ಅಪರಾಧ

ಪಿಯುಸಿ ಪರೀಕ್ಷೆ ಆರಂಭವಾಗುವ ಹೊತ್ತಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ

ಇನ್‌ಸ್ಟಾಗ್ರಾಂನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಪೋಸ್ಟ್‌ ಹಾಕಿದ ಕಿಡಿಗೇಡಿ ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಶುರುವಾಗಲು ಇನ್ನೆರಡು ದಿನ ಬಾಕಿಯಿರುವಾಗಲೇ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ ಮತ್ತೆ ಎದುರಾಗಿದೆ. ಫೆಬ್ರವರಿ 28ರಿಂದ ಪರೀಕ್ಷೆಗಳು ಶುರುವಾಗಲಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಶ್ನೆ ಪತ್ರಿಕೆ ಮಾರಾಟದ ಬಗ್ಗೆ ಪೋಸ್ಟ್ ಒಂದು ಹರಿದಾಡುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ‘ಡಾ. ಕನ್ನಡಿಗ’ ಎಂಬ ಹೆಸರಿನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡುವುದಾಗಿ ಪೋಸ್ಟ್ ಮಾಡಿದ್ದಾನೆ. ಯಾವುದಾದರೂ ಪ್ರಶ್ನೆ […]

ಪಿಯುಸಿ ಪರೀಕ್ಷೆ ಆರಂಭವಾಗುವ ಹೊತ್ತಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ Read More »

ಮಂಗಳೂರು : ಡಿಜಿಟಲ್‌ ಅರೆಸ್ಟ್‌ ಮಾಡಿ 41.85 ಕೋ. ರೂ. ಲಪಟಾಯಿಸಿದ ವಂಚಕ

ಮಂಗಳೂರು: ಮುಂಬೈಯ ಸಿಸಿಬಿ ಪೊಲೀಸ್ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ಮಂಗಳೂರಿನ ವ್ಯಕ್ತಿಯನ್ನು ಡಿಜಿಟಲ್ ಅರೆಸ್ಟ್ ಮಾಡಿ 41.85 ಲಕ್ಷ ರೂ. ಲಪಟಾಯಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ ಜ.31ರಂದು ಅಪರಿಚಿತ ವ್ಯಕ್ತಿ ನವದೆಹಲಿಯಿಂದ ಕರೆ ಮಾಡಿ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯಿಸಿಕೊಂಡು, ನಿಮ್ಮ ಗುರುತಿನ ಚೀಟಿ ಉಪಯೋಗಿಸಿಕೊಂಡು ಮುಂಬೈಯ ಕೆನರಾ ಬ್ಯಾಂಕ್‌ನಲ್ಲಿ ಖಾತೆಯನ್ನು ತೆರೆಯಲಾಗಿದೆ. ಅದರಲ್ಲಿ ದೊಡ್ಡಮಟ್ಟದ ಅವ್ಯವಹಾರ ನಡೆಯುತ್ತಿದೆ. ಗುರುತಿನ ಚೀಟಿಯ ನಂಬರ್ ಉಪಯೋಗಿಸಿಕೊಂಡು ಮೊಬೈಲ್ ನಂಬರ್ ಪಡೆದುಕೊಳ್ಳಲಾಗಿದೆ. ಕೆನರಾ ಬ್ಯಾಂಕ್‌ನಲ್ಲಿ ಖಾತೆ ತೆರೆದು ಅಕ್ರಮ

ಮಂಗಳೂರು : ಡಿಜಿಟಲ್‌ ಅರೆಸ್ಟ್‌ ಮಾಡಿ 41.85 ಕೋ. ರೂ. ಲಪಟಾಯಿಸಿದ ವಂಚಕ Read More »

ದೆಹಲಿಯ 20 ಪೊಲೀಸರನ್ನು ಬಂಧಿಸಿದ ಹಿಮಾಚಲ ಪ್ರದೇಶ ಪೊಲೀಸರು!

ಅರೆಬೆತ್ತಲೆ ಪ್ರಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸಲು ಹೋದಾಗ ಗಡಿಯಲ್ಲಿ ಹೈಡ್ರಾಮಾ ನವದೆಹಲಿ: ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆ ಮಾಡಿದ್ದ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸಲು ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ ದಿಲ್ಲಿಯ 20 ಪೊಲೀಸ್ ಸಿಬ್ಬಂದಿಯನ್ನು ಶಿಮ್ಲಾ ಪೊಲೀಸರು ಬುಧವಾರ ತಡರಾತ್ರಿ ಬಂಧಿಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ಈ ಘಟನೆ ರಾಜಕೀಯ ಮತ್ತು ಆಡಳಿತ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಎಐ ಇಂಪ್ಯಾಕ್ಟ್​ ಶೃಂಗಸಭೆಯಲ್ಲಿ ಶರ್ಟ್​ ಬಿಚ್ಚಿ ಪ್ರತಿಭಟನೆ ಮಾಡಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರ ಪೈಕಿ ಮೂವರನ್ನು ಹಿಡಿಯಲು ದೆಹಲಿ ಪೊಲೀಸರು

ದೆಹಲಿಯ 20 ಪೊಲೀಸರನ್ನು ಬಂಧಿಸಿದ ಹಿಮಾಚಲ ಪ್ರದೇಶ ಪೊಲೀಸರು! Read More »

ಮಹಿಳೆಗೆ ಕಿರುಕುಳ : ಬ್ಯಾಂಕ್‌ ಮ್ಯಾನೇಜರ್‌ ವಿರುದ್ಧ ಕೇಸ್‌

ಉಡುಪಿ: ರಾಷ್ಟ್ರೀಯಕೃತ ಬ್ಯಾಂಕ್ ಒಂದರ ಆದಿ ಉಡುಪಿ ಶಾಖೆಯ ಮ್ಯಾನೇಜರ್ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಮ್ಯಾನೇಜರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಜ್ಯೋತಿ ಎಂಬ ಮಹಿಳೆ ನೀಡಿದ ದೂರಿನ ಮೇರೆಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 19ರಂದು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಸೆಕ್ಷನ್ 74ರ ಅಡಿಯಲ್ಲಿ ಕೇಸ್‌ ದಾಖಲಿಸಿಕೊಳ್ಳಲಾಗಿದೆ. ಈ ಘಟನೆ ಫೆ.7ರಂದು ಸಂಜೆ ಸುಮಾರು 5.30ಕ್ಕೆ ನಡೆದಿದೆ. ಸಾಲದ ವಿಷಯದ ಬಗ್ಗೆ ಚರ್ಚಿಸಬೇಕೆಂದು ಹೇಳಿ ಮ್ಯಾನೇಜರ್ ತಮ್ಮನ್ನು

ಮಹಿಳೆಗೆ ಕಿರುಕುಳ : ಬ್ಯಾಂಕ್‌ ಮ್ಯಾನೇಜರ್‌ ವಿರುದ್ಧ ಕೇಸ್‌ Read More »

ಉದ್ಯೋಗ ನೆಪದಲ್ಲಿ ವಂಚನೆ : ಖಾಸಗಿ ಸಂಸ್ಥೆ ವಿರುದ್ಧ ದೂರು ದಾಖಲಿಸಿದ ಕಾಲೇಜು ವಿದ್ಯಾರ್ಥಿಗಳು

ಮೂರು ದಿನದ ತರಬೇತಿಗೆ 2 ಸಾವಿರ ರೂ. ಪಡೆದು ಬ್ರೈನ್‌ವಾಶ್‌ ಮಾಡಿದ ಆರೋಪ ಮಂಗಳೂರು : ನಗರದಲ್ಲಿ ಕಾರ್ಯಾಚರಿಸುತ್ತಿರುವ Vexon ಎಂಬ ಖಾಸಗಿ ಸಂಸ್ಥೆ ತರಬೇತಿ ಮತ್ತು ಉದ್ಯೋಗದ ಆಮಿಷವೊಡ್ಡಿ ಕಾಲೇಜು ವಿದ್ಯಾರ್ಥಿಗಳನ್ನು ವಂಚಿಸುತ್ತಿದೆ ಎಂದು ಆರೋಪಿಸಿ ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿಗಳು ದೂರು ದಾಖಲಿಸಿದ್ದಾರೆ. ಕುದ್ರೋಳಿಯ ಶ್ರೇಯಸ್ ಸ್ವೀಟ್ಸ್ ಎದುರು ಕಾರ್ಯಾಚರಿಸುತ್ತಿರುವ ಈ ಸಂಸ್ಥೆಯು ವಿದ್ಯಾರ್ಥಿಗಳಿಗೆ ವಂಚಿಸುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಂಸ್ಥೆಯು ತರಬೇತಿಯ ಹೆಸರಿನಲ್ಲಿ ಪ್ರತಿ ವಿದ್ಯಾರ್ಥಿಯಿಂದ 2,000 ರೂಪಾಯಿ ಸಂಗ್ರಹಿಸುತ್ತದೆ ಮತ್ತು

ಉದ್ಯೋಗ ನೆಪದಲ್ಲಿ ವಂಚನೆ : ಖಾಸಗಿ ಸಂಸ್ಥೆ ವಿರುದ್ಧ ದೂರು ದಾಖಲಿಸಿದ ಕಾಲೇಜು ವಿದ್ಯಾರ್ಥಿಗಳು Read More »

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು

ಹಾಸನ: ಹಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಮಹಿಳೆ ಮೃತಪಟ್ಚ ಘಟನೆ ನಡೆದಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಮ್ಸ್ ಆಸ್ಪತ್ರೆಗೆ ಹೆರಿಗೆಗಾಗಿ ಹನುಮನಹಳ್ಳಿ ನಿವಾಸಿ ಶೃತಿ ಎಂಬವರನ್ನು ದಾಖಲು ಮಾಡಲಾಗಿತ್ತು. ಅವರಿಗೆ ಭಾನುವಾರ ಮಗು ಜನಿಸಿದೆ. ಆದರೆ ಆ ಬಳಿಕ ಅವರ ಆರೋಗ್ಯ ಕ್ಷೀಣಿಸಲು ಆರಂಭವಾಗಿದೆ. ಆದರೆ ಭಾನುವಾರವಾದ ಕಾರಣ ತಜ್ಞ ವೈದ್ಯರು ಅಲಭ್ಯರಾದ ಕಾರಣ ಚಿಕಿತ್ಸೆ ವಿಳಂಬವಾಗಿ ಅವರು ಸಾವನ್ನಪ್ಪಿದ್ದಾರೆ. ಮೊದಲಿಗೆ ಶೃತಿ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿ, ಆ

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು Read More »

ಬೈಕ್ ಕಳ್ಳರು ಪೊಲೀಸ್ ಬಲೆಗೆ

ಮಣಿಪಾಲ: ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಬೈಕ್ ಕಳ್ಳತನ ಮಾಡಿದ ಇಬ್ಬರು ಕಳ್ಳರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.ಆರೋಪಿಗಳನ್ನು ನೇತಾಜಿನಗರದ ಶರತ್(26) ಮತ್ತು ಗಣೇಶ್(31) ಎಂದು ಗುರುತಿಸಲಾಗಿದೆ. ರಾಹುಲ್ ನಗರದ ವೀರಮಾರುತಿ ಭಜನಾ ಮಂದಿರದ ಸಮೀಪ ನಿಲ್ಲಿಸಲಾದ ಬೈಕ್ ಕಳ್ಳತನವಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸುದರ್ಶನ್ ಎಂಬವರು ದೂರು ದಾಖಲು ಮಾಡಿದ್ದರು. ಪ್ರಕರಣದ ಆರೋಪಿಗಳನ್ನು ಕೇವಲ 11 ಗಂಟೆಯೊಳಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಕದ್ದ ಬೈಕ್ ಅನ್ನು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದೆ. ಕಳ್ಳರಿಗೆ ನ್ಯಾಯಾಂಗ ಬಂಧನ

ಬೈಕ್ ಕಳ್ಳರು ಪೊಲೀಸ್ ಬಲೆಗೆ Read More »

ಮನೆ ಬಾಗಿಲಿನ ಬೀಗ ಮುರಿದು ಅರ್ಧ ಕೆ.ಜಿ. ಚಿನ್ನಕ್ಕೆ ಕನ್ನ ಹಾಕಿದ ಖದೀಮರು

ಬೆಂಗಳೂರು: ಮನೆಯ ಬಾಗಿಲ ಬೀಗ ಮುರಿದ ಕಳ್ಳರು ಸುಮಾರು ಅರ್ಧ ಕೆ.ಜಿ. ಗಳಷ್ಟು ಚಿನ್ನ ದರೋಡೆ ಮಾಡಿರುವ ಘಟನೆ ರಾಮನಗರ ಟೌನ್‌ನ ದ್ಯಾವರಸೇಗೌಡನದೊಡ್ಡಿ ಎಂಬಲ್ಲಿ ನಡೆದಿದೆ. ಸಾಫ್ಟ್‌ವೇರ್ ಕಂಪನಿಯಲ್ಲಿ ಉದ್ಯೋಗದಲ್ಲಿರುವ ‌ಲಿಖಿತ್ ಎಂಬವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿರುವುದಾಗಿದೆ. ಲಿಖಿತ್ ಅವರ ಮನೆಯಲ್ಲಿ ಯಾರೂ ಇಲ್ಲದೇ ಇರುವ ಸಂದರ್ಭವನ್ನು ಬಳಸಿಕೊಂಡ ಖದೀಮರು, ಮನೆಯ ಬೀಗ ಮುರಿದು ಕಳ್ಳತನ ಮಾಡಿದ್ದಾರೆ. ಸಂಜೆಯ ವೇಳೆಗೆ ಲಿಖಿತ್ ಅವರು ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮನೆಯ ಬೀಗ ಮುರಿದಿರುವುದು

ಮನೆ ಬಾಗಿಲಿನ ಬೀಗ ಮುರಿದು ಅರ್ಧ ಕೆ.ಜಿ. ಚಿನ್ನಕ್ಕೆ ಕನ್ನ ಹಾಕಿದ ಖದೀಮರು Read More »

ಫಾರಿನ್ ಆ್ಯಕ್ಟ್ ಉಲ್ಲಂಘನೆ: 12 ವರ್ಷಗಳ ಬಳಿಕ ಆರೋಪಿ ಅಂದರ್

ಬಂಟ್ವಾಳ: ಫಾರಿನ್ ಆ್ಯಕ್ಚ್ ಉಲ್ಲಂಘನೆ ಪ್ರಕರಣದಲ್ಲಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರ್ಕಳದಲ್ಲಿ ಬಂಧಿಸಲಾಗಿದೆ.ಬಂಧಿತನನ್ನು ಉಡುಪಿಯ ನಿವಾಸಿ ತಾಜ್ ಮೊಹಮ್ಮದ್ ಯೂಸಫ್ (59) ಎಂದು ಗುರುತಿಸಲಾಗಿದೆ. ಈತನ ವಿರುದ್ಧ 2014ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿದೇಶಿಯರ ಕಾಯ್ದೆ ಕಲಂ 14(a)(b), 14(c) m 2 2 340 ಅಡಿಯಲ್ಲಿ ಪ್ರಕರಣ (ಕ್ರೈಂ ನಂಬರ್: 152/2014) ದಾಖಲಾಗಿತ್ತು. ಪ್ರಕರಣ ದಾಖಲಾದಾಗಿನಿಂದಲೂ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಸದ್ಯ ಆರೋಪಿಗೆ ನ್ಯಾಯಾಂಗ ಬಂಧನ

ಫಾರಿನ್ ಆ್ಯಕ್ಟ್ ಉಲ್ಲಂಘನೆ: 12 ವರ್ಷಗಳ ಬಳಿಕ ಆರೋಪಿ ಅಂದರ್ Read More »

ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ ಯುವತಿ?

ಪುತ್ತೂರು: ಯುವಕನೊಬ್ಬ ವಿವಾಹವಾಗುವುದಾಗಿ ‌ನಂಬಿಸಿ ಮಗು ಕರುಣಿಸಿ ಬಳಿಕ ಕೈಕೊಟ್ಟ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಸಂತ್ರಸ್ತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದು, ಪೋಷಕರು ತಕ್ಷಣವೇ ಆಕೆಯನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾಗಿ ಸುದ್ದಿ ಹಬ್ಬಿದೆ. ಆರೋಪಿ ಯುವಕ ಜೈಲಿನಿಂದ ಹೊರಬಂದ ಬಳಿಕ ಯುವತಿ ಮಾನಸಿಕವಾಗಿ ಬಹಳಷ್ಟು ನೊಂದಿದ್ದಳು. ಯುವಕನ ಕಡೆಯವರು ಜಿದ್ದಿನಿಂದ ಮದುವೆ ನಡೆದಿಲ್ಲ. ಹಲವಾರು ಜನರು ಈ ಸಂಬಂಧ ಸಂಧಾನ ನಡೆಸಿ, ವಿವಾಹ ನಡೆಸುವುದಕ್ಕೆ ಪ್ರಯತ್ನ ಮಾಡಿದ್ದರೂ ಸಹ ಯಾವುದೇ ಉಪಯೋಗವಾಗಿಲ್ಲ. ಇದೆಲ್ಲದರ

ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಪ್ರಕರಣ: ಆತ್ಮಹತ್ಯೆಗೆ ಯತ್ನಿಸಿದ ಯುವತಿ? Read More »

error: Content is protected !!
Scroll to Top