ಅಪರಾಧ

ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು

ಟ್ರಕ್‌ಗಳಲ್ಲಿ ಪಕ್ಕದ ರಾಜ್ಯಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಟ ಬೆಂಗಳೂರು: ಗೋ ಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಬೆಂಕಿ‌ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಐನಾಪುರ ಗ್ರಾಮದ ಬಳಿ ಕುಡಚಿ ಪಟ್ಟಣದಿಂದ ಹೈದರಾಬಾದ್ ಕಡೆಗೆ ಸಾಗುತ್ತಿದ್ದ ನಾಲ್ಕು ಲಾರಿಗಳಲ್ಲಿ ಗೋ ಮಾಂಸ ಸಾಗಾಟ ನಡೆಯುತ್ತಿರುವ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ದೊರಕಿದೆ. ಸೋಮವಾರ ರಾತ್ರಿ ಮಾರ್ಗಮಧ್ಯ ಲಾರಿ ತಡೆದು ಪರಿಶೀಲಿಸಿದಾಗ KA71 […]

ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್‌ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು Read More »

ಧರ್ಮಸ್ಥಳ ಪ್ರಕರಣ : ಇಂದು ಮತ್ತೆ ನ್ಯಾಯಾಲಯಕ್ಕೆ ಚಿನ್ನಯ್ಯ ಹಾಜರು

ತಲೆ ಬುರುಡೆ ಕೇಸ್‌ ಸಿಐಡಿಗೆ ಹಸ್ತಾಂತರ ಸಾಧ್ಯತೆ ಧರ್ಮಸ್ಥಳ : ಬುರುಡೆ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯನನ್ನು ಎಸ್‌ಐಟಿ ಇಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದೆ. ಈ ನಡುವೆ ಚಿನ್ನಯ್ಯ ಮತ್ತು ಮಹೇಶ್‌ ಶೆಟ್ಟಿ ತಿಮರೋಡಿ ನಡುವೆ ತಿಮರೋಡಿ ಮನೆಯಲ್ಲೇ ನಡೆದಿದೆ ಎನ್ನಲಾದ ಮಾತುಕತೆಯ ವಿಡಿಯೋಗಳನ್ನು ಸರಣಿಯಾಗಿ ಬುರುಡೆ ಗ್ಯಾಂಗ್‌ ಬಿಡುಗಡೆ ಮಾಡಿ ಪ್ರಕರಣಕ್ಕೆ ತಿರುವು ನೀಡಲು ಯತ್ನಿಸುತ್ತಿದೆ. ಈ ವಿಡಿಯೋಗಳ ಸಂಖ್ಯೆ ಎಂಟಕ್ಕೆ ತಲುಪಿದ್ದು, ಇದರ ನಡುವೆ ಇಂದು ನ್ಯಾಯಾಲಯಕ್ಕೆ ಚಿನ್ನಯ್ಯನನ್ನು ಕರೆತರಲಾಗುತ್ತಿದೆ. ಈ ನಡುವೆ ಮಹೇಶ್

ಧರ್ಮಸ್ಥಳ ಪ್ರಕರಣ : ಇಂದು ಮತ್ತೆ ನ್ಯಾಯಾಲಯಕ್ಕೆ ಚಿನ್ನಯ್ಯ ಹಾಜರು Read More »

ವಿಮಾನದ ಚಕ್ರದ ನಡುವೆ ಅಡಗಿಕೊಂಡು ಅಫಘಾನಿಸ್ತಾನದಿಂದ ದಿಲ್ಲಿ ಗೆ ಬಂದ ಬಾಲಕ

13 ವರ್ಷದ ಬಾಲಕನ ಅಪಾಯಕಾರಿ ಸಾಹಸ ನೋಡಿ ಜಗತ್ತು ನಿಬ್ಬೆರಗು ನವದೆಹಲಿ : 13 ವರ್ಷದ ಬಾಲಕನೊಬ್ಬ ಅಫ್ಘಾನಿಸ್ತಾನದ ಕಾಬೂಲ್‌ನಿಂದ ದೆಹಲಿ ತನಕ ವಿಮಾನದ ಚಕ್ರದ ಎಡೆಯಲ್ಲಿ ಕುಳಿತು ಬಂದಿರುವುದು ಅಚ್ಚರಿ ಹುಟ್ಟಿಸಿದೆ. ಬಾಲಕ ತನ್ನ ಜೀವವನ್ನೇ ಪಣಕ್ಕೊಡ್ಡಿ ವಿಮಾನದ ಹಿಂಬದಿ ಚಕ್ರದ ಭಾಗದಲ್ಲಿ 94 ನಿಮಿಷಗಳ ಕಾಲ ಪ್ರಯಾಣ ಮಾಡಿ ದಿಲ್ಲಿ ತಲುಪಿದ್ದಾನೆ. ಅಷ್ಟು ಎತ್ತರದಲ್ಲಿ ವಿಮಾನ ಹಾರುತ್ತಿರುವಾಗಲೂ ಈ ಬಾಲಕ ಯಾವುದೇ ಹಾನಿಯಾಗದೆ ಸುರಕ್ಷಿತವಾಗಿ ತಲುಪಿರುವುದು ಹೇಗೆ ಎಂಬುದು ಅಚ್ಚರಿ ಹುಟ್ಟಿಸಿದೆ. ಬಾಲಕ ಇರಾನ್‌ಗೆ

ವಿಮಾನದ ಚಕ್ರದ ನಡುವೆ ಅಡಗಿಕೊಂಡು ಅಫಘಾನಿಸ್ತಾನದಿಂದ ದಿಲ್ಲಿ ಗೆ ಬಂದ ಬಾಲಕ Read More »

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ ; ಓರ್ವ ಆರೋಪಿ ಸೆರೆ

ಒಂಬತ್ತು ದನಗಳ ರಕ್ಷಣೆ – ಮಾಂಸ, ರಿಕ್ಷಾ ವಶ ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಸಂಗಬೆಟ್ಟು ಗ್ರಾಮದ ಕೆರೆ ಬಳಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಸಾಯಿಖಾನೆಯನ್ನು ಪತ್ತೆಹಚ್ಚಿರುವ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ವೇಳೆಯೇ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿದ್ದಾರೆ. ಪೋಲೀಸರ ದಾಳಿ ವೇಳೆ ಪ್ರಮುಖ ಆರೋಪಿ ನಾಸೀರ್ ಸಹಿತ ಇತರರು ಪರಾರಿಯಾಗಿದ್ದು, ಮೂಲ್ಕಿ ಕೃಷ್ಣಾಪುರ ಕಾರ್ನಾಡು ನಿವಾಸಿ ತೌಸೀಫ್ ಎಂಬಾತನನ್ನು ಬಂಧಿಸಲಾಗಿದೆ. ದಂಧೆಗೆ

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ ; ಓರ್ವ ಆರೋಪಿ ಸೆರೆ Read More »

ವಿಚಾರಣೆಗೆ ಹಾಜರಾಗದ ತಿಮರೋಡಿ: ಮನೆಗೆ ಇನ್ನೊಂದು ನೋಟಿಸ್‌ ಅಂಟಿಸಿದ ಪೊಲೀಸರು

ಮನೆಯಲ್ಲಿ ಶಸ್ತ್ರಾಸ್ತ್ರ ಇಟ್ಟುಕೊಂಡ ಪ್ರಕರಣ ಮಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ನಿನ್ನೆಯೂ ಬೆಳ್ತಂಗಡಿ ಪೊಲೀಸರ ವಿಚಾರಣೆಗೆ ಬಾರದೆ ತಪ್ಪಿಸಿಕೊಂಡಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ ಭಾನುವಾರ ತಿಮರೋಡಿ ಬೆಳ್ತಂಗಡಿ ಠಾಣೆಗೆ ಹಾಜರಾಗಿ ವಿಚಾರಣೆ ಎದುರಿಸಬೇಕಿತ್ತು. ಆದರೆ ವಿಚಾರಣೆಗೆ ಬರಲು ಅಸಾಧ್ಯ ಎಂದು ಆಪ್ತರ ಮೂಲಕ ತಿಮರೋಡಿ ಪೊಲೀಸರಿಗೆ ಮನವಿ ಮಾಡಿದ್ದರು. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸರು ತಿಮರೋಡಿ ಮನೆಗೆ ತೆರಳಿ ಎರಡನೇ ನೋಟಿಸ್‌ ಅಂಟಿಸಿ ಸೆ.25ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಸಾಕ್ಷಿಯಾಗಿ ಆಗಮಿಸಿ ಈಗ ಬಂಧನಕ್ಕೆ

ವಿಚಾರಣೆಗೆ ಹಾಜರಾಗದ ತಿಮರೋಡಿ: ಮನೆಗೆ ಇನ್ನೊಂದು ನೋಟಿಸ್‌ ಅಂಟಿಸಿದ ಪೊಲೀಸರು Read More »

ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್‌

ರಾಶಿ ರಾಶಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ತಿಮರೋಡಿಗೆ ವಿವರಿಸಿದ ಚಿನ್ನಯ್ಯ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಪ್ರಸಕ್ತ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಡುವಿನ ಭೇಟಿಯ ಹಳೆಯ ಒಂದು ವಿಡಿಯೋ ಶುಕ್ರವಾರ ವೈರಲ್‌ ಆದ ಬಳಿಕ ಈಗ 2 ಮತ್ತು 3ನೇ ವಿಡಿಯೋ ಶನಿವಾರ ಹೊರಗೆ ಬಂದು ವೈರಲ್‌ ಆಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು

ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್‌ Read More »

ಅಡಿಕೆ ಕಳ್ಳತನ ಮಾಡಿದ ಆರೋಪಿಗಳ ಬಂಧನ

ಸುಳ್ಯ: ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಾವರ ಪೇಟೆಯಲ್ಲಿ ನಡೆದಿದೆ.ಬಂಧಿತ ಆರೋಪಿಗಳನ್ನು ಮಂಡೆಕೋಲು ಗ್ರಾಮ ಸುಳ್ಯ ತಾಲೂಕು ಸುಪ್ರಿತ್ ಕೆ(22) ಹಾಗೂ ಜಾಲ್ಕೂರು ಗ್ರಾಮ ಸುಳ್ಯ ತಾಲೂಕು ಮಹಮ್ಮದ್ ಸಿನಾನ್21) ಎಂದು ಗುರುತಿಸಲಾಗಿದೆ. ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಞಾವರ ಪೇಟೆಯಲ್ಲಿರುವ ದಿನಸಿ ಅಂಗಡಿ ಮಾಲಕಮಹಮ್ಮದ್ ರಫೀಕ್ ಎಸ್ ಡಿ ರವರ ಬಾಬ್ತು ಅಡಿಕೆ ಸಂಗ್ರಹಿಸುವ ಗೋಡಾನ್ನಿಂದ 12.09.2025ರಂದು ರಾತ್ರಿ ಅಡಿಕೆಯನ್ನು ಯಾರೋ ಕಳ್ಳರು ಕಳ್ಳತನ

ಅಡಿಕೆ ಕಳ್ಳತನ ಮಾಡಿದ ಆರೋಪಿಗಳ ಬಂಧನ Read More »

ಕೆಎಸ್‌ಆರ್‌ಟಿಸಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ

ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಎನ್‌ಸಿ ರಸ್ತೆಯ ಬಳಿ, ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ,

ಕೆಎಸ್‌ಆರ್‌ಟಿಸಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ Read More »

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಸಂದೇಶ : ತಮಿಳುನಾಡಿನಿಂದ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸರು ತಮಿಳುನಾಡಿನಿಂದ ಬಂಧಿಸಿ ಕರೆತಂದಿದ್ದಾರೆ. ಮಲವಂತಿಗೆಯ ಕಿಲ್ಲೂರು ಮನೆ ನಿವಾಸಿ ಮುಹಮ್ಮದ್ ಕೈಫ್(22) ಬಂಧಿತ ಆರೋಪಿ. Karavali_tigers ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಆರೋಪದಲ್ಲಿ ಕೈಫ್ ವಿರುದ್ಧ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಜುಲೈ 19ರಂದು ಪ್ರಕರಣ ದಾಖಲಾಗಿತ್ತು. ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ಆರೋಪಿ ತಮಿಳುನಾಡಿಲ್ಲಿರುವ ಬಗ್ಗೆ ಮಾಹಿತಿ

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಸಂದೇಶ : ತಮಿಳುನಾಡಿನಿಂದ ಆರೋಪಿಯನ್ನು ಬಂಧಿಸಿದ ಪೊಲೀಸರು Read More »

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಗೆ ನೊಟೀಸ್ ಹಚ್ಚಿದ ಪೊಲೀಸರು

ಬೆಳ್ತಂಗಡಿ: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಇರಿಸಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಪೊಲೀಸರು ನೊಟೀಸ್ ಹಚ್ಚಿ ಬಂದಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಆರೋಪಿ ಚಿನ್ನಯ್ಯ‌ನಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ತಿಮರೋಡಿಯ ಮನೆಗೆ SIT ಅಧಿಕಾರಿಗಳು ದಾಳಿ ನಡೆಸಿದ್ದರು. ಈ‌ವೇಳೆ ಅವರ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿತ್ತು. ಈ‌ ಪ್ರಕರಣವನ್ನು SIT ಪೊಲೀಸರು ಬೆಳ್ತಂಗಡಿ ಪೊಲೀಸರಿಗೆ ವರ್ಗಾವಣೆ ಮಾಡಿದ್ದರು. ಅದರಂತೆ ತಿಮರೋಡಿ ಮನೆಗೆ ಮಹಜರು ನಡೆಸುವ ಸಲುವಾಗಿ ಸೆ. 18 ರಂದು ಪೊಲೀಸರು

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಗೆ ನೊಟೀಸ್ ಹಚ್ಚಿದ ಪೊಲೀಸರು Read More »

error: Content is protected !!
Scroll to Top