ಅಪರಾಧ

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿದ ಆರೋಪಿ ಬಂಧನ

ಟೋಕನ್‌ ವಿಚಾರದಲ್ಲಿ ಜಗಳವಾಡಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಪುತ್ತೂರು : ನಗರದ ದರ್ಬೆಯ ಇಎನ್‌ಟಿ ಕ್ಲಿನಿಕ್‌ನಲ್ಲಿ ಶನಿವಾರ ದಾಂಧಲೆ ಎಸಗಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಅಋೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಬೆಳ್ಳಂಬೆಳಗ್ಗೆ ದರ್ಬೆಯಲ್ಲಿರುವ ಕ್ಲಿನಿಕ್‌ನಲ್ಲಿ ಈ ಘಟನೆ ನಡೆದಿತ್ತು. ಘಟನೆಗೆ ಸಂಬಂಧಿಸಿ ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ ಇಬ್ರಾಹಿಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕ್ಲಿನಿಕ್ ಸಿಬ್ಬಂದಿ ಶ್ರೀಕಾಂತ್ ಹಲ್ಲೆಗೊಳಗಾದವರು ಶನಿವಾರ ಬೆಳಗ್ಗೆ 6.30ರ ವೇಳೆ ಬಂದ ಇಬ್ರಾಹೀಂ ತಮ್ಮ ಪರಿಚಯಸ್ಥರಿಗೆ ಆದ್ಯತೆ ನೀಡುವಂತೆ […]

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿದ ಆರೋಪಿ ಬಂಧನ Read More »

ನೇಣಿಗೆ ‌ಶರಣಾದ ರಿಕ್ಷಾ ಚಾಲಕ

ಪುತ್ತೂರು: ಬನ್ನೂರು ನಿವಾಸಿ ರಿಕ್ಷಾ ಚಾಲಕರೊಬ್ಬರು ‌ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ‌ಮೋಹನ್ (57) ಎಂದು ಗುರುತಿಸಲಾಗಿದೆ. ಮನೆಯ ಮುಂದೆ ಅಳವಡಿಸಲಾಗಿದ್ದ ಶೀಟ್‌ನ ಅಡ್ಡಪಟ್ಟಿಗೆ ‌ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿದೆ.

ನೇಣಿಗೆ ‌ಶರಣಾದ ರಿಕ್ಷಾ ಚಾಲಕ Read More »

ಗಡಪಿಲದಲ್ಲಿ ಅಕ್ರಮ ಗೋಸಾಗಾಟ: ರಸ್ತೆ ಬದಿಯಲ್ಲೇ ಗೋವುಗಳನ್ನು ಬಿಟ್ಟು ಪರಾರಿ

ಪುತ್ತೂರು: ಸರ್ವೆಯ ಗಡಪಿಲ ಎಂಬಲ್ಲಿ ಇಂದು ಮುಂಜಾನೆ ಅಕ್ರಮ ಗೋ ಸಾಗಾಟದ ವಾಸನೆ ಮೂಗಿಗೆ ಬಡಿದಿದ್ದು, ರಸ್ತೆ ಬದಿಯಲ್ಲಿ ಗೋಕಳ್ಳರು ಗೋವುಗಳನ್ನು ಬಿಟ್ಟು ಪರಾರಿಯಾಗಿದ್ದಾರೆ‌ ಎನ್ನಲಾಗಿದೆ. ರಸ್ತೆ ಬದಿ 5 ಗೋವುಗಳು ಕಂಡು ಬಂದಿವೆ. ತಕ್ಷಣವೇ ಹಿಂದೂ ಸಂಘಟನೆಗಳು ಎಚ್ಚೆತ್ತುಕೊಂಡು, ರಸ್ತೆ ಬದಿಯಲ್ಲಿ ಬಿಡಲಾಗಿದ್ದ ಗೋವುಗಳನ್ನು ಪುತ್ತೂರು ನಗರ ಪೊಲೀಸು ಠಾಣೆಗೆ ಸಾಗಿಸಿ ರಕ್ಷಿಸಿದ್ದಾರೆ. ಈ ಗೋವುಗಳಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗೋಶಾಲೆಯಿಂದ ಬೈಹುಲ್ಲಿನ ‌ವ್ಯವಸ್ಥೆ ಮಾಡಲಾಗಿದೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ಕೆಟ್ಟು ನಿಂತ ಪರಿಣಾಮ

ಗಡಪಿಲದಲ್ಲಿ ಅಕ್ರಮ ಗೋಸಾಗಾಟ: ರಸ್ತೆ ಬದಿಯಲ್ಲೇ ಗೋವುಗಳನ್ನು ಬಿಟ್ಟು ಪರಾರಿ Read More »

ಅಪ್ರಾಪ್ತ ಹುಡುಗನಿಗೆ ಕೋಲಿನಿಂದ ಹೊಡೆದ ವ್ಯಕ್ತಿಯ ವಿರುದ್ಧ ದೂರು

ಸುಬ್ರಹ್ಮಣ್ಯ: ವ್ಯಕ್ತಿಯೋರ್ವ ಅಪ್ರಾಪ್ತ ಹುಡುಗನಿಗೆ ಗದರಿಸಿ, ಕೋಲಿನಿಂದ ಹೊಡೆದಿದ್ದು, ಈ ಘಟನೆ ಬಾಲಕನ ತಾಯಿಯ ಗಮನಕ್ಕೆ ಬಂದ ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ‌ದೂರು ದಾಖಲಿಸಿದ್ದಾರೆ. ಸಂತ್ರಸ್ತ ಬಾಲಕ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ಆರೋಪಿ ಚೇತನ್ ಎಂಬಾತ ಹುಡುಗನಿಗೆ ಕೋಲು ಹಿಡಿದು ಹೊಡೆಯುತ್ತಿರುವ ವಿಡಿಯೋ ಮೊಬೈಲಿನಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿರುವುದಾಗಿದೆ.

ಅಪ್ರಾಪ್ತ ಹುಡುಗನಿಗೆ ಕೋಲಿನಿಂದ ಹೊಡೆದ ವ್ಯಕ್ತಿಯ ವಿರುದ್ಧ ದೂರು Read More »

ತಾಯಿಯನ್ನು ತಳ್ಳಿ ಚಪ್ಪಲಿಯಿಂದ ಹಲ್ಲೆ ಮಾಡಿದ ಮಗಳು : ವಿಡಿಯೋ ವೈರಲ್‌

ದೂರು ನೀಡಲು ಬಂದ ತಾಯಿಯ ಮೇಲೆ ಪಂಚಾಯತ್‌ ಕಚೇರಿಯಲ್ಲೇ ದೌರ್ಜನ್ಯ ಮಂಗಳೂರು : ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಗ್ರಾಮ ಪಂಚಾಯತ್ ಆವರಣದಲ್ಲಿ ಮಗಳೇ ತನ್ನ ತಾಯಿಗೆ ಮನಬಂದಂತೆ ಥಳಿಸಿ, ಚಪ್ಪಲಿಯಿಂದ ಹೊಡೆದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ಮೂಡುಶೆಡ್ಡೆಯ ಶಿವನಗರದಲ್ಲಿ ವಾಸಿಸುವ ತಾಯಿ ಮತ್ತು ಮಗಳ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿಂದೆ, ತಾಯಿ ಈ ವಿವಾದಗಳ ಕುರಿತು ಕಾವೂರು ಪೊಲೀಸ್

ತಾಯಿಯನ್ನು ತಳ್ಳಿ ಚಪ್ಪಲಿಯಿಂದ ಹಲ್ಲೆ ಮಾಡಿದ ಮಗಳು : ವಿಡಿಯೋ ವೈರಲ್‌ Read More »

ಧರ್ಮಸ್ಥಳ ಪ್ರಕರಣ : ತನಿಖೆ ಮುಂದುವರಿಸಲು ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ಈಗ ನಡೆಯುತ್ತಿರುವ ಎಸ್.ಐ.ಟಿ ತನಿಖೆ ಮುಂದುವರಿಯಲಿ, ಅರ್ಜಿದಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಇತರರಿಗೆ ಕಿರುಕುಳ ನೀಡಬಾರದು ಎಂದು ರಾಜ್ಯ ಉಚ್ಚ ನ್ಯಾಯಾಲಯ ಸೂಚನೆ ನೀಡಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ. ಶುಕ್ರವಾರ ಎಸ್‌.ಐ.ಟಿ ತನಿಖೆಗೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗರೀಶ್ ಮಟ್ಟಣ್ಣನವರ್, ಜಯಂತ್ ಟಿ, ವಿಠಲ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ದೂರುದಾರರ ಪರವಾದ ವಾದಗಳನ್ನು ಆಲಿಸಿದ ಬಳಿಕ ಎಸ್.ಐ.ಟಿ ತನಿಖೆ ಮುಂದುವರಿಯಲಿ ಎಂದು ಸೂಚಿಸಿದೆ. ಈ ಹಿಂದೆ

ಧರ್ಮಸ್ಥಳ ಪ್ರಕರಣ : ತನಿಖೆ ಮುಂದುವರಿಸಲು ಎಸ್‌ಐಟಿಗೆ ಹೈಕೋರ್ಟ್‌ ಸೂಚನೆ Read More »

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿ ಸಿಬ್ಬಂದಿ ಮೇಲೆ ಹಲ್ಲೆ

ಪುತ್ತೂರು : ಕ್ಲಿನಿಕ್‌ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕ್ಲಿನಿಕ್‌ ಒಳಗೆ ದಾಂಧಲೆ ಎಸಗಿದ ಘಟನೆ ಶನಿವಾರ ಬೆಳಗ್ಗೆ ಪುತ್ತೂರಿನಲ್ಲಿ ಸಂಭವಿಸಿದೆ. ನಗರದ ದರ್ಬೆಯ ಗಣೇಶ್‌ ಕಾಂಪ್ಲೆಕ್ಸ್‌ನಲ್ಲಿರುವ ಡಾ.ರಾಮ್‌ಮೋಹನ್‌ ಎಂಬವರ ಕ್ಲಿನಿಕ್‌ನಲ್ಲಿ ಈ ಘಟನೆ ನಡೆದಿದೆ. ದಿನವಡೀ ರೋಗಿಗಳಿಂದ ತುಂಬಿರುವ ಈ ಕ್ಲಿನಿಕ್‌ನಲ್ಲಿ ಬೆಳಗ್ಗೆ 6 ಗಂಟೆಯಿಂದಲೇ ಟೋಕನ್‌ ನೀಡುವ ವ್ಯವಸ್ಥೆಯಿದೆ. ಇಂದು ಬೆಳಗ್ಗೆ 6.30ರ ವೇಳೆಗೆ ಕ್ಲಿನಿಕ್‌ ಮುಂಭಾಗದ ರಸ್ತೆಯ ಪಾರ್ಕಿಂಗ್‌ ಶುಲ್ಕ ಸಂಗ್ರಹಿಸುವ ವ್ಯಕ್ತಿ ಬಂದು ತನ್ನ ಪರಿಚಯದವರಿಗೆ ಬೇಗ ಹೋಗುವ ಟೋಕನ್‌ ನೀಡದಿರುವ

ಪುತ್ತೂರು : ಕ್ಲಿನಿಕ್‌ನಲ್ಲಿ ದಾಂಧಲೆ ಎಸಗಿ ಸಿಬ್ಬಂದಿ ಮೇಲೆ ಹಲ್ಲೆ Read More »

ವಿಟ್ಲ : ಎಟಿಎಂ ಕಾರ್ಡ್‌ ಪಡೆದು ಮಹಿಳೆಗೆ ಲಕ್ಷಕ್ಕೂ ಅಧಿಕ ವಂಚನೆ

ವಿಟ್ಲ : ಅಪರಿಚಿತ ವ್ಯಕ್ತಿಗಳಿಬ್ಬರು ಮಹಿಳೆಯೊಬ್ಬರಿಂದ ಎಟಿಎಂ ಕಾರ್ಡ್‌ ಪಡೆದು ಲಕ್ಷಾಂತರ ರೂ. ವಂಚಿಸಿದ ಘಟನೆ ವಿಟ್ಲದಲ್ಲಿ ಶುಕ್ರವಾರ ನಡೆದಿದೆ. ಇಡ್ಕಿದು ಗ್ರಾಮದ ಉರಿಮಜಲು ನಿವಾಸಿ ಮಹಿಳೆ ವಿಟ್ಲಕಸಬಾ ಗ್ರಾಮದ ಫಾತಿಮ ಬಿಲ್ಡಿಂಗ್‌ನಲ್ಲಿರುವ ಎಸ್‌ಬಿಐ ಎಟಿಎಂ ಕೇಂದ್ರಕ್ಕೆ ತೆರಳಿ 6,000 ರೂ. ಡ್ರಾ ಮಾಡಿ ಹೊರಗಡೆ ಬರುತ್ತಿದ್ದ ಸಂದರ್ಭ ಎಟಿಎಂ ಕೇಂದ್ರದ ಒಳಗಡೆಯಿದ್ದ ಅಪರಿಚಿತ ವ್ಯಕ್ತಿಗಳು ಮಹಿಳೆಯನ್ನು ಕರೆದು ಎಟಿಎಂ ಅನ್ನು ಸರಿಯಾಗಿ ಮುಚ್ಚಬೇಕೆಂದು ಹೇಳಿದ್ದಾರೆ. ಅದರಂತೆ ಮಹಿಳೆ ಕೇಂದ್ರದ ಒಳಗೆ ಹೋಗಿ ನೋಡಿ ಹೊರಗಡೆ ಬರುವಾಗ

ವಿಟ್ಲ : ಎಟಿಎಂ ಕಾರ್ಡ್‌ ಪಡೆದು ಮಹಿಳೆಗೆ ಲಕ್ಷಕ್ಕೂ ಅಧಿಕ ವಂಚನೆ Read More »

ರಾಮ-ಲಕ್ಷ್ಮಣರನ್ನು ಕ್ರೂರಿಗಳು ಎಂದ ಲಲಿತಾ ನಾಯ್ಕ್‌ ವಿರುದ್ಧ ಕೇಸ್‌

ಸಂವಾದ ಕಾರ್ಯಕ್ರಮದಲ್ಲಿ ಹಿಂದುಗಳ ದೇವತೆಗಳನ್ನು ಅವಮಾನಿಸಿದ್ದ ಮಾಜಿ ಸಚಿವೆ ಬೆಂಗಳೂರು: ರಾಮ-ಲಕ್ಷ್ಮಣರನ್ನು ಕ್ರೂರಿಗಳು ಎಂದು ಕರೆದು ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಆರೋಪದ ಮೇಲೆ ಬಂಡಾಯ ಸಾಹಿತಿ ಹಾಗೂ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯ್ಕ್‌ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನ.23ರಂದು ದಾವಣಗೆರೆ ನಗರದ ಎವಿಕೆ ಕಾಲೇಜಿನಲ್ಲಿ‌ ನಡೆದ ಸಂವಾದದಲ್ಲಿ ಲಲಿತಾ ನಾಯ್ಕ್‌ “ರಾಮಾಯಣದಲ್ಲಿರುವ ಶ್ರೀರಾಮ, ಲಕ್ಷ್ಮಣ, ರಾವಣರು ಆದರ್ಶರಲ್ಲ ಅವರು ಕ್ರೂರಿಗಳು” ಎಂಬ ಹೇಳಿದ್ದರು. ಭಕ್ತಿಯ ಜೊತೆಗೆ ಬೆರೆತ ಮೌಢ್ಯ ಜನರ ವಿಚಾರ ಶಕ್ತಿಯನ್ನು

ರಾಮ-ಲಕ್ಷ್ಮಣರನ್ನು ಕ್ರೂರಿಗಳು ಎಂದ ಲಲಿತಾ ನಾಯ್ಕ್‌ ವಿರುದ್ಧ ಕೇಸ್‌ Read More »

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷ ಪ್ರಾಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಬಾಲಕಿ ವೇಣೂರು ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದಾಗ ಅಲ್ಲಿದ್ದ ಬಾಲಕಿಯ ಅತ್ತೆಯ ಮಗ ಬಾಲಕಿಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ದೈಹಿಕ ಸಂಪರ್ಕ ಮಾಡಿದ್ದಾನೆ. ಇದಾದ ಬಳಿಕ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ, ಬಳಿಕ ಬಾಲಕಿ

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಸಂಬಂಧಿಕನಿಂದಲೇ ಅತ್ಯಾಚಾರ Read More »

error: Content is protected !!
Scroll to Top