ಅಪರಾಧ

ಎಐ ಶೃಂಗದಲ್ಲಿ ಅರೆ ಬೆತ್ತಲೆ ಪ್ರತಿಭಟನೆ : ಯುವ ಕಾಂಗ್ರೆಸ್‌ ಅಧ್ಯಕ್ಷನ ಬಂಧನ

ಪ್ರತಿಭಟನೆಗೆ ಸಂಚು ರೂಪಿಸಿದ್ದ ಉದಯ್‌ ಭಾನು ಚಿಬ್‌ ನವದೆಹಲಿ: ಭಾರತ ಎಐ ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಅರೆ ಬೆತ್ತಲೆ ಪ್ರತಿಭಟನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಉದಯ್‌ ಭಾನು ಚಿಬ್‌ ಅವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಹಲವಾರು ಸುತ್ತಿನ ವಿಚಾರಣೆಯ ನಂತರ ಬಂಧಿಸಲಾಗಿದೆ. ತಿಲಕ್ ಮಾರ್ಗ ಪೊಲೀಸ್ ಠಾಣೆ ಪೊಲೀಸರಿಂದ ಬಂಧನ ಮಾಡಲಾಗಿದೆ. ಪೊಲೀಸ್ ಠಾಣೆ ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿದೆ. ಎಐ ಸಭೆಯಲ್ಲಿ ಶರ್ಟ್‌ಲೆಸ್ […]

ಎಐ ಶೃಂಗದಲ್ಲಿ ಅರೆ ಬೆತ್ತಲೆ ಪ್ರತಿಭಟನೆ : ಯುವ ಕಾಂಗ್ರೆಸ್‌ ಅಧ್ಯಕ್ಷನ ಬಂಧನ Read More »

ಎಸ್‌ಐಟಿ ತನಿಖೆಯಿಂದ ಬಯಲಾಯಿತು ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆಯ ಅಸಲಿ ಕಾರಣ

ರಿಯಲ್‌ ಎಸ್ಟೇಟ್‌ ಉದ್ಯಮಿಯ ಆತ್ಮಹತ್ಯೆಗೆ ಇದೇ ಕಾರಣವಂತೆ ಬೆಂಗಳೂರು: ಇಡೀ ದೇಶದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಬೆಂಗಳೂರಿನ ಖ್ಯಾತ ರಿಯಲ್‌ ಎಸ್ಟೇಟ್‌ ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ ಹಿಂದಿನ ಕಾರಣ ಈಗ ಬಯಲಾಗಿದೆ. ಸಿ.ಜೆ.ರಾಯ್ ಆತ್ಮಹತ್ಯೆ ಕೇಸ್ ತನಿಖೆ ಬಹುತೇಕ ಮುಕ್ತಾಯವಾಗಿದ್ದು, ಎಸ್‌ಐಟಿ ಅಧಿಕಾರಿಗಳ ಇಲ್ಲಿಯವರೆಗಿನ ತನಿಖೆಯಲ್ಲಿ ರಾಯ್ ಆತ್ಮಹತ್ಯೆ ಹಿಂದಿನ ಕಾರಣಗಳನ್ನು ವಿವರಿಸಿದ್ದಾರೆ. ಒಂದೇ ಕಾರಣದಿಂದ ರಾಯ್ ಅವರು ನೊಂದು ಆತ್ಮಹತ್ಯೆ ಮಾಡಿಕೊಂಡಿಲ್ಲ. ಬದಲಾಗಿ ಬೇರೆ ಬೇರೆ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಇಲ್ಲಿಯವರೆಗಿನ ಎಸ್‌ಐಟಿ ತನಿಖೆಯ ವೇಳೆ ಬಹಿರಂಗವಾಗಿದೆ

ಎಸ್‌ಐಟಿ ತನಿಖೆಯಿಂದ ಬಯಲಾಯಿತು ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆಯ ಅಸಲಿ ಕಾರಣ Read More »

ಹೂಡಿಕೆ ಲಾಭ ನಂಬಿ 19 ಲಕ್ಷ ರೂ. ಕಳೆದುಕೊಂಡ ಮಹಿಳೆ

ಮಂಗಳೂರು: ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಸುವ ಆಸೆಗೆ ಬಿದ್ದ ಮಹಿಳೆಯೊಬ್ಬರು ಬರೋಬ್ಬರಿ 19 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮಹಿಳೆಯೇ ಸ್ವತಹ ಮೊಬೈಲ್‌ನಲ್ಲಿ ಗೂಗಲ್ ಮೂಲಕ ಸಾಫ್ಟೋನಿಕ್ ವೆಬ್‌ಸೈಟ್ ಹುಡುಕಾಡಿ ಎಪಿಕೆ ಫೈಲ್ ಡೌನ್‌ಲೋಡ್‌ ಮಾಡಿಕೊಂಡಿದ್ದರು. ಬಳಿಕ ಸಾಫ್ಟೋನಿಕ್ ಆ್ಯಪ್ ಬಳಸಿ ಬ್ಯಾಂಕ್ ಖಾತೆಯ ವಿವರ ನೀಡಿದ್ದರು. ಹೆಚ್ಚಿನ ಲಾಭದ ಆಶೆಯಿಂದ ಈ ಆ್ಯಪ್‌ನಲ್ಲಿರುವ ನಾನಾ ಕಂಪನಿಗಳಿಗೆ ಒಟ್ಟು 19,06,166 ಲಕ್ಷ ರೂ. ಹೂಡಿಕೆ ಮಾಡಿದ್ದರು. ಜನವರಿಯಲ್ಲಿ 1 ಲಕ್ಷ ರೂ. ಲಾಭ ಅವರಿಗೆ ಸಿಕ್ಕಿತ್ತು. ಬಳಿಕ ಅವರನ್ನು

ಹೂಡಿಕೆ ಲಾಭ ನಂಬಿ 19 ಲಕ್ಷ ರೂ. ಕಳೆದುಕೊಂಡ ಮಹಿಳೆ Read More »

ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಲೆ

ಎದೆಗೆ ಬಿದ್ದ ಏಟಿನಿಂದ ಸಾವನ್ನಪ್ಪಿದ 16ರ ಹರೆಯದ ಬಾಲಕ ಶಿವಮೊಗ್ಗ : ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಭೀಕರವಾಗಿ ಕೊಲೆಯಾದ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಶಿವಮೊಗ್ಗದ ಸೂಳೆಬೈಲು ಬಡಾವಣೆಯ ಸಂಕೇತ್ (16) ಕೊಲೆಯಾದ ವಿದ್ಯಾರ್ಥಿ. ಸೂಳೆಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ ಸಂಕೇತ್ ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದಾಗ ಇತರ ಕೆಲ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅವರ ಜಗಳವನ್ನು ಬಿಡಿಸಲು ಹೋದಾಗ ಸಂಕೇತ್ ಮೇಲೆ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ

ಜಗಳ ಬಿಡಿಸಲು ಹೋದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೊಲೆ Read More »

ಮನೆಗೆ ಬಂದು ಕಾರಿನ ಗಾಜು ಒಡೆದ ಮೆಸ್ಕಾಂ ಸಿಬ್ಬಂದಿ

ಸುಳ್ಯ: ಮನೆಯಲ್ಲಿ ತಂದೆ ಮತ್ತು ತಾಯಿ ಮಾತ್ರವೇ ಇದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಬಂದು‌‌ ಕಾರಿನ ಗಾಜನ್ನು ಹೆಲ್ಮೆಟಿನಿಂದ ಹೊಡೆದು ಹಾನಿ ಮಾಡಿರುವುದಾಗಿ ಬಾಲಚಂದ್ರ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬ ಬೈಕಿನಲ್ಲಿ ಬಂದು ಗೇಟಿನೊಳಕ್ಕೆ ಪ್ರವೇಶಿಸಿ ಈ ಕೃತ್ಯ ಎಸಗಿದ್ದಾನೆ. ಆತನನ್ನು ಮನೆಯಲ್ಲಿ ಇದ್ದವರು ಪ್ರಶ್ನೆ ಮಾಡಿದ್ದು, ಆತ ಉತ್ತರಿಸದೇ ಜಾಗ ಖಾಲಿ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಹಾನಿಯಾದ ಗಾಜಿನ ಮೌಲ್ಯ ಐದು ಸಾವಿರ ಎಂದು ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ

ಮನೆಗೆ ಬಂದು ಕಾರಿನ ಗಾಜು ಒಡೆದ ಮೆಸ್ಕಾಂ ಸಿಬ್ಬಂದಿ Read More »

ಅಂತಾರಾಜ್ಯ ‌ಡ್ರಗ್ಸ್ ಮಾರಾಟಗಾರರ ಬಂಧನ

ಮಂಗಳೂರು: ಅಂತರಾಜ್ಯ ಗಾಂಜಾ ಮಾರಾಟ ಜಾಲವನ್ನು ಬೇಧಿಸಿರುವ ಮಂಗಳೂರು ನಗರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 22 ಕೆ.ಜಿ. 250 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಪಣಂಬೂರು ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಹತ್ತಿರ ಅಕ್ರಮ ಗಾಂಜಾ ಮಾರಾಟ ನಡೆಯುತ್ತಿರುವ ಖಚಿತ ಮಾಹಿತಿಯನ್ವಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಆರೋಪಿಗಳನ್ನು ಬಂಧಿಸಿರುವುದಾಗಿದೆ. ಆರೋಪಿಗಷನ್ನು ಕರಣ್ ಬಾಬು ರಾಮ್ ಜಾದವ್, ಸಮೀರ್ ಶಾ, MH ಮಯ್ಯದಿ, ಇಬ್ರಾಹಿಂ ಕರೀಂ ಎಂದು ಗುರುತಿಸಲಾಗಿದೆ. ಆರೋಪಿಗಳ

ಅಂತಾರಾಜ್ಯ ‌ಡ್ರಗ್ಸ್ ಮಾರಾಟಗಾರರ ಬಂಧನ Read More »

ಚಿನ್ನ ಕದ್ದ ಆರೋಪ: ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ

ಕಾಸರಗೋಡು: ನೆರೆಮನೆಯಿಂದ ಚಿನ್ನ ಕದ್ದ ಆರೋಪ ಹೊತ್ತಿದ್ದ ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಾಲತ್ತಡ್ಕದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಜಸೀಲಾ(24) ಎಂದು ಗುರುತಿಸಲಾಗಿದೆ. ಜಸೀಲಾ ಸಾವಿಗೂ ಮುನ್ನ ವಿಡಿಯೋ ಒಂದನ್ನು ಮಾಡಿದ್ದು, ಅದರಲ್ಲಿ ತಾನು ಯಾವ ಚಿನ್ನವನ್ನೂ ಕದ್ದಿಲ್ಲ. ನಾನೇನೂ ತಪ್ಪು ಮಾಡಿಲ್ಲ. ನಾನು ಚಿನ್ನ ಕದ್ದಿದ್ದಾಗಿ ಆರೋಪಿಸಿ ಪೊಲೀಸರು ಮನೆಯನ್ನು ಶೋಧಿಸಿದರು. ಇದರಿಂದ ನನ್ನ ಮನೆಯವರು ತೀವ್ರ ನೊಂದಿದ್ದಾರೆ. ನಾನು ಕದ್ದಿದ್ದರೆ ಅಲ್ಲವೇ ಕೊಡುವುದು. ಇಲ್ಲವಾದರೆ ಎಲ್ಲಿಂದ ತಂದು ಕೊಡಲಿ. ನಾನು ಸತ್ತರೆ

ಚಿನ್ನ ಕದ್ದ ಆರೋಪ: ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಮಹಿಳೆ Read More »

ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌

ದೂರು ನೀಡಿದ ಎರಡು ತಿಂಗಳ ಬಳಿಕ ಎಫ್‌ಐಆರ್‌ ದಾಖಲು ಬೆಂಗಳೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಪವಿತ್ರ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆದರಿಕೆ ಹಾಗೂ ಪ್ರೊ.ಮೈಲಾರಪ್ಪ ವಿರುದ್ಧ ಕೊಟ್ಟಿರುವ ಕೇಸ್ ವಾಪಸ್ ಪಡೆದುಕೊಳ್ಳುವಂತೆ ಬೆದರಿಕೆ ಹಾಗೂ ಒತ್ತಡ ಹಾಕುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಸ್ನೇಹಮಯಿ ಕೃಷ್ಣ ಅವರನ್ನು ಎ1 ಆರೋಪಿಯನ್ನಾಗಿ

ಸ್ನೇಹಮಯಿ ಕೃಷ್ಣ ವಿರುದ್ಧ ಇನ್ನೊಂದು ಕೇಸ್‌ Read More »

ಡ್ರಗ್ಸ್‌ ಜಾಲದ ದೊರೆ ಎಲ್‌ ಮೆಂಚೊನ್ನು ಹತ್ಯೆ ಮಾಡಿದ ಮೆಕ್ಸಿಕೊ ಸೇನೆ

ಜಗತ್ತಿನ ಅತಿ ಪ್ರಬಲ ಡ್ರಗ್ಸ್‌ ಜಾಲದ ಮುಖಂಡ ಎಲ್‌ ಮೆಂಚೊ ಮೆಕ್ಸಿಕೊ: ಮೆಕ್ಸಿಕೊದ ಅತಿದೊಡ್ಡ ಮಾದಕವಸ್ತು ಜಾಲದ ದೊರೆ ನೆಮೆಸಿಯೊ ಎಲ್ ಮೆಂಚೊ ಒಸೆಗುರಾ ಎಂಬಾತನನ್ನು ಮೆಕ್ಸಿಕೊದ ಸೇನೆ ಹತ್ಯೆ ಮಾಡಿದೆ. ಆ ಬಳಿಕ ಮೆಕ್ಸಿಕೊ ನಗರದಲ್ಲಿ ಎಲ್‌ ಮೆಂಚೊನ ಗ್ಯಾಂಗಿನವರು ವ್ಯಾಪಕ ಹಿಂಚಾಚಾರ ಪ್ರಾರಂಭಿಸಿದ್ದು, ವಾಹನ, ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದಾರೆ. ಜಲಿಸ್ಕೊ ​​ನ್ಯೂ ಜನರೇಷನ್ ಕಾರ್ಟೆಲ್‌ ಎಂಬ ಮಾದಕವಸ್ತು ಜಾಲದ ನಾಯಕ 59 ವರ್ಷದ ಎಲ್ ಮೆಂಚೊ ಜಲಿಸ್ಕೊ ​​ರಾಜ್ಯದ ಟಪಲ್ಪಾ ಪಟ್ಟಣದಲ್ಲಿ ಸೈನಿಕರೊಂದಿಗಿನ

ಡ್ರಗ್ಸ್‌ ಜಾಲದ ದೊರೆ ಎಲ್‌ ಮೆಂಚೊನ್ನು ಹತ್ಯೆ ಮಾಡಿದ ಮೆಕ್ಸಿಕೊ ಸೇನೆ Read More »

ರೈತರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಇಂದು ಶೃಂಗೇರಿ ಬಂದ್‌

ಕಾಡಾನೆ ದಾಳಿಯ ವಿರುದ್ಧ ಪ್ರತಿಭಟಿಸುತ್ತಿದ್ದವರ ಮೇಲೆ ಲಾಠಿ ಚಾರ್ಜ್‌ ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಬಲಿಯಾಗಿದ್ದ ಪ್ರಕರಣ ಸಂಬಂಧ ಸರ್ಕಾರ, ಅರಣ್ಯ ಇಲಾಖೆ ವಿರುದ್ಧ ನಡೆಸಿದ ಪ್ರತಿಭಟನೆ ವೇಳೆ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿರುವುದನ್ನು ಖಂಡಿಸಿ ಇಂದು (ಫೆ.23) ಶೃಂಗೇರಿ, ಎನ್.ಆರ್.ಪುರ, ಕೊಪ್ಪ, ಖಾಂಡ್ಯ ಹೋಬಳಿ ಬಂದ್‌ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳು ಬೆಳಗ್ಗೆ 8ರಿಂದ ಸಂಜೆ 5ರತನಕ ಬಂದ್‌ಗೆ ಕರೆ ನೀಡಿದ್ದು, ನಾಗರಿಕ ಹಿತ ರಕ್ಷಣಾ ವೇದಿಕೆ, ರೈತ ಒಕ್ಕೂಟ, ಆಟೋ ಚಾಲಕ-ಮಾಲೀಕರ ಸಂಘ,

ರೈತರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಇಂದು ಶೃಂಗೇರಿ ಬಂದ್‌ Read More »

error: Content is protected !!
Scroll to Top