ಅಪರಾಧ

ರೌಡಿ ತುಕ್ಕ ನೌಫಾಲ್‌ ಆತ್ಮಹತ್ಯೆ ಮಾಡಿಕೊಂಡನೇ? : ಕೇರಳ ಪೊಲೀಸರ ಅನುಮಾನ

ಹತ್ಯೆಯಲ್ಲ ಎಂದು ದೃಢಪಡಿಸಿದ ಪೋಸ್ಟ್‌ಮಾರ್ಟಂ ವರದಿ; ರೈಲು ಡಿಕ್ಕಿಯಾಗಿರುವ ಸಾಧ್ಯತೆ ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯ ನಟೋರಿಯಸ್ ರೌಡಿಶೀಟರ್ ಬಜಾಲ್‌ ಟೋಪಿ ನೌಫಾಲ್ ಅಲಿಯಾಸ್‌ ತುಕ್ಕ ನೌಫಾಲ್‌ (42) ಕೊಲೆಯಾಗಿದ್ದಲ್ಲ. ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾಗಿ ಮೃತದೇಹದ ಪೋಸ್ಟ್‌ಮಾರ್ಟಂ ನಡೆಸಿದ ಕಾಸರಗೋಡಿನ ವೈದ್ಯರು ಮಾಹಿತಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಮಂಜೇಶ್ವರ ಠಾಣೆ ವ್ಯಾಪ್ತಿಯ ಉಪ್ಪಳ ರೈಲ್ವೆ ಗೇಟ್ ಬಳಿಯಲ್ಲಿ ನೌಫಾಲ್ ಮೃತದೇಹ ಬಿದ್ದುಕೊಂಡಿತ್ತು. ನೌಫಾಲ್ ಮಂಗಳೂರಿನ ವಿವಿಧ ಠಾಣೆಗಳಲ್ಲಿ 20ಕ್ಕೂ ಹೆಚ್ಚು ಕೇಸುಗಳನ್ನು ಎದುರಿಸುತ್ತಿದ್ದುದರಿಂದ ಯಾರೋ ಮಾತುಕತೆಗೆ ಕರೆದು […]

ರೌಡಿ ತುಕ್ಕ ನೌಫಾಲ್‌ ಆತ್ಮಹತ್ಯೆ ಮಾಡಿಕೊಂಡನೇ? : ಕೇರಳ ಪೊಲೀಸರ ಅನುಮಾನ Read More »

ಖ್ಯಾತ ಸೀರಿಯಲ್‌ ನಟಿಗೆ ಕಿರುಕುಳ : ಆರೋಪಿ ಅರೆಸ್ಟ್‌

ಸೋಷಿಯಲ್‌ ಮೀಡಿಯಾದಲ್ಲಿ ಅಸಭ್ಯ ವಿಡಿಯೋ ಕಳುಹಿಸಿ ವಿಕೃತಿ ಬೆಂಗಳೂರು : ಖ್ಯಾತ ಸೀರಿಯಲ್‌ ನಟಿಯೊಬ್ಬರಿಗೆ ಕಾಮುಕನೊಬ್ಬ ಕೊಲೆಯಾದ ರೇಣುಕಾಸ್ವಾಮಿ ರೀತಿ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ವಿಡಿಯೋ ಕಳಿಸಿ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ತೆಲುಗು ಹಾಗೂ ಕನ್ನಡ ಧಾರವಾಹಿಗಳಲ್ಲಿ ಸಂತ್ರಸ್ತೆ ನಟಿಸಿ ಪ್ರಸಿದ್ಧರಾಗಿರುವ ನಟಿಗೆ ಫೇಸ್‌ಬುಕ್‌ನಲ್ಲಿ ಗುಪ್ತಾಂಗದ ವಿಡಿಯೋ ಕಳಿಸಿ ಕಿರುಕುಳ ನೀಡಿದ್ದಾನೆ. ಆರೋಪಿ ಕಳೆದ 3 ತಿಂಗಳಿನಿಂದ ನಟಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಆರೋಪಿ ಮೊದಲು ಫೇಸ್‌ಬುಕ್‌ನಲ್ಲಿ ʻNAVEENZʼ ಎಂಬ ಖಾತೆಯಿಂದ ಫ್ರೆಂಡ್

ಖ್ಯಾತ ಸೀರಿಯಲ್‌ ನಟಿಗೆ ಕಿರುಕುಳ : ಆರೋಪಿ ಅರೆಸ್ಟ್‌ Read More »

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 32 ಲ. ರೂ. ವಂಚನೆ

ಮಂಗಳೂರು : ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ.9ರಂದು ಫೇಸ್‌ಬುಕ್ ನೋಡುತ್ತಿರುವಾಗ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ಸ್ ರಿಕ್ವೆಸ್ಟ್ ಬಂದಿದೆ. ಅದನ್ನು ಅಕ್ಸೆಪ್ಟ್ ಮಾಡಿ ಅವರೊಂದಿಗೆ ಚಾಟ್ ಮಾಡಿದ್ದಾರೆ. ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು, ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿದ್ದಾಳೆ. ಇದರಿಂದ ಆಸಕ್ತಿಗೊಂಡು ಟ್ರೇಡಿಂಗ್‌ನಲ್ಲಿ ಕೆಲಸ ಮಾಡಲು ಒಪ್ಪಿದ ದೂರುದಾರಿಗೆ

ಆನ್‌ಲೈನ್‌ ಟ್ರೇಡಿಂಗ್‌ ನೆಪದಲ್ಲಿ 32 ಲ. ರೂ. ವಂಚನೆ Read More »

ಬೀಡಿ ಕಂಪನಿ ಮಾಲಕನನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಮಗ

ಕುಡಿತದ ವಿಚಾರವಾಗಿ ನಡೆದ ತಂದೆ-ಮಗನ ಜಗಳ ಇಬ್ಬರ ಸಾವಿನಲ್ಲಿ ಅಂತ್ಯ ನವದೆಹಲಿ : ಭಾರತದ ಪ್ರಮುಖ ಬೀಡಿ ಬ್ರ್ಯಾಂಡ್ ದಿನೇಶ್ ಬೀಡಿಯ ಮಾಲೀಕರಾಗಿದ್ದಸುರೇಶ್ ಚಂದ್ ಎಂಬವರನ್ನು ಅವರ ಮಗನೇ ಗುಂಡು ಕೊಲೆ ಮಾಡಿ ಬಳಿಕ ತಾನೂ ಅದೇ ರಿಲಾಲ್ವರ್‌ನಿಂದ ಗುಂಡಿಕ್ಕಿಕೊಂಡು ಅತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಮಥುರಾದ ವೃಂದಾವನದಲ್ಲಿ ನಡೆದಿದೆ. ಕುಡಿತದ ವಿಚಾರವಾಗಿ ತಂದೆ ಮತ್ತು ಮಗನ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸುರೇಶ್ ಚಂದ್ ಅಗರ್ವಾಲ್ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅವರ ಮಗ ನರೇಶ್ ಅಗರ್ವಾಲ್​ಗೆ

ಬೀಡಿ ಕಂಪನಿ ಮಾಲಕನನ್ನು ಗುಂಡಿಕ್ಕಿ ಸಾಯಿಸಿ ಆತ್ಮಹತ್ಯೆ ಮಾಡಿಕೊಂಡ ಮಗ Read More »

ಕೆ-ಸೆಟ್‌ ಪರೀಕ್ಷೆ ಬರೆಯಲು ಬಂದ ಮಹಿಳೆಯರ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ

ರಾಜ್ಯಾದ್ಯಂತ ಆಕ್ರೋಶ ವ್ಯಕ್ತ; ಧಾರ್ಮಿಕ ಭಾವನೆಗೆ ಘಾಸಿ ಮಾಡಿದ ಆರೋಪ ಬೆಂಗಳೂರು: ನಿನ್ನೆ ರಾಜ್ಯಾದ್ಯಂತ ನಡೆದ ಕೆ-ಸೆಟ್ ಪರೀಕ್ಷೆ ಬರೆಯಲು ಬಂದ ಮಹಿಳೆಯರ ಕಿವಿಯೋಲೆ, ಮೂಗುತಿಯನ್ನು ಬಿಚ್ಚಿಸಿರುವ ಕ್ರಮ ವಿವಾದದ ಸ್ವರೋಪ ಪಡೆದುಕೊಂಡಿದೆ. ಕೆಇಎ ಮಾಡಿಕೊಂಡ ಈ ಯಡವಟ್ಟಿಗೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಇದಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕೆಲವು ತಿಂಗಳ ಹಿಂದೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ ರಾಜ್ಯವ್ಯಾಪಿ ಸುದ್ದಿಯಾಗಿತ್ತು. ಪ್ರಕರಣಕ್ಕೆ

ಕೆ-ಸೆಟ್‌ ಪರೀಕ್ಷೆ ಬರೆಯಲು ಬಂದ ಮಹಿಳೆಯರ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ Read More »

ಮೀನು ಮಾರಾಟಗಾರರ ನಡುವೆ ಹೊಡೆದಾಟ : ಕೇಸ್‌ ದಾಖಲು

ಕಡಬ: ಮೀನು ಮಾರಾಟದ ವಿಚಾರವಾಗಿ ಎರಡು ಅಂಗಡಿಯವರ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಪರಸ್ಪರ ಹೊಡೆದಾಡಿಕೊಂಡ ಘಟನೆ ಕಡಬ ಗ್ರಾಮದ ಸಂತೆಕಟ್ಟೆ ಬಳಿ ಮೀನು ಮಾರುಕಟ್ಟೆಯಲ್ಲಿ ಶನಿವಾರ ನಡೆದಿದೆ. ಇದರ ವಿಡಿಯೋ ವೈರಲ್ ಆದ ಬಳಿಕ ಪೊಲೀಸರ ಗಮನಕ್ಕೆ ಬಂದಿದ್ದು, ಇದನ್ನು ಆಧರಿಸಿ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂತೆಕಟ್ಟೆ ಬಳಿಯ ಮೀನು ಮಾರುಕಟ್ಟೆಯಲ್ಲಿ ಶನಿವಾರ ಮೀನು ಮಾರಾಟದ ವಿಚಾರವಾಗಿ ರಾಜು ಮ್ಯಾಥ್ಯೂ ಹಾಗೂ ಆದಂ ಎಂಬ ಎರಡು ಅಂಗಡಿಯವರ ನಡುವೆ ಮಾತಿನ ಚಕಮಕಿ ನಡೆದಿದ್ದು,

ಮೀನು ಮಾರಾಟಗಾರರ ನಡುವೆ ಹೊಡೆದಾಟ : ಕೇಸ್‌ ದಾಖಲು Read More »

ನಾಲೆಯಲ್ಲಿ ನೀರುಪಾಲಾದ ನಾಲ್ವರು ಮಕ್ಕಳು : ಇಬ್ಬರ ಮೃತದೇಹ ಪತ್ತೆ

ಒಬ್ಬಳನ್ನು ರಕ್ಷಿಸಲು ಹೋಗಿ ಇತರ ಮೂವರು ನೀರುಪಾಲು ಬೆಂಗಳೂರು : ಬಟ್ಟೆ ತೊಳೆಯುವಾಗ ಕಾಲು ಜಾರಿ ನಾಲೆಗೆ ಬಿದ್ದ ಬಾಲಕಿಯನ್ನು ರಕ್ಷಿಸಲು ನೀರಿಗೆ ಧುಮುಕಿದ ನಾಲ್ವರು ಮಕ್ಕಳು ನೀರುಪಾಲಾದ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ. ನೀರಿನಲ್ಲಿ ಮುಳುಗಿದ್ದ ಓರ್ವ ಬಾಲಕಿಯನ್ನು ನಿನ್ನೆಯೇ ರಕ್ಷಣೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಆಯಿಷಾ (14) ಮೃತಪಟ್ಟಿದ್ದಾಳೆ. ಇಂದು ಆಫ್ರಿನ್ (13) ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿರುವ ಹನಿ (14),

ನಾಲೆಯಲ್ಲಿ ನೀರುಪಾಲಾದ ನಾಲ್ವರು ಮಕ್ಕಳು : ಇಬ್ಬರ ಮೃತದೇಹ ಪತ್ತೆ Read More »

ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಎಎಸ್‌ಐ ಸಾವು

ಸಹೋದ್ಯೋಗಿಯ ವಿದಾಯಕೂಟದಲ್ಲಿ ಹಾಡುತ್ತಿರುವಾಗಲೇ ಹೃದಯಾಘಾತ ಉಡುಪಿ : ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ಎಎಸ್ಸೈ) ವಿಶ್ವನಾಥ್ (56) ಭಾನುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಹಾಡುತ್ತಿರುವಾಗ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಇವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ವಿಶ್ವನಾಥ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ಇವರು ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದರು.

ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಎಎಸ್‌ಐ ಸಾವು Read More »

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ

ಮೆರವಣಿಗೆಯಲ್ಲಿ ಸಾಗುತ್ತಿದ್ದವರಿಗೆ ಯದ್ವಾತದ್ವಾ ಇರಿದು ಪಲಾಯನ ಮಾಡಿದ ದುಷ್ಕರ್ಮಿಗಳು ಬೆಂಗಳೂರು : ಕನ್ನಡ ರಾಜ್ಯೋತ್ಸವ ರೂಪಕಗಳ ಮೆರವಣಿಗೆ ವೇಳೆ ಬೆಳಗಾವಿ ನಗರದಲ್ಲಿ ಹಿಂಸಾಚಾರ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದು ಪಲಾಯನ ಮಾಡಿದ್ದಾರೆ. ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಸೋಇಚ್ಛೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಗುರುನಾಥ ವಕ್ಕೂಂದ, ಸಚೀನ ಕಾಂಬಳೆ, ಲೋಕೇಶ್ ಬೆಟಗೇರಿ, ಮಹೇಶ್,

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ : ಇಬ್ಬರ ಸ್ಥಿತಿ ಗಂಭೀರ Read More »

ಭಯೋತ್ಪಾದನೆಗೆ ನೆರವು : ಮೌಲ್ವಿ ಸಹಿತ ಐವರ ಸೆರೆ

ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ಶಂಕೆಯಲ್ಲಿ ದಾಳಿ ನವದೆಹಲಿ : ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಐವರು ಶಂಕಿತರನ್ನು ರಾಜಸ್ಥಾನ ರಾಜಸ್ಥಾನ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಬಂಧಿತ ಮೌಲ್ವಿ ಅಯೂಬ್, ಮಸೂದ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಕರೌಲ್‌ನಲ್ಲಿ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಬಂಧಿತರಲ್ಲಿ ಒಬ್ಬನಾದ ಜೋಧ್‌ಪುರದ ಚೋಖಾದ ಅರೇಬಿಯಾ ಮದರಸಾದ ಧರ್ಮಗುರು ಆಯೂಬ್‌ನಿಂದ ಕೆಲವು ದಾಖಲೆಗಳನ್ನು ಎಟಿಎಸ್‌ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆತ 13 ವರ್ಷಗಳಿಂದ ಮದರಸಾದಲ್ಲಿ ಕೆಲಸ

ಭಯೋತ್ಪಾದನೆಗೆ ನೆರವು : ಮೌಲ್ವಿ ಸಹಿತ ಐವರ ಸೆರೆ Read More »

error: Content is protected !!
Scroll to Top