ಅಪರಾಧ

ಶಾಲೆಯಿಂದ 215 ಮಕ್ಕಳು, 12 ಶಿಕ್ಷಕರನ್ನು ಅಪಹರಿಸಿದ ಬಂಡುಕೋರರು

ನೈಜೀರಿಯಾ : ನೈಜೀರಿಯಾದ ನೈಜರ್ ರಾಜ್ಯದ ಕ್ಯಾಥೋಲಿಕ್ ಶಾಲೆಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿದ್ದಾರೆ. ಅಗ್ವಾರಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿರುವ ಪಾಪಿರಿ ಸಮುದಾಯದ ಸೈಂಟ್‌ ಮೇರಿ ಶಾಲೆಯಲ್ಲಿ ಈ ದಾಳಿ ನಡೆದಿದೆ. ನೈಜೀರಿಯಾದ ಕ್ರಿಶ್ಚಿಯನ್ ಅಸೋಸಿಯೇಷನ್ ​​ಪ್ರಕಾರ, ಬಂದೂಕುಧಾರಿಗಳು ಶಾಲೆಗೆ ನುಗ್ಗಿ 215 ಮಕ್ಕಳು ಮತ್ತು ವಿದ್ಯಾರ್ಥಿಗಳು ಹಾಗೂ 12 ಶಿಕ್ಷಕರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ. ಘಟನೆಯ ನಂತರ ಈ ಪ್ರದೇಶದಲ್ಲಿ ಭೀತಿ ಮತ್ತು ಭಯದ ವಾತಾವರಣವಿತ್ತು ಎಂದು ನೈಜರ್ […]

ಶಾಲೆಯಿಂದ 215 ಮಕ್ಕಳು, 12 ಶಿಕ್ಷಕರನ್ನು ಅಪಹರಿಸಿದ ಬಂಡುಕೋರರು Read More »

ಮಾದಕ ದ್ರವ್ಯ ಸೇವನೆ: ಮಹಮ್ಮದ್ ಅನೀಸ್ ಪೊಲೀಸರ ಬಲೆಗೆ

ಪುತ್ತೂರು: ಯುವಕನೊಬ್ಬನನ್ನು ಮಾದಕ ದ್ರವ್ಯ ಸೇವನೆ ಆರೋಪದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಮ್ಮಿಂಜೆ ಮರೀಲ್ ನಿವಾಸಿ ಮಹಮ್ಮದ್ ಅನೀಸ್ (29) ಎಂಬಾತನೇ ಆರೋಪಿ. ಪುತ್ತೂರು ನಗರ ಪೊಲೀಸ್ ಸಿಬ್ಬಂದಿ ರೌಂಡ್ಸ್‌ನಲ್ಲಿದ್ದ ಸಂದರ್ಭದಲ್ಲಿ ದರ್ಬೆ ಸಮೀಪ ಅನುಚಿತವಾಗಿ ವರ್ತಿಸುತ್ತಿದ್ದ ಅನೀಸ್ ಪೊಲೀಸರನ್ನು ಕಂಡೊಡನೆ ಓಡಿ ಹೋಗಲು ಯತ್ನಿಸಿದ್ದಾನೆ. ಆತನನ್ನು ಹಿಡಿದು ಪ್ರಶ್ನೆ ಮಾಡಿದಾಗ ಆತ ಅಮಲಿನಲ್ಲಿರುವುದು ಕಂಡುಬಂತು. ಅದರಂತೆ ಆತನನ್ನು ಸರ್ಕಾರಿ ಆಸ್ಪತ್ರೆಯ ವೈದ್ಯರ ಬಳಿ ಕರೆದೊಯ್ದು ಪರೀಕ್ಷೆ ನಡೆಸಿದಾಗ ಆತ ಅಮಲು ಪದಾರ್ಥ ಸೇವನೆ ಮಾಡಿರುವುದು ದೃಢಪಟ್ಟಿದೆ.

ಮಾದಕ ದ್ರವ್ಯ ಸೇವನೆ: ಮಹಮ್ಮದ್ ಅನೀಸ್ ಪೊಲೀಸರ ಬಲೆಗೆ Read More »

ಉಡುಪಿಯಲ್ಲೂ ಪತ್ತೆಯಾದರು ಪಾಕ್‌ ಬೇಹುಗಾರರು

ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರ ಸೆರೆ ಹಡಗುಗಳಿಗೆ ಸಂಬಂಧಿಸಿದ ರಹಸ್ಯ ತಾಂತ್ರಿಕ ಮಾಹಿತಿ ಪಾಕ್‌ಗೆ ರವಾನೆ ಉಡುಪಿ : ಪಾಕಿಸ್ತಾನ ಪರ ಬೇಹುಗಾರಿಕೆ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ಬಂಧಿಸಲಾಗಿದೆ. ಮಲ್ಪೆಯಲ್ಲಿರುವ ಕೊಚ್ಚಿನ್ ಶಿಪ್‌ಯಾರ್ಡ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಉತ್ತರ ಪ್ರದೇಶ ಮೂಲದ ರೋಹಿತ್ ಮತ್ತು ಸಂತ್ರಿ ಎಂದು ಗುರುತಿಸಲಾಗಿದೆ. ಇವರು ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿಯನ್ನು ರವಾನಿಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಬ್ಬರೂ ಸುಷ್ಮಾ ಮೆರಿನ್ ಪ್ರೈವೇಟ್ ಲಿಮಿಟೆಡ್

ಉಡುಪಿಯಲ್ಲೂ ಪತ್ತೆಯಾದರು ಪಾಕ್‌ ಬೇಹುಗಾರರು Read More »

ಪತಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಪತ್ನಿ ಪೊಲೀಸ್‌ ಕಸ್ಟಡಿಗೆ

ಬಿ.ಸಿ.ರೋಡ್‌ ಬಟ್ಟೆ ಮಳಿಗೆಯಲ್ಲಿ ಪತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಪತ್ನಿ ಬಂಟ್ವಾಳ : ಬಿ.ಸಿ.ರೋಡ್‌ನಲ್ಲಿ ಗ್ರಾಹಕಳಂತೆ ಸೋಗುಹಾಕಿ ಬುರ್ಖಾ ಧರಿಸಿಕೊಂಡು ಬಂದು ಕ್ಯಾಶ್‌ ಕೌಂಟರ್‌ನಲ್ಲಿ ಕುಳಿತಿದ್ದ ಅಂಗಡಿಯ ಮಾಲೀಕ ತನ್ನ ಪತಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದ ಪತ್ನಿ ಜ್ಯೋತಿ ಕೆ.ಟಿ.ಯನ್ನು ನ್ಯಾಯಾಲಯ ಪೊಲೀಸ್‌ ಕಸ್ಟಡಿಗೊಪ್ಪಿಸಿದೆ. ಆಕೆ ಪತಿ ಕೃಷ್ಣಕುಮಾರ್ ಸೋಮಯಾಜಿ ಅವರ ತಲೆ, ಎದೆ ಮತ್ತು ಕೈಗಳಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದಳು. ಸೋಮಯಾಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿ.ಸಿ.ರೋಡ್‌ನ ಸೋಮಯಾಜಿ ಟೆಕ್ಸ್‌ಟೈಲ್ಸ್‌ನ ಮಾಲೀಕರಾದ ಕೃಷ್ಣಕುಮಾರ್ ನವೆಂಬರ್ 19ರಂದು

ಪತಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದ ಪತ್ನಿ ಪೊಲೀಸ್‌ ಕಸ್ಟಡಿಗೆ Read More »

ತಂದೆ-ತಾಯಿ ಕಣ್ಣೆದುರೆ 5 ವರ್ಷದ ಬಾಲಕಿಯನ್ನು ಹೊತ್ತೊಯ್ದು ಸಾಯಿಸಿದ ಚಿರತೆ

ಚಿಕ್ಕಮಗಳೂರು : ತಂದೆ-ತಾಯಿಯ ಕಣ್ಣೆದುರೇ ಐದು ವರ್ಷ ಪ್ರಾಯದ ಬಾಲಕಿಯನ್ನು ಚಿರತೆ ಕೊಂಡೊಯ್ದು ಸಾಯಿಸಿದ ದಾರುಣ ಘಟನೆ ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ಸಂಭವಿಸಿದೆ. ಚಿರತೆ ದಾಳಿಯಿಂದ ಸಾವನ್ನಪ್ಪಿದ ಬಾಲಕಿಯನ್ನು ಸಾನ್ವಿ (5) ಎಂದು ಗುರುತಿಸಲಾಗಿದೆ. ಮನೆಯ ಹಿಂದೆ ಕೊಟ್ಟಿಗೆಯಲ್ಲಿದ್ದ ಮಗುವಿನ ಮೇಲೆ ಚಿರತೆ ದಾಳಿ ಮಾಡಿದೆ. ಈ ವೇಳೆ ಮಗು ಚೀರಾಟ ಕೇಳಿ ತಂದೆ ತಾಯಿ ಬಂದಿದ್ದಾರೆ. ಅವರ ಎದರುರಲ್ಲೇ ಚಿರತೆ ಮಗುವನ್ನು ಕಾಡಿಗೆ ಹೊತ್ತೊಯ್ದಿದೆ. ಬಳಿಕ ಸ್ಥಳಿಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.

ತಂದೆ-ತಾಯಿ ಕಣ್ಣೆದುರೆ 5 ವರ್ಷದ ಬಾಲಕಿಯನ್ನು ಹೊತ್ತೊಯ್ದು ಸಾಯಿಸಿದ ಚಿರತೆ Read More »

ಧರ್ಮಸ್ಥಳ ಪ್ರಕರಣ : ಎಸ್‌ಐಟಿಯಿಂದ ಕೋರ್ಟ್‌ಗೆ ವರದಿ ಸಲ್ಲಿಕೆ

ಸುಳ್ಳು ಸಾಕ್ಷಿ ಕುರಿತು ತನಿಖೆಯಿಂದ ಕಂಡುಕೊಂಡ ಮಾಹಿತಿಗಳ ವರದಿ ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎಸ್.ಐ.ಟಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಆರು ಮಂದಿ ಆರೋಪಿಗಳ ವಿರುದ್ಧ ನ.20 ರಂದು ‘ಸುಳ್ಳು ಸಾಕ್ಷಿ’ ನೀಡಿರುವ ಬಗ್ಗೆ ತನಿಖೆಯಿಂದ ಕಂಡು ಬಂದ ಮಾಹಿತಿಗಳ ಬಗ್ಗೆ ವರದಿಯನ್ನು ಸಲ್ಲಿಸಿದ್ದಾರೆ. ಎಸ್.ಐ.ಟಿ ಅಧಿಕಾರಿಗಳು ಪ್ರಕರಣದಲ್ಲಿ ಜೈಲಿನಲ್ಲಿರುವ ಚಿನ್ನಯ್ಯ ಸೇರಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ, ಸುಜಾತ ಭಟ್

ಧರ್ಮಸ್ಥಳ ಪ್ರಕರಣ : ಎಸ್‌ಐಟಿಯಿಂದ ಕೋರ್ಟ್‌ಗೆ ವರದಿ ಸಲ್ಲಿಕೆ Read More »

ಮಾದಕ ವಸ್ತು ಸೇವನೆ, ಮಾರಾಟ ಆರೋಪಿಗಳಿಗೆ ಶಿಕ್ಷೆ ಪ್ರಕಟ

ಉಪ್ಪಿನಂಗಡಿ: ಮಾದಕ ವಸ್ತು ಸೇವನೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಹಾಗೆ ಮೂವರು ಆರೋಪಿಗಳಿಗೆ ಹತ್ತು ಸಾವಿರ ರೂ. ದಂಡ ಮತ್ತು ಒಂದು ವರ್ಷ ಸಾದಾ ಜೈಲು ಶಿಕ್ಷೆ ಪ್ರಕಟಿಸಿ ನ್ಯಾಯಾಲಯ ಆದೇಶ ನೀಡಿದೆ. ಆರೋಪಿಗಳನ್ನು ಸಲೀಂ ಹುಸೇನ್, ಶಹಜ್ ಅಹಮದ್, ಮಹಮದ್ ಶಾಫಿ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿ, ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿರುವುದಾಗಿದೆ.

ಮಾದಕ ವಸ್ತು ಸೇವನೆ, ಮಾರಾಟ ಆರೋಪಿಗಳಿಗೆ ಶಿಕ್ಷೆ ಪ್ರಕಟ Read More »

ಮದುವೆ ಮನೆಗೆ ಕನ್ನ ಹಾಕಿ ಅಡಿಕೆ ಹೊತ್ತೊಯ್ದ ಕಳ್ಳರು

ಪುತ್ತೂರು: ಮಗಳ ಮದುವೆಯ ಸಂಭ್ರಮದಲ್ಲಿದ್ದ ಕುಟುಂಬವೊಂದರ ಮೇಲೆ ಕಳ್ಳರು ವಕ್ರದೃಷ್ಟಿ ಬೀರಿದ್ದು, ಮದುವೆ ಮನೆಯಿಂದ ಸುಮಾರು 1 ಲಕ್ಷ ರೂ. ಮೌಲ್ಯದ ಅಡಿಕೆ ಕಳ್ಳತನ ಮಾಡಿ ಶಾಕ್ ನೀಡಿದೆ. ಈ ಸಂಬಂಧ ಮನೆಯ ಮಾಲೀಕ ವೀರಮಂಗಲದ ಸುಳಿಮೇಲು ‌ನಿವಾಸಿ ಅಚ್ಯುತ ಗೌಡ (57) ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಗಳ ನಿಶ್ಚಿತಾರ್ಥ, ಮದುವೆಯ ಕಾರ್ಯಗಳಲ್ಲಿ ಕುಟುಂಬ ಬ್ಯುಸಿ ಯಾಗಿದ್ದ ಸಮಯದಲ್ಲಿ ಕಳ್ಳರು ಕೈಚಳಕ ತೋರಿರುವುದಾಗಿದೆ. ಅಚ್ಯುತ ಗೌಡ ಅವರು ಸುಮಾರು 36 ಗೋಣಿ

ಮದುವೆ ಮನೆಗೆ ಕನ್ನ ಹಾಕಿ ಅಡಿಕೆ ಹೊತ್ತೊಯ್ದ ಕಳ್ಳರು Read More »

ನಿಷೇಧಿತ ಮಾದಕ ವಸ್ತು ಮಾರಾಟ: ಮುಸ್ತಫಾ ವಶಕ್ಕೆ

ಪುತ್ತೂರು: ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಕಬಕದ ಮಹಮ್ಮದ್ ಮುಸ್ತಫಾ(36) ಎಂದು ಗುರುತಿಸಲಾಗಿದೆ. ಆರೋಪಿ ಮುಕ್ರಂಪಾಡಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ 14 ಗ್ರಾಂ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದನು. ಆರೋಪಿಯ ವಿರುದ್ಧ ಈಗಾಗಲೇ ಪೋಕ್ಸೋ ಪ್ರಕರಣ ಸಹ ದಾಖಲಾಗಿ, ಮೂರು ವರ್ಷಗಳ ಜೈಲು ಶಿಕ್ಷೆಯನ್ನು ಸಹ ಮುಗಿಸಿದ್ದ ಎಂದು ತಿಳಿದು ಬಂದಿದೆ. 2024 ರಲ್ಲಿಯೂ ಈತನ ವಿರುದ್ಧ ಮಾದಕ ವಸ್ತುಗಳನ್ನು ಮಾರಾಟ

ನಿಷೇಧಿತ ಮಾದಕ ವಸ್ತು ಮಾರಾಟ: ಮುಸ್ತಫಾ ವಶಕ್ಕೆ Read More »

ಧರ್ಮಸ್ಥಳ ಪ್ರಕರಣ : ಬರೋಬ್ಬರಿ 4 ಸಾವಿರ ಪುಟಗಳ ಚಾರ್ಜ್‌ಶೀಟ್‌ ರೆಡಿ

ಇಂದು ನ್ಯಾಯಾಲಯಕ್ಕೆ ಸಲ್ಲಿಕೆ ; ತನಿಖೆ ನಿಲ್ಲಿಸಲು ಬುರುಡೆ ಗ್ಯಾಂಗ್‌ನಿಂದ ಶತ ಪ್ರಯತ್ನ ಧರ್ಮಸ್ಥಳ: ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬರೋಬ್ಬರಿ 4,000 ಪುಟಗಳ ಚಾರ್ಜ್‌ಶೀಟ್‌ ಸಿದ್ಧಪಡಿಸಿದೆ. ನಾಲ್ಕು ತಿಂಗಳ ಕಾಲ ತನಿಖೆ ನಡೆಸಿರುವ ಪೊಲೀಸರು ಎಲ್ಲ ಅಂಶಗಳನ್ನು ಎಲ್ಲ ಆಯಾಮದಿಂದ ಪರಿಶೀಲಿಸಿದ್ದಾರೆ. ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ ಸಂಬಂಧ ಎಸ್‌ಐಟಿ ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಇಂದು ಬೆಳ್ತಂಗಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಎಸ್‌ಐಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್

ಧರ್ಮಸ್ಥಳ ಪ್ರಕರಣ : ಬರೋಬ್ಬರಿ 4 ಸಾವಿರ ಪುಟಗಳ ಚಾರ್ಜ್‌ಶೀಟ್‌ ರೆಡಿ Read More »

error: Content is protected !!
Scroll to Top