂದು ಅರ್ಚಕ ಆತ್ಮಹತ್ಯೆ Read More »

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಟ್ಟಣ್ಣವರ್‌ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023,

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ : ಮಟ್ಟಣ್ಣವರ್‌ ವಿರುದ್ಧ ಎಫ್‌ಐಆರ್‌ Read More »

error: Content is protected !!
Scroll to Top