ಅಪರಾಧ

ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್‌ಸ್ಪೆಕ್ಟರ್‌

ಭ್ರಷ್ಟರಿಗೆ ಕೊನೆಗೆ ಆಗುವುದು ಇದೇ ಗತಿ ಎಂದು ಪ್ರತಿಕ್ರಿಯಿಸಿದ ಜನ ಬೆಂಗಳೂರು: ನಾಲ್ಕು ಲಕ್ಷ ರೂ. ಲಂಚ ಪಡೆವಾಗ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಅಕರಿಗಳ ಬಲೆಗೆ ಬಿದ್ದಿರುವ ಪೊಲೀಸ್ ಇನ್‌ಸ್ಪೆ ಕ್ಟರ್ ಮಾಡಿರುವ ಹೈಡ್ರಾಮಾದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದ್ದು, ಈ ವಿಡಿಯೋಗೆ ಜನರಿಂದಲೂ ನಾನಾ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಚ್ಚಿನವರು ಭ್ರಷ್ಟರಿಗೆ ಕೊನೆಗೆ ಆಗುವ ಗತಿ ಇದುವೆ ಎಂದು ಬರೆದುಕೊಂಡಿದ್ದಾರೆ. ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು 4 ಲಕ್ಷ ರೂ. […]

ಲೋಕಾಯುಕ್ತ ಬಲೆಗೆ ಬಿದ್ದಾಗ ಕಿರುಚಾಡಿ ಹೈಡ್ರಾಮಾ ಸೃಷ್ಟಿಸಿದ ಭ್ರಷ್ಟ ಇನ್‌ಸ್ಪೆಕ್ಟರ್‌ Read More »

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ?

ಉದ್ಯಮ ವಲಯವನ್ನು ಆಘಾತಕ್ಕೆ ತಳ್ಳಿದ ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷನ ಆತ್ಮಹತ್ಯೆ ಬೆಂಗಳೂರು: ಬೆಂಗಳೂರಿನಲ್ಲಿ ಸಾವಿರಾರು ಕೋಟಿ ರೂ. ಸಾಮ್ರಾಜ್ಯ ಕಟ್ಟಿದ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಕೇರಳ ಮೂಲದ ಸಿ.ಜೆ ರಾಯ್ ಶುಕ್ರವಾರ ತಮ್ಮ ಕಚೇರಿಯಲ್ಲಿ ಆದಾಯ ಕರ ಇಲಾಖೆ ಅಧಿಅಕರಿಗಳ ದಾಳಿ ನಡೆಯುತ್ತಿರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆ ಉದ್ಯಮ ವಲಯಕ್ಕೆ ತೀವ್ರ ಆಘಾತ ಉಂಟು ಮಾಡಿದೆ. ದೇಶದ ಅತ್ಯಂತ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ಸಿ.ಜೆ ರಾಯ್ ಅವರ

12 ರೋಲ್ಸ್‌ರಾಯ್ಸ್‌ ಕಾರುಗಳ ಒಡೆಯ ಆತ್ಮಹತ್ಯೆ ಮಾಡಿಕೊಂಡದ್ದೇಕೆ? Read More »

ಬಸ್‌ ನಿಲ್ದಾಣಗಳಲ್ಲಿ ಬ್ಯಾಗ್‌ ಕಳ್ಳತನ ಮಾಡುತ್ತಿದ್ದ ಕಳ್ಳ ಸೆರೆ

ಮಂಗಳೂರು: ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬೆಲೆಬಾಳುವ ಸೊತ್ತುಗಳಿರುವ ಬ್ಯಾಗ್‌ಗಳನ್ನು ಕಳ್ಳತನ ಮಾಡುತ್ತಿದ್ದ ಅಂತರ್‌ಜಿಲ್ಲಾ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿ 46.28 ಗ್ರಾಂ ತೂಕದ 6,47,920 ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಮಡಿಕೇರಿಯ ತ್ಯಾಗರಾಜ್ ಕಾಲೋನಿ ನಿವಾಸಿ ಮಹಮ್ಮದ್ ಇಮ್ರಾನ್ ಎನ್.ಎಂ(44) ಎಂದು ಗುರುತಿಸಲಾಗಿದೆ. ಆರೋಪಿಯು ಬಸ್ ನಿಲ್ದಾಣಗಳಲ್ಲಿ ಒಟ್ಟು 11 ಬ್ಯಾಗ್ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ. ಆತನ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಆರೋಪಿಯನ್ನು ಜ.28ರಂದು ಮಂಗಳೂರು ಸೆಂಟ್ರಲ್

ಬಸ್‌ ನಿಲ್ದಾಣಗಳಲ್ಲಿ ಬ್ಯಾಗ್‌ ಕಳ್ಳತನ ಮಾಡುತ್ತಿದ್ದ ಕಳ್ಳ ಸೆರೆ Read More »

ಶಬರಿಮಲೆಯ ಚಿನ್ನ ಕಳ್ಳತನ ಪ್ರಕರಣ: ಮಲೆಯಾಳಂನ ಜನಪ್ರಿಯ ನಟನ ಹೇಳಿಕೆ ದಾಖಲಿಸಿದ SIT

ತಿರುವನಂತಪುರಂ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಲೆಯಾಳಂ‌ನ ಹೆಸರಾಂತ ನಟ ಜಯರಾಮ್ ಅವರ ಹೇಳಿಕೆಯನ್ನು ವಿಶೇಷ ತನಿಖಾ ತಂಡ ದಾಖಲಿಸಿಕೊಂಡಿದೆ. ಚೆನ್ನೈ ನಲ್ಲಿರುವ ಜಯರಾಮ್ ನಿವಾಸಕ್ಕೆ ತೆರಳಿ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿರುವುದಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಉಣ್ಣಿಕೃಷ್ಣನ್ ಪೊಟ್ಟಿ ಜೊತೆಗೆ ಜಯರಾಮ್‌ ಅವರ ಸಂಬಂಧ ಏನು ಎಂಬುದನ್ನು SIT ಅಧಿಕಾರಿಗಳು ಪ್ರಶ್ನೆ ಮಾಡಿದ್ದು, ಪೊಟ್ಟಿ ತನ್ನ ಮನೆಯ ಪೂಜಾ ಕಾರ್ಯಕ್ರಮಗಳಿಗೆ ಆಗಾಗ ಬರುತ್ತಿದ್ದರು. ಆದರೆ ಅವರ ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ನನಗೆ ಮಾಹಿತಿ ಇಲ್ಲ.

ಶಬರಿಮಲೆಯ ಚಿನ್ನ ಕಳ್ಳತನ ಪ್ರಕರಣ: ಮಲೆಯಾಳಂನ ಜನಪ್ರಿಯ ನಟನ ಹೇಳಿಕೆ ದಾಖಲಿಸಿದ SIT Read More »

ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ

ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ ವರ ಚಾಮರಾಜನಗರ: ಮದುವೆ ಮಂಟಪಕ್ಕೆ ಹೋಗುತ್ತಿರುವಾಗಲೇ ವರನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಕೊಳ್ಳೇಗಾಲ ಪಟ್ಟಣದಲ್ಲಿ ವಿವಾಹ ಆರತಕ್ಷತೆಗೆ ತೆರಳುತ್ತಿದ್ದ ವರ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಾಲೂಕಿನ ಕುಣಗಳ್ಳಿ ಎಲ್.ರವೀಶ್ (34) ಚಾಕು ಇರಿತಕ್ಕೊಳಗಾಗಿ ಪ್ರಾಣಾಪಾಯದಿಂದ ಪಾರಾಗಿರುವ ವರ. ಎಲ್. ರವೀಶ್​ಗೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಯುವತಿಯ ಜೊತೆ ವಿವಾಹ ನಿಶ್ಚಯವಾಗಿ, ಕೊಳ್ಳೇಗಾಲ ಪಟ್ಟಣದ ವೆಂಕಟೇಶ್ವರ ಮಹಲ್​ನಲ್ಲಿ ಆರತಕ್ಷತೆ ಏರ್ಪಡಿಸಲಾಗಿತ್ತು. ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ

ಮದುವೆ ಮಂಟಪಕ್ಕೆ ಹೋಗುತ್ತಿದ್ದಾಗಲೇ ವರನ ಮೇಲೆ ಹಲ್ಲೆ Read More »

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ

ಪೌರಾಯುಕ್ತಗೆ ನಿಂದಿಸಿ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರಸ್‌ ಮುಖಂಡ ಮಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ತಂಗಿದ್ದ ರೆಸಾರ್ಟ್, ಆತನ ಕಾರು ಪತ್ತೆಯಾಗಿದ್ದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಗುರುವಾರ ಸಂಜೆ ಶಿಡ್ಲಘಟ್ಟದ ಪೊಲೀಸರು ಮಹಜರು ನಡೆಸಿದ್ದಾರೆ. ಗುರುವಾರ ಸಂಜೆ ಸುಮಾರು 5 ಗಂಟೆಯ ವೇಳೆಗೆ ಪೊಲೀಸ್ ವಾಹನದಲ್ಲಿ ಪಚ್ಚನಾಡಿಗೆ ಬಂದು ಒಂದು ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿ ಆತ ವಾಸ್ತವ್ಯ ಇದ್ದುದಕ್ಕೆ ಪೂರಕ ಸಾಕ್ಷಿ

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ Read More »

4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌

ಬೆಂಗಳೂರು: ರಾಜ್ಯದ ಪೊಲೀಸರು ತಲೆತಗ್ಗಿಸುವಂಥ ಇನ್ನೊಂದು ಪ್ರಕರಣ ಸಂಭವಿಸಿದೆ. 4 ಲಕ್ಷ ರೂ. ಲಂಚ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್‌ ಒಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಕೆ.ಪಿ.ಅಗ್ರಹಾರ ಠಾಣೆ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್‌ಪೆಕ್ಟರ್‌. ಲೋಕಾಯುಕ್ತ ಎಸ್.​ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಚೀಟಿ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಇನ್‌ಸ್ಪೆಕ್ಟರ್ ಗೋವಿಂದರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 4 ಲಕ್ಷ ರೂ. ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದ ಇನ್‌ಸ್ಪೆಕ್ಟರ್

4 ಲ.ರೂ. ಲಂಚ ಸ್ವೀಕರಿಸಿ ಲೋಕಾಯುಕ್ತ ಬಲೆಗೆ ಬಿದ್ದ ಇನ್‌ಸ್ಪೆಕ್ಟರ್‌ Read More »

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯ 177 ಕೋ. ರೂ. ಆಸ್ತಿ ಮುಟ್ಟುಗೋಲು

ಆನ್‌ಲೈನ್‌ ಬೆಟ್ಟಿಂಗ್‌ ಮೂಲಕ 2,300 ಕೋ. ರೂ. ಅಕ್ರಮ ಎಸಗಿರುವ ಶಾಸಕ ಬೆಂಗಳೂರು: ಅಕ್ರಮ ಬೆಟ್ಟಿಂಗ್ ವ್ಯವಹಾರ ಮತ್ತು ಹಣ ವರ್ಗಾವಣೆ ಪ್ರಕರಣಗಳಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿಗೆ ಸೇರಿದ 177 ಕೋ. ರೂ. ಮೌಲ್ಯದ ಆಸ್ತಿಯನ್ನುಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ. ಈ ಹಿಂದೆ ದಾಳಿ ವೇಳೆ ಸಿಕ್ಕಿದ್ದ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನ, ಬೆಳ್ಳಿ ವಶಕ್ಕೆ ಪಡೆದುಕೊಂಡಿತ್ತು. ವಿರೇಂದ್ರ ಪಪ್ಪಿಗೆ ಸೇರಿದ ಕೃಷಿ ಜಮೀನು, ನಿವೇಶನ ಸೇರಿ ಇತರ

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯ 177 ಕೋ. ರೂ. ಆಸ್ತಿ ಮುಟ್ಟುಗೋಲು Read More »

ಅಸಭ್ಯ ವೀಡಿಯೊ ವೈರಲ್‌ : ಕಾಲೇಜು ವಿದ್ಯಾರ್ಥಿ ಬಂಧನ

ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ರಾಸಲೀಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರಿ ಸಂಚಲನ ಮೂಡಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬ ಯುವಕನನ್ನು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ ಸಂಪಿಗೆಹಳ್ಳಿಯ ಯೇನೆಪೊಯ ಕಾಲೇಜಿನಲ್ಲಿ ಬಿಬಿಎ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯು ವಿವಿಧ ಯುವತಿಯರೊಂದಿಗೆ ಚಕ್ಕಂದವಾಡಿ ಖಾಸಗಿ ಕ್ಷಣಗಳನ್ನು ಸ್ವತಃ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ.

ಅಸಭ್ಯ ವೀಡಿಯೊ ವೈರಲ್‌ : ಕಾಲೇಜು ವಿದ್ಯಾರ್ಥಿ ಬಂಧನ Read More »

ಬೃಹತ್‌ ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : 10 ಮಂದಿ ಬಂಧನ

ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು ಮಾರುತ್ತಿದ್ದ ಆರೋಪಿಗಳು ಬೆಂಗಳೂರು : ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬೃಹತ್ ಡ್ರಗ್ ಜಾಲವೊಂದನ್ನು ಭೇದಿಸಿ ಕೇರಳ ಮೂಲದ 7 ಡ್ರಗ್ ಪೆಡ್ಲರ್ಸ್ ಸೇರಿ ಹತ್ತು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು ಡಾರ್ಕ್‌ವೆಬ್ ಬಳಸಿ ಬೆಂಗಳೂರಿನಾದ್ಯಂತ ಮಾರಾಟ ಮಾಡುತ್ತಿದ್ದರು. ಬಂಧಿತ ಆರೋಪಿಗಳನ್ನು ಕುಶಾಲ್, ಸಾಗರ್, ಶಶಾಂಕ್, ವಿಲ್ಸನ್, ಆಶೀರ್ ಅಲಿ, ಸಜ್ಜದ್, ರಿಯಾಜ್, ಶಿಯಾಬ್,

ಬೃಹತ್‌ ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರು : 10 ಮಂದಿ ಬಂಧನ Read More »

error: Content is protected !!
Scroll to Top