ಅಪರಾಧ

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ

74 ನಾಪತ್ತೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಿಸಿ ತನಖೆ ನಡೆಸಲು ಆಗ್ರಹ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ಸಂಭವಿಸಿದ್ದು, ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿ ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲು ಮನವಿ ಮಾಡಿದ್ದಾರೆ. ಮಾಹಿತಿಗಳ ಪ್ರಕಾರ 74 ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ನಾಪತ್ತೆ ಪ್ರಕರಣಗಳನ್ನು ಎಫ್‌ಐಆರ್‌ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಪಿಐಎಲ್‌ನಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಮೃತ ದೇಹಗಳನ್ನು […]

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ Read More »

ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ

ಕೋಲಾರ: ಮಗಳನ್ನು ಕೊಂದ ತಂದೆಯೊಬ್ಬ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ. ಐದು ವರ್ಷದ ಪುತ್ರಿ ನಿಹಾರಿಕಾಳನ್ನು ಕೊಂದು ತಂದೆ ಲೋಕೇಶ್ (37) ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಕೌಟುಂಬಿಕ ಕಲಹದಿಂದ ಲೋಕೇಶ್ ಅವರ ಪತ್ನಿ ಮನೆ ಬಿಟ್ಟು ನಾಪತ್ತೆಯಾಗಿದ್ದರು‌. ಇದರಿಂದ ನೊಂದ ಲೋಕೇಶ್ ಪುತ್ರಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆ ಬಳಿಕ ಶವವನ್ನು ಕಾರಿನಲ್ಲಿಟ್ಟು ಲೋಕೇಶ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಮುಳಬಾಗಿಲು ಗ್ರಾಮಾಂತರ

ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ Read More »

ಪೊಲೀಸ್‌ ಠಾಣೆಯಲ್ಲಿ ಒಂದು ತಿಂಗಳಿಂದ ನಿಂತಿದ್ದ ಕಾರಿನಲ್ಲಿ ಕೋಟಿಗಟ್ಟಲೆ ಹಣ, ಚಿನ್ನ ಪತ್ತೆ

ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ವಶಪಡಿಸಿಕೊಳ್ಳಲಾಗಿದ್ದ ಕಾರು ಚಿಕ್ಕಮಗಳೂರು : ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸರು ವಶಪಡಿಸಿಕೊಂಡು ಪೊಲೀಸ್‌ ಠಾಣೆಯಲ್ಲಿ ಇಟ್ಟಿದ್ದ ಕಾರಿನಲ್ಲಿ ಕೋಟಿಗಟ್ಟಲೆ ಬೆಲೆಬಾಳುವ ಒಡವೆ ಮತ್ತು ಹಣ ಪತ್ತೆಯಾಗಿರುವ ಘಟನೆ ಕೊಪ್ಪದಲ್ಲಿ ನಡೆದಿದೆ. ವಿಶೇಷವೆಂದರೆ ಈ ಕಾರು ಒಂದು ತಿಂಗಳಿಂದ ಪೊಲೀಸ್‌ ಠಾಣೆಯ ಆವರಣದಲ್ಲಿತ್ತು. ಮಾಜಿ ಶಿಕ್ಷಣ ‌ಸಚಿವ ದಿ.ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ಸಂಬಂಧ ನೇಪಾಳಿ ಗ್ಯಾಂಗನ್ನು ಸಾಂಗ್ಲಿ ಪೊಲೀಸರ ನೆರವಿನಿಂದ ಕೊಪ್ಪದ ಪೊಲೀಸರು ಬಂಧಿಸಿದ್ದರು. ಈ ವೇಳೆ ಆರೋಪಿಗಳು ಎಸ್ಕೇಪ್​ ಆಗಲು

ಪೊಲೀಸ್‌ ಠಾಣೆಯಲ್ಲಿ ಒಂದು ತಿಂಗಳಿಂದ ನಿಂತಿದ್ದ ಕಾರಿನಲ್ಲಿ ಕೋಟಿಗಟ್ಟಲೆ ಹಣ, ಚಿನ್ನ ಪತ್ತೆ Read More »

ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ನೀಡಿದ ಮಹಿಳೆಗೆ 26 ಸಾವಿರ ರೂ. ದಂಡ

ಮಂಗಳೂರು : ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ಚಲಾಯಿಸಲು ನೀಡಿದ ತಾಯಿಗೆ ಮಂಗಳೂರಿನ 4ನೇ ಜೆ.ಎಂ.ಎಪ್.ಸಿ ನ್ಯಾಯಾಲಯ 26,000 ರೂ. ದಂಡ ವಿಧಿಸಿ ಆದೇಶಿದೆ. ಕಳೆದ ಅಕ್ಟೋಬರ್ 10ರಂದು ಬೈಕಂಪಾಡಿಯಲ್ಲಿ ಹತಿಜಮ್ಮ ಎಂಬ ಮಹಿಳೆ ತನ್ನ ಅಪ್ರಾಪ್ತ ಮಗನಿಗೆ ಸ್ಕೂಟಿ ಚಲಾಯಿಸಲು ನೀಡಿದ್ದಾರೆ. ಈ ಬಗ್ಗೆ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನವೆಂಬರ್ 5ರಂದು ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 4ನೇ ಜೆ.ಎಂ.ಎಪ್.ಸಿ ನ್ಯಾಯಾಲಯ, ಅಪ್ರಾಪ್ತ ಬಾಲಕನಿಗೆ ಸ್ಕೂಟಿ ಚಲಾಯಿಸಲು ನೀಡಿದ್ದಕ್ಕೆ ವಾಹನದ ಮಾಲೀಕರಿಗೆ

ಅಪ್ರಾಪ್ತ ವಯಸ್ಸಿನ ಮಗನಿಗೆ ಸ್ಕೂಟಿ ನೀಡಿದ ಮಹಿಳೆಗೆ 26 ಸಾವಿರ ರೂ. ದಂಡ Read More »

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಎಫ್‌ಬಿ ಖಾತೆ

ಮಂಗಳೂರು: ದುಷ್ಕರ್ಮಿಯೊಬ್ಬ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ‌ನಕಲಿ ಖಾತೆ ತೆರೆದಿರುವ ಬಗ್ಗೆ ವರದಿಯಾಗಿದೆ. ಕೆಲ ದಿನಗಳ ಹಿಂದೆಯೇ ಈ ಖಾತೆ ತೆರೆಯಲಾಗಿದ್ದು, ಅದರಲ್ಲಿ ಈಗಾಗಲೇ ಕೆಲವು ಮಂದಿ ಸ್ನೇಹಿತರಾಗಿರುವುದು ‌ಸಹ ಕಂಡು ಬಂದಿದೆ. ಈ ಸಂಬಂಧ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ತಕ್ಷಣವೇ ಫೇಸ್‌ಬುಕ್ ಸಂಸ್ಥೆಗೆ ರಿಪೋರ್ಟ್ ಮಾಡಿದ್ದಾಗಿ ತಿಳಿದು ಬಂದಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಎಫ್‌ಬಿ ಖಾತೆ Read More »

ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಅವಹೇಳನ: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು ದಾಖಲು

ಬೆಂಗಳೂರು: ರಾಜ್ಯ ಸರ್ಕಾರ, ಸಿ. ಎಂ. ಸಿದ್ದರಾಮಯ್ಯ, ಡಿ.ಸಿ.ಎಂ. ಡಿ. ಕೆ. ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಚಿತ್ರಗಳನ್ನು ಅವಹೇಳನಕಾರಿ ಎಂಬಂತೆ ಬಳಸಿದ ನ್ಯೂಸ್ ಫ್ಯಾಕ್ಟರಿ-09 ಎಂಬ ಯೂಟ್ಯೂಬ್ ಚಾನೆಲ್ ವಿರುದ್ಧ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಎಎಸ್‌ಐ ಅಸ್ಮಾ ಬೇಗಂ ಅವರು ನೀಡಿದ ದೂರಿನನ್ವಯ ಪ್ರಕರಣ ದಾಖಲು ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ

ಸಿಎಂ, ಡಿಸಿಎಂ, ಶಿಕ್ಷಣ ಸಚಿವರ ಅವಹೇಳನ: ಯೂಟ್ಯೂಬ್ ಚಾನೆಲ್ ವಿರುದ್ಧ ದೂರು ದಾಖಲು Read More »

ಗೋ ಅಕ್ರಮ ಸಾಗಾಟ ಆರೋಪಿಯ ಮನೆ ಮುಟ್ಟುಗೋಲು

ಉಳ್ಳಾಲದಲ್ಲಿರುವ ಮನೆಯನ್ನು ಜಪ್ತಿ ಮಾಡಿದ ಬೆಳ್ತಂಗಡಿ ಪೊಲೀಸರು ಬೆಳ್ತಂಗಡಿ : ಕಾರಿನಲ್ಲಿ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ. ‌ನ.2ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು KA-19-MC-5862 ನಂಬರಿನ ರಿಟ್ಜ್ ಕಾರಿನಲ್ಲಿ ಸಾಗಾಟ ಮಾಡುವಾಗ ಉಳ್ಳಾಲ ತಾಲೂಕಿನ ಮಹಮ್ಮದ್ ಖಲೀಲ್ ಅಲಿಯಾಸ್‌ ತೌಸೀಫ್ (38) ಮತ್ತು ಮಹಮ್ಮದ್ ಸಿನಾನ್(25) ಸಿಕ್ಕಿ ಬಿದ್ದಿದ್ದರು.

ಗೋ ಅಕ್ರಮ ಸಾಗಾಟ ಆರೋಪಿಯ ಮನೆ ಮುಟ್ಟುಗೋಲು Read More »

ಮಂಗಳೂರು : ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ಸಮುದ್ರಕ್ಕೆ ಜಿಗಿಯಲು ಬಂದು ಜನರನ್ನು ನೋಡಿ ವಾಪಸು ಮನೆಗೆ ಹೋಗಿ ನೇಣಿಗೆ ಶರಣಾಗಲು ಯತ್ನ ಪೊಲೀಸರ ಸಕಾಲಿಕ ಕ್ರಮದಿಂದ ಉಳಿದ ತಂದೆ-ಮಗಳ ಜೀವ ಮಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ಸೋಮವಾರ ಮುಸ್ಸಂಜೆ ವೇಳೆಗೆ ಸಂಭವಿಸಿದೆ. ಕೂಳೂರು ಪಂಜಿಮೊಗರು ಅಂಬಿಕಾ ನಗರ ನಿವಾಸಿ ರಾಜೇಶ್(35) ಮತ್ತವರ ನಾಲ್ಕು ವರ್ಷದ ಪುತ್ರಿಯನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪತ್ನಿಯೊಂದಿಗೆ ಜಗಳ ಮಾಡಿಕೊಂಡಿದ್ದ ರಾಜೇಶ್

ಮಂಗಳೂರು : ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು Read More »

ಸುಳ್ಯ : ಬೆನಿಫಿಟ್‌ ಸ್ಕೀಂ ಹೆಸರಿನಲ್ಲಿ ವಂಚಿಸಿದವರಿಗೆ ಜೈಲು ಶಿಕ್ಷೆ

ಶ್ರೀ ತತ್ವಮಸಿ ಹೆಸರಿನಲ್ಲಿ ಸಂಸ್ಥೆ ತೆರೆದು ಕೋಟಿಗಟ್ಟಲೆ ರೂ. ಗುಳುಂ ಮಾಡಿದ ಪ್ರಕರಣ ಸುಳ್ಯ : ಸುಳ್ಯದಲ್ಲಿ ಶ್ರೀ ತತ್ವಮಸಿ ಚಾರಿಟೇಬಲ್ ಟ್ರಸ್ಟ್ (ಆರ್) ಮತ್ತು ಶ್ರೀ ತತ್ವಮಸಿ ಎಂಟರ್‌ಪ್ರೈಸಸ್ (ಆರ್) ಹೆಸರಿನಲ್ಲಿ ‘ಬೆನಿಫಿಟ್ ಸ್ಕೀಮ್’ ಮೂಲಕ ಸಾರ್ವಜನಿಕರನ್ನು ವಂಚಿಸಿದ ಆರೋಪದ ಮೇಲೆ ಮೂವರು ವ್ಯಕ್ತಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಅಪರಾಧಿಗಳನ್ನು ಕೆ.ಪಿ. ಗಣೇಶ್, ಗೀತಾ ಕೆ.ಎಸ್. ಮತ್ತು ಭಾರತಿ ಎಂದು ಗುರುತಿಸಲಾಗಿದೆ. ಕೆ.ಪಿ. ಕೃಷ್ಣಪ್ಪ ಗೌಡ, ಗೀತಾ ಗಣೇಶ್, ಎನ್.ಇ.ವೈ. ಕಮಲಾಕ್ಷ ಮತ್ತು ಕೆ.

ಸುಳ್ಯ : ಬೆನಿಫಿಟ್‌ ಸ್ಕೀಂ ಹೆಸರಿನಲ್ಲಿ ವಂಚಿಸಿದವರಿಗೆ ಜೈಲು ಶಿಕ್ಷೆ Read More »

ಹಿಂದೂ ದೇವರುಗಳ ಅವಹೇಳನ: ಬಾಲಕಿ ಮತ್ತಾಕೆಯ ಪೋಷಕರು ಅರೆಸ್ಟ್

ಲಕ್ನೋ: ಉತ್ತರ ಪ್ರದೇಶದಲ್ಲಿ ಹಿಂದೂ ದೇವತೆಗಳನ್ನು ಅವಹೇಳನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ‌ಮಾಡಿದ ಬಾಲಕಿಯನ್ನು ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದ್ದು, ಆಕೆಯ ಪೋಷಕರನ್ನು ಬಂಧಿಸಲಾಗಿದೆ. ತನ್ನ ಇನ್ಸ್ಟಾಗ್ರಾಮ್ ಫಾಲೇವರ್ಸ್ ಸಂಖ್ಯೆ ಹೆಚ್ಚಬೇಕು ಎನ್ನುವ ಉದ್ದೇಶದಿಂದ ಬಾಲಕಿ ಈ ಕೃತ್ಯ ಎಸಗಿದ್ದಳು. ಒಂದು ನಿಮಿಷದ ವಿಡಿಯೋದಲ್ಲಿ ಆಕೆ ಹಿಂದೂ ದೇವರನ್ನು ಟೀಕೆ ಮಾಡಿದ್ದಳು. ಅವಳ ಈ ಕೃತ್ಯಕ್ಕೆ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ, ಆಕೆಯ ಮತ್ತು ಅವಳ ಕುಟುಂಬದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ದೂರು

ಹಿಂದೂ ದೇವರುಗಳ ಅವಹೇಳನ: ಬಾಲಕಿ ಮತ್ತಾಕೆಯ ಪೋಷಕರು ಅರೆಸ್ಟ್ Read More »

error: Content is protected !!
Scroll to Top