ಅಪರಾಧ

ರೈಲು ಹಳಿಯಲ್ಲಿ ವೃದ್ಧ ದಂಪತಿ ಶವ ತುಂಡಾದ ಸ್ಥಿತಿಯಲ್ಲಿ ಪತ್ತೆ

ರೈಲು ಹಳಿಯಲ್ಲಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ಬೆಂಗಳೂರು: ಹಾಸನ ನಗರದ ಕರೀಗೌಡ ಕಾಲೋನಿಯಲ್ಲಿ ವೃದ್ಧರಿಬ್ಬರ ಶವ ರೈಲು ಹಳಿಯಲ್ಲಿ ಪತ್ತೆಯಾಗಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ವೃದ್ಧ ಮಹಿಳೆ ಮತ್ತು ಪುರುಷನ ಮೃತದೇಹ ರೈಲು ಹಳಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಕಂಡುಬಂದಿದೆ. ಅವರ ಮೇಲೆ ರೈಲು ಹರಿದು ಹೋಗಿದೆ. ಇವರು ವೃದ್ಧ ದಂಪತಿ ಆಗಿರಬೇಕೆಂದು ಶಂಕಿಸಲಾಗಿದೆ. ಪ್ರಾಥಮಿಕವಾಗಿ ಇದು ಆತ್ಮಹತ್ಯೆಯಾಗಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕತ್ತಲಿನ ವೇಳೆ ಘಟನೆ ನಡೆದಿರಬಹುದೆಂದು ತಿಳಿದುಬಂದಿದೆ. ರೈಲು ಹರಿದ ರಭಸಕ್ಕೆ ದಂಪತಿಯ […]

ರೈಲು ಹಳಿಯಲ್ಲಿ ವೃದ್ಧ ದಂಪತಿ ಶವ ತುಂಡಾದ ಸ್ಥಿತಿಯಲ್ಲಿ ಪತ್ತೆ Read More »

ಆಸ್ತಿ ವಿವಾದ: ನ್ಯಾಯಕ್ಕಾಗಿ ಪೊಲೀಸರು ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಚಿಕ್ಕಮಗಳೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿ ಹೆತ್ತವರು, ಸಹೋದರಿಯನ್ನು ಕಳೆದುಕೊಂಡಿದ್ದ ಯುವಕನೊಬ್ಬ ಪೊಲೀಸ್ ಸ್ಟೇಷನ್ ಮುಂದೆಯೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದಾನೆ. ಯುವಕನನ್ನು ‌ಪುನೀತ್ ಎಂದು ಗುರುತಿಸಲಾಗಿದೆ. ಈತ ತನ್ನ ಹೆತ್ತವರು ಬಿಟ್ಟು ಹೋಗಿದ್ದ ಎರಡು ಸಣ್ಣ ಮನೆಗಳ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದನು. ಆತನ ಅತ್ತೆಯೇ ಆತನ ಹಾದಿಗೆ ಅಡ್ಡಗಾಲು ಹಾಕುತ್ತಿದ್ದರು ಎಂದು ತಿಳಿದು ಬಂದಿದೆ. ಪುನೀತ್ ಪೋಷಕರು ತನ್ನ ಬಳಿ ಹಣ ಪಡೆದಿದ್ದಾಗಿ ಹೇಳಿ ಮನೆಯ ಹಕ್ಕನ್ನು ಆತನಿಗೆ ನೀಡಲು ನಿರಾಕರಿಸಿದ್ದರು. ಈ ಸಂಬಂಧ ಚಿಕ್ಕಮಗಳೂರು ಪೊಲೀಸ್

ಆಸ್ತಿ ವಿವಾದ: ನ್ಯಾಯಕ್ಕಾಗಿ ಪೊಲೀಸರು ಠಾಣೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಯುವಕ Read More »

ಕೆಂಪುಕೋಟೆ ಬಳಿ ಮತ್ತೊಂದು ಭೀಕರ ಸ್ಫೋಟಕ್ಕೆ ಸಂಚು

ಪಾಕಿಸ್ತಾನದ ಉಗ್ರ ಸಂಘಟನೆಯಿಂದ ಭಾರತದಲ್ಲಿ ವಿಧ್ವಂಸ ಕೃತ್ಯಕ್ಕೆ ಹೊಂಚು ನವದೆಹಲಿ: ಹೊಸದಿಲ್ಲಿಯ ಕೆಂಪುಕೋಟೆ ಸಮೀಪ ಸಂಬವಿಸಿದ ಕಾರು ಬಾಂಬ್‌ ಸ್ಫೋಟ ಕೃತ್ಯ ನೆನಪಿನಿಂದ ಮರೆಯಾಗುವ ಮುನ್ನವೇ ಪಾಕಿಸ್ತಾನ ಮೂಲದ ಲಷ್ಕರ್‌-ಎ-ತೋಯ್ಬಾ ಉಗ್ರ ಸಂಘಟನೆ ಕೆಂಪುಕೋಟೆ ಸಮೀಪ ಇನ್ನೊಂದು ಭಾರಿ ಸ್ಫೋಟಕ್ಕೆ ಸಂಚು ರೂಪಿಸಿರುವ ಆಘಾತಕಾರಿ ಅಂಶ ಬಯಲಾಗಿದೆ. ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆ, ದೆಹಲಿಯ ಕೆಂಪುಕೋಟೆ, ಚಾಂದನಿ ಚೌಕ್‌ನಲ್ಲಿರುವ ದೇವಾಲಯ ಮತ್ತು ದೇಶಾದ್ಯಂತದ ಇತರ ಪ್ರಮುಖ ದೇವಾಲಯಗಳ ಬಳಿ ಸ್ಫೋಟಕ್ಕೆ ಯೋಜನೆ ರೂಪಿಸುತ್ತಿದೆ ಎಂದು ಭದ್ರತಾ ಸಂಸ್ಥೆಗಳನ್ನು

ಕೆಂಪುಕೋಟೆ ಬಳಿ ಮತ್ತೊಂದು ಭೀಕರ ಸ್ಫೋಟಕ್ಕೆ ಸಂಚು Read More »

30ಕ್ಕೂ ಅಧಿಕ ಮಕ್ಕಳ ಲೈಂಗಿಕ ಶೋಷಣೆ : ದಂಪತಿಗೆ ಮರಣ ದಂಡನೆ

ವಿಡಿಯೋ ಮಾಡಿ ಪೋರ್ನ್‌ ವೆಬ್‌ಸೈಟ್‌ಗಳಿಗೆ ಮಾರಾಟ ಮಾಡುತ್ತಿದ್ದ ದಂಪತಿ ಲಖನೌ: 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವಿಡಿಯೋ ಮಾಡಿ ಡಾರ್ಕ್‌ವೆಬ್‌ ಪೋರ್ನ್‌ ಸೈಟಿಗೆ ಮಾರಿದ ಪ್ರಕರಣದಲ್ಲಿ ದಂಪತಿಗೆ ಉತ್ತರ ಪ್ರದೇಶದ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಸಂತ್ರಸ್ತ ಮಕ್ಕಳಲ್ಲಿ ಕೆಲವರು ಮೂರು ವರ್ಷ ವಯಸ್ಸಿನವರಾಗಿದ್ದಾರೆ. ಉತ್ತರ ಪ್ರದೇಶದ ಬಂಡಾ ಜಿಲ್ಲೆಯ ಪೋಕ್ಸೊ ಕಾಯ್ದೆಯ ವಿಶೇಷ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ. ಆರೋಪಿಗಳಾದ ಉತ್ತರ ಪ್ರದೇಶ ಚಿತ್ರಕೂಟದ ರಾಮಭವನ್ ಮತ್ತು ಆತನ ಪತ್ನಿ ದುರ್ಗಾವತಿಯನ್ನು ಲೈಂಗಿಕ

30ಕ್ಕೂ ಅಧಿಕ ಮಕ್ಕಳ ಲೈಂಗಿಕ ಶೋಷಣೆ : ದಂಪತಿಗೆ ಮರಣ ದಂಡನೆ Read More »

ಪುತ್ತೂರು: ರೈಲು ಹಳಿಯಲ್ಲಿ ಶವಪತ್ತೆ

ರೈಲು ಡಿಕ್ಕಿಯಾಗಿ ಮೃತಪಟ್ಟಿರುವ ಶಂಕೆ ಪುತ್ತೂರು: ನಗರದ ಹಾರಾಡಿ ಸಮೀಪದ ರೈಲ್ವೆ ಹಳಿಯಲ್ಲಿ ರೈಲು ಡಿಕ್ಕಿಯಾದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಶುಕ್ರವಾರ ರಾತ್ರಿ ಪತ್ತೆಯಾಗಿದೆ. ಹಳಿಯ ಬಳಿ ಶವವನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪುತ್ತೂರು ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ಮಾಹಿತಿಯಂತೆ ರೈಲು ಡಿಕ್ಕಿಯಿಂದಲೇ ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಪುತ್ತೂರು: ರೈಲು ಹಳಿಯಲ್ಲಿ ಶವಪತ್ತೆ Read More »

ಅನುಮಾನಗಳನ್ನು ಹುಟ್ಟು ಹಾಕಿದ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ

ದೂರು ದಾಖಲಾದ ಮರುಕ್ಷಣವೇ ಬಂಧಿಸಿ, ಮನೆಗೆ ದಾಳಿ ಮಾಡಿರುವ ಪೊಲೀಸರು ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಸೈಟ್‌ ಕಬಳಿಕೆ ಪ್ರಕರಣದ ಮುಖ್ಯ ದೂರುದಾರರಾಗಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ದೂರು ನೀಡಿದ ಮರುಕ್ಷಣವೇ ಬಂಧಿಸಿದ್ದಲ್ಲದೆ ಅವರ ಮನೆಗೆ ದಾಳಿ ಮಾಡಿ ಶೋಧ ಕಾರ್ಯ ಮಾಡಿದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಬೆಂಗಳೂರು ಸಿಸಿಬಿ ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆ ಹಿಂದೆ ಯಾರ ಕೈವಾಡ ಇದೆ ಎಂದು ಅನುಮಾನ ಈಗ ಉಂಟಾಗಿದೆ.

ಅನುಮಾನಗಳನ್ನು ಹುಟ್ಟು ಹಾಕಿದ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ Read More »

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ

ನಾಲ್ಕು ವರ್ಷದ ಹಿಂದೆ ಶಿಬಾಜೆಯ ತೋಟದಲ್ಲಿ ಕೊಲೆಯಾಗಿದ್ದ ಶ್ರೀಧರ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ‌ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ನೇತೃತ್ವದಲ್ಲಿ ರಚನೆಯಾಗಿರುವ ಎಸ್‌ಐಟಿ ತಂಡದಲ್ಲಿ ಉಡುಪಿ ಜಿಲ್ಲಾ ಎಸ್‌ಪಿ ಹರಿರಾವ್ ಶಂಕರ್, ಡಿವೈಎಸ್‌ಪಿ ಎಂ.ಆರ್ ಹರೀಶ್ ಅವರಿದ್ದಾರೆ. 2022ರ ಡಿ‌.18ರಂದು ಶಿಬಾಜೆಯ ತೋಟದ ಒಳಗೆ ಶ್ರೀಧರನ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ Read More »

ಸಿಎಂ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್‌

ದೂರು ಕೊಟ್ಟ ಮರುಕ್ಷಣದಲ್ಲೇ ಬಂಧಿಸಿ ಮನೆ ಮೇಲೆ ದಾಳಿ ಮಾಡಿದ ಪೊಲೀಸರು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ನೀಡಿದ ದೂರಿನನ್ವಯ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ. ಮುಂಬಡ್ತಿಗಾಗಿ ನಟೇಶ್ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ಒಂದೂವರೆ ಕೋಟಿ ಲಂಚ ನೀಡಿದ್ದಾರೆಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು.ಇದರ ಬೆನ್ನಲ್ಲೇ ನಿನ್ನೆ

ಸಿಎಂ ವಿರುದ್ಧ ಮುಡಾ ಸೈಟ್‌ ಕಬಳಿಕೆ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್‌ Read More »

ಬಾಗಲಕೋಟೆ ಕಲ್ಲು ತೂರಾಟ : ಮುಂದುವರಿದ ಉದ್ವಿಗ್ನ ಸ್ಥಿತಿ

ಶಾಂತಿ ಸಭೆ ವಿಫಲ; ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ ಬಾಗಲಕೋಟೆ : ಬಾಗಲಕೋಟೆಯಲ್ಲಿ ಗುರುವಾರ ರಾತ್ರಿ ಶಿವಾಜಿ ಮೆರವಣಿಗೆ ಮೇಲೆ ನಡೆದ ಕಲ್ಲು ಹಾಗೂ ಚಪ್ಪಲಿ ತೂರಾಟದ ಬಳಿಕ ಉಂಟಾಗಿದ್ದ ಬಿಗುವಿನ ವಾತಾವರಣ ಮುಂದುವರಿದಿದೆ. ಘಟನೆ ಖಂಡಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಬೀದಿಗಿಳಿದಿದ್ದಾರೆ. ಶುಕ್ರವಾರ ಆಗಿದ್ದರಿಂದ ಪಂಕಾ ಮಸೀದಿ ಹಾಗೂ ಕೊತ್ತಲೇಶ್ವರ ದೇವಸ್ಥಾನದ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಗುರುವಾರ ರಾತ್ರಿ ಕಲ್ಲು ತೂರಾಟ ಸಂಬಂಧ 8 ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಜಯಪುರ ಜೈಲಿಗೆ ಅಟ್ಟಿದ್ದಾರೆ.

ಬಾಗಲಕೋಟೆ ಕಲ್ಲು ತೂರಾಟ : ಮುಂದುವರಿದ ಉದ್ವಿಗ್ನ ಸ್ಥಿತಿ Read More »

ಗೋವುಗಳನ್ನು ಕದ್ದು ಕಸಾಯಿಖಾನೆಗೆ ಮಾರಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರ ಬಂಧನ

ಉಡುಪಿ: ದನ ಕರುಗಳನ್ನು ಕಳವು ಮಾಡಿ ಅವುಗಳನ್ನು ಕಸಾಯಿಖಾನೆಗೆ ಮಾರಲು ಪ್ರಯತ್ನಿಸುತ್ತಿದ್ದ ಇಬ್ಬರು ಖದೀಮ ಗೋಕಳ್ಳರನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೆರ್ಡೂರಿನ ರಾಘವೇಂದ್ರ ಮತ್ತು ಕುಂಜದಕಟ್ಟೆ ನಿವಾಸಿ ಸುಧೀಂದ್ರ ಶೆಟ್ಟಿ ಎಂದು ಗುರುತಿಸಲಾಗಿದೆ. ಪೆರ್ಡೂರು ದೇಗುಲದ ಸಮೀಪದ ಹೊಲದಿಂದ ಗೋವುಗಳನ್ನು ಕಳ್ಳತನ ಮಾಡಿ, ರಿಕ್ಷಾ ಮೂಲಕ ಅವುಗಳನ್ನು ಸಾಗಿಸಲು ಈ ಇಬ್ಬರು ಕಳ್ಳರು ಪ್ರಯತ್ನ ಮಾಡಿದ್ದಾರೆ. ಹಿರಿಯಡ್ಕ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಗೋವುಗಳನ್ನು ಕದ್ದು ಕಸಾಯಿಖಾನೆಗೆ ಮಾರಲು ಯತ್ನಿಸುತ್ತಿದ್ದ ಇಬ್ಬರು ಕಳ್ಳರ ಬಂಧನ Read More »

error: Content is protected !!
Scroll to Top