ಅಪರಾಧ

ಜೀವಾವಧಿ ಶಿಕ್ಷೆಗೊಳಗಾದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ರದ್ದು

ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ ಬೆಂಗಳೂರು: ಧಾರವಾಡದ ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಅವರ ಶಾಸಕ ಸ್ಥಾನ ರದ್ದಾಗಿದೆ. ಬುಧವಾರ ಶಾಸಕರು ಸೇರಿದಂತೆ 16 ಮಂದಿಯನ್ನು ಅಪರಾಧಿಗಳು ಎಂದು ತೀರ್ಪು ಪ್ರಕಟಿಸಿದ್ದ ಕೋರ್ಟ್‌ ಶುಕ್ರವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಶಿಕ್ಷೆಗೆ ಗುರಿಯಾದ ಹಿನ್ನೆಲೆ ಜನಪ್ರತಿನಿಧಿಗಳ ಕಾಯ್ದೆಯ ಸೆಕ್ಷನ್ 8(4) ರ […]

ಜೀವಾವಧಿ ಶಿಕ್ಷೆಗೊಳಗಾದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಶಾಸಕ ಸ್ಥಾನ ರದ್ದು Read More »

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಯಕ್ಷ ಕಲಾವಿರಿಂದ ಪೊಲೀಸರಿಗೆ ದೂರು

ಮಂಗಳೂರು: ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆ ಮತ್ತು ಮಹಿಳಾ ಠಾಣೆಯಲ್ಲಿ ಮತ್ತೆರಡು ಪ್ರಕರಣಗಳು ದಾಖಲಾಗಿವೆ. ಕಲಾವಿದ ಸುಂದರ್ ರೈ ಮಂದಾರ, ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿಗಾರ್ ಕೊಡಪದವು ಅವರ ತಾಯಿಯ ಹೆಸರಿನಲ್ಲಿ ತಿಮರೋಡಿ ‌ವಿರುದ್ಧ ದೂರು ದಾಖಲಾಗಿರುವುದಾಗಿದೆ. ಕಳೆದ ಆರು ತಿಂಗಳ ಹಿಂದೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾದ ‘ಬುರುಡೆ ಗ್ಯಾಂಗ್’ ಹೆಸರಿನ ಹಾಸ್ಯ ಕಾರ್ಯಕ್ರಮದಲ್ಲಿ ಹೆಸರು ಹೇಳದೆಯೇ ತನ್ನನ್ನು ವಿಡಂಬನೆ ಮಾಡಿರುವುದಾಗಿ ಆರೋಪಿಸಿ ಕಲಾವಿದ ಪ್ರಜ್ವಲ್ ಗುರುವಾಯನಕೆರೆ‌ಗೆ ಫೋನ್ ಮೂಲಕ ತಿಮರೋಡಿ

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಯಕ್ಷ ಕಲಾವಿರಿಂದ ಪೊಲೀಸರಿಗೆ ದೂರು Read More »

ಕೊಣಾಜೆ : ಜಾತ್ರೆಗೆಂದು ಹೋದ ಬಾಲಕಿ ನಾಪತ್ತೆ

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು ಅಡ್ಕದ 16 ವರ್ಷದ ಬಾಲಕಿಯೊಬ್ಬಳು ಏಪ್ರಿಲ್ 12 =ರಿಂದ ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿದೆ. ನಾಪತ್ತೆಯಾದ ಬಾಲಕಿಯನ್ನು ಜಗದೀಶ್ ಪೂಜಾರಿ ಮತ್ತು ಗುಲಾಬಿ ದಂಪತಿಯ ಪುತ್ರಿ ಚೈತನ್ಯ ಎಂದು ಗುರುತಿಸಲಾಗಿದೆ. ಹರೇಕಳದ ರಾಮಕೃಷ್ಣ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಈಕೆ, ಇತ್ತೀಚೆಗಷ್ಟೇ ಪರೀಕ್ಷೆ ಮುಗಿಸಿ ಮನೆಯಲ್ಲಿದ್ದಳು. ಬಾಲಕಿಯ ತಾಯಿ ಗುಲಾಬಿ ನೀಡಿದ ದೂರಿನ ಪ್ರಕಾರ, ಏಪ್ರಿಲ್ 12ರಂದು ಬೆಳಗ್ಗೆ ಸುಮಾರು 7.30ಕ್ಕೆ ಸ್ನೇಹಿತರೊಂದಿಗೆ ಪೊಳಲಿ ದೇವಸ್ಥಾನಕ್ಕೆ ಹೋಗುವುದಾಗಿ ತಂದೆಗೆ

ಕೊಣಾಜೆ : ಜಾತ್ರೆಗೆಂದು ಹೋದ ಬಾಲಕಿ ನಾಪತ್ತೆ Read More »

ಮುಖಕ್ಕೆ ಬಟ್ಟೆ ಕಟ್ಟಿ, ಮಾರಕಾಸ್ತ್ರ ‌ಹಿಡಿದು ಅನುಮಾನಾಸ್ಪದ ತಿರುಗಾಟ: ಇಬ್ಬರ ಬಂಧನ

ಕಾರ್ಕಳ: ಮಾರಕಾಸ್ತ್ರಗಳನ್ನು ಹಿಡಿದು, ಮುಖಕ್ಕೆ ಬಟ್ಟೆ ಕಟ್ಟಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಿರುಗಾಡುತ್ತಿದ್ದ ಇಬ್ಬರು ಪೊಲೀಸರ ಅತಿಥಿಗಳಾಗಿದ್ದಾರೆ. ಬಂಧಿತರನ್ನು ಕೊಪ್ಪಳದ ಗಂಗಾವತಿಯ ಹನುಮಪ್ಪ ಮತ್ತು ಕನಕಗಿರಿಯ ‌ಮರಿಯಪ್ಪ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ನಗರ ಪೊಲೀಸರು ಗಸ್ತಿನಲ್ಲಿದ್ದ ಸಮಯದಲ್ಲಿ ಕಾರ್ಕಳದ ಬಸ್ಸು ನಿಲ್ದಾಣ ಸಮೀಪದ ಹೂವಿನ ಅಂಗಡಿಯ ಎದುರಿನ ಗೂಡಂಗಡಿ ಹಿಂಭಾಗದಲ್ಲಿ ಆರೋಪಿಗಳು ಮುಖ ಮುಚ್ಚಿಕೊಂಡು, ಕೈಯಲ್ಲಿ ಚಾಕು ಹಿಡಿದು ನಿಂತಿದ್ದರು‌. ಪೊಲೀಸರನ್ನು ಕಂಡೊಡನೆ ಪರಾರಿಯಾಗಲು ಪ್ರಯತ್ನ ನಡೆಸಿದ್ದಾರೆ. ಪೊಲೀಸರ ಪ್ರಶ್ನೆಗೂ ಇವರು ಸಮರ್ಪಕ ಉತ್ತರ

ಮುಖಕ್ಕೆ ಬಟ್ಟೆ ಕಟ್ಟಿ, ಮಾರಕಾಸ್ತ್ರ ‌ಹಿಡಿದು ಅನುಮಾನಾಸ್ಪದ ತಿರುಗಾಟ: ಇಬ್ಬರ ಬಂಧನ Read More »

ವೈನ್‌ಶಾಪ್‌ನಲ್ಲಿ ಗಲಾಟೆ: ತಡೆಯಲು ಹೋದ ಯುವಕನಿಗೆ ಚಾಕು ಇರಿತ

ಶಿವಮೊಗ್ಗ: ವೈನ್‌ಶಾಪ್‌ನಲ್ಲಿ ಗಲಾಟೆ ಮಾಡುತ್ತಿದ್ದವರನ್ನು ತಡೆಯಲು ಹೋದ ಯುವಕನ ಮೇಲೆ ದುಷ್ಟರು ‌ಚೂರಿ ಇರಿದು ಗಾಯಗೊಳಿಸಿದ ಘಟನೆ ಹೊನ್ನಾಳಿ ರಸ್ತೆಯಲ್ಲಿ ನಡೆದಿದೆ. ರಾಗಿಗುಡ್ಡದ ‌ಸುನಿಲ್(27) ಎಂಬಾತನೇ ಚೂರಿ ಇರಿತಕ್ಕೆ ಒಳಗಾದ ಯುವಕ. ಸುನಿಲ್ ಮತ್ತು ಸ್ನೇಹಿತರು ವೈನ್ ಶಾಪ್‌ಗೆ ತೆರಳಿದ್ದರು. ಈ ವೇಳೆ ಅಲ್ಲಿ ಓರ್ವ ಅಪರಿಚಿತ ವ್ಯಕ್ತಿ ಸುನಿಲ್‌ನ ಸ್ನೇಹಿತರ ಜೊತೆಗೆ ಯಾವುದೋ ವಿಚಾರಕ್ಕೆ ಗಲಾಟೆ ಆರಂಭಿಸಿದ್ದ. ಪರಿಸ್ಥಿತಿ ತಿಳಿಗೊಳಿಸುವ ಉದ್ದೇಶದಿಂದ ಸುನಿಲ್ ಗಲಾಟೆ ಬಿಡಿಸಲು ಹೋಗಿದ್ದಾನೆ. ಆ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿ ಸುನಿಲ್ ಮೇಲೆ

ವೈನ್‌ಶಾಪ್‌ನಲ್ಲಿ ಗಲಾಟೆ: ತಡೆಯಲು ಹೋದ ಯುವಕನಿಗೆ ಚಾಕು ಇರಿತ Read More »

ಗರ್ಭಿಣಿಯಾಗಿದ್ದೇನೆ ಎಂದು ಹೇಳಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಿದಾ ಖಾನ್‌

ನಾಸಿಕ್‌ನ ಟಿಸಿಎಸ್‌ ಕಚೇರಿ ಮತಾಂತರ ಪ್ರಕರಣದ ಆರೋಪಿ ನಾಸಿಕ್ : ನಾಸಿಕ್‌ನ ಟಿಸಿಎಸ್ ಕಚೇರಿಯಲ್ಲಿ ಬಯಲಾಗಿರುವ ಮತಾಂತರ ಮತ್ತು ಲೈಂಗಿಕ ಕಿರುಕುಳದ ಪ್ರಕರಣದ ಸೂತ್ರಧಾಇ ಎನ್ನಲಾಗಿರುವ ಎಚ್‌ಆರ್‌ ಹೆಡ್‌ ನಿದಾ ಖಾನ್ ಬಂಧನದಿಂದ ತಪ್ಪಿಸಿಕೊಳ್ಳಲು ಗರ್ಭಿಣಿ ಎಂಬ ಅಸ್ತ್ರವನ್ನು ಬಳಸುತ್ತಿದ್ದಾಳೆ. ನಾಸಿಕ್ ಟಿಸಿಎಸ್ ಕಚೇರಿಯಲ್ಲಿ 2022ರಿಂದ 2026ರ ಅವಧಿಯಲ್ಲಿ ನಡೆದಿದೆ ಎನ್ನಲಾದ ವ್ಯವಸ್ಥಿತ ಮತಾಂತರ ಸಂಚು ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಪ್ರಕರಣದ ಪ್ರಮುಖ ಆರೋಪಿ ನಿದಾ ಖಾನ್ ಸದ್ಯ

ಗರ್ಭಿಣಿಯಾಗಿದ್ದೇನೆ ಎಂದು ಹೇಳಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಿದಾ ಖಾನ್‌ Read More »

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸಿದ ಅಪರಾಧಿಗೆ 5 ವರ್ಷ ಜೈಲು

ಮಂಗಳೂರು : ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪಿ ಟಿ.ಇ. ಜೋಸೆಫ್ ಎಂಬಾತನಿಗೆ ಮಂಗಳೂರು ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. 2009ರ ಮಾರ್ಚ್ 8ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ರಥಬೀದಿಯಲ್ಲಿ ಅಂದಾಜು 50,000 ರೂ.ಮೌಲ್ಯದ 1.500 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 60/09ರಂತೆ ಎನ್‌ಡಿಪಿಎಸ್ ಕಾಯ್ದೆಯ ಕಲಂ 8(c) ಜೊತೆಗೆ 20(b) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನಿಸಿದ ಅಪರಾಧಿಗೆ 5 ವರ್ಷ ಜೈಲು Read More »

ಮಂಗಳೂರು : ಲಾಡ್ಜ್‌ನಲ್ಲಿ ತಂಗಿದ್ದವರ ಚಿನ್ನಾಭರಣ ಕಳವು

ಮಂಗಳೂರು : ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್‌ವೊಂದರಲ್ಲಿ ಇರಿಸಿದ್ದ ಬ್ಯಾಗ್‌ನಿಂದ ಚಿನ್ನಾಭರಣ ಕಳವಾದ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಬಿಜೈ ಬಳಿಯ ಖಾಸಗಿ ಲಾಡ್ಜ್‌ನಲ್ಲಿ ತಾನು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಏ.13ರಂದು ಬೆಳಗ್ಗೆ 6.30ರಿಂದ ತಂಗಿದ್ದು, ಏ.15ರಂದು ಬೆಳಗ್ಗೆ 8.30ಕ್ಕೆ ತಣ್ಣೀರುಬಾವಿ ಬೀಚ್‌ಗೆ ಹೋಗುವ ವೇಳೆ ಬ್ಯಾಗ್‌ನಲ್ಲಿ ಲ್ಯಾಪ್‌ಟಾಪ್, ಮಕ್ಕಳ ಎರಡು ಉಂಗುರ, ಪತ್ನಿಯ ಒಂದು ಉಂಗುರ ಮತ್ತು ತನಗೆ ಸೇರಿದ ಬ್ರಾಸ್‌ಲೆಟ್‌ಗಳನ್ನಿಟ್ಟು ರೂಮ್‌ಗೆ ಲಾಕ್ ಮಾಡಿ ಕೀಯನ್ನು ಕೊಂಡು ಹೋಗಿದ್ದೆ.

ಮಂಗಳೂರು : ಲಾಡ್ಜ್‌ನಲ್ಲಿ ತಂಗಿದ್ದವರ ಚಿನ್ನಾಭರಣ ಕಳವು Read More »

ಮಂಗಳೂರು: ಲಾಠಿಚಾರ್ಜ್ ಪ್ರಕರಣದ 101 ಆರೋಪಿಗಳು ಖುಲಾಸೆ

2017ರಲ್ಲಿ ನಗರದಲ್ಲಿ ನಡೆದ ಲಾಠಿಚಾರ್ಜ್‌ ಪ್ರಕರಣ ಮಂಗಳೂರು : ನಗರ ಪೊಲೀಸ್ ಕಮಿಷನರ್ ಕಚೇರಿಯ ಮುಂದೆ 2017ರ ಏ.4ರಂದು ನಡೆದ ಲಾಠಿಚಾರ್ಜ್ ಪ್ರಕರಣದ ಎಲ್ಲ 101 ಆರೋಪಿಗಳನ್ನು ಬಿಡುಗಡೆಗೊಳಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಅಹ್ಮದ್ ಖುರೇಶಿ ಎಂಬಾತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸದೆ ದೌರ್ಜನ್ಯ ನಡೆಸಿದ್ದರು ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೆಲವು ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲು ಮುಂದಾಗಿದ್ದರು. ಈ ಸಂದರ್ಭ ಪರಿಸ್ಥಿತಿ

ಮಂಗಳೂರು: ಲಾಠಿಚಾರ್ಜ್ ಪ್ರಕರಣದ 101 ಆರೋಪಿಗಳು ಖುಲಾಸೆ Read More »

ರಾಮಾಯಣದ ವಿಕೃತ ವ್ಯಾಖ್ಯಾನ : ನಟ ಪ್ರಕಾಶ್‌ರಾಜ್‌ ವಿರುದ್ಧ ಕೇಸ್‌

ರಾಮನನ್ನು ಹಣ್ಣು ಕಳ್ಳ ಎಂದಿದ್ದ ಪ್ರಕಾಶ್‌ರಾಜ್‌ ಬೆಂಗಳೂರು: ರಾಮಾಯಣದ ಕಥೆಯನ್ನು ವಿಕೃತವಾಗಿ ವ್ಯಾಖ್ಯಾನಿಸಿದ ಖಳನಟ ಪ್ರಕಾಶ್‌ರಾಜ್‌ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆ. ಪ್ರಕಾಶ್‌ರಾಜ್ ಇತ್ತೀಚೆಗೆ ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಮ ಉತ್ತರ ಭಾರತದವನು ಹಾಗೂ ರಾವಣ ದಕ್ಷಿಣ ಭಾರತದ ಆದಿವಾಸಿ. ರಾಮ, ರಾವಣನ ತೋಟದಲ್ಲಿದ್ದ ಹಣ್ಣನ್ನು ಕಿತ್ತು ತಿಂದಿದ್ದರಿಂದ ಇಬ್ಬರ ಮಧ್ಯೆ ಕಿತ್ತಾಟ ಶುರುವಾಯಿತು ಎಂದು ಹೇಳಿ ರಾಮಾಯಣವನ್ನು ತನ್ನದೇ ಆದ ವಿಕೃತ ಕಲ್ಪನೆಯಲ್ಲಿ ವ್ಯಾಖ್ಯಾನಿಸಿದ್ದರು. ರಾಮ, ಲಕ್ಷ್ಮಣ ಹಾಗೂ ಸೀತೆ ದಕ್ಷಿಣ ಭಾರತಕ್ಕೆ ಬರುತ್ತಾರೆ. ಬಂದಾಗ

ರಾಮಾಯಣದ ವಿಕೃತ ವ್ಯಾಖ್ಯಾನ : ನಟ ಪ್ರಕಾಶ್‌ರಾಜ್‌ ವಿರುದ್ಧ ಕೇಸ್‌ Read More »

error: Content is protected !!
Scroll to Top