ಅಪರಾಧ

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ : ವಿಧಿವಿಜ್ಞಾನ ವರದಿ

ಮೃತದೇಹದಲ್ಲಿ ಪ್ರಬಲ ವಿಷಕಾರಿ ಅಂಶ ಪತ್ತೆಯಾದ ಬಳಿಕ ಜಟಿಲಗೊಂಡ ಪ್ರಕರಣ ಮುಂಬೈ: ಮುಂಬೈಯ ಒಂದೇ ಕುಟುಂಬದ ನಾಲ್ಕು ಮಂದಿ ಇತ್ತೀಚೆಗೆ ಬಿರಿಯಾನಿ ತಿಂದ ಬಳಿಕ ಕಲ್ಲಂಗಡಿ ಸೇವಿಸಿದ ಬೆನ್ನಿಗೆ ಮೃತಪಟ್ಟ ಘಟನೆ ದೇಶಾದ್ಯಂತ ಆತಂಕ ಸೃಷ್ಟಿಸಿತ್ತು. ಆದರೆ ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರಣವಲ್ಲ ಎಂಬುದಾಗಿ ವೈದ್ಯಕೀಯ ವರದಿ ತಿಳಿಸಿದೆ. ಕಳೆದ ವಾರ ಮುಂಬೈನಲ್ಲಿ ತಂದೆ, ತಾಯಿ ಉತ್ತು ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದು, ಇವರ ಸಾವಿಗೆ ಕಲುಷಿತ ಕಲ್ಲಂಗಡಿ ಕಾರಣ ಎಂದು ಹೇಳಲಾಗಿತ್ತು. […]

ಒಂದೇ ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಕಾರಣವಲ್ಲ : ವಿಧಿವಿಜ್ಞಾನ ವರದಿ Read More »

ಎರಡು ಮೀನುಗಾರ ತಂಡದ ನಡುವೆ ಹೊಡೆದಾಟ: ಪ್ರಕರಣ ದಾಖಲು

ಉಡುಪಿ: ಮೀನುಗಾರರ ಎರಡು ತಂಡಗಳ ನಡುವೆ ಹಣಕಾಸು ವಿಷಯಕ್ಕೆ ಸಂಬಂಧಿಸಿ ಹೊಡೆದಾಟ ನಡೆದ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ. ಜಯೇಶ್ ಕೋಟ್ಯಾನ್ ಎಂಬವರು ಬಾಕು ಉಳಿದಿರುವ ಹಣವನ್ನು ಕೇಳಿದ ಕಾರಣಕ್ಕೆ ಬೋಟ್ ಮಾಲೀಕ ಚೋಟಾ ಹರೀಶ್ ಎಂಬಾತನಿಗೆ ಹಲ್ಲೆ ಮಾಡಿದ್ದು, ಇವರಿಬ್ಬರ ನಡುವೆ ಹೊಡೆದಾಟ ನಡೆದಿದೆ. ಇಬ್ಬರೂ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಪ್ರಕರಣ ಇಷ್ಟಕ್ಕೇ ಮುಗಿಯದೆ, ಚಿಕಿತ್ಸೆ ಪಡೆಯುತ್ತಿದ್ದ ಜಯೇಶ್ ಮೇಲೆ ಚೋಟಾ ಹರೀಶನ ನಾಲ್ಕು ಮಂದಿ ಬೆಂಬಲಿಗರು ಹಲ್ಲೆ‌ ಮಾಡಿ ಪರಾರಿಯಾಗಿದ್ದಾರೆ. ಘಟನೆಗೆ

ಎರಡು ಮೀನುಗಾರ ತಂಡದ ನಡುವೆ ಹೊಡೆದಾಟ: ಪ್ರಕರಣ ದಾಖಲು Read More »

ಗೋಡೆಗೆ ಕನ್ನ ಕೊರೆದು ಕೋಟಿಗಟ್ಟಲೆ ರೂ. ಮೌಲ್ಯದ ಬೆಳ್ಳಿ ಆಭರಣ ಕಳ್ಳತನ

ಬೆಂಗಳೂರು: ಬೆಂಗಳೂರಿನ ದಾಸರಹಳ್ಳಿಯ ಎಂಟನೇ ಮೈಲಿ ಬಳಿಯ ಹಾವನೂರಿನಲ್ಲಿರುವ ಚಿನ್ನದಂಗಡಿಯೊಂದಕ್ಕೆ ಗೋಡೆ ಕೊರೆದು ಕನ್ನ ಹಾಕಿರುವ ಕಳ್ಳರು ಕೋಟಿಗಟ್ಟಲೆ ಬೆಲೆಬಾಳುವ ಬೆಳ್ಳಿ ಆಭರಣಗಳನ್ನು ಕಳವುಗೈದಿದ್ದಾರೆ. ಎಂಬಿ ಜ್ಯುವೆಲ್ಲರ್ಸ್ ಅಂಗಡಿಯಿಂದ ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕದ್ದಿದ್ದಾರೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು, ಅತ್ಯಂತ ಯೋಜಿತವಾಗಿ ಕಳ್ಳತನ ಮಾಡಲಾಗಿದೆ. ಜ್ಯುವೆಲ್ಲರಿ ಶಾಪ್‌ನ ಹಿಂಭಾಗದ ರೂಮ್‌ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ನಂತರ ಗೋಡೆಯನ್ನು ಕೊರೆದು ಮಳಿಗೆಯೊಳಗೆ ಪ್ರವೇಶಿಸಿ ಸುಮಾರು 70 ಕೆಜಿ

ಗೋಡೆಗೆ ಕನ್ನ ಕೊರೆದು ಕೋಟಿಗಟ್ಟಲೆ ರೂ. ಮೌಲ್ಯದ ಬೆಳ್ಳಿ ಆಭರಣ ಕಳ್ಳತನ Read More »

ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಮಹಿಳೆಯನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಸಾಗಿಸಲೆತ್ನಿಸಿದ್ದ ಅಪರಾಧಿಗಳು ಉಡುಪಿ : ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ ಮಹಿಳೆಯೊಬ್ಬರನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ನಿವಾಸಿಗಳಾದ ಮಿಥುನ್ ಹಾಗೂ ನಾಗೇಶ್ ಪೂಜಾರಿ ಜೀವಾವಧಿ ಶಿಕ್ಷೆಗೆ ಗುರಿಯಾದ ಆರೋಪಿಗಳು. ಮಂಚಿಕುಮೇರಿ ನಿವಾಸಿ ರಮಾನಾಥ ರೈ ಮಣಿಪಾಲದ ಟೈಗರ್ ಸರ್ಕಲ್ ಬಳಿ ನಂದಿನಿ ಮಿಲ್ಕ್ ಪಾರ್ಲರ್ ನಡೆಸುತ್ತಿದ್ದು, 2022ರ ಫೆ.18ರಂದು ಅವರ ಪತ್ನಿ ಸುಮತಿ ಮನೆಯಲ್ಲಿ ಒಬ್ಬರೇ ಇದ್ದಾಗ ಸಂಜೆ 7

ಮಹಿಳೆಯ ಹತ್ಯಾ ಯತ್ನ : ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ Read More »

ಇಲಿ ಪಾಷಾಣ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು

ಬೆಳ್ತಂಗಡಿ : ಪ್ರೀತಿಸಿದ ಯುವಕನ ಜೊತೆ ಮದುವೆಯಾಗಲು ಮನೆಯವರು ಅನುಮತಿ ನೀಡಲಿಕ್ಕಿಲ್ಲ ಎಂದು ಭಾವಿಸಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ್ ಮತ್ತು ರೇವತಿ ದಂಪತಿ ಎರಡನೇ ಪುತ್ರಿ ರಮಾ (19) ಎಂಬಾಕೆ ಕಳೆದ ಏ.19ರಂದು ರಾತ್ರಿ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಳಿಕ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು,

ಇಲಿ ಪಾಷಾಣ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು Read More »

ಬಿಜೆಪಿ ಮುಖಂಡನ ಕೊಲೆ ಕೇಸ್‌ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಕಳೆದ ವರ್ಷ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಸಂಭವಿಸಿದ ಭೀಕರ ಹತ್ಯೆ ಕೊಪ್ಪಳ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಹತ್ಯೆ ಪ್ರಕರಣದಲ್ಲಿ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ಆಪರಾಧಿಗಳಾದ ರವಿ, ವಿಜಯ್, ಧನರಾಜ್, ಭರತ್, ಸಲೀಮ್ ಮಹಮ್ಮದ್ ರಫೀಕ್, ಗಂಗಾಧರ ಗೌಳಿಗೆ ಗಲ್ಲು ಶಿಕ್ಷೆ ಹಾಗೂ ತಲಾ 3 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ತೀರ್ಪು ನೀಡಿದ್ದಾರೆ. 2025ರ ಅ.7ರಂದು ಹಳೆಯ

ಬಿಜೆಪಿ ಮುಖಂಡನ ಕೊಲೆ ಕೇಸ್‌ : ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ Read More »

ಆರ್‌ಎಸ್‌ಎಸ್‌ ಪ್ರಧಾನ ಕಚೇರಿಗೆ ಸ್ಫೋಟ ಬೆದರಿಕೆ

ಸೀಸಿಯಮ್ ವಿಕಿರಣ ಹಾಯಿಸಿ ಸ್ಫೋಟಿಸುವ ಎಚ್ಚರಿಕೆ ನಾಗಪುರ : ಮಹಾರಾಷ್ಟ್ರದ ನಾಗಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಧಾನ ಕಚೇರಿ ಮತ್ತು ಭಾರತೀಯ ಜನತಾ ಪಕ್ಷದ ಕಚೇರಿಯನ್ನು ಗುರಿಯಾಗಿಸಿಕೊಂಡು ವಿಕಿರಣಶೀಲ ವಸ್ತುಗಳ ಮೂಲಕ ದಾಳಿ ನಡೆಸುವ ಬೆದರಿಕೆ ಪತ್ರವೊಂದು ಪೊಲೀಸ್ ಇಲಾಖೆಗೆ ಲಭ್ಯವಾಗಿದೆ. ಪತ್ರದ ಗಂಭೀರತೆಯನ್ನು ಅರಿತ ಪೊಲೀಸ್ ಆಯುಕ್ತರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ಬೆದರಿಕೆ ಪತ್ರ ಬಂದ ಬೆನ್ನಲ್ಲೇ ಭಯೋತ್ಪಾದನಾ ನಿಗ್ರಹ ದಳ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಮುಂಬೈನಿಂದ ಆಗಮಿಸಿದ ಪರಮಾಣು ಶಕ್ತಿ ತಜ್ಞರ ವಿಶೇಷ

ಆರ್‌ಎಸ್‌ಎಸ್‌ ಪ್ರಧಾನ ಕಚೇರಿಗೆ ಸ್ಫೋಟ ಬೆದರಿಕೆ Read More »

ಪುಟ್ಟ ಮಗುವಿನ ಶವ ತೇಲುತ್ತಿರುವ‌ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆ

ಬೆಂಗಳೂರು: ಪುಟಾಣಿ ಮಗುವಿನ ಶವವೊಂದು ‌ಮಾಗಡಿ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುದೂರು ‌ಪೊಲೀಸ್ ಠಾಣಾ ವ್ಯಾಪ್ತಿಯ ಬಸವಣ್ಣ ದೇಗುಲದ ಬಳಿ ಈ ದೃಶ್ಯ ಕಂಡು ಬಂದಿದೆ. ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಈ ದೃಶ್ಯವನ್ನು ಮೊದಲು ನೋಡಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಮಾಹಿತಿಯನ್ವಯ ಮಗು ಸತ್ತು ಸುಮಾರು ಎರಡು ತಿಂಗಳುಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಈ ಬಗ್ಗೆ ತನಿಖೆ ಆರಂಭ ಮಾಡಿರುವ ಪೊಲೀಸರು ಮಗುವಿನ ಈ ಸ್ಥಿತಿಗೆ ಕಾರಣ ಏನು?,

ಪುಟ್ಟ ಮಗುವಿನ ಶವ ತೇಲುತ್ತಿರುವ‌ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆ Read More »

ಹಲವರಿಂದ ಹಲ್ಲೆ: ದೂರು ದಾಖಲು

ಪುತ್ತೂರು: ತನ್ನ ಮನೆಯ ಸಿಟೌಟ್‌ನಲ್ಲಿ ಕುಳಿತಿದ್ದಾಗ ಕೆಲವು ಜನರು ಬಂದು ಹಲ್ಲೆ ನಡೆಸಿದ್ದಾಗಿ ಈಶ್ವರಮಂಗಲದ ಪಡುವನ್ನೂರು ನಿವಾಸಿ ಮಹಮ್ಮದ್ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳಾದ ಅಬ್ದುಲ್ ರಹಮಾನ್, ಸಾಹುಲ್ ಹಮೀದ್, ಮಿಕ್ತಾದ್, ರಶೀದ್, ಮೊಯಿದು ಎಂಬವರು ಬಂದು ಅವಾಚ್ಯವಾಗಿ ನಿಂದಿಸುತ್ತಾ, ನಮ್ಮ ಹಣ ತಿಂದಿದ್ದೀಯಾ ಎಂದು ಗದರಿಸುತ್ತಾ, ನಮ್ಮ ಜಾಗ ಇದು, ಇಲ್ಲಿ ಕಾಂಪೌಂಡ್ ಕಟ್ಟುತ್ತೀಯಾ ಎಂದು ಬೈದು ಹಲ್ಲೆ ನಡೆಸಿದ್ದಾರೆ. ಈ ವೇಳೆ ನನ್ನ ಪತ್ನಿ ಸೆಫಿಯಾ ಬರುವುದನ್ನು ಕಂಡು

ಹಲವರಿಂದ ಹಲ್ಲೆ: ದೂರು ದಾಖಲು Read More »

ಎಂಟು ತಿಂಗಳಾದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು : ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರಿನ ವಿದ್ಯಾರಣ್ಯಪುರದಿಂದ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಿಗೂಢ ನಾಪತ್ತೆ ಬೆಂಗಳೂರು: ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜನವರಿ ತಿಂಗಳಿನಲ್ಲಿ ನಾಪತ್ತೆಯಾಗಿರುವ ಇಬ್ಬರು ವಿದ್ಯಾರ್ಥಿನಿಯರಿ ಇನ್ನೂ ಪತ್ತೆಯಾಗದಿರುವುದು ಕಳವಳ ಮೂಡಿಸಿದೆ. ಈ ನಿಗೂಢ ನಾಪತ್ತೆ ಪ್ರಕರಣವನ್ನು ರಾಜ್ಯ ಸರ್ಕಾರ ಈಗ ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಒಪ್ಪಿಸಿದೆ. ಘಟನೆ ನಡೆದು ಎಂಟು ತಿಂಗಳು ಕಳೆದರೂ ವಿದ್ಯಾರ್ಥಿನಿಯರ ಬಗ್ಗೆ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನಿಷ್ಕಾ ಹಾಗೂ ಆಕೆಯ

ಎಂಟು ತಿಂಗಳಾದರೂ ಪತ್ತೆಯಾಗದ ಇಬ್ಬರು ವಿದ್ಯಾರ್ಥಿನಿಯರು : ತನಿಖೆ ಸಿಐಡಿಗೆ ಹಸ್ತಾಂತರ Read More »

error: Content is protected !!
Scroll to Top