ಅಪರಾಧ

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ, ಓರ್ವ ಆರೋಪಿ ಬಂಧನ

ಮನೆಯ ಶೆಡ್‌ನ್ನು ಕಸಾಯಿಖಾನೆಯಾಗಿ ಪರಿವರ್ತಿಸಿ ಜಾನುವಾರು ವಧೆ ಬಂಟ್ವಾಳ : ಇಲ್ಲಿನ ಅರಳ ಗ್ರಾಮದಲ್ಲಿ ಕಾರ್ಯಾಚರಿಸುತ್ತಿದ್ದ ಅಕ್ರಮ ಕಸಾಯಿಖಾನೆಗೆ ಪೊಲೀಸರು ಭಾನುವಾರ ದಾಳಿ ಮಾಡಿ ನಾಲ್ಕು ಜಾನುವಾರುಗಳನ್ನು ರಕ್ಷಿಸಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅರಳ ಗ್ರಾಮದ ನಿವಾಸಿ ಮಯ್ಯದ್ದಿ (57) ಬಂಧಿತ ಆರೋಪಿ. ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಸಿಕ್ಕಿದ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. […]

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ, ಓರ್ವ ಆರೋಪಿ ಬಂಧನ Read More »

ಕಡಬ: ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಬಂಧನ

ಕಡಬ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ವ್ಯಕ್ತಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಡಬ ನಿವಾಸಿ ಉಮೇಶ್ ಗೌಡ ಬಂಧಿತ ಆರೋಪಿ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ ಭಾಗದ ಕೊಟ್ಟಿಗೆಯಲ್ಲಿ ನಿದ್ರಿಸುತ್ತಿದ್ದ ವೇಳೆ ಆರೋಪಿ ಅಲ್ಲಿಗೆ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ ಈ ವೇಳೆ ಸಂತ್ರಸ್ತೆ ಸಹಾಯಕ್ಕಾಗಿ ಬೊಬ್ಬೆ ಹೊಡೆದಿದ್ದು, ಮನೆಯೊಳಗಿದ್ದ ಆಕೆಯ ಪತಿ, ಮಕ್ಕಳು ಬಂದು ಆರೋಪಿಯನ್ನು ಹಿಡಿಯಲು ಯತ್ನಿಸಿದಾಗ ಆರೋಪಿ ಹಲ್ಲೆ

ಕಡಬ: ಮಹಿಳೆಗೆ ಕಿರುಕುಳ ನೀಡಿದ ಆರೋಪಿ ಬಂಧನ Read More »

ಪಾಕಿಸ್ತಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮತ್ತೆ ದಾಳಿ : ಹಲವು ಸೈನಿಕರ ಸಾವು

ಬಾಂಬ್‌ ಸ್ಫೋಟಿಸಿ ರೈಲಿನ ಹಳಿತಪ್ಪಿಸಿದ ಬಂಡುಕೋರರು ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಕ್ವೆಟ್ಟಾದಿಂದ ಪೇಶಾವರಕ್ಕೆ ಹೋಗುತ್ತಿದ್ದ ಜಾಫರ್ ಎಕ್ಸ್‌ಪ್ರೆಸ್ ಮೇಲೆ ಮತ್ತೆ ದಾಳಿ ನಡೆದಿದೆ. ಸಿಬಿ ಜಿಲ್ಲೆಯ ಬಳಿಯ ನಾಸಿರಾಬಾದ್ ಪ್ರದೇಶದಲ್ಲಿ ಜಾಫರ್ ಎಕ್ಸ್‌ಪ್ರೆಸ್ ಮೇಲೆ ಈ ದಾಳಿ ನಡೆಸಲಾಗಿದೆ. ಈ ಬಾರಿ ಬಾಂಬ್‌ ಸ್ಫೋಟದಲ್ಲಿ ಜಾಫರ್ ಎಕ್ಸ್‌ಪ್ರೆಸ್‌ನ ಹಲವಾರು ಬೋಗಿಗಳು ಹಳಿತಪ್ಪಿವೆ. ಬಲೂಚ್ ರಿಪಬ್ಲಿಕನ್ ಗಾರ್ಡ್‌ (ಬಿಆರ್‌ಜಿ) ಬಂಡುಕೋರರ ಗುಂಪು ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಈ ದಾಳಿಯಲ್ಲಿ ಹಲವಾರು ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಅವರು

ಪಾಕಿಸ್ತಾನದಲ್ಲಿ ಜಾಫರ್‌ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಮತ್ತೆ ದಾಳಿ : ಹಲವು ಸೈನಿಕರ ಸಾವು Read More »

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೇರಿಕೆ

ಬ್ಯಾಕ್ಟೀರಿಯ ಇನ್‌ಫೆಕ್ಷನ್‌ನಿಂದ ಸಾಯುತ್ತಿರುವ ಪ್ರಾಣಿಗಳು ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿಯಿರುವ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಆ ಮೂಲಕ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೆ ಏರಿಕೆ ಆಗಿದೆ. ಬ್ಯಾಕ್ಟೀರಿಯಾ ಇನ್‌ಪೆಕ್ಷನ್‌ನಿಂದಲೇ ಕೃಷ್ಣಮೃಗಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ನವೆಂಬರ್ 13ರಂದು 8, ಶನಿವಾರ ಒಂದೇ ದಿನ 20, ತಡರಾತ್ರಿ ಒಂದು, ನಿನ್ನೆ ಸಂಜೆ ಗಂಡು ಕೃಷ್ಣಮೃಗ ಸಾವನ್ನಪ್ಪಿವೆ. ಆ ಮೂಲಕ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈವರೆಗೆ 30 ಕೃಷ್ಣಮೃಗಗಳ ಸಾವಾಗಿದೆ.

ಬೆಳಗಾವಿ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 30ಕ್ಕೇರಿಕೆ Read More »

ಡಾಕ್ಟರ್‌ಗಳ ವೈಟ್‌ ಕಾಲರ್‌ ಉಗ್ರ ಜಾಲಕ್ಕೆ ಹರಿದು ಬಂದಿದೆ ಅಪಾರ ಹಣ

ಕಾರು ಸ್ಫೋಟಿಸಿಕೊಂಡು ಸತ್ತಿರುವ ಡಾ.ಉಮರ್‌ ನಬಿಯ ಖಾತೆಯಲ್ಲಿ ಲಕ್ಷಾಂತರ ರೂ. ವ್ಯವಹಾರ ಪತ್ತೆ ನವದೆಹಲಿ: ಇತ್ತೀಚೆಗೆ ಪೊಲೀಸರು ಬಯಲಿಗೆಳೆದಿರುವ ಡಾಕ್ಟರ್‌ಗಳು ಒಳಗೊಂಡಿರುವ ವೈಟ್‌ ಕಾಲರ್‌ ಉಗ್ರ ಜಾಲಕ್ಕೆ ಅಪಾರ ಪ್ರಮಾಣದಲ್ಲಿ ಹಣ ಹರಿದು ಬಂದಿರುವುದು ತನಿಖೆಯಿಂದ ಬಯಲಾಗಿದೆ. ದೆಹಲಿ ಕೆಂಪುಕೋಟೆ ಬಳಿ ಕಾರು ಸ್ಫೋಟಿಸಿಕೊಂಡು ಸತ್ತಿರುವ ಡಾ.ಉಮರ್‌ ನಬಿಯ ಒಂದು ಖಾತೆಗೆ ಸುಮಾರು 20 ಲ.ರೂ. ವರ್ಗಾಯಿಸಿದ್ದನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಈ ಹಿನ್ನೆಲೆಯಲ್ಲಿ ಇತರ ವೈಟ್‌ ಕಾಲರ್‌ ಉಗ್ರರ ಹಣಕಾಸು ವಹಿವಾಟುಗಳ ಕುರಿತು ತೀವ್ರ ತನಿಖೆ ನಡೆಯುತ್ತಿದೆ.

ಡಾಕ್ಟರ್‌ಗಳ ವೈಟ್‌ ಕಾಲರ್‌ ಉಗ್ರ ಜಾಲಕ್ಕೆ ಹರಿದು ಬಂದಿದೆ ಅಪಾರ ಹಣ Read More »

ಕೌನ್ಸೆಲಿಂಗ್‌ ಸೆಂಟರ್‌ನಲ್ಲಿ ಮಹಿಳೆಗೆ ಕಿರುಕುಳ : ಆರೋಪಿ ಸೆರೆ

ಉಡುಪಿ: ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿರುವ ‘ಸುನಂದಾ ವೆಲ್ನೆಸ್ ಸೆಂಟರ್’ನಲ್ಲಿ ಕೌನ್ಸೆಲಿಂಗ್‌ಗೆ ಬಂದಿದ್ದ ಮಹಿಳೆಯ ದೇಹ ಸ್ಪರ್ಶ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪಿ ನಿರಂಜನ ಶೇಖರ ಶೆಟ್ಟಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದಾಂಪತ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆ ಕೌನ್ಸಿಲಿಂಗ್‌ಗಾಗಿ ಕಂಕಣಗುತ್ತು ಕಂಪೌಂಡ್‌ನಲ್ಲಿರುವ ವೆಲ್ನೆಸ್ ಸೆಂಟರ್‌ಗೆ ಭೇಟಿ ನೀಡಿದ್ದರು. ಈ ವೇಳೆ ಕೌನ್ಸೆಲಿಂಗ್‌ ಮಾಡುತ್ತಿದ್ದ ನಿರಂಜನ ಶೇಖರ ಶೆಟ್ಟಿ ದೈಹಿಕ ಸ್ಪರ್ಶ ಮಾಡಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿದೆ. ಘಟನೆ ಬಳಿಕ

ಕೌನ್ಸೆಲಿಂಗ್‌ ಸೆಂಟರ್‌ನಲ್ಲಿ ಮಹಿಳೆಗೆ ಕಿರುಕುಳ : ಆರೋಪಿ ಸೆರೆ Read More »

ವಿದ್ಯಾರ್ಥಿನಿಗೆ ಕಿರುಕುಳ : ಉಪನ್ಯಾಸಕನ ವಿರುದ್ಧ ಎಫ್‌ಐಆರ್‌

ಹೆಚ್ಚು ಮಾರ್ಕ್‌ ಕೊಡುತ್ತೇನೆ ಎಂದು ಕಿರುಕುಳ ನೀಡುತ್ತಿದ್ದ ಇಂಜಿನಿಯರಿಂಗ್‌ ಕಾಲೇಜು ಉಪನ್ಯಾಸಕ ಮೈಸೂರು : ನಗರದ ಪ್ರತಿಷ್ಠಿತ ಇಂಜಿನಿಯರಿಂಗ್​​ ಕಾಲೇಜಿನಲ್ಲಿ ಉಪನ್ಯಾಸಕನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತು ಕೇಸ್‌ ದಾಖಲಾಗಿದೆ. ಹೆಚ್ಚು ಮಾರ್ಕ್ಸ್ ನೀಡ್ತೇನೆ, ಒಳ್ಳೆಯ ಕೆಲಸ ಕೊಡಿಸುತ್ತೇನೆ. ಹೊರಗಡೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಎಂದು ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿನಿ ದೂರು ನೀಡಿದ್ದು, ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಉಪನ್ಯಾಸಕ ನೀಡುತ್ತಿದ್ದ ಲೈಂಗಿಕ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ಮಹಿಳಾ ಉಪನ್ಯಾಸಕರ

ವಿದ್ಯಾರ್ಥಿನಿಗೆ ಕಿರುಕುಳ : ಉಪನ್ಯಾಸಕನ ವಿರುದ್ಧ ಎಫ್‌ಐಆರ್‌ Read More »

ಲಂಚ ಪಡೆದು ಪ್ರಶ್ನೆ ಕೇಳಿದ ಪ್ರಕರಣ : ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿ

ಉದ್ಯಮಿಯಿಂದ ಲಂಚ ಪಡೆದು ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಟಿಎಂಸಿ ಸಂಸದೆ ನವದೆಹಲಿ : ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ವಿರುದ್ಧವಿರುವ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಹಣ ಕೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ನಾಲ್ಕು ವಾರಗಳಲ್ಲಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಲೋಕಪಾಲವು ಸಿಬಿಐಗೆ ಅನುಮತಿ ನೀಡಿದೆ. ಇದರೊಂದಿಗೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣನಗರ ಕ್ಷೇತ್ರದ ಸಂಸದೆ ವಿರುದ್ಧ ಸಿಬಿಐ ಕಾನೂನು ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ನವೆಂಬರ್ 12ರಂದು ಸಭೆ ನಡೆಸಿದ

ಲಂಚ ಪಡೆದು ಪ್ರಶ್ನೆ ಕೇಳಿದ ಪ್ರಕರಣ : ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿ Read More »

ಎಸ್‌ಐಟಿ ಅಧಿಕಾರಿಗಳ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ ಜಯಂತ್‌ ಟಿ.

ಜಿತೇಂದ್ರ ದಯಾಮ, ಸೈಮನ್‌, ಆರ್‌.ಜಿ.ಮಂಜುನಾಥ ಮತ್ತಿತರರ ವಿರುದ್ಧ ದೂರು ಬೆಳ್ತಂಗಡಿ: ಎಸ್‌ಐಟಿ ತನ್ನ ಮೇಲೆ ಮಾಡಿ, ಬಲವಂತವಾಗಿ ಹೇಳಿಕೆ ಪಡೆದುಕೊಂಡಿದೆ ಎಂದು ಆರೋಪಿಸಿ ರಾಜ್ಯಪಾಲರು ಮತ್ತು ಪೊಲೀಸ್‌ ಮಹಾವರಿಷ್ಠರಿಗೆ ದೂರು ನೀಡಿದ್ದ ಜಯಂತ್‌ ಟಿ. ಈಗ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ. ದೂರು ನೀಡಿದ್ದಾರೆ. ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್‌ಸ್ಪೆಕ್ಟ‌ರ್ ಮಂಜುನಾಥ

ಎಸ್‌ಐಟಿ ಅಧಿಕಾರಿಗಳ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ ಜಯಂತ್‌ ಟಿ. Read More »

ಬಿ.ಸಿ.ರೋಡ್‌ : ಕಾರು ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು

ಬಂಟ್ವಾಳ : ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ಬರುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಬಿ.ಸಿ.ರೋಡ್‌ : ಕಾರು ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು Read More »

error: Content is protected !!
Scroll to Top