ಅಪರಾಧ

ದೈವಕ್ಕೆ ಅಪಚಾರ : ಕ್ಷಮೆ ಯಾಚಿಸಿದ ನಟ ರಣವೀರ್‌ ಸಿಂಗ್‌

ಕಾಂತಾರ ಹೊಗಳುವ ಭರದಲ್ಲಿ ದೈವವನ್ನು ಅಣಕಿಸಿದ್ದ ಬಾಲಿವುಡ್‌ ನಟ ಮುಂಬೈ : ಕಾಂತಾರ ಚಿತ್ರವನ್ನು ಹೊಗಳುವ ಭರದಲ್ಲಿ ದೈವಕ್ಕೆ ಅಪಚಾರ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ತನ್ನ ತಪ್ಪಿಗೆ ಬೇಷರತ್‌ ಕ್ಷಮೆ ಯಾಚಿಸಿ ವಿವಾದ ತಣ್ಣಗಾಗಿಸುವ ಪ್ರಯತ್ನ ಮಾಡಿದ್ದಾರೆ. ತಾನು ನಟಿಸಿದ ‘ಧುರಂಧರ್’ ಸಿನಿಮಾ ಬಿಡುಗಡೆಯಾಗುವ ಸಂದರ್ಭದಲ್ಲಿ ಈ ಅನಪೇಕ್ಷಿತ ವಿವಾದ ಭುಗಿಲೆದದ್ದು ಅವರಿಗೆ ಹಿನ್ನಡೆಯಾಗಿತ್ತು. ಗೋವಾದ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಕಾಂತಾರ’ ಚಿತ್ರ ಹಾಗೂ ರಿಷಬ್ ಶೆಟ್ಟಿಯನ್ನು ಹೊಗಳುವ ಭರದಲ್ಲಿ ಅವರು ದೈವವನ್ನು […]

ದೈವಕ್ಕೆ ಅಪಚಾರ : ಕ್ಷಮೆ ಯಾಚಿಸಿದ ನಟ ರಣವೀರ್‌ ಸಿಂಗ್‌ Read More »

ದಂಪತಿ ಜಗಳ: ಗಂಡ ಆತ್ಮಹತ್ಯೆ

ಕಾರ್ಕಳ: ದಂಪತಿ ಮಧ್ಯೆ ನಡೆದ ಜಗಳ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಪೋಸ್ಟ್‌ಮ್ಯಾನ್ ಒಬ್ಬರು ದಂಪತಿ ಮನೆಗೆ ಪತ್ರ ನೀಡಲು ಬಂದಿದ್ದಾಗ ಪತ್ನಿ ಶಕುಂತಲಾ ಅವರು ಗಾಯಗೊಂಡು ಕಂಡುಬಂದಿದೆ. ತಕ್ಷಣವೇ ಪೋಸ್ಟ್‌ಮ್ಯಾನ್ ಅವರು ಶಕುಂತಲಾ ಅವರ ಪುತ್ರ ಸಾಯಿಕಿರಣ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಪುತ್ರ ಮನೆಗೆ ಬಂದು ತಾಯಿಯನ್ನು ವಿಚಾರಿಸಿದಾಗ ತಂದೆ ಕೋಲಿನಿಂದ ಹಲ್ಲೆ ಮಾಡಿರುವುದು ತಿಳಿದು ಬಂದಿದೆ. ತಂದೆ ಕೋಣೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದು, ಬಾಗಿಲು ಬಡಿದರೂ ತೆರೆದಿಲ್ಲ. ಈ ವೇಳೆ

ದಂಪತಿ ಜಗಳ: ಗಂಡ ಆತ್ಮಹತ್ಯೆ Read More »

ಪುತ್ತೂರು : ನಾಪತ್ತೆಯಾಗಿದ್ದ ಯುವಕ ಮೃತದೇಹ ಪತ್ತೆ

ಪುತ್ತೂರು: ಭಾನುವಾರ ನಾಪತ್ತೆಯಾಗಿದ್ದ ನಗರದ ಪಡೀಲ್‌ನ ಚಿಕನ್ ಅಂಗದಿಯ ನೌಕರ ಬದ್ರುದ್ದೀನ್ ಡಿ.ಕೆ (29) ಎಂಬವರ ಮೃತದೇಹ ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಪತ್ತೆಯಾಗಿದೆ. ಆರ್ಥಿಕ ಸಮಸ್ಯೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕಾಣೆಯಾದ ಒಂದು ದಿನದ ನಂತರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಬದ್ರುದ್ದೀನ್ ಅವಿವಾಹಿತರಾಗಿದ್ದು, ತಾಯಿ, ಅಣ್ಣ, ಅಕ್ಕ, ತಮ್ಮ ಹಾಗೂ ತಂಗಿಯನ್ನು ಅಗಲಿದ್ದಾರೆ. ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು : ನಾಪತ್ತೆಯಾಗಿದ್ದ ಯುವಕ ಮೃತದೇಹ ಪತ್ತೆ Read More »

ಯುವಕನ ಆತ್ಮಹತ್ಯೆ ಪ್ರಕರಣದಲ್ಲಿ ಅನುಮಾನ : ಮರು ತನಿಖೆಗೆ ತಾಯಿ ಒತ್ತಾಯ

ಪ್ರೀತಿಸುತ್ತಿದ್ದ ಹುಡುಗಿಯ ಮನೆಯವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ದೂರು ಬಂಟ್ವಾಳ : ಕೆಲ ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ರಮಾನಂದ ಎಂಬ ಯುವಕನ ಸಾವಿನ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದು, ಮರು ತನಿಖೆ ಆಗ್ರಹಿಸಿ ದೂರು ನೀಡಿದ್ದಾರೆ. ಇದು ಆತ್ಮಹತ್ಯೆ ಅಲ್ಲ ವ್ಯವಸ್ಥಿತ ಕೊಲೆಯಾಗಿರುವ ಬಗ್ಗೆ ಸಂಶಯವಿದ್ದು, ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ಜಾನಕಿ ಅವರು ವಾಮಂಜೂರು ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳದ ಬರಿಮಾರು

ಯುವಕನ ಆತ್ಮಹತ್ಯೆ ಪ್ರಕರಣದಲ್ಲಿ ಅನುಮಾನ : ಮರು ತನಿಖೆಗೆ ತಾಯಿ ಒತ್ತಾಯ Read More »

ಅಯ್ಯಪ್ಪ ವ್ರತಧಾರಿ ‌ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಣೆ: ಪ್ರಾಂಶುಪಾಲರ ‌ವಿರುದ್ಧ ಹಿಂದೂಗಳ ಆಕ್ರೋಶ

ಚಿಕ್ಕಮಗಳೂರು: ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಕ್ಕೆ ಹಾಕಿರುವ ಘಟನೆ MESP ಕಾಲೇಜಿನಲ್ಲಿ ನಡೆದಿದೆ. ಪ್ರಥಮ ಪಿಯುಸಿ ಮೂವರು ಅಯ್ಯಪ್ಪ ಮಾಲಾಧಾರಿ ‌ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು ಹೊರಕ್ಕೆ ಹಾಕಿದ್ದಾರೆ. ಮಾಲೆ ತೆಗೆದು ಕಾಲೇಜಿಗೆ ಪ್ರವೇಶಿಸುವಂತೆ ತಾಕೀತು ಮಾಡಿದ್ದಾರೆ. ಈ ವಿಷಯ ತಿಳಿಯುತ್ತಿದ್ದ ಹಾಗೆಯೇ ಆಕ್ರೋಶಗೊಂಡ ಹಿಂದೂಗಳು, ಹಿಂದೂ ಸಂಘಟನೆಗಳು, ಬಿಜೆಪಿ ಕಾರ್ಯಕರ್ತರು ಕಾಲೇಜಿನ ಬಳಿಗೆ ಬಂದು ಹಿಂದೂ ವಿರೋಧಿ ನೀತಿ ಪ್ರದರ್ಶಿಸಿದ ಪ್ರಾಂಶುಪಾಲರನ್ನು ‌ತರಾಟೆಗೆ ತೆಗೆದುಕೊಂಡಿದ್ದಾರೆ. ಅಯ್ಯಪ್ಪ ವ್ರತದಲ್ಲಿರುವ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ಹೊರಗೆ ಕಳುಹಿಸಿದಲ್ಲಿ ನೂರಾರು ವಿದ್ಯಾರ್ಥಿಗಳನ್ನು

ಅಯ್ಯಪ್ಪ ವ್ರತಧಾರಿ ‌ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಣೆ: ಪ್ರಾಂಶುಪಾಲರ ‌ವಿರುದ್ಧ ಹಿಂದೂಗಳ ಆಕ್ರೋಶ Read More »

ಪುತ್ತೂರು : ಚಿಕನ್‌ ಅಂಗಡಿಯ ನೌಕರ ನಾಪತ್ತೆ

ಪುತ್ತೂರು: ನಗರದ ಪಡೀಲ್‌ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬದ್ರುದ್ದೀನ್ ಡಿ.ಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಜಿಂದಗಿ ಚಿಕನ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ. ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ ಹೋಗದೆ, ಮನೆಗೂ

ಪುತ್ತೂರು : ಚಿಕನ್‌ ಅಂಗಡಿಯ ನೌಕರ ನಾಪತ್ತೆ Read More »

ಇಬ್ಬರು ಆನ್‌ಲೈನ್‌ ವಂಚಕರ ಸೆರೆ : 6.15 ಲಕ್ಷ ರೂ. ವಶ

ಫ್ರಾಂಚೈಸಿ ಕೊಡುವ ನೆಪದಲ್ಲಿ ಉದ್ಯಮಿಗೆ ವಂಚಿದ್ದ ಚೋರರು ಉಡುಪಿ: ಆನ್‌ಲೈನ್‌ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000 ರೂ. ಮೌಲ್ಯದ ನಗದು, ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಿಹಾರದ ಪಾಟ್ನಾ ಜಿಲ್ಲೆಯ ದೇವ್ ಹರ್ಷ(20) ಹಾಗೂ ಬಿಹಾರ ನಳಂದಾ ಜಿಲ್ಲೆಯ ಚಂದನ ಕುಮಾರ್(29) ಬಂಧಿತ ಆರೋಪಿಗಳು. ಇವರಿಂದ 97 ಸಾವಿರ ರೂ. ಮೌಲ್ಯದ 10 ಮೊಬೈಲ್ ಫೋನ್, 68,000 ರೂ. ಮೌಲ್ಯದ

ಇಬ್ಬರು ಆನ್‌ಲೈನ್‌ ವಂಚಕರ ಸೆರೆ : 6.15 ಲಕ್ಷ ರೂ. ವಶ Read More »

ಕೋಳಿ ಅಂಕಕ್ಕೆ ದಾಳಿ : ಮೂವರು ಪೊಲೀಸ್‌ ವಶ

ಬಂಟ್ವಾಳ : ವೀರಕಂಭ ಗ್ರಾಮದ ಪಾತ್ರತೋಟ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ವಿಟ್ಲ ಪೊಲೀಸರು ಮೂವರನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ. ಇಡ್ಕಿದು ನಿವಾಸಿ ಉಮೇಶ (38), ಅನಂತಾಡಿ ನಿವಾಸಿ ಅಣ್ಣು (38), ವೀರಕಂಭ ನಿವಾಸಿ ಉಮೇಶ್ (30) ಎಂಬವರನ್ನು ವಶಕ್ಕೆ ತೆಗೆದುಕೊಂಡಿರುವ ಪೊಲೀಸರು ಉಳಿದವರಿಗಾಗಿ ಶೋಧ ನಡೆಸುತ್ತಿದ್ದಾರೆ. ಆರೋಪಿಗಳು ಅಕ್ರಮವಾಗಿ ಕೋಳಿಅಂಕದಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಬಿ.ಎಸ್ ನಾಯಕ್ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದಾರೆ.

ಕೋಳಿ ಅಂಕಕ್ಕೆ ದಾಳಿ : ಮೂವರು ಪೊಲೀಸ್‌ ವಶ Read More »

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲು

ನ್ಯಾಷನಲ್‌ ಹೆರಾಲ್ಡ್‌ನ 2 ಸಾವಿರ ಕೋ. ರೂ. ಆಸ್ತಿ ಕಬಳಿಸಿದ ಪ್ರಕರಣ ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲಿಸಲಾಗಿದೆ. ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಹೊಸ ಎಫ್‌ಐಆರ್ ದಾಖಲಿಸಿದೆ. ಸೋನಿಯಾ, ರಾಹುಲ್‌ ಜೊತೆಗೆ ಇತರ

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ ದಾಖಲು Read More »

ಟೆರರ್‌ ಡಾಕ್ಟರ್‌ ಶಾಹಿನಾ ಕೊಠಡಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆ

ಅಲ್‌-ಫಲಾಹ್‌ ವಿವಿಯ ಕೊಠಡಿಯಲ್ಲೇ ಕಂತೆ ಕಂತೆ ಹಣ ಸಂಗ್ರಹಿಸಿಟ್ಟಿದ್ದ ಶಾಹಿನಾ ನವದೆಹಲಿ: ದೆಹಲಿ ಸ್ಫೋಟದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಅಲ್-ಫಲಾಹ್ ವಿಶ್ವವಿದ್ಯಾಲಯದ ಟೆರರ್‌ ಡಾಕ್ಟರ್‌ ಶಾಹಿನಾ ಸಯೀದ್‌ ಕೊಠಡಿಯಲ್ಲಿ 18 ಲಕ್ಷ ರೂ. ನಗದನ್ನು ವಶಕ್ಕೆ ಪಡೆದಿದ್ದಾರೆ. ವಿಶ್ವವಿದ್ಯಾಲಯದ ರೂಮ್‌ ನಂಬರ್‌ 22ರಲ್ಲಿ ಶೋಧ ನಡೆಸಿದಾಗ ಪ್ಲಾಸ್ಟಿಕ್‌ ಕವರ್‌ನಲ್ಲಿ ಸುತ್ತಿ ಇಟ್ಟಿದ್ದ ಹಣ ಪತ್ತೆಯಾಗಿದೆ. ಶಾಹಿನಾಗೆ ಈ ಪ್ರಮಾಣದ ಹಣ ಎಲ್ಲಿಂದ ಸಿಕ್ಕಿದೆ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ನವೆಂಬರ್ 10ರಂದು

ಟೆರರ್‌ ಡಾಕ್ಟರ್‌ ಶಾಹಿನಾ ಕೊಠಡಿಯಲ್ಲಿ ಲಕ್ಷಗಟ್ಟಲೆ ಹಣ ಪತ್ತೆ Read More »

error: Content is protected !!
Scroll to Top