ಅಪರಾಧ

ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ತೀವ್ರ ಅಸ್ವಸ್ಥನಾದ ಆರೋಪಿಗೆ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಮಂಗಳೂರು: ವಿಟ್ಲದ ಬೋಳಂತೂರಿನ ಸಮೀಪ ನಾರ್ಶದ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿ ಎಂಬವರ ಮನೆಯಲ್ಲಿ ಕಳೆದ ಡಿಸೆಂಬರ್‌ನಲ್ಲಿ ಇ.ಡಿ. ಅಧಿಕಾರಿಗಳ ಸೋಗಿನಲ್ಲಿ ದರೋಡೆ ನಡೆಸಿದ ತಂಡದ ಇನ್ನೋರ್ವ ಸದಸ್ಯನನ್ನು ಪೊಲೀಸರು ಮುಂಬಯಿಯಲ್ಲಿ ಬಂಧಿಸಿ ಕರೆತಂದಿದ್ದಾರೆ. ಕೇರಳ ಮೂಲದ ಸಚಿನ್‌ ಸೆರೆಯಾಗಿರುವ ಆರೋಪಿ. ಬಂಧನವಾದ ಬೆನ್ನಿಗೆ ತೀವ್ರ ಅಸ್ವಸ್ಥನಾದ ಅವನನ್ನು ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ. ಆರೋಪಿ ಅಪಸ್ಮಾರ ಮತ್ತು ತಲೆನೋವಿನಿಂದ ಬಳಲುತ್ತಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೆಲದಿನಗಳ […]

ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ತೆಲುಗಿನ ಖ್ಯಾತ ನಿರ್ಮಾಪಕ ಗೋವಾದಲ್ಲಿ ಆತ್ಮಹತ್ಯೆಗೆ ಶರಣು

ರಜನಿಕಾಂತ್‌ ಸಹಿತ ಸೂಪರ್‌ಸ್ಟಾರ್‌ಗಳ ಚಿತ್ರ ನಿರ್ಮಿಸಿದ್ದ ನಿರ್ಮಾಪಕ ಚೆನ್ನೈ : ರಜನಿಕಾಂತ್‌ ಅಭಿನಯದ ಕಬಾಲಿ ಸಹಿತ ಅನೇಕ ಹಿಟ್‌ ಚಿತ್ರಗಳನ್ನು ನಿರ್ಮಿಸಿದ್ದ ತಮಿಳು, ತೆಲುಗಿನ ಖ್ಯಾತ ನಿರ್ಮಾಪಕ ಕೆ.ಪಿ.ಚೌಧರಿ ಯವರ (44) ಶವ ಗೋವಾದ ಹಳ್ಳಿಯೊಂದರಲ್ಲಿ ನೇಣುಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೋವಾದ ಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಚೌಧರಿ ಅಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ಗೋವಾದ ಸಿಯೋಲಿಮ್ ಗ್ರಾಮದ ಬಾಡಿಗೆ ಮನೆಯಲ್ಲಿ ಚೌಧರಿ ವಾಸವಾಗಿದ್ದರು. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ

ತೆಲುಗಿನ ಖ್ಯಾತ ನಿರ್ಮಾಪಕ ಗೋವಾದಲ್ಲಿ ಆತ್ಮಹತ್ಯೆಗೆ ಶರಣು Read More »

ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಸಂಪಾದನೆ ದೂರು

ಸಿಎಂ ಕುಟುಂಬದಲ್ಲಿ ಆಗಾಗ ನಡೆಯುತ್ತಿರುವ ಭೂಮಿ ದಾನದ ತನಿಖೆಗೆ ಒತ್ತಾಯ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಸಿದ್ದಾರೆ. ತನಿಖೆಗೆ ಆಗ್ರಹಿಸಿದ್ದು, ಅಧಿಕಾರಿಗಳು ವಿಳಂಬ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಸಿದ್ದರಾಮಯ್ಯನವರು ಕೆಸರೆ ಗ್ರಾಮದ ಜಾಗವನ್ನು ಅರಿಶಿಣ ಕುಂಕುಮ ರೂಪದಲ್ಲಿ ಪತ್ನಿಗೆ ಕೊಟ್ಟಿದ್ದಾರೆ ಎಂದಿದ್ದರು. ಈಗ ಮತ್ತೆ ಮಲ್ಲಿಕಾರ್ಜುನಸ್ವಾಮಿ ಒಂದು ಎಕರೆ ದಾನ ಮಾಡಿದ್ದಾರೆ. ಯಾಕೆ ಮಲ್ಲಿಕಾರ್ಜುನಸ್ವಾಮಿ ಖರೀದಿ ಮಾಡಿದ ಭೂಮಿಗಳನ್ನೇ

ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಸಂಪಾದನೆ ದೂರು Read More »

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 10 ಲ.ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಬ್ಯಾಗ್‌ನಲ್ಲಿದ್ದ 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಯಲಹಂಕ ನ್ಯೂಟೌನ್ ನಿವಾಸಿ ರಾಜಗೋಪಾಲ್ ಕಾರಂತ್ (68) ಎಂಬವರು ಪತ್ನಿಯ ತವರು ಮನೆಯಾದ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ್‌ಗೆ ಕುಟುಂಬದ ಕಾರ್ಯಕ್ರಮಕ್ಕೆಂದು ಫೆಬ್ರವರಿ 1ರಂದು ರಾತ್ರಿ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಪತ್ನಿ ಮತ್ತು ಅಳಿಯನೊಂದಿಗೆ ಮನೆಯಿಂದ ಚಿನ್ನವನ್ನು ಬಾಕ್ಸ್‌ನಲ್ಲಿ

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ 10 ಲ.ರೂ. ಮೌಲ್ಯದ ಚಿನ್ನಾಭರಣ ಕಳ್ಳತನ Read More »

ಕೆರೆಗೆ ಈಜಲು ಹೋದ ಗೆಳೆಯರು ನೀರು ಪಾಲು

ಹಾಸನ : ಈಜಲೆಂದು ಕೆರೆಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ನಡೆದಿದ್ದು,ಮೃತಪಟ್ಟ ಯುವಕರನ್ನು ಯಶ್ವಂತ್ ಸಿಂಗ್ ಅಲಿಯಾಸ್ ಗಣೇಶ್ (29), ರೋಹಿತ್ (28) ಎನ್ನಲಾಗಿದೆ. ಮೃತ ಗಣೇಶ್ ಮತ್ತು ರೋಹಿತ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಭಾನುವಾರ ಕೆಲಸ ಮುಗಿಸಿ ಇಬ್ಬರು ಸಂಜೆ ಕೆರೆಗೆ ಈಜಲು ತೆರಳಿದ್ದರು. ಮೊದಲು ರೋಹಿತ್ ಕೆರೆಗೆ ಇಳಿದಿದ್ದಾನೆ. ಈ ವೇಳೆ ಕೆರೆಯಲ್ಲಿ ಬೆಳೆದಿದ್ದ ಬಳ್ಳಿಗಳು ರೋಹಿತ್ ಕಾಲಿಗೆ ಸುತ್ತಿಕೊಂಡಿದೆ. ರೋಹಿತ್ ಕೆರೆಯಿಂದ ಮೇಲೆ ಬರಲಾರದೇ ಕಿರುಚಾಡಿದಾಗ

ಕೆರೆಗೆ ಈಜಲು ಹೋದ ಗೆಳೆಯರು ನೀರು ಪಾಲು Read More »

ಆನಡ್ಕ –ಪುತ್ತೂರು ಬಸ್‍ ಸ್ಥಗಿತ | ವಿದ್ಯಾರ್ಥಿಗಳ ಪರದಾಟ| ನಾಳೆಯೇ ಪ್ರತಿಭಟನೆ ಮಾಡುತ್ತೇವೆ : ಸಾರ್ವಜನಿಕರ ಎಚ್ಚರಿಕೆ

ಪುತ್ತೂರು : ಶಾಂತಿಗೋಡು ಗ್ರಾಮದ ಆನಡ್ಕಕ್ಕೆ ಬೆಳಿಗ್ಗಿನ ಹೊತ್ತು ಇರುವುದೊಂದೇ ಸರಕಾರಿ ಬಸ್. ದಿನದಲ್ಲಿ ಒಂದು ಸರಕಾರಿ ಬಸ್ ಒಡಾಟ. ಅದೂ ಬೆಳಗ್ಗಿನ ಹೊತ್ತು ಮಾತ್ರ. ಆದರೆ ಕೇವಲ ಒಂದೇ ಬಸ್ ಇದ್ದರೂ ಬರುವುದು ಮಾತ್ರ ವಾರಕ್ಕೊಮ್ಮೆ. ಬಂದರೆ ಬಂತು ಇಲ್ಲದಿದ್ದರೆ ಇಲ್ಲ. ಪರಿಣಾಮ ವಿದ್ಯಾರ್ಥಿಗಳು ಶಾಲೆಗೆ ತೆರಳಲು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಈ ಭಾಗಕ್ಕೆ ಬೆಳಗ್ಗೆ 8:00 ಗಂಟೆಗೆ ಬಸ್ ಒಡಾಟ ನಡೆಯುತ್ತಿದೆ. ಈ ಭಾಗದಿಂದ ಸುಮಾರು 80 ರಿಂದ 100 ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗುತ್ತಿದ್ದಾರೆ.

ಆನಡ್ಕ –ಪುತ್ತೂರು ಬಸ್‍ ಸ್ಥಗಿತ | ವಿದ್ಯಾರ್ಥಿಗಳ ಪರದಾಟ| ನಾಳೆಯೇ ಪ್ರತಿಭಟನೆ ಮಾಡುತ್ತೇವೆ : ಸಾರ್ವಜನಿಕರ ಎಚ್ಚರಿಕೆ Read More »

ಉಡುಪಿಯ ಉದ್ಯಮಿಗೆ 89 ಲ.ರೂ. ವಂಚಿಸಿದಾತ ಸೆರೆ

ಡಿಜಿಟಲ್‌ ಅರೆಸ್ಟ್‌ ಮಾಡಿರುವುದಾಗಿ ಹೇಳಿ ಹಣ ಲಪಟಾಯಿಸಿದ್ದ ಖದೀಮ ಉಡುಪಿ : ಉಡುಪಿಯ ಉದ್ಯಮಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್ ಮಾಡಿರುವುದಾಗಿ ಬೆದರಿಸಿ 89‌ ಲಕ್ಷ ರೂ. ಲಪಟಾಯಿಸಿದ ಪ್ರಕರಣದ ಆರೋಪಿಯನ್ನು ಉಡುಪಿ ಸೆನ್ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ್ ನಿವಾಸಿ ಕಿರಣ್ (24) ಬಂಧಿತ ಆರೋಪಿ. ಈತನಿಂದ 7 ಲಕ್ಷ ರೂ. ನಗದು ಮತ್ತು ಮೊಬೈಲ್‌ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಉಡುಪಿಯ ಜ್ಯುವೆಲ್ಲರಿ ಅಂಗಡಿ ಮಾಲೀಕರೊಬ್ಬರಿಗೆ ಸೆ.11ರಂದು ಕರೆ ಮಾಡಿ ಅಕ್ರಮ ಜಾಹೀರಾತು, ಸಂದೇಶ ಕಳುಹಿಸಿರುವುದಕ್ಕೆ

ಉಡುಪಿಯ ಉದ್ಯಮಿಗೆ 89 ಲ.ರೂ. ವಂಚಿಸಿದಾತ ಸೆರೆ Read More »

ಕುಂಭಮೇಳ ಕಾಲ್ತುಳಿತಕ್ಕೆ ಷಡ್ಯಂತ್ರ : 16 ಸಾವಿರ ಮೊಬೈಲ್‌ ನಂಬರ್‌ಗಳ ತನಿಖೆ

ಕೆಲವು ಮೊಬೈಲ್‌ ಫೋನ್‌ಗಳ ದಿಢೀರ್‌ ಸ್ವಿಚ್‌ ಆಫ್‌ ಆಗಿರುವುದರಿಂದ ಅನುಮಾನ ಪ್ರಯಾಗ್‌ರಾಜ್‌ : ಮಹಾಕುಂಭಮೇಳದಲ್ಲಿ ಜನವರಿ 29ರಂದು ಸಂಭವಿಸಿದ ಕಾಲ್ತುಳಿತ ದುರ್ಘಟನೆಯ ಹಿಂದೆ ಸಂಚಿನ ಅನುಮಾನ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ತನಿಖಾ ತಂಡ ಆ ದಿನ ಆ ಪ್ರದೇಶದಲ್ಲಿದ್ದ ಸುಮಾರು 16 ಸಾವಿರ ಮೊಬೈಲ್‌ ನಂಬರ್‌ಗಳನ್ನು ತನಿಖೆ ಮಾಡಲು ಮುಂದಾಗಿದೆ. ಅಂದು ಅಲ್ಲಿ ಚಾಲ್ತಿಯಲ್ಲಿದ್ದ ಕೆಲವು ನಂಬರ್‌ಗಳು ದುರ್ಘಟನೆ ಸಂಭವಿಸಿದ ಬಳಿಕ ಸ್ವಿಚ್‌ ಆಫ್‌ ಆಗಿರುವುದು ಅನುಮಾನ ಉಂಟು ಮಾಡಿದೆ. ಹೀಗಾಗಿ 16 ಸಾವಿರಕ್ಕೂ ಅಧಿಕ ಮೊಬೈಲ್‌

ಕುಂಭಮೇಳ ಕಾಲ್ತುಳಿತಕ್ಕೆ ಷಡ್ಯಂತ್ರ : 16 ಸಾವಿರ ಮೊಬೈಲ್‌ ನಂಬರ್‌ಗಳ ತನಿಖೆ Read More »

ನೇಹಾ ಹತ್ಯೆ ಕೇಸ್‌ ಮತ್ತೆ ಮುನ್ನೆಲೆಗೆ : ಸಿಬಿಐ ತನಿಖೆಗೆ ಒತ್ತಾಯ

ಶಾಸಕರು ಸೇರಿ ಕೆಲವು ಪ್ರಭಾವಿಗಳ ಕೈವಾಡವಿರುವ ಆರೋಪ ಬೆಂಗಳೂರು: ಕಳೆದ ವರ್ಷ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಹತ್ಯೆ ನಡೆದು ಒಂಬತ್ತು ತಿಂಗಳಾದರೂ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿರುವ ನೇಹಾಳ ತಂದೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ನೇಹಾಳ ಹಂತಕನಿಗೆ ಇನ್ನೂ ಶಿಕ್ಷೆಯಾಗಿಲ್ಲ. 4 ತಿಂಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ

ನೇಹಾ ಹತ್ಯೆ ಕೇಸ್‌ ಮತ್ತೆ ಮುನ್ನೆಲೆಗೆ : ಸಿಬಿಐ ತನಿಖೆಗೆ ಒತ್ತಾಯ Read More »

ವೀರಕಂಭ: ಮನೆಯ ಅಂಗಳಕ್ಕೆ  ಅಕ್ರಮ ಪ್ರವೇಶ ಮಾಡಿ ದಾಂದಲೆ ನಡೆಸಿ ಯುವಕನ ಮೇಲೆ ಹಲ್ಲೆ | 6 ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಕಿರಾತಕ ಆರೋಪಿ ಮೋಹನ್ ವಿರುದ್ಧ ಪ್ರಕರಣ ದಾಖಲು

ವೀರಕಂಭ: ಮನೆ ಬಾಗಿಲಿಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ಸದಸ್ಯರ ಮೇಲೆ ಹಲ್ಲೆ ನಡೆಸಿ  “ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮೈರ ಎಂಬಲ್ಲಿ ನಡೆದಿದೆ. ವೀರಕಂಬ ಗ್ರಾಮದ ಮೈರ ನಿವಾಸಿ ಯತೀಶ ಎಮ್ ಸಿ ಎಂಬವರು ಜ.31  ರಂದು ರಾತ್ರಿ 8:00 ಗಂಟೆಗೆ  ಅವರ ಮನೆಯ ಅಂಗಳದಲ್ಲಿ ಮಗುವಿನ ಜೊತೆ ಆಟವಾಡುತ್ತಿರುವಾಗ ಮೋಹನ ಗೌಡ ಎಂಬಾತನು ಏಕಾ ಏಕಿಯಾಗಿ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ ಅವರ ಮೇಲೆ ಹಿಗ್ಗಾ ಮುಗ್ಗ ಹಲ್ಲೆ

ವೀರಕಂಭ: ಮನೆಯ ಅಂಗಳಕ್ಕೆ  ಅಕ್ರಮ ಪ್ರವೇಶ ಮಾಡಿ ದಾಂದಲೆ ನಡೆಸಿ ಯುವಕನ ಮೇಲೆ ಹಲ್ಲೆ | 6 ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಕಿರಾತಕ ಆರೋಪಿ ಮೋಹನ್ ವಿರುದ್ಧ ಪ್ರಕರಣ ದಾಖಲು Read More »

error: Content is protected !!
Scroll to Top