ಅಪರಾಧ

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಜಲ್ಟಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರದೇಶಗಳನ್ನು ಸುತ್ತುವರಿದು ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಚಕಮಕಿ ನಡೆಯಿತು. ಭದ್ರತಾ ಪಡೆಗಳು ಭದ್ರತೆಯನ್ನು ಬಿಗಿಗೊಳಿಸಿ ಶೋಧ ಆರಂಭಿಸುತ್ತಿದ್ದಂತೆ, ಉಗ್ರರು ಗುಂಡು ಹಾರಿಸಿದರು. ಗುಂಡಿನ ಚಕಮಕಿ ನಡೆಯಿತು. ಆರಂಭಿಕ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡರು. […]

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ Read More »

ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ

ಶಬರಿಮಲೆ ಯಾತ್ರೆ ಮುಗಿಸಿ ಬಂದ ಖುಷಿಯಲ್ಲಿ ಎಣೆಣೆ ಪಾರ್ಟಿ ಮಾಡುತ್ತಿದ್ದ ಗೆಳೆಯರು ಉಡುಪಿ : ಸ್ನೇಹಿತರ ನಡುವೆ ಗುಂಡಿನ ಪಾರ್ಟಿಯಲ್ಲಿ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಉಡುಪಿಯ ಬ್ರಹ್ಮಾವರ ಸಮೀಪ ನಡೆದಿದೆ. ನಾಲ್ವರು ಗೆಳೆಯರು ಸೇರಿ ತಮ್ಮ ಓರ್ರವ ಗೆಳೆಯನನ್ನು ಕೊಲೆ ಮಾಡಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶಬರಿಮಲೆ ಯಾತ್ರೆ ಮುಗಿಸಿಬಂದ ಖುಷಿಯಲ್ಲಿ ಮರುದಿನವೇ ಸ್ನೇಹಿತರು ಗುಂಡು ಹಾಕಲು ಕುಳಿತಿದ್ದರು ಎನ್ನಲಾಗಿದೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆಯಲ್ಲಿ ಘಟನೆ ನಡೆದಿದ್ದು, ಬ್ಯಾಂಕ್‌

ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ Read More »

ಸಿಡ್ನಿಯ ಭಯೋತ್ಪಾದಕ ದಾಳಿ ಪಾಕ್‌ ಮೂಲದ ತಂದೆ-ಮಗನ ಕೃತ್ಯ

ಯೆಹೂದಿಗಳನ್ನು ಗುರಿ ಮಾಡಿಕೊಂಡು ನಡೆದ ದಾಳಿಯಲ್ಲಿ ಸಾವಿನ ಸಂಖ್ಯೆ 16ಕ್ಕೇರಿಕೆ ಸಿಡ್ನಿ: ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಭಾನುವಾರ ಸಂಜೆ ಯಹೂದಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ 16 ಜನರನ್ನು ಕೊಂದ ಇಬ್ಬರು ಬಂದೂಕುಧಾರಿಗಳು ತಂದೆ ಮತ್ತು ಮಗ ಎಂದು ಪೊಲೀಸರು ತಿಳಿಸಿದ್ದಾರೆ. ಯೆಹೂದಿಗಳ ಹನುಕ್ಕಾ ಹಬ್ಬದ ಆಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೇರಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಆಸ್ಟ್ರೇಲಿಯಾ ಸರ್ಕಾರ ಈ ಹತ್ಯಾಕಾಂಡವನ್ನು ಭಯೋತ್ಪದನಾ ಕೃತ್ಯ ಎಂದು ಪರಿಗಣಿಸಿದ್ದು ಪಾಕಿಸ್ತಾನ ಮೂಲದ

ಸಿಡ್ನಿಯ ಭಯೋತ್ಪಾದಕ ದಾಳಿ ಪಾಕ್‌ ಮೂಲದ ತಂದೆ-ಮಗನ ಕೃತ್ಯ Read More »

ಹತ್ಯೆ ಮಾಡಲು ಜಾನುವಾರು ನೀಡಿದ ವ್ಯಕ್ತಿಯ ಮನೆ, ಕೊಟ್ಟಿಗೆ ಜಪ್ತಿ

ಬಂಟ್ವಾಳ : ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್‌ ಅಟೋದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಮುಂದುವರಿಸಿ ಆರೋಪಿ ಭೋಜ ಮೂಲ್ಯ ಎಂಬವರ ಮನೆ ಹಾಗೂ ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ. ಅಕ್ರಮ ದನ ಸಾಗಾಟದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಮತ್ತು ಸಿಬ್ಬಂದಿಗಳು KA-70-8686 ನೇ ನೊಂದಣಿಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ

ಹತ್ಯೆ ಮಾಡಲು ಜಾನುವಾರು ನೀಡಿದ ವ್ಯಕ್ತಿಯ ಮನೆ, ಕೊಟ್ಟಿಗೆ ಜಪ್ತಿ Read More »

ಸುಳ್ಯ: ಅಕ್ರಮವಾಗಿ ಸಾಗಿಸುತ್ತಿದ್ದ 10 ಲ.ರೂ. ಮೌಲ್ಯದ ಮರದ ದಿಮ್ಮಿ ವಶ

ಸುಳ್ಯ: ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಅಂದಾಜು 10 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ವಾಹನಗಳನ್ನು ಡಿಸೆಂಬರ್ 13 ರಂದು ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಯದ ದೇವಚಳ್ಳ ಗ್ರಾಮದ ಮುಂಡೋಡಿಯಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದಾರೆ. ಮುಂಡೋಡಿಯ ನಾಗೇಶ್ ಎಂಬವರಿಗೆ ಸೇರಿದ ಜಾಗದಿಂದ ಒಂದು ಹೆಬ್ಬಲಸಿನ ಮರ ಮತ್ತು ಒಂದು ಮಾವಿನ ಮರವನ್ನು ಅಕ್ರಮವಾಗಿ ಕಡಿದು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪವಲಯ ಅರಣ್ಯಾಧಿಕಾರಿ ಸೌಮ್ಯಾ ಪಿ.ಎನ್. ಅವರ ನೇತೃತ್ವದಲ್ಲಿ ನೆಲ್ಲೂರು-ಕೆಮ್ರಾಜೆ

ಸುಳ್ಯ: ಅಕ್ರಮವಾಗಿ ಸಾಗಿಸುತ್ತಿದ್ದ 10 ಲ.ರೂ. ಮೌಲ್ಯದ ಮರದ ದಿಮ್ಮಿ ವಶ Read More »

ಡ್ರಗ್ಸ್‌ ಸಾಗಿಸುತ್ತಿದ್ದ ಮಹಿಳೆ ಸಹಿತ ಮೂವರ ಸೆರೆ

ಪೊಲೀಸರ ಕಣ್ಣಿಗೆ ಮಣ್ಣೆರಚಲು ಮಹಿಳೆಯನ್ನು ಕರೆದೊಯ್ಯುತ್ತಿದ್ದ ತಂಡ ಮಂಗಳೂರು : ಬೆಂಗಳೂರಿನಿಂದ ಮಾದಕವಸ್ತು ಎಂಡಿಎಂಎ ತಂದು ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ಸಪ್ಲಾಯ್‌ ಮಾಡುತ್ತಿದ್ದ ಮಹಿಳೆ ಸಹಿತ ಮೂವರ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದವರು ಡಿ. 13ರಂದು ಬಂಧಿಸಿದ್ದಾರೆ. ಮಂಗಳೂರಿನ ಮಲ್ಲೂರು ಗ್ರಾಮ ಬದ್ರಿಯಾ ನಗರ ಹೌಸ್ ನಿವಾಸಿ ಅಹಮ್ಮದ್ ಶಾಬೀತ್(35), ಬಂಟ್ವಾಳ ತಾಲೂಕಿನ ಜೋಡುಮಾರ್ಗ ಬಿ ಮೂಡ ಗ್ರಾಮದ ಮದ್ದ ಪರ್ಲಿಯಾ ಹೌಸ್ ನಿವಾಸಿ ಮಹಮ್ಮದ್ ಶಂಶೀರ್ (36) ಮತ್ತು ಬಂಟ್ವಾಳ ತಾಲೂಕು ಸರಪಾಡಿ ಗ್ರಾಮದ

ಡ್ರಗ್ಸ್‌ ಸಾಗಿಸುತ್ತಿದ್ದ ಮಹಿಳೆ ಸಹಿತ ಮೂವರ ಸೆರೆ Read More »

ಅಮಲೇರಿದಾಗ ಬಸ್ಸನ್ನೇ ಕದ್ದುಕೊಂಡು ಹೋದ ಕುಡುಕರು!

ಜನ ಸಂಚಾರವಿಲ್ಲದ ಕಾರಣ ತಪ್ಪಿದ ಅನಾಹುತ ಬೆಂಗಳೂರು : ಶರಾಬಿನ ಮತ್ತಿನಲ್ಲಿ ಬಸ್ಸನ್ನೇ ಕದ್ದುಕೊಂಡು ಹೋದ ಘಟನೆಯೊಂದು ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಬಸ್‌ ಚಲಾಯಿಸಿಕೊಂಡು ಪಲಾಯನ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ವ್ಯಕ್ತಿ ಮತ್ತು ರಸ್ತೆ ಬದಿಯ ವಿದ್ಯುತ್​​ ಕಂಬಗಳಿಗೆ ಬಸ್ ಡಿಕ್ಕಿಯಾಗಿ ಕುಡುಕುರು ಸಿಕ್ಕಿಬಿದ್ದಿದ್ದಾರೆ. ಘಟನೆ ನಿನ್ನೆ ರಾತ್ರಿ ​​ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಥಳಿರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್‌ನ ಮುಂಭಾಗ ಜಖಂ ಆಗಿದ್ದು, ರಾತ್ರಿ ವೇಳೆ ಜನ ಸಂಚಾರ

ಅಮಲೇರಿದಾಗ ಬಸ್ಸನ್ನೇ ಕದ್ದುಕೊಂಡು ಹೋದ ಕುಡುಕರು! Read More »

ಐಷರಾಮಿ ಕಾರಿನಲ್ಲಿ ಗೋ ಕಳ್ಳತನ : ಬೆನ್ನಟ್ಟಿಕೊಂಡು ಹೋದ ಹಿಂದೂ ಕಾರ್ಯಕರ್ತರು

10 ಕಿ.ಮೀ. ಸಿನಿಮಾ ಶೈಲಿಯಲ್ಲಿ ಚೇಸ್‌ ಮಾಡಿದರೂ ತಪ್ಪಿಸಿಕೊಂಡ ದುಷ್ಕರ್ಮಿಗಳು ಚಿಕ್ಕಮಗಳೂರು: ರಸ್ತೆ ಬದಿ ಮಲಗಿದ್ದ ಗೋವುಗಳನ್ನು ಎಕ್ಸ್‌ಯುವಿ 500 ಕಾರಿನಲ್ಲಿ ತುಂಬಿಕೊಂಡು ಎಸ್ಕೇಪ್ ಆಗುತ್ತಿದ್ದ ಗೋ ಕಳ್ಳರನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಸಿನಿಮಾ ಶೈಲಿಯಲ್ಲಿ ಚೇಸ್ ಮಾಡಿರುವ ಘಟನೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಪ್ಪದಿಂದ‌ ಕುದುರೆಗುಂಡಿಯವರೆಗೆ ಸುಮಾರು 10 ಕಿ.ಮೀ ಎರಡು ಕಾರುಗಳು ರೇಸ್‌ನಂತೆ ಅತಿವೇಗವಾಗಿ ಸಾಗಿವೆ. ಹಿಂದೂ ಸಂಘಟಕರು ಈ ಚೇಸ್ ಮಾಡಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೊಪ್ಪ ಪಟ್ಟಣದಿಂದ

ಐಷರಾಮಿ ಕಾರಿನಲ್ಲಿ ಗೋ ಕಳ್ಳತನ : ಬೆನ್ನಟ್ಟಿಕೊಂಡು ಹೋದ ಹಿಂದೂ ಕಾರ್ಯಕರ್ತರು Read More »

ಶಾಲಾ ಬಾಲಕಿಗೆ ಕಿರುಕುಳ : ವೃದ್ಧ ಬಂಧನ

ಮಂಗಳೂರು: ಶಾಲಾ ಬಾಲಕಿಗೆ ವೃದ್ಧನೊಬ್ಬ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಸುರತ್ಕಲ್ ಪೊಲೀಸರು ಪೊಕ್ಸೊ ಕಾಯ್ದೆಯಡಿ ಆರೋಪಿಯನ್ನು ಚೇಳಾಯರು ಎಂಬಲ್ಲಿ ಬಂಧಿಸಿದ್ದಾರೆ. ಸುರತ್ಕಲ್ ಚೇಳಾಯರು ನಿವಾಸಿ ಸುಂದರ ಪೂಜಾರಿ (60) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಟ್ಯೂಶನ್ ಮುಗಿಸಿ ಬಸ್‌ನಲ್ಲಿ ಬಂದು ಮುಕ್ಕದಲ್ಲಿ ಇಳಿದು ತನ್ನ ಮನೆಗೆ ಒಳ ರಸ್ತೆಯಾಗಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆ ರಸ್ತೆಯಾಗಿ ಬಂದ ಆರೋಪಿ ಲೈಂಗಿಕ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ಸಂತ್ರಸ್ತೆ ತಿಳಿಸಿದ್ದಾಳೆ. ಈ ಘಟನೆ

ಶಾಲಾ ಬಾಲಕಿಗೆ ಕಿರುಕುಳ : ವೃದ್ಧ ಬಂಧನ Read More »

ಬಂಟ್ವಾಳ : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ

ಬಂಟ್ವಾಳ : ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಬಂಧಿತರು ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ ಮೊಹಮ್ಮದ್ ಅಸೀಫ್ (35) ಸೆರೆಯಾಗಿರುವ ಆರೋಪಿಗಳು. ಡಿಸೆಂಬರ್ 13ರ ಸಂಜೆ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಬಳಿ ಗಾಂಜಾ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧಾರವಾಗಿ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ

ಬಂಟ್ವಾಳ : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಸೆರೆ Read More »

error: Content is protected !!
Scroll to Top