ಅಪರಾಧ

ದೇಶಾದ್ಯಂತ ಆಘಾತದ ಅಲೆಯೆಬ್ಬಿಸಿದ ಸಹೋದರಿಯರ ಸೆಕ್ಸ್‌, ಮತಾಂತರ ಜಾಲ

ಬಡ ಹೆಣ್ಣು ಮಕ್ಕಳನ್ನು ಡ್ರಗ್ಸ್‌ ಸೇವಿಸುವಂತೆ ಮಾಡಿ ಶೋಷಿಸುತ್ತಿದ್ದ ಸಹೋದರಿಯರು ನವದೆಹಲಿ: ಸೆಕ್ಸ್ ಮತ್ತು ಡ್ರಗ್ಸ್ ಜಾಲವನ್ನು ಭೇದಿಸಿದ ಮಧ್ಯಪ್ರದೇಶ ಪೊಲೀಸರು ಇಬ್ಬರು ಸಹೋದರಿಯರು ಸೇರಿದಂತೆ ಮೂವರನ್ನು ಮಂಗಳವಾರ ಬಂಧಿಸಿದ್ದಾರೆ. ಯುವತಿಯರಿಗೆ ಉದ್ಯೋಗ ಒದಗಿಸುವ ನೆಪದಲ್ಲಿ ಅತ್ಯಾಚಾರ, ಬಲವಂತದ ಮತಾಂತರ ಮತ್ತು ಲೈಂಗಿಕ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರು ಸಹೋದರಿಯರು ಮತ್ತು ಆ ಪೈಕಿ ಒಬ್ಬಾಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಬಗ್ಸೇವಾನಿಯಾ ಪೊಲೀಸರು ಹೇಳಿದ್ದಾರೆ. ಇತರ ಮೂವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ಅವರು ತಲೆಮರೆಸಿಕೊಂಡಿದ್ದಾರೆ. ಮಧ್ಯ […]

ದೇಶಾದ್ಯಂತ ಆಘಾತದ ಅಲೆಯೆಬ್ಬಿಸಿದ ಸಹೋದರಿಯರ ಸೆಕ್ಸ್‌, ಮತಾಂತರ ಜಾಲ Read More »

ಆಕ್ರೋಶದ ಅಲೆ ಎಬ್ಬಿಸಿದ ವಿದ್ಯಾರ್ಥಿ ಸಂಕೇತ್‌ ಕೊಲೆ ಕೃತ್ಯ

15 ಲ.ರೂ. ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗ: ಶಿವಮೊಗ್ಗದಲ್ಲಿ ಮುಸ್ಲಿಂ ಯುವಕರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಥಳಿಸಿ ಸಾಯಿಸಿದ ಪ್ರಕರಣ ರಾಜ್ಯಾದ್ಯಂತ ಆಕ್ರೋಶದ ಅಲೆಯೆಬ್ಬಿಸಿದೆ. ಶಾಲಾ ಬಾಲಕನ ಹತ್ಯೆಯನ್ನು ಸಿಎಂ ಸಿದ್ದರಾಮಯ್ಯ ಅವರೂ ಖಂಡಿಸಿದ್ದು, ಮೃತ ಬಾಲಕನ ಪೋಷಕರಿಗೆ ಸರ್ಕಾರದ ವತಿಯಿಂದ 15 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ಶಾಲಾ ವಿದ್ಯಾರ್ಥಿಯನ್ನು ಥಳಿಸಿ ಹತ್ಯೆಗೈದಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ನೆರವಾಗುವುದರ ಜೊತೆಗೆ ಕೃತ್ಯದಲ್ಲಿ ಭಾಗಿಯಾದ ಪ್ರತಿಯೊಬ್ಬ

ಆಕ್ರೋಶದ ಅಲೆ ಎಬ್ಬಿಸಿದ ವಿದ್ಯಾರ್ಥಿ ಸಂಕೇತ್‌ ಕೊಲೆ ಕೃತ್ಯ Read More »

ಅಜೀಮ್‌ ಪ್ರೇಮ್‌ಜಿ ವಿವಿ ವಿರುದ್ಧ ದೇಶ ವಿರೋಧಿ ಚಟುವಟಿಕೆ ಆರೋಪ

ಮಾನ್ಯತೆ ರದ್ದುಪಡಿಸಲು ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ ಬೆಂಗಳೂರು: ಸರ್ಜಾಪುರದಲ್ಲಿರುವ ಪ್ರತಿಷ್ಠಿತ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಮಂಗಳವಾರ ವಿವಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಸಂಜೆ ವಿವಿ ಆವರಣಕ್ಕೆ ನುಗ್ಗಿದ ಎಬಿವಿಪಿ ವಿದ್ಯಾರ್ಥಿಗಳು ತ್ರಿವರ್ಣ ಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ವಿವಿಯ ನಾಮಫಲಕಕ್ಕೆ ಕಪ್ಪುಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಸರ್ಜಾಪುರ ಪೊಲೀಸರು ತೆರಳಿ ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಕೇಂದ್ರ ಗೃಹ

ಅಜೀಮ್‌ ಪ್ರೇಮ್‌ಜಿ ವಿವಿ ವಿರುದ್ಧ ದೇಶ ವಿರೋಧಿ ಚಟುವಟಿಕೆ ಆರೋಪ Read More »

ಹಿಂದೂ ಧರ್ಮೀಯರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಅಶಾಂತಿಧೂತರ ಅಟ್ಟಹಾಸ

ಮುರುಡೇಶ್ವರ: ಅಶಾಂತಿದೂತ ಯುವಕರು ಹಿಂದೂ ಧರ್ಮೀಯರ ಮನೆಗಳನ್ನು ಗುರಿಯಾಗಿಸಿಕೊಂಡು ಕಲ್ಲು ತೂರಾಟ ನಡೆಸಿರುವ ಘಟನೆ ಬೈಲೂರಿನ ತೆಂಗಾರಿನಲ್ಲಿ ‌ನಡೆದಿದೆ. ರಾತ್ರಿ ವೇಳೆ ಮೂರು ಬೈಕ್‌ಗಳ ಮೂಲಕ ಬಂದ ದುಷ್ಕರ್ಮಿಗಳು ಹಿಂದೂ ಧರ್ಮೀಯರ ಮನೆಗಳ ಮೇಲೆ ಕಲ್ಲೆಸೆದಿದ್ದಾರೆ. ಅಪ್ರಾಪ್ತ ವಯಸ್ಸಿನ ಅಶಾಂತಿದೂತರು ಗುಂಪಾಗಿ ಬಂದು ನಡೆಸಿದ ಕೃತ್ಯ ಇದೆಂದು ತಿಳಿದು ಬಂದಿದೆ. ಮೂವರು ಆರೋಪಿಗಳನ್ನು ಸ್ಥಳೀಯ ಜನರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯ ಬಳಿಕ ಹಿಂದೂಗಳು ಮುರ್ಡೇಶ್ವರ ಠಾಣೆಯ ಬಳಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು, ಆ ಬಳಿಕ

ಹಿಂದೂ ಧರ್ಮೀಯರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಅಶಾಂತಿಧೂತರ ಅಟ್ಟಹಾಸ Read More »

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸರ ಮೇಲೆಯೇ ಆರೋಪಿಗಳ ವಕೀಲರಿಂದ ಆರೋಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಕ್ರಾಸ್ ಎಕ್ಸಾಮಿನ್ ವೇಳೆ ಪೊಲೀಸರೇ ಎಡವಟ್ಟು ಮಾಡಿದ್ದಾರೆ ಎಂದು ಆರೋಪಿಗಳ‌ ಪರ ವಕೀಲರು ಆರೋಪಿಸಿದ್ದಾರೆ. ಸದ್ಯ ಆರೋಪಿಗಳು ದಿನಕ್ಕೊಂದು ಎಂಬಂತೆ ಹೊಸ ಹೊಸ ಆರೋಪಗಳನ್ನು ಮಾಡುತ್ತಿದ್ದಾರೆ. ನ್ಯಾಯಾಲಯಕ್ಕೆ ನಿನ್ನೆಯೂ ‌ಮೂವರು ಆರೋಪಿಗಳು ಅರ್ಜಿ ಸಲ್ಲಿಕೆ ಮಾಡಿದ್ದು, ಪೊಲೀಸರು ನಮ್ಮ ಮೊಬೈಲ್ ಗಳನ್ನು ಯಾವುದೋ ಸ್ಥಳದಲ್ಲಿ ವಶಕ್ಕೆ ಪಡೆದು ಬಳಿಕ ಕಾಮಾಕ್ಷಿಪಾಳ್ಯದ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆದಿದ್ದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ದೋಷಾರೋಪ ಪಟ್ಟಿ ಸಲ್ಲಿಕೆಯಾದಾಗ ಆರೋಪಿಗಳನ್ನು ಟೈಲ್ಸ್ ಇರುವಂತಹ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸರ ಮೇಲೆಯೇ ಆರೋಪಿಗಳ ವಕೀಲರಿಂದ ಆರೋಪ Read More »

ಎಐ ಶೃಂಗದಲ್ಲಿ ಅರೆ ಬೆತ್ತಲೆ ಪ್ರತಿಭಟನೆ : ಯುವ ಕಾಂಗ್ರೆಸ್‌ ಅಧ್ಯಕ್ಷನ ಬಂಧನ

ಪ್ರತಿಭಟನೆಗೆ ಸಂಚು ರೂಪಿಸಿದ್ದ ಉದಯ್‌ ಭಾನು ಚಿಬ್‌ ನವದೆಹಲಿ: ಭಾರತ ಎಐ ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಅರೆ ಬೆತ್ತಲೆ ಪ್ರತಿಭಟನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಉದಯ್‌ ಭಾನು ಚಿಬ್‌ ಅವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಹಲವಾರು ಸುತ್ತಿನ ವಿಚಾರಣೆಯ ನಂತರ ಬಂಧಿಸಲಾಗಿದೆ. ತಿಲಕ್ ಮಾರ್ಗ ಪೊಲೀಸ್ ಠಾಣೆ ಪೊಲೀಸರಿಂದ ಬಂಧನ ಮಾಡಲಾಗಿದೆ. ಪೊಲೀಸ್ ಠಾಣೆ ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿದೆ. ಎಐ ಸಭೆಯಲ್ಲಿ ಶರ್ಟ್‌ಲೆಸ್

ಎಐ ಶೃಂಗದಲ್ಲಿ ಅರೆ ಬೆತ್ತಲೆ ಪ್ರತಿಭಟನೆ : ಯುವ ಕಾಂಗ್ರೆಸ್‌ ಅಧ್ಯಕ್ಷನ ಬಂಧನ Read More »

ಎಸ್‌ಐಟಿ ತನಿಖೆಯಿಂದ ಬಯಲಾಯಿತು ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆಯ ಅಸಲಿ ಕಾರಣ

ರಿಯಲ್‌ ಎಸ್ಟೇಟ್‌ ಉದ್ಯಮಿಯ ಆತ್ಮಹತ್ಯೆಗೆ ಇದೇ ಕಾರಣವಂತೆ ಬೆಂಗಳೂರು: ಇಡೀ ದೇಶದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಬೆಂಗಳೂರಿನ ಖ್ಯಾತ ರಿಯಲ್‌ ಎಸ್ಟೇಟ್‌ ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಹಿಂದಿನ ಕಾರಣ ಈಗ ಬಯಲಾಗಿದೆ. ಸಿ.ಜೆ.ರಾಯ್ ಆತ್ಮಹತ್ಯೆ ಕೇಸ್ ತನಿಖೆ ಬಹುತೇಕ ಮುಕ್ತಾಯವಾಗಿದ್ದು, ಎಸ್‌ಐಟಿ ಅಧಿಕಾರಿಗಳ ಇಲ್ಲಿಯವರೆಗಿನ ತನಿಖೆಯಲ್ಲಿ ರಾಯ್ ಆತ್ಮಹತ್ಯೆ ಹಿಂದಿನ ಕಾರಣಗಳನ್ನು ವಿವರಿಸಿದ್ದಾರೆ. ಒಂದೇ ಕಾರಣದಿಂದ ರಾಯ್ ಅವರು ನೊಂದು ಆತ್ಮಹತ್ಯೆ ಮಾಡಿಕೊಂಡಿಲ್ಲ. ಬದಲಾಗಿ ಬೇರೆ ಬೇರೆ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಇಲ್ಲಿಯವರೆಗಿನ ಎಸ್‌ಐಟಿ ತನಿಖೆಯ ವೇಳೆ ಬಹಿರಂಗವಾಗಿದೆ

ಎಸ್‌ಐಟಿ ತನಿಖೆಯಿಂದ ಬಯಲಾಯಿತು ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆಯ ಅಸಲಿ ಕಾರಣ Read More »

ಹೂಡಿಕೆ ಲಾಭ ನಂಬಿ 19 ಲಕ್ಷ ರೂ. ಕಳೆದುಕೊಂಡ ಮಹಿಳೆ

ಮಂಗಳೂರು: ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಸುವ ಆಸೆಗೆ ಬಿದ್ದ ಮಹಿಳೆಯೊಬ್ಬರು ಬರೋಬ್ಬರಿ 19 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮಹಿಳೆಯೇ ಸ್ವತಹ ಮೊಬೈಲ್‌ನಲ್ಲಿ ಗೂಗಲ್ ಮೂಲಕ ಸಾಫ್ಟೋನಿಕ್ ವೆಬ್‌ಸೈಟ್ ಹುಡುಕಾಡಿ ಎಪಿಕೆ ಫೈಲ್ ಡೌನ್‌ಲೋಡ್‌ ಮಾಡಿಕೊಂಡಿದ್ದರು. ಬಳಿಕ ಸಾಫ್ಟೋನಿಕ್ ಆ್ಯಪ್ ಬಳಸಿ ಬ್ಯಾಂಕ್ ಖಾತೆಯ ವಿವರ ನೀಡಿದ್ದರು. ಹೆಚ್ಚಿನ ಲಾಭದ ಆಶೆಯಿಂದ ಈ ಆ್ಯಪ್‌ನಲ್ಲಿರುವ ನಾನಾ ಕಂಪನಿಗಳಿಗೆ ಒಟ್ಟು 19,06,166 ಲಕ್ಷ ರೂ. ಹೂಡಿಕೆ ಮಾಡಿದ್ದರು. ಜನವರಿಯಲ್ಲಿ 1 ಲಕ್ಷ ರೂ. ಲಾಭ ಅವರಿಗೆ ಸಿಕ್ಕಿತ್ತು. ಬಳಿಕ ಅವರನ್ನು

ಹೂಡಿಕೆ ಲಾಭ ನಂಬಿ 19 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಲೆ

ಎದೆಗೆ ಬಿದ್ದ ಏಟಿನಿಂದ ಸಾವನ್ನಪ್ಪಿದ 16ರ ಹರೆಯದ ಬಾಲಕ ಶಿವಮೊಗ್ಗ : ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಭೀಕರವಾಗಿ ಕೊಲೆಯಾದ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಶಿವಮೊಗ್ಗದ ಸೂಳೆಬೈಲು ಬಡಾವಣೆಯ ಸಂಕೇತ್ (16) ಕೊಲೆಯಾದ ವಿದ್ಯಾರ್ಥಿ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ

ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಲೆ Read More »

ಮನೆಗೆ ಬಂದು ಕಾರಿನ ಗಾಜು ಒಡೆದ ಮೆಸ್ಕಾಂ ಸಿಬ್ಬಂದಿ

ಸುಳ್ಯ: ಮನೆಯಲ್ಲಿ ತಂದೆ ಮತ್ತು ತಾಯಿ ಮಾತ್ರವೇ ಇದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಂದು‌‌ ಕಾರಿನ ಗಾಜನ್ನು ಹೆಲ್ಮೆಟಿನಿಂದ ಹೊಡೆದು ಹಾನಿ ಮಾಡಿರುವುದಾಗಿ ಬಾಲಚಂದ್ರ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ಬೈಕಿನಲ್ಲಿ ಬಂದು ಗೇಟಿನೊಳಕ್ಕೆ ಪ್ರವೇಶಿಸಿ ಈ ಕೃತ್ಯ ಎಸಗಿದ್ದಾನೆ. ಆತನನ್ನು ಮನೆಯಲ್ಲಿ ಇದ್ದವರು ಪ್ರಶ್ನೆ ಮಾಡಿದ್ದು, ಆತ ಉತ್ತರಿಸದೇ ಜಾಗ ಖಾಲಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಹಾನಿಯಾದ ಗಾಜಿನ ಮೌಲ್ಯ ಐದು ಸಾವಿರ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ

ಮನೆಗೆ ಬಂದು ಕಾರಿನ ಗಾಜು ಒಡೆದ ಮೆಸ್ಕಾಂ ಸಿಬ್ಬಂದಿ Read More »

error: Content is protected !!
Scroll to Top