ಅಪರಾಧ

ವಿಷಪ್ರಾಶನ ಮಾಡಿ 500 ಬೀದಿನಾಯಿಗಳ ಹತ್ಯೆ

ಚುನಾವಣೆ ಸಮಯದಲ್ಲಿ ನೀಡಿದ ಭರವಸೆ ಈಡೇರಿಸಲು ನಾಯಿಗಳನ್ನು ಕೊಂದು ಹಾಕಿದ ದೂರು ದಾಖಲು ಹೈದರಾಬಾದ್: ತೆಲಂಗಾಣದಲ್ಲಿ ಬೀದಿನಾಯಿಗಳ ಸಾಮೂಹಿಕ ಹತ್ಯೆಯ ಆರೋಪಗಳು ಕೇಳಿಬಂದಿದೆ. ಗ್ರಾಮ ಪಂಚಾಯಿತಿ ಚುನಾವಣೆ ಸಮಯದಲ್ಲಿ ನೀಡಿದ್ದ ಭರವಸೆಯಂತೆ ಕಳೆದ ಒಂದು ವಾರದಲ್ಲಿ 500 ನಾಯಿಗಳಿಗೆ ವಿಷಪ್ರಾಶನ ಮಾಡಿ ಕೊಲ್ಲಲಾಗಿದೆ ಎಂದು ಆರೋಪಿಸಲಾಗಿದೆ. ಕಾಮರೆಡ್ಡಿ ಜಿಲ್ಲೆಯ ಭವಾನಿಪೇಟ್, ಪಲ್ವಂಚ, ಫರೀದ್‌ಪೇಟ್, ವಾಡಿ ಮತ್ತು ಬಂಡರಾಮೇಶ್ವರಪಲ್ಲಿ ಸೇರಿದಂತೆ ಹಳ್ಳಿಗಳಲ್ಲಿ ಬೀದಿನಾಯಿಗಳನ್ನು ವ್ಯವಸ್ಥಿತವಾಗಿ ಕೊಲ್ಲಲಾಗಿದೆ ಎಂದು ಪ್ರಾಣಿ ಕಲ್ಯಾಣ ಕಾರ್ಯಕರ್ತ ಅದುಲಪುರಂ ಗೌತಮ್ (35) ಜನವರಿ 12ರಂದು […]

ವಿಷಪ್ರಾಶನ ಮಾಡಿ 500 ಬೀದಿನಾಯಿಗಳ ಹತ್ಯೆ Read More »

ಧನು ಪೂಜೆಗೆಂದು ತೆರಳಿದ ಬಾಲಕ ನಾಪತ್ತೆ

ಮಡಂತ್ಯಾರು: ಬೆಳಗ್ಗೆ ಧನು ಪೂಜೆಗೆಂದು ಹೋದ 9 ನೇ ತರಗತಿಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಒಡಿಲ್ನಾಳ ಗ್ರಾಮದ ಸಂಭೋಳ್ಯದಲ್ಲಿ ನಡೆದಿದೆ. ಸುಮಂತ್ (16) ಎಂಬವನೇ ನಾಪತ್ತೆಯಾದ ವಿದ್ಯಾರ್ಥಿ. ಪ್ರತಿದಿನವೂ ಗೆಳೆಯರ ಜೊತೆಗೆ ಹೋಗುತ್ತಿದ್ದ ಬಾಲಕ ಇಂದು ಬಂದಿಲ್ಲ ಎನ್ನುವ ಮಾಹಿತಿ ಸ್ನೇಹಿತರಿಂದ ದೊರೆತಿದ್ದು, ಈ ವೇಳೆ ನಾಪತ್ತೆಯಾಗಿರುವ ವಿಚಾರ ತಿಳಿದಿದೆ. ತೋಟದ ಬದಿಯ ಪ್ರದೇಶದಲ್ಲಿ ರಕ್ತದ ಕಲೆಗಳು ಕಂಡು ಬಂದಿದ್ದು, ಚಿರತೆಗಳು ಓಡಾಡುತ್ತಿವೆ ಎಂದು ಹೇಳಲಾಗುತ್ತಿದೆ. ಆದ್ದರಿಂದ ಬಾಲಕ ನಾಪತ್ತೆಗೆ ಸಂಬಂಧಿಸಿದ ಹಾಗೆ ಅನುಮಾನ ವ್ಯಕ್ತವಾಗಿದೆ. ಬೆಳ್ತಂಗಡಿ

ಧನು ಪೂಜೆಗೆಂದು ತೆರಳಿದ ಬಾಲಕ ನಾಪತ್ತೆ Read More »

ಪವರ್ ಟಿವಿ ರಾಕೇಶ್ ಶೆಟ್ಟಿಗೆ ‌ಮೂರು ತಿಂಗಳ ಜೈಲು ಶಿಕ್ಷೆ

ಬೆಂಗಳೂರು: ಖಾಸಗಿ ವಾಹಿನಿ ಪವರ್ ಟಿವಿಯ ಎಂಡಿ ರಾಕೇಶ್ ಶೆಟ್ಟಿಗೆ ಮೂರು ತಿಂಗಳ ಜೈಲು ಶಿಕ್ಷೆ ಪ್ರಕಟಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಅವರು ರಾಕೇಶ್ ಶೆಟ್ಟಿ ಮತ್ತು ‘ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್’ ವಿರುದ್ಧ ಸಿವಿಲ್‌ ವ್ಯಾಜ್ಯವೊಂದನ್ನು ದಾಖಲಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯವು ಮಧ್ಯಂತರ ಆದೇಶವೊಂದನ್ನು ನೀಡಿತ್ತು. ಆದರೆ, ಈ ಆದೇಶವನ್ನು ಪ್ರತಿವಾದಿ ರಾಕೇಶ್ ಶೆಟ್ಟಿ ಅವರು

ಪವರ್ ಟಿವಿ ರಾಕೇಶ್ ಶೆಟ್ಟಿಗೆ ‌ಮೂರು ತಿಂಗಳ ಜೈಲು ಶಿಕ್ಷೆ Read More »

ಮಹಿಳೆಗೆ ಲೈಂಗಿಕ ಕಿರುಕುಳ, ಲಕ್ಷಾಂತರ ರೂ. ಪಂಗನಾಮ: ಆರೋಪಿ ಹನೀಫ್ ಬಂಧನ

ಬೆಂಗಳೂರು: ಪತಿಯಿಂದ ಮೋಸಕ್ಕೊಳಗಾದ ಮಹಿಳೆಗೆ ನ್ಯಾಯ ಕೊಡಿಸುವುದಾಗಿ ಹೇಳಿ ಆಕೆ ಯಿಂದ 16 ಲಕ್ಷ ರೂ. ದೋಚಿದ, ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಕರುನಾಡು ಎಂಬ ಖಾಸಗಿ ಚಾನಲ್‌ನ ಎಂಡಿಯನ್ನು ಡಿಸಿಆರ್‌ಇ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹನೀಫ್ ಎಂದು ಗುರುತಿಸಲಾಗಿದೆ. ಬಿಟಿಎಂ ಲೇಔಟ್ ನಿವಾಸಿ ಮಹಿಳೆಯಿಂದ 16 ಲಕ್ಷ ರೂ. ಪಡೆದು ವಂಚಿಸಿದಲ್ಲದೆ, ಆಕೆಯ ಜಾತಿ ಬಗ್ಗೆ ಅಸಭ್ಯವಾಗಿ ನಿಂದಿಸಿದ್ದ. ಈ ಸಂಬಂಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸ್ಸಿ ಎಸ್ಟಿ

ಮಹಿಳೆಗೆ ಲೈಂಗಿಕ ಕಿರುಕುಳ, ಲಕ್ಷಾಂತರ ರೂ. ಪಂಗನಾಮ: ಆರೋಪಿ ಹನೀಫ್ ಬಂಧನ Read More »

ರಬ್ಬರ್‌ ತೋಟದಲ್ಲಿ ಮೂರು ಮರಿಗಳೊಂದಿಗೆ ಚಿರತೆ ಠಿಕಾಣಿ

ಬೆಳ್ತಂಗಡಿ: ತಾಲೂಕಿನ ಮುಂಡಾಜೆಯ ಮಚ್ಚಿಮಲೆ ಅನಂತ ಭಟ್ ಎಂಬವರ ರಬ್ಬರ್ ತೋಟದಲ್ಲಿ ಮೂರು ಮರಿಗಳೊಂದಿಗೆ ತಾಯಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಟ್ಯಾಪಿಂಗ್ ಕೆಲಸದವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಕೆಲಸದವರು ಬೆಳಗ್ಗೆ ತೋಟಕ್ಕೆ ಹೋದಾಗ ಚಿರತೆಗಳು ಕಾಣಿಸಿರುವುದಾಗಿ ತಿಳಿದು ಬಂದಿದೆ. ಅವರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ಮುಂಡಾಜೆ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಓಡಾಟದ ಬಗ್ಗೆ ಸ್ಥಳೀಯರು ಮಾಹಿತಿ ನೀಡುತ್ತಿದ್ದರು.‌ ಇಲ್ಲೇ ಸಮೀಪದ ಕಾಯರ್ತೋಡಿಯಲ್ಲಿ ನದಿಬದಿಯಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಸ್ಥಳೀಯ ಜನರು ಮಾಹಿತಿ ನೀಡಿದ್ದಾರೆ. ಮರಿಗಳೊಂದಿಗೆ

ರಬ್ಬರ್‌ ತೋಟದಲ್ಲಿ ಮೂರು ಮರಿಗಳೊಂದಿಗೆ ಚಿರತೆ ಠಿಕಾಣಿ Read More »

ಕಾಣೆಯಾದ ನಾಯಿ: ಪೊಲೀಸರಿಗೆ ದೂರು

ಪುತ್ತೂರು: ಪ್ರೀತಿಯಿಂದ ಸಾಕಿದ್ದ ಶ್ವಾನವೊಂದು ಕಾಣೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾವು ಪ್ರೀತಿಯಿಂದ ಸಾಕಿದ್ದ ಶಿಟ್ಝೂ ತಳಿಯ ನಾಯಿ ಬಾಬ್ರೂ ಕಾಣೆಯಾಗಿರುವುದಾಗಿ ದೂರಿನಲ್ಲಿ ಪೂನಂ ಶೆಟ್ಟಿ ಎಂಬವರು ದೂರಿನಲ್ಲಿ ತಿಳಿಸಿದ್ದಾರೆ. ನೆಲ್ಲಿಕಟ್ಟೆಯ ‌ಮಲ್ಯ ಕಾಂಪೌಂಡ್‌ನಿಂದ ನಾಯಿ ಕಾಣೆಯಾಗಿದೆ. ನಾಯಿಯ ಕೆಲವು ದೃಶ್ಯಾವಳಿಗಳು ‌ಸಿಸಿಟಿವಿ‌ಯಲ್ಲಿ ಸೆರೆಯಾಗಿರುವುದಾಗಿಯೂ ಅವರು ದೂರಿನಲ್ಲಿ ‌ಹೇಳಿದ್ದಾರೆ.

ಕಾಣೆಯಾದ ನಾಯಿ: ಪೊಲೀಸರಿಗೆ ದೂರು Read More »

ಜಾರ್ಖಂಡ್ ವ್ಯಕ್ತಿಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಸೆರೆ

ಬಾಂಗ್ಲಾದೇಶದವನು ಎಂದು ಭಾವಿಸಿ ಹಲ್ಲೆ ಮಂಗಳೂರು: ಬಾಂಗ್ಲಾದೇಶದ ಪ್ರಜೆ ಎಂದು ಭಾವಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ತಾಲೂಕಿನ ಕೂಳೂರು ಗ್ರಾಮ ನಿವಾಸಿಗಳಾದ ರತೀಶ್ ದಾಸ್ ಯಾನೆ ಲಾಲು (32), ಧನುಷ್ (24) ಮತ್ತು ಸಾಗರ್ (24) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಜ.11ರಂದು ಸಂಜೆ ನಾಲ್ವರು ಆರೋಪಿಗಳು ಜಾರ್ಖಂಡ್ ಮೂಲದ ದಿಲ್ಜಾನ್ ಅನ್ಸಾರಿ ಎಂಬವರನ್ನು ತಡೆದು ನಿಲ್ಲಿಸಿ, ನೀನು

ಜಾರ್ಖಂಡ್ ವ್ಯಕ್ತಿಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಸೆರೆ Read More »

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ವ್ಯಕ್ತಿಯ ಹತ್ಯೆ

ರಿಕ್ಷಾ ಚಾಲಕನನ್ನು ಕೊಂದು ಹೊಲದಲ್ಲಿ ಎಸೆದ ದುಷ್ಕರ್ಮಿಗಳು ಢಾಕಾ : ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯಾ ಸರಣಿ ಮುಂದುವರಿದಿದೆ. ದಕ್ಷಿಣ ಬಾಂಗ್ಲಾದ ಫೆನಿ ಜಿಲ್ಲೆಯ ಧಗನ್​ಭುಯಾನ್​ನಲ್ಲಿ ಅಪರಿಚಿತ ದುಷ್ಕರ್ಮಿಗಳು 28 ವರ್ಷದ ಆಟೋ ಚಾಲಕನನ್ನು ಇರಿದು ಹತ್ಯೆ ಮಾಡಿದ್ದಾರೆ. ಸಮೀರ್ ಕುಮಾರ್ ದಾಸ್ ಮೃತ ವ್ಯಕ್ತಿ. ಆಟೋ ಚಾಲಕನನ್ನು ಕೊಂದು ಆಟೋವನ್ನು ಕೂಡ ಕಳವು ಮಾಡಲಾಗಿದೆ. ಕುಟುಂಬದವರ ಪ್ರಕಾರ, ಸಮೀರ್ ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಆಟೋರಿಕ್ಷಾದಲ್ಲಿ ಮನೆಯಿಂದ ಹೊರಟಿದ್ದರು, ತಡರಾತ್ರಿಯಾದರೂ ಅವನು ಹಿಂತಿರುಗದಿದ್ದಾಗ, ಕುಟುಂಬದವರು ಅವರನ್ನು

ಬಾಂಗ್ಲಾದೇಶದಲ್ಲಿ ಇನ್ನೋರ್ವ ಹಿಂದೂ ವ್ಯಕ್ತಿಯ ಹತ್ಯೆ Read More »

ಇರಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ : 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ

ಸರ್ವಾಧಿಕಾರಿ ಖಮೇನಿ ವಿರುದ್ಧ ಭುಗಿಲೆದ್ದ ಆಕ್ರೋಶ ; ಮುಲ್ಲಾಗಳು ದೇಶಬಿಟ್ಟು ಹೋಗಲು ಒತ್ತಾಯ ಟೆಹ್ರಾನ್‌: ಇರಾನ್‌ನಲ್ಲಿ ಮುಲ್ಲಾಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಇನ್ನಷ್ಟು ಜೋರಾಗಿದೆ. ಹಣದುಬ್ಬರ, ಬೆಲೆ ಏರಿಕೆ ವಿರುದ್ಧ ಸಣ್ಣಮಟ್ಟದಲ್ಲಿ ಆರಂಭವಾದ ಪ್ರತಿಭಟನೆ ತೀವ್ರಗೊಂಡಿದ್ದು, ಇರಾನ್‌ ಜನರು ಈಗ ಮಸೀದಿಗೆ ಬೆಂಕಿ ಹಾಕುತ್ತಿದ್ದಾರೆ. ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಖಮೇನಿ ಆಡಳಿತದ ವಿರುದ್ಧ ತಿರುಗಿ ಬಿದ್ದ ಪ್ರತಿಭಟನಕಾರರು ಸುಮಾರು 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ ಹಚ್ಚಿದ್ದಾರೆ. ಇಷ್ಟರ ತನಕ ಪ್ರತಿಭಟನೆಗೆ 650ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ.

ಇರಾನ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ : 350ಕ್ಕೂ ಹೆಚ್ಚು ಮಸೀದಿಗಳಿಗೆ ಬೆಂಕಿ Read More »

4 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಉಗಾಂಡದ ಮಹಿಳೆ ಬಂಧನ

ಬೆಂಗಳೂರಿನಿಂದ ಮಂಗಳೂರಿಗೆ ಮಾದಕವಸ್ತು ಪೂರೈಸುತ್ತಿದ್ದ ಜಾಲದ ಪ್ರಮುಖ ಸೂತ್ರಧಾರಿ ಮಹಿಳೆ ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ವ್ಯವಸ್ಥಿತ ರೀತಿಯಲ್ಲಿ ಮಾದಕ ದ್ರವ್ಯ ಎಂಡಿಎಂಎ ಸರಬರಾಜು ಮಾಡುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಅವಳಿಂದ ಸುಮಾರು 4 ಕೋ. ರೂ. ಮೌಲ್ಯದ 4 ಕೆಜಿ ಡ್ರಗ್ಸ್‌ ವಸ್ತು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಹೊರವಲಯದ ಜಿಗಾನಿಯಲ್ಲಿ 4 ಕೆಜಿ ಎಂಡಿಎಂಎ ಜೊತೆ ಮಹಿಳೆ ಸಿಕ್ಕಿಬಿದ್ದಿದ್ದಾಳೆ. ಆರೋಪಿಯನ್ನು ಜಲಿಯಾ ಝಲ್ವಾಂಗೊ ಎಂದು ಗುರುತಿಸಲಾಗಿದ್ದು, ವಶಪಡಿಸಿಕೊಂಡ ಅಕ್ರಮ ವಸ್ತುಗಳ ಮೌಲ್ಯ

4 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಉಗಾಂಡದ ಮಹಿಳೆ ಬಂಧನ Read More »

error: Content is protected !!
Scroll to Top