ಅಪರಾಧ

ಬಾವಿಯಲ್ಲಿ ಬಾಲಕಿಯರಿಬ್ಬರ ಶವ ಪತ್ತೆ

ಕಲಬುರ್ಗಿ: ಜಿಲ್ಲೆಯ ಯಡ್ರಾಮಿಯ ಇಜೇರಿ ಗ್ರಾಮದಲ್ಲಿ ಇಬ್ಬರು ಬಾಲಕಿಯರ ಶವಗಳು ಬಾವಿಯಲ್ಲಿ ಪತ್ತೆಯಾಗಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿದೆ. ನಂದಿನಿ(16) ಮತ್ತು ಸಂಜನಾ(17) ಮೃತ ಬಾಲಕಿಯರು. ಈ ಇಬ್ಬರೂ ಚಿಕ್ಕಪ್ಪ – ದೊಡ್ಡಪ್ಪನ ಮಕ್ಕಳಾಗಿದ್ದಾರೆ. ಇಬ್ಬರ ಕೈಗಳನ್ನೂ ಕಟ್ಟಿದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿರುವುದಾಗಿದೆ. ಈ ಪ್ರಕರಣ ನಿಗೂಢತೆಯಿಂದ ಕೂಡಿದ್ದು ಸಾವಿನ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜೇವರ್ಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದು ಆತ್ಮಹತ್ಯೆಯೋ ಅಥವಾ ಇನ್ನೇನಾದರೂ ಅನುಮಾನಾಸ್ಪದ […]

ಬಾವಿಯಲ್ಲಿ ಬಾಲಕಿಯರಿಬ್ಬರ ಶವ ಪತ್ತೆ Read More »

ಅಕ್ರಮ ಸ್ಪೋಟಕಗಳ ವಶ: ಆರೋಪಿ ಪೊಲೀಸ್ ವಶಕ್ಕೆ

ವಿಟ್ಲ: ಯಾವುದೇ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಸುಡುಮದ್ದು ತಯಾರಿಸಲು ಅಕ್ರಮವಾಗಿ ಸ್ಪೋಟಕಗಳನ್ನು ಸಂಗ್ರಹಿಸಿ ಇಟ್ಟಿದ್ದ ವ್ಯಕ್ತಿಯೊಬ್ಬನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕಂಬಳಬೆಟ್ಟು ಸಮೀಪದ ಅಮೈ ನಿವಾಸಿ ಜಗದೀಶ ಪೂಜಾರಿ ಎಂದು ಗುರುತಿಸಲಾಗಿದೆ. ಜಗದೀಶ್ ತಮ್ಮ ಮನೆಯಲ್ಲಿ ಸ್ಪೋಟಕಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಪೊಲೀಸ್ ತಪಾಸಣೆಯಲ್ಲಿ ಸುಮಾರು 1.9 KG ಗಳಷ್ಟು ಅನುಮಾನಾಸ್ಪದ ‌ಸ್ಪೋಟಕಗಳು ಪತ್ತೆಯಾಗಿವೆ. ಜನವಸತಿ ಪ್ರದೇಶದಲ್ಲಿ ಯಾವುದೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸದೆ

ಅಕ್ರಮ ಸ್ಪೋಟಕಗಳ ವಶ: ಆರೋಪಿ ಪೊಲೀಸ್ ವಶಕ್ಕೆ Read More »

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಎಪಿಎಂಸಿ ಮಾರುಕಟ್ಟೆಯಲ್ಲಿ ಅನಧಿಕೃತ ಮಳಿಗೆಗಳಿಗೆ ಲೈಸೆನ್ಸ್‌ ನೀಡಿದ ಅರೋಪ ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಮತ್ತೊಬ್ಬರು ಪ್ರಭಾವಿ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಎಪಿಎಂಸಿ ಮಳಿಗೆ ಹಸ್ತಾಂತರ ವಿಚಾರದಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಾಗೂ ಎಪಿಎಂಸಿ ಕಾರ್ಯದರ್ಶಿ ದೊರೆಸ್ವಾಮಿ ಅವರ ವಿರುದ್ಧ ಎಪಿಎಂಸಿ ವರ್ತಕರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಸಚಿವರ ವಿರುದ್ಧ ಒಂದಿಲ್ಲೊಂದು ಭ್ರಷ್ಟಾಚಾರ ಆರೋಪ ಆಗಾಗ ಕೇಳಿಬರುತ್ತಲೇ ಇದೆ.

ಸಕ್ಕರೆ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು Read More »

ಅಕ್ರಮ ಕೋಳಿ ಅಂಕ: ನಾಲ್ವರ ಬಂಧನ

ವಿಟ್ಲ: ಮಾಡ ಎಂಬಲ್ಲಿ ಪಣಕ್ಕೆ ಹಣವನ್ನಿಟ್ಟು ಅಕ್ರಮವಾಗಿ ಕೋಳಿ ಅಂಕ ನಡೆಸಲಾಗಿದ್ದು, ವಿಟ್ಲ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಬ್ಬರು ಆರೋಪಿಗಳು ಪೊಲೀಸರಿಗೆ ಕರ್ತವ್ಯಕ್ಕೆ ಅಡ್ಡಿ ಮಾಡಿ ಪರಾರಿಯಾಗಿದ್ದಾರೆ. ಅಕ್ರಮ ಕೋಳಿ ಅಂಕದ ಬಗ್ಗೆ ಖಚಿತ ಮಾಹಿತಿ ಪಡೆದು ನಡೆಸಿದ ಕಾರ್ಯಾಚರಣೆ ಇದಾಗಿದೆ. ಸ್ಥಳದಲ್ಲಿ ಸುಮಾರು ಇಪ್ಪತ್ತರಿಂದ ಇಪ್ಪತೈದು ಮಂದಿ ಜೂಜುಕೋರರು ಕಂಡು ಬಂದಿದ್ದು, ಪೊಲೀಸರನ್ನು ಕಂಡಾಕ್ಷಣವೇ ಓಡಲಾರಂಭಿಸಿದ್ದಾರೆ. ಬಂಧಿತರನ್ನು ವಿಟ್ಲಕಸಬ ನಿವಾಸಿಗಳಾದ ಚಂದ್ರಶೇಖರ (43), ಇಬ್ರಾಹಿಂ (65), ಹೊನ್ನಪ್ಪ (46) ಮತ್ತು ವಿಟ್ಲಪಡ್ಡರು

ಅಕ್ರಮ ಕೋಳಿ ಅಂಕ: ನಾಲ್ವರ ಬಂಧನ Read More »

ಗರ್ಭಿಣಿ ಸಾವು: ಬಿಮ್ಸ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಬೆಳಗಾವಿ: ಗರ್ಭಿಣಿ ಮಹಿಳೆಯೊಬ್ಬರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಸಾವು ಸಂಭವಿಸಿದೆ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತ ಮಹಿಳೆಯನ್ನು ತುರಮುರಿ ಗ್ರಾಮದ ಈರಮ್ಮ ‌ಶಿಗೀಹಳ್ಳಿ(21) ಎಂದು ಗುರುತಿಸಲಾಗಿದೆ. ಈರಮ್ಮ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದಾಗಿಂದಲೂ ಅಲ್ಲಿ ಅವರಿಗೆ ಸರಿಯಾದ ಚಿಕಿತ್ಸೆ ದೊರೆತಿಲ್ಲ. ಯಾರೂ ಅವರನ್ನು ಸರಿಯಾಗಿ ಪರೀಕ್ಷಿಸಿಲ್ಲ ಎಂದು ಕುಟುಂಬಸ್ಥರು ಆಕ್ರೊಶ ವ್ಯಕ್ತಪಡಿಸಿದ್ದಾರೆ. ಇದರಿಂದ ಈರಮ್ಮ ಅವರು ಮೃತಪಟ್ಟಿದ್ದಾರೆ. ಹೊಟ್ಟೆಯಲ್ಲಿದ್ದ ಮಗು ಸಹ ಮೃತಪಟ್ಟಿದೆ. ಸಹಿ ಹಾಕಿ ಶವವನ್ನು ತೆಗೆದುಕೊಂಡು ಹೋಗುವಂತೆ

ಗರ್ಭಿಣಿ ಸಾವು: ಬಿಮ್ಸ್ ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ Read More »

ಮೂಡುಬಿದಿರೆ : ಎಂಟು ಜಾನುವಾರುಗಳ ರಕ್ಷಣೆ; ಆರೋಪಿಗಳು ಪರಾರಿ

ಪಿಕಪ್‌ನಲ್ಲಿ ಎಸ್ಕಾರ್ಟ್‌ ಕಾರಿನೊಂದಿಗೆ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ ಅಕ್ರಮವಾಗಿ ಸಾಗಿಸುತ್ತಿದ್ದ ಎಂಟು ಜಾನುವಾರುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ಎರಡು ವಾಹನಗಳನ್ನು ಮೂಡುಬಿದಿರೆ ಪೊಲೀಸರು ಭಾನುವಾರ ತೋಡಾರು ಎಂಬಲ್ಲಿ ವಶಕ್ಕೆ ಪಡೆದಿದ್ದಾರೆ. ಮೂಡುಬಿದಿರೆ ಪಿಎಸ್‌ಐ ಪ್ರತಿಭಾ ಕೆ.ಸಿ. ಹಾಗೂ ಸಿಬ್ಬಂದಿ ಗಸ್ತು ಕರ್ತವ್ಯದಲ್ಲಿದ್ದಾಗ, ತೋಡಾರು ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭಿಸಿದಾಗ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ತೋಡಾರು ಗ್ರಾಮದ ಪ್ರವೇಶ ದ್ವಾರದ ಬಳಿ ಗರಡಿ ಕಡೆಯಿಂದ

ಮೂಡುಬಿದಿರೆ : ಎಂಟು ಜಾನುವಾರುಗಳ ರಕ್ಷಣೆ; ಆರೋಪಿಗಳು ಪರಾರಿ Read More »

ಸಮರ ಸಂಧಾನ ಕೆಡಿಸಿದ್ದು ನೆತನ್ಯಾಹು ಫೋನ್‌ ಕರೆ!

ಒಂದು ಫೋನ್‌ ಕರೆಯಿಂದಾಗಿ ಇಡೀ ಮಾತುಕತೆ ವಿಫಲವಾಯಿತು ಎಂದು ದೂರಿದ ಇರಾನ್‌ ಟೆಹ್ರಾನ್‌: ಅಮೆರಿಕ ಮತ್ತು ಇರಾನ್ ನಡುವೆ ಸಂಧಾನವಾಗಿ ಯುದ್ಧ ನಿಂತು ಜಗತ್ತು ಶಾಂತಿಯತ್ತ ಮರಳುತ್ತದೆ ಎಂಬ ನಿರೀಕ್ಷೆ ನಿನ್ನೆ ಹುಸಿಯಾಗಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾಯಿತು.‌ ಈ ಬೆಳವಣಿಯ ಕೆಲ ಗಂಟೆಗಳ ನಂತರ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌ ಪ್ರಧಾನಿ ಕಾರಣ ಎಂದು ಹೇಳಿದೆ. ಅಮೆರಿಕ – ಇರಾನ್‌ ಮಾತುಕತೆ ಮಧ್ಯೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌

ಸಮರ ಸಂಧಾನ ಕೆಡಿಸಿದ್ದು ನೆತನ್ಯಾಹು ಫೋನ್‌ ಕರೆ! Read More »

ವಿವಾಹಿತ ಮಹಿಳೆಯಿಂದ ಬ್ಲ್ಯಾಕ್‌ಮೇಲ್‌ : ಜಿಮ್‌ ಟ್ರೈನರ್‌ ಆತ್ಮಹತ್ಯೆ

ನೆಲಮಂಗಲ: ವಿವಾಹಿತೆಯ ಮೋಹಕ್ಕೆ ಬಿದ್ದು, ಬ್ಲ್ಯಾಕ್‌ಮೇಲ್‌ಗೆ ಸಿಲುಕಿದ್ದ 28 ವರ್ಷದ ಜಿಮ್‌ ಟ್ರೈನರ್‌ ನೇಣು ಬಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ವಾಜರಹಳ್ಳಿಯಲ್ಲಿ ನಡೆದಿದೆ. ದಿಲೀಪ್ (28) ಮೃತ ಯುವಕನಾಗಿದ್ದು, ನೆಲಮಂಗಲದ ವಾಜರಹಳ್ಳಿಯಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡಿಕೊಂಡಿದ್ದರು. ಜಿಮ್‌ನಲ್ಲಿ ದಿಲೀಪ್‌ಗೆ 42 ವರ್ಷದ ವಿವಾಹಿತ ಮಹಿಳೆಯ ಪರಿಚಯವಾಗಿತ್ತು. ಆಕೆಗೆ ಮದುವೆಯಾಗಿದ್ದರೂ ದಿಲೀಪ್ ಜೊತೆ ರಿಲೇಶನ್‌ಶಿಪ್‌ನಲ್ಲಿದ್ದಳು. ನಂತರ ಆಕೆ ಬ್ಲ್ಯಾಕ್‌ಮೇಲ್‌ ಮಾಡಲಾರಂಭಿಸಿದಳು ಎಂದು ದಿಲೀಪ್ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಮಹಿಳೆಯ ಬ್ಲ್ಯಾಕ್‌ಮೇಲ್‌ನಿಂದ

ವಿವಾಹಿತ ಮಹಿಳೆಯಿಂದ ಬ್ಲ್ಯಾಕ್‌ಮೇಲ್‌ : ಜಿಮ್‌ ಟ್ರೈನರ್‌ ಆತ್ಮಹತ್ಯೆ Read More »

ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆಯ ಮೇಲೆ ಬಲೂಚಿಸ್ತಾನ ಬಂಡುಕೋರರ ದಾಳಿ : ಮೂವರು ಸಾವು

ದಾಳಿಯನ್ನು ಭೂಮಿಯಿಂದ ಸಮುದ್ರಕ್ಕೆ ವಿಸ್ತರಿಸಿದ ಬಂಡುಕೋರರು ಇಸ್ಲಾಮಾಬಾದ್ : ಬಲೂಚಿಸ್ತಾನದ ಬಂಡುಕೋರರು ಭಾನುವಾರ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆಯ ಮೇಲೆ ನಡೆಸಿದ ಭೀಕರ ದಾಳಿಯಲ್ಲಿ ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಕಡಲ ಪ್ರಾಧಿಕಾರದ ಹಡಗಿನ ಮೇಲೆ ನಡೆದ ಇತಿಹಾಸದ ಮೊದಲ ದಾಳಿ ಇದಾಗಿದೆ. ಪಾಕಿಸ್ತಾನ-ಇರಾನ್ ಗಡಿಯ ಸಮೀಪವಿರುವ ಕರಾವಳಿ ಪ್ರದೇಶದಲ್ಲಿ ಕೋಸ್ಟ್ ಗಾರ್ಡ್ ದೋಣಿಯು ಎಂದಿನಂತೆ ಗಸ್ತು ತಿರುಗುತ್ತಿತ್ತು. ಈ ವೇಳೆ ದೋಣಿಯನ್ನು ಸುತ್ತುವರಿದ ಬಂಡುಕೋರರು ಮನಬಂದಂತೆ ಗುಂಡಿನ ಮಳೆ ಕರೆದಿದ್ದಾರೆ. ಅನಿರೀಕ್ಷಿತ ದಾಳಿಯಿಂದ ಕಂಗೆಟ್ಟ

ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆಯ ಮೇಲೆ ಬಲೂಚಿಸ್ತಾನ ಬಂಡುಕೋರರ ದಾಳಿ : ಮೂವರು ಸಾವು Read More »

ವಿಟ್ಲ : ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಕಸಿದು ಪರಾರಿ

ವಿಟ್ಲ: ಮನೆಯ ಪರಿಸರದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಬೈಕಿನಲ್ಲಿ ಬಂದ ಅಪರಿಚಿತನೋರ್ವ ಕಸಿದು ಪರಾರಿಯಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ನಡೆದಿದೆ. ಕೋಡಪದವು ಮದಕದ ನಿವಾಸಿಯೊಬ್ಬರ ಮಗು ಮನೆಯ ಮುಂಭಾಗ ಆಟವಾಡುತ್ತಿದ್ದಾಗ ಕೆಟಿಎಂ ಬೈಕಿನಲ್ಲಿ ಬಂದ ವ್ಯಕ್ತಿ ಮಗುವಿನ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ಕೃತ್ಯದ ದೃಶ್ಯವು ಸಮೀಪದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೈಕಿನಲ್ಲಿ ಸವಾರನು ಹೆಲ್ಮೆಟ್ ಧರಿಸಿ ವೇಗವಾಗಿ ಚಲಿಸುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬಂದಿದೆ. ವಿಟ್ಲ ಪೊಲೀಸರು ತಕ್ಷಣವೇ

ವಿಟ್ಲ : ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಕಸಿದು ಪರಾರಿ Read More »

error: Content is protected !!
Scroll to Top