ಅಪರಾಧ

ಸೆಂಟ್ರಿಂಗ್‌ ಕಾರ್ಮಿಕನ ಮನೆಯಲ್ಲಿ ಪ್ರೇತ ಚೇಷ್ಟೆ!

ಹಾರರ್‌ ಸಿನಿಮಾ ರೀತಿ ನಡೆಯುತ್ತಿರುವ ಘಟನೆಗಳಿಂದ ಮನೆಮಂದಿ ಕಂಗಾಲು ಬೆಳ್ತಂಗಡಿ: ನೋಡು ನೋಡುತ್ತಿದ್ದಂತೆ ಬಟ್ಟೆಗೆ ಬೆಂಕಿ ಹತ್ತಿಕೊಂಡು ಉರಿಯತೊಡಗುತ್ತದೆ, ತಟ್ಟೆಬಟ್ಟಲುಗಳು ಉರುಳಿ ಬೀಳುತ್ತವೆ, ಎಲ್ಲೋ ಇಟ್ಟ ವಸ್ತು ಇನ್ನೊಂದು ಕಡೆ ಇರುತ್ತದೆ, ಬಲ್ಬ್‌, ಟ್ಯೂಬ್‌ಗಳು ತಮ್ಮಿಂದ ತಾನೇ ಆನ್‌-ಆಫ್‌ ಆಗುತ್ತವೆ… ಇದು ಯಾವುದೋ ದೆವ್ವದ ಕಥೆಯ ಸಿನಿಮಾ ದೃಶ್ಯವಲ್ಲ ಬೆಳ್ತಂಗಡಿ ತಾಲೂಕಿನ ಮಾಲಾಡಿ ಸಮೀಪ ಕೊಲ್ಪೆದಬೈಲು ಎಂಬಲ್ಲಿರುವ ಮನೆಯೊಂದರಲ್ಲಿ ಕಳೆದ ಮೂರು ತಿಂಗಳಿಂದ ಆಗಾಗ ನಡೆಯುತ್ತಿರುವ ವಿಚಿತ್ರ ಘಟನೆಗಳು.ಸೆಂಟ್ರಿಂಗ್‌ ಕೆಲಸ ಮಾಡುವ ಉಮೇಶ್‌ ಶೆಟ್ಟಿ ಎಂಬವರ ಮನೆಯಲ್ಲಿ […]

ಸೆಂಟ್ರಿಂಗ್‌ ಕಾರ್ಮಿಕನ ಮನೆಯಲ್ಲಿ ಪ್ರೇತ ಚೇಷ್ಟೆ! Read More »

ಬ್ಯಾಂಕಿಗೆ ಕೋಟಿಗಟ್ಟಲೆ ರೂ. ವಂಚನೆ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು

ನೌಕರರ ಹೆಸರಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ಸಾಲ ಪಡೆದು ವಂಚಿಸಿದ ಪ್ರಕರಣ ಬೆಂಗಳೂರು: ಬ್ಯಾಂಕಿಗೆ ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ಪ್ರಕಟಿಸಬೇಕಿದೆ. ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್ ಹಾಗೂ ಮುನಿರಾಜು ನಾಲ್ಕೂ ಜನರು ತಪ್ಪಿತಸ್ಥರು ಎಂದು ಕೋರ್ಟ್ ಹೇಳಿದೆ. ನಕಲಿ ದಾಖಲೆ ನೀಡಿ ಕೋಟ್ಯಾಂತರ ರೂಪಾಯಿ ಸಾಲ ಪಡೆದು ವಂಚನೆ ಮಾಡಿದ್ದ ಆರೋಪ

ಬ್ಯಾಂಕಿಗೆ ಕೋಟಿಗಟ್ಟಲೆ ರೂ. ವಂಚನೆ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು Read More »

ಹೈಸ್ಕೂಲ್‌ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ

ಚೆನ್ನೈ : ಹೈಸ್ಕೂಲ್‌ ವಿದ್ಯಾರ್ಥಿನಿಯ ಮೇಲೆ ಆಕೆಯ ಶಾಲೆಯ ಮೂವರು ಶಿಕ್ಷಕರೇ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ. ಈ ಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ಶಿಕ್ಷಕರನ್ನು ಬಂಧಿಸಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಶಿಕ್ಷಕರ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆ ಬಾಲಕಿ ಒಂದು ತಿಂಗಳಿಗೂ ಹೆಚ್ಚು ಕಾಲ ಶಾಲೆಗೆ ಹೋಗಿರಲಿಲ್ಲ. ಶಾಲೆಯ ಮುಖ್ಯ ಶಿಕ್ಷಕರು ವಿಚಾರಿಸಿದಾಗ ಮಗಳ ಮೇಲೆ ಶಾಲೆಯಲ್ಲಿ

ಹೈಸ್ಕೂಲ್‌ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಂದಲೇ ಅತ್ಯಾಚಾರ Read More »

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ  ಸಾಮೂಹಿಕ ಧರಣಿ

ಮಂಗಳೂರು : ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ನಂತೂರು ಜಂಕ್ಷನ್‌ನಲ್ಲಿ ಬುಧವಾರ ಪ್ರತಿಭಟನೆ ನಡೆಸಿತು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರ, ಭ್ರಮರಕೊಟ್ಲು ಟೋಲ್ ಗೇಟ್ ತೆರವು, ಹೊಸ ಟೋಲ್ ಗೇಟ್ ನಿರ್ಮಿಸುವ ಮುನ್ನ ಟೋಲ್ ಗೇಟ್ ನಿಯಮಾವಳಿ ಪಾಲನೆ, ನಂತೂರು ಮೇಲ್ಸೇತುವೆ ಹಾಗೂ ಕೂಳೂರು ಸೇತುವೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಮಿತಿ ಮುಂದಿಟ್ಟಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮುನೀರ್ ಕಾಟಿಪಳ್ಳ

ರಾಷ್ಟ್ರೀಯ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ  ಸಾಮೂಹಿಕ ಧರಣಿ Read More »

ಬೆಳ್ಳಂಬೆಳಗ್ಗೆ 30 ಕಡೆ ಐಟಿ ದಾಳಿ

ಭಾರಿ ಪ್ರಮಾಣದ ಅಕ್ರಮ ಸಂಪತ್ತಿನ ಶೋಧ ಬೆಂಗಳೂರು: ರಾಜ್ಯದ ಪ್ರಮುಖ ಸರಕಾರಿ ಗುತ್ತಿಗೆದಾರನ ಬಂಗಲೆಯೂ ಸೇರಿದಂತೆ ಸುಮಾರು 30 ಕಡೆ ಇಂದು ಬೆಳ್ಳಂಬೆಳಗ್ಗ ಆದಾಯ ಕರ ಇಲಾಖೆಯ ದಾಳಿ ನಡೆದಿದ್ದು, ಪರಿಶೋಧನೆ ಮುಂದುವರಿದಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಎಂಪ್ರೋ ಪ್ಯಾಲೇಸ್, ಹೋಟೆಲ್, ಕಲ್ಯಾಣ ಮಂಟಪದ ಸೇರಿದಂತೆ 10ಕ್ಕೂ ಹೆಚ್ಚಿ ಕಡೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಮೂರು ಕಾರುಗಳಲ್ಲಿ ಬಂದ

ಬೆಳ್ಳಂಬೆಳಗ್ಗೆ 30 ಕಡೆ ಐಟಿ ದಾಳಿ Read More »

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ನೆಪ | ರಾತ್ರೋ ರಾತ್ರಿ ಶ್ವಾನಪ್ರೇಮಿಯ ಮನೆ ಕೆಡವಿದ ಆಡಳಿತ ಮಂಡಳಿ | ನಾಲ್ಕು ನಾಯಿಮರಿಗಳ ಸಾವು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಮನೆಗಳ ತೆರವು ಕಾರ್ಯಾಚರಣೆ ಮುಂದುವರಿದಿದ್ದು, ಕೆಲವರ ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ರಾತ್ರೋರಾತ್ರಿ ಶ್ವಾನ ಪ್ರೇಮಿಯೊಬ್ಬರ ಮನೆಯನ್ನು ಆಡಳಿತ ಮಂಡಳಿ ಕಡೆವಿ ಹಾಕಿದ್ದು, ಮನೆಯೊಳಗಿದ್ದ ನಾಲ್ಕು ನಾಯಿ ಮರಿಗಳು ಸಾವನಪ್ಪಿದೆ ಎಂದು ಹೇಳಲಾಗಿದೆ. ಈ ಹಿನ್ನಲೆಯಲ್ಲಿ ಆಡಳಿತ ಮಂಡಳಿ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 60 ಕೋ.ರೂ.ವೆಚ್ಚದ ಮಾಸ್ಟರ್ ಪ್ಲಾನ್‌ಗೆ ಪೂರಕವಾಗಿ ಶ್ರೀ ಮಹಾಲಿಂಗೇಶ್ವರ ದೇಗುಲದ ವಠಾರದ ಮನೆಗಳ ತೆರವು ಕಾರ್ಯಾಚರಣೆ ಮುಂದುವರಿದಿದೆ. ಈಗಾಗಲೇ ಬಹುತೇಕ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ನೆಪ | ರಾತ್ರೋ ರಾತ್ರಿ ಶ್ವಾನಪ್ರೇಮಿಯ ಮನೆ ಕೆಡವಿದ ಆಡಳಿತ ಮಂಡಳಿ | ನಾಲ್ಕು ನಾಯಿಮರಿಗಳ ಸಾವು Read More »

ಶಾಲೆಗೆ ನುಗ್ಗಿ ಯದ್ವಾತದ್ವಾ ಗುಂಡು ಹಾರಿಸಿದ ದುಷ್ಕರ್ಮಿ : ಕನಿಷ್ಠ 10 ಮಂದಿ ಸಾವು

ಜಗತ್ತಿನ ಅತ್ಯಂತ ಸುರಕ್ಷಿತ ದೇಶದಲ್ಲಿ ನಡೆದ ಆಘಾತಕಾರಿ ಘಟನೆ ಸ್ಟಾಕ್‌ಹೋಮ್‌ : ಸ್ವೀಡನ್​ನ ಶಾಲೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಯೊಬ್ಬ ಯದ್ವಾತದ್ವಾ ಗುಂಡು ಹಾರಿಸಿದ ಪರಿಣಾಮ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ ಹಾಗೂ ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ರಾಯ್ಟರ್ಸ್‌ ಸುದ್ದಿ ಮಾಧ್ಯಮ ವರದಿ ಮಾಡಿದೆ. ಸಾಮಾನ್ಯವಾಗಿ ಅಮೆರಿಕದಲ್ಲಿ ನಡೆಯುತ್ತಿರುವ ಈ ಮಾದರಿಯ ದಾಳಿ ಅತ್ಯಂತ ಸುರಕ್ಷಿತ ದೇಶ ಎಂದು ಅರಿಯಲ್ಪಡುವ ಸ್ವೀಡನ್‌ನಲ್ಲೂ ಸಂಭವಿಸಿರುವುದು ಆಘಾತವುಂಟು ಮಾಡಿದೆ. ಬೆಳಗ್ಗೆ ಶಾಲೆ ಶುರುವಾಗುತ್ತಿದ್ದಂತೆಯೇ ಕಾರಿನಲ್ಲಿ ಬಂದು ಯದ್ವಾತದ್ವಾ ಗುಂಡು ಹಾರಿಸಿದ್ದಾನೆ. ಒರೆಬ್ರೊ

ಶಾಲೆಗೆ ನುಗ್ಗಿ ಯದ್ವಾತದ್ವಾ ಗುಂಡು ಹಾರಿಸಿದ ದುಷ್ಕರ್ಮಿ : ಕನಿಷ್ಠ 10 ಮಂದಿ ಸಾವು Read More »

180ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಆರೋಪಿ ಸೆರೆ

ನಟಿಯನ್ನು ಪ್ರೀತಿಸಿ 3 ಕೋ.ರೂ. ಮನೆ ಗಿಫ್ಟ್‌ ಕೊಟ್ಟಿದ್ದ ಬೆಂಗಳೂರು : ದೇಶಾದ್ಯಂತ 180ಕ್ಕೂ ಹೆಚ್ಚು ಕಳ್ಳತನ ನಡೆಸಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಸೊಲ್ಲಾಪುರ ಮೂಲದ ಪಂಚಾಕ್ಷರಿ ಸ್ವಾಮಿ (37) ಈ ಕುಖ್ಯಾತ ಕಳ್ಳ. ಈತ ಕದ್ದ ಹಣದಿಂದಲೇ ತನ್ನ ಪ್ರೇಯಸಿಗೆ ಸುಮಾರು 3 ಕೋ. ರೂ. ಬೆಲೆಬಾಳುವ ಮನೆ ಕಟ್ಟಿಸಿಕೊಟ್ಟಿದ್ದಾನಂತೆ. ಈತನ ಪ್ರೇಯಸಿ ಅಂತಿಂಥವಳಲ್ಲ ಖ್ಯಾತ ನಟಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಪಂಚಾಕ್ಷರಿ ಸ್ವಾಮಿಗೆ ಮದುವೆಯಾಗಿ ಮಗುವಿದ್ದರೂ ಬೇರೆ

180ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಆರೋಪಿ ಸೆರೆ Read More »

1 ನ್ನು ಒತ್ತಿದ್ರು..  2 ಲಕ್ಷ ಕಳ್ಕೊಂಡ್ರು..!

ಸಹಾಯವಾಣಿ ಹೆಸರಿನಲ್ಲಿ ಮಹಿಳೆಗೆ ದೋಖ ಬೆಂಗಳೂರು: ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬ್ಯಾಂಕ್ಗಳು ಸಹಾಯವಾಣಿಗಳನ್ನು ತೆರೆದಿರುತ್ತವೆ. ಬ್ಯಾಂಕ್‌ಗಳ ಈ ಕ್ರಮವನ್ನು ಸೈಬರ್ ವಂಚಕರು  ದುರ್ಬಳಕೆ ಮಾಡಿಕೊಂಡು ಮಹಿಳೆಗೆ ವಂಚಿಸಿದ್ದಾರೆ. ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ,

1 ನ್ನು ಒತ್ತಿದ್ರು..  2 ಲಕ್ಷ ಕಳ್ಕೊಂಡ್ರು..! Read More »

ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ತೀವ್ರ ಅಸ್ವಸ್ಥನಾದ ಆರೋಪಿಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಮಂಗಳೂರು: ವಿಟ್ಲದ ಬೋಳಂತೂರಿನ ಸಮೀಪ ನಾರ್ಶದ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿ ಎಂಬವರ ಮನೆಯಲ್ಲಿ ಕಳೆದ ಡಿಸೆಂಬರ್‌ನಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದರೋಡೆ ನಡೆಸಿದ ತಂಡದ ಇನ್ನೋರ್ವ ಸದಸ್ಯನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಕೇರಳ ಮೂಲದ ಸಚಿನ್‌ ಸೆರೆಯಾಗಿರುವ ಆರೋಪಿ. ಬಂಧನವಾದ ಬೆನ್ನಿಗೆ ತೀವ್ರ ಅಸ್ವಸ್ಥನಾದ ಅವನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ. ಆರೋಪಿ ಅಪಸ್ಮಾರ ಮತ್ತು ತಲೆನೋವಿನಿಂದ ಬಳಲುತ್ತಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೆಲದಿನಗಳ

ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

error: Content is protected !!
Scroll to Top