ಅಪರಾಧ

ದ್ವೇಷ ಭಾಷಣ ಪ್ರಕರಣ : ಡಾ.ಪ್ರಭಾಕರ್‌ ಭಟ್‌ಗೆ ಜಾಮೀನು ನೀಡಿದ ನ್ಯಾಯಾಲಯ

ಉಪ್ಪಳಿಗೆ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ ಭಾಷಣ ಮಾಡಿದ ಆರೋಪ ಪುತ್ತೂರು: ಪುತ್ತೂರು ತಾಲೂಕಿನ ಉಪ್ಪಳಿಗೆಯ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ ಮಾಡಿರುವ ಪ್ರಕರಣದಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ನ್ಯಾಯಾಲಯ ಬುಧವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ಡಾ.ಪ್ರಭಾಕರ ಭಟ್‌ ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರುಗೊಳಿಸಿದೆ. ಉಪ್ಪಳಿಗೆಯಲ್ಲಿ […]

ದ್ವೇಷ ಭಾಷಣ ಪ್ರಕರಣ : ಡಾ.ಪ್ರಭಾಕರ್‌ ಭಟ್‌ಗೆ ಜಾಮೀನು ನೀಡಿದ ನ್ಯಾಯಾಲಯ Read More »

ಕೊಲೆ ಪ್ರಕರಣದ ಅಪರಾಧಿಗೆ ಗಲ್ಲು ಶಿಕ್ಷೆ

ಒಂದೇ ಕುಟುಂಬದ ನಾಲ್ವರನ್ನು ಸಾಯಿಸಿದ್ದ ಪಾತಕಿ ಮಡಿಕೇರಿ: ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಅಪರಾಧಿಗೆ ಕೋರ್ಟ್‌ ಗಲ್ಲು ಶಿಕ್ಷೆ ವಿಧಿಸಿದೆ. ಕೊಡಗು ಜಿಲ್ಲೆಯ ಇತಿಹಾಸದಲ್ಲಿ ಗಲ್ಲು ಶಿಕ್ಷೆ ವಿಧಿಸಿದ ಮೊದಲ ತೀರ್ಪು ಇದು ಎನ್ನಲಾಗಿದೆ. ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ ಅಪರಾಧಿಗೆ ವಿರಾಜಪೇಟೆ ಸೆಷನ್ಸ್‌ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ. ಕೇರಳ ಮೂಲದ ಗಿರೀಶ್ ಎಂಬಾತನಿಗೆ ಈ ಮರಣದಂಡನೆ ವಿಧಿಸಿದೆ. 2024ರಲ್ಲಿ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದ

ಕೊಲೆ ಪ್ರಕರಣದ ಅಪರಾಧಿಗೆ ಗಲ್ಲು ಶಿಕ್ಷೆ Read More »

ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಪುನರ್ವಸತಿ ಕೇಂದ್ರದಲ್ಲಿ ಸಾವು

ತಾಯಿ ಹುಲಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿಮರಿಗಳು ಮೈಸೂರು : ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌಡನಕಟ್ಟೆ ಗ್ರಾಮದಲ್ಲಿ ನ.29ರಂದು ತಾಯಿಯೊಂದಿಗೆ ಸೆರೆ ಹಿಡಿದಿದ್ದ 4 ಹುಲಿ ಮರಿಗಳು ಆಹಾರ ಸೇವಿಸದೆ ಅಸ್ವಸ್ಥಗೊಂಡು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಮರಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪಶುವೈದ್ಯರು ಮೃತ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ನವೆಂಬರ್ 28ರಂದು ಈ ನಾಲ್ಕು ಮರಿಗಳ ಜೊತೆಗೆ ತಾಯಿ ಹುಲಿಯೂ ಕಾಣಿಸಿಕೊಂಡಿದ್ದು, ನವೆಂಬರ್ 29 ಮತ್ತು 30ರಂದು ಗೌಡನಕಟ್ಟೆಯ ಪ್ರಕಾಶ್‌

ಸೆರೆ ಹಿಡಿದಿದ್ದ ನಾಲ್ಕು ಹುಲಿಮರಿಗಳು ಪುನರ್ವಸತಿ ಕೇಂದ್ರದಲ್ಲಿ ಸಾವು Read More »

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಹತ್ತು ಮಂದಿಗೆ ಜೈಲು ಶಿಕ್ಷೆ

ನಕಲಿ ಆಧಾರ್‌ ಕಾರ್ಡ್‌ ಬಳಸಿ ಅಕ್ರಮವಾಗಿ ವಾಸ ಉಡುಪಿ : ಅಕ್ರಮವಾಗಿ ನೆಲೆಸಿದ್ದ 10 ಬಾಂಗ್ಲಾದೇಶದ ಪ್ರಜೆಗಳಿಗೆ ಉಡುಪಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯ ತಲಾ 10,000 ರೂ. ದಂಡದೊಂದಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಕ್ಟೋಬರ್ 11, 2024ರಂದು ಮಲ್ಪೆಯ ವಡಬಾಂಡೇಶ್ವರ ಬಸ್ ನಿಲ್ದಾಣದ ಬಳಿ ಗಸ್ತು ತಿರುಗುತ್ತಿದ್ದ ಮಲ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಕುಮಾರ್ ಆರ್ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಏಳು ಜನರನ್ನು ಗಮನಿಸಿದಾಗ ಅವರು ಬಾಂಗ್ಲಾದೇಶದಿಂದ ಅಕ್ರಮವಾಗಿ

ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಹತ್ತು ಮಂದಿಗೆ ಜೈಲು ಶಿಕ್ಷೆ Read More »

ಡ್ರಗ್ಸ್‌ ಕೊಡಲಿಲ್ಲ ಎಂದು ಜೈಲಿನ ಟಿವಿಯನ್ನು ಒಡೆದು ಹಾಕಿ ದಾಂಧಲೆ ಎಸಗಿದ ಕೈದಿಗಳು

ಕಾರವಾರ ಜೈಲಿನಲ್ಲಿ ಮಂಗಳೂರಿನ ಕೈದಿಗಳಿಂದ ಮಾರಾಮಾರಿ ಬೆಂಗಳೂರು: ಕೆಲದಿನಗಳ ಹಿಂದೆಯಷ್ಟೇ ತಂಬಾಕು ಕೊಟ್ಟಿಲ್ಲವೆಂದು ಜೈಲು ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿ ಸುದ್ದಿಯಾಗಿದ್ದ ಕಾರಾವಾರ ಜೈಲಿನಲ್ಲಿ ಇದೀಗ ಮತ್ತೊಮ್ಮೆ ಕೈದಿಗಳು ಡ್ರಗ್ಸ್‌ಗಾಗಿ ಮಾರಾಮಾರಿ ನಡೆಸಿದ್ದಾರೆ. ಇಬ್ಬರು ಕೈದಿಗಳು ಮಾದಕವಸ್ತು ಕೊಟ್ಟಿಲ್ಲವೆಂದು ಟಿವಿ ಒಡೆದು ದಾಂಧಲೆ ಎಬ್ಬಿಸಿದ ಘಟನೆ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಕೆಲವು ದಿನಗಳ ಹಿಂದೆ ಜೈಲರ್ ಹಾಗೂ ಮೂವರು ಸಿಬ್ಬಂದಿ ಮೇಲೆ ಮಂಗಳೂರು ಮೂಲದ ರೌಡಿಗಳಾದ ಮೊಹಮ್ಮದ್ ಅಬ್ದುಲ್, ಫಯಾನ್ ಹಾಗೂ ಕೌಶಿಕ್ ನಿಹಾಲ್ ಎಂಬವರು

ಡ್ರಗ್ಸ್‌ ಕೊಡಲಿಲ್ಲ ಎಂದು ಜೈಲಿನ ಟಿವಿಯನ್ನು ಒಡೆದು ಹಾಕಿ ದಾಂಧಲೆ ಎಸಗಿದ ಕೈದಿಗಳು Read More »

ನಿಷೇಧಿತ ಡ್ರಗ್ಸ್ ಮಾರಾಟ: ಮೂವರ ಬಂಧನ

ತಲಪಾಡಿ: ನಿಷೇಧಿತ ಮಾದಕ ವಸ್ತು MDMA ಅನ್ನು ಕೇರಳ ಮತ್ತು ಕರ್ನಾಟಕದ ಗಡಿ ಭಾಗ ತಚ್ಚಣಿಯಲ್ಲಿ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿ, ಅವರಿಂದ ಸುಮಾರು 2 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ತಲಪಾಡಿಯ ಕೊಲಂಗೆರೆ ನಿವಾಸಿ ಅಬ್ದುಲ್ ರವೂಫ್, ತೊಕ್ಕೊಟ್ಟು ಚೆಂಬುಗುಡ್ಡೆ ನಿವಾಸಿ ಶರೀಫ್ ಯಾನೆ ಅಮಿನ್ ಮತ್ತು ಡ್ರಗ್ಸ್ ಖರೀದಿಗೆ ಬಂದಿದ್ದ ಕಿನ್ಯಾದ ‌ಸಂಕೇಶ್ ಹೌಸ್ ನಿವಾಸಿ ನಿಯಾಝ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಪಣಂಬೂರಿನ ಬೆಂಗ್ರೆ

ನಿಷೇಧಿತ ಡ್ರಗ್ಸ್ ಮಾರಾಟ: ಮೂವರ ಬಂಧನ Read More »

ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ ವಿದ್ಯಾರ್ಥಿಗೆ 31.99 ಲ.ರೂ. ವಂಚನೆ

ಮಂಗಳೂರು: ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ನಂಬಿ ವಿದ್ಯಾರ್ಥಿಯೊಬ್ಬ ಬರೋಬ್ಬರಿ 31.99 ಲ.ರೂ. ಕಳೆದುಕೊಂಡಿರುವ ಕುರಿತು ದೂರು ದಾಖಾಲಾಗಿದೆ. ಹೋಮಿಯೋಪತಿ ಕಲಿಯುತ್ತಿರುವ ಯುವಕನಿಗೆ ಆನ್‌ಲೈನ್ ಮೂಲಕ 31.99 ಲಕ್ಷ ರೂ. ವಂಚಿಸಲಾಗಿದೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸ್‌ಆ್ಯಪ್‌ನಲ್ಲಿ ಬಂದ ಸಂದೇಶವನ್ನು ಗಮನಿಸಿದ ತಾನು ಹಣ ಹೂಡಿಕೆ ಮಾಡಿ ಹೆಚ್ಚು ಲಾಭ ಗಳಿಸಬಹುದು ಎಂಬ ಆಸೆಯಿಂದ ಆರೋಪಿಗಳು ನೀಡಿದ ಬೇರೆ ಬೇರೆ ಖಾತೆಗಳಿಗೆ ನ.5ರಿಂದ 26ರ ವರೆಗೆ ತನ್ನಲ್ಲಿದ್ದ ಹಣ ಹಾಗೂ ಮನೆಯಲ್ಲಿದ್ದ ಬಂಗಾರನ್ನು ಅಡವಿಟ್ಟು

ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ ವಿದ್ಯಾರ್ಥಿಗೆ 31.99 ಲ.ರೂ. ವಂಚನೆ Read More »

ವಿದೇಶದಲ್ಲಿರುವಾಗ ಭಗವದ್ಗೀತೆ ಅವಮಾನಿಸಿ ಪೋಸ್ಟ್‌ : ಆರೋಪಿ ಸೆರೆ

ಸೌದಿಯಲ್ಲಿ ಕುಳಿತು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಾಕಿದ್ದ ಆರೋಪಿ ಮಂಗಳೂರು: ವಿದೇಶದಲ್ಲಿದ್ದಾಗ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಭಾವ ಉಂಟಾಗುವ ಪೋಸ್ಟ್ ಹಾಕಿದ ಆರೋಪಿ ಫೆಲಿಕ್ಸ್ ಎಡ್ವರ್ಡ್ ಮಥಾಯಿಸ್ (56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಫೆಲಿಕ್ಸ್ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟಿದ್ದ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾಗ ಪೋಸ್ಟ್ ಹಾಕಿದ್ದ. ಮೂಲತಃ ಮುಂಬೈಯ ಚಾರ್ಕೋಪ್ ನಿವಾಸಿಯಾಗಿದ್ದ ಈತನ ಬಗ್ಗೆ ಮಾಹಿತಿ

ವಿದೇಶದಲ್ಲಿರುವಾಗ ಭಗವದ್ಗೀತೆ ಅವಮಾನಿಸಿ ಪೋಸ್ಟ್‌ : ಆರೋಪಿ ಸೆರೆ Read More »

ಮದುವೆಗೆ ಎರಡು ದಿನ ಬಾಕಿಯಿರುವಾಗ ವರ ಪರಾರಿ

ಮದುವೆ ಇಷ್ಟ ಇಲ್ಲ ಎಂದು ಹೇಳದೆ ಕೇಳದೆ ಚೆನ್ನೈಗೆ ಹೋದ ಯುವಕ ಮಂಗಳೂರು: ಮದುವೆಗೆ ಎರಡು ದಿನಗಳು ಬಾಕಿಯಿರುವಂತೆಯೇ ಯುವಕನೊಬ್ಬ ಕಾರಿನ ಜತೆ ನಾಪತ್ತೆಯಾಗಿದ್ದು, ಆತ ಚೆನ್ನೈಗೆ ತೆರಳಿರುವ ಬಗ್ಗೆ ಮಾಹಿತಿ ಲಭಿಸಿದೆ. ಜಪ್ಪು ಮಾರ್ಕೆಟ್‌ ಅರಕೆರೆಬೈಲುವಿನ ನಿವಾಸಿ ರಕ್ಷಣ್‌ ಜೆ.ಕೆ. (32) ನಾಪತ್ತೆಯಾಗಿ ಚೆನ್ನೈಗೆ ತೆರಳಿದವರು. ರಕ್ಷಣ್‌ ತನ್ನ ಮನೆಯಿಂದ ಡಿ.6ರಂದು ಬೆಳಗ್ಗೆ 11.30ಕ್ಕೆ ತನ್ನ ತಾಯಿಯ ಕಾರಿನಲ್ಲಿ ಮದುವೆಯ ಆಮಂತ್ರಣ ಪತ್ರಿಕೆಯನ್ನು ಸಂಬಂಧಿಕರು ಹಾಗೂ ಗೆಳೆಯರಿಗೆ ನೀಡಲೆಂದು ಹೋಗಿದ್ದರು. ಆ ಬಳಿಕ ಮನೆಗೂ ಬಾರದೆ,

ಮದುವೆಗೆ ಎರಡು ದಿನ ಬಾಕಿಯಿರುವಾಗ ವರ ಪರಾರಿ Read More »

ನೇಣು ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದಾಗ ಹಗ್ಗ ತುಂಡಾಗಿ ಗಾಯಗೊಂಡಿದ್ದ ಕಾರ್ಮಿಕ ಸುಳ್ಯ: ಆತ್ಮಹತ್ಯೆಗೆ ಪ್ರಯತ್ನಿಸಿದಾಗ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದ ಕಲ್ಲುಗುಂಡಿಯಲ್ಲಿ ನಡೆದಿದೆ. ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ್ನಾಡು ಗ್ರಾಮದ ಮಾಧವ (60) ಎಂಬವರು ತನ್ನ ಬಾಡಿಗೆ ರೂಮಿನಲ್ಲಿ ಡಿ.5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು ಕೆಳಕ್ಕೆ ಜಿಗಿದ ಸಂದರ್ಭ

ನೇಣು ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು Read More »

error: Content is protected !!
Scroll to Top