ಅಪರಾಧ

25ಕ್ಕೂ ಹೆಚ್ಚು ಕ್ರಿಮಿನಲ್‌ ಪ್ರಕರಣಗಳ ಕುಖ್ಯಾತ ಆರೋಪಿ ಬಂಧನ

ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪಾತಕಿ ಮಂಗಳೂರು: ಹಲವು ಬಾರಿ ಜಾಮೀನು ರಹಿತ ವಾರಂಟ್‌ ಹೊರಡಿಸಿದ್ದರೂ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ನಿವಾಸಿ ದಿವಂಗತ ಹಸನ್ ಮಹಮ್ಮದ್ ಎಂಬವರ ಪುತ್ರ ಅಬ್ದುಲ್ ರವೂಫ್ ಅಲಿಯಾಸ್ ಮೀಸೆ ರವೂಫ್ (48) ಆರೊಪಿ. ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಸುಮಾರು 19 ಪ್ರಕರಣಗಳು, ಕಾವೂರು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಮತ್ತು ಮಂಗಳೂರು […]

25ಕ್ಕೂ ಹೆಚ್ಚು ಕ್ರಿಮಿನಲ್‌ ಪ್ರಕರಣಗಳ ಕುಖ್ಯಾತ ಆರೋಪಿ ಬಂಧನ Read More »

ಡಿಜಿಟಲ್‌ ಅರೆಸ್ಟ್‌ಗೆ ಒಳಗಾಗಿ 2 ಕೋ. ರೂ. ಕಳೆದುಕೊಂಡ ಮಹಿಳಾ ಟೆಕ್ಕಿ

ಸೈಟ್‌, ಫ್ಲಾಟ್‌ ಮಾರಿ, ಸಾಲ ತೆಗೆದು ವಂಚಕರಿಗೆ ಹಣ ಪಾವತಿಸಿ ಮೋಸ ಹೋದ ಸಾಫ್ಟ್‌ವೇರ್‌ ಉದ್ಯೋಗಿ ಬೆಂಗಳೂರು : ಮಹಿಳಾ ಟೆಕ್ಕಿಯೊಬ್ಬರನ್ನು ಸೈಬರ್ ವಂಚಕರು ಡಿಜಿಟಲ್ ಅರೆಸ್ಟ್ ಮಾಡಿ 2 ಕೋ. ರೂ. ಲೂಟಿ ಮಾಡಿದ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸೈಬರ್‌ ಚೋರರ ಬೆದರಿಕೆಗೆ ಮಣಿದ ಮಹಿಳೆ ತನ್ನ ಫ್ಲಾಟ್‌, ಸೈಟ್‌ಗಳನ್ನು ಮಾರಾಟ ಮಾಡಿ, ಸಾಲ ತೆಗೆದು ಹಣ ಹೊಂದಿಸಿ ಕೊಟ್ಟಿದ್ದಾರೆ. ವಿಜ್ಞಾನ ನಗರದ ನ್ಯೂ ತಿಪ್ಪಸಂದ್ರ ನಿವಾಸಿ, ಸಾಫ್ಟ್‌ವೇರ್ ಉದ್ಯೋಗಿ ಭಾರಿ ವಂಚನೆಗೆ ಒಳಗಾದ

ಡಿಜಿಟಲ್‌ ಅರೆಸ್ಟ್‌ಗೆ ಒಳಗಾಗಿ 2 ಕೋ. ರೂ. ಕಳೆದುಕೊಂಡ ಮಹಿಳಾ ಟೆಕ್ಕಿ Read More »

ಲೋಕಾಯುಕ್ತ ದಾಳಿಯಾದಾಗ 50 ಸಾವಿರ ರೂ. ಟಾಯ್ಲೆಟ್‌ ಕಮೋಡ್‌ಗೆ ಹಾಕಿದ ಅಧಿಕಾರಿ

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ದಾಳಿ ಬಿಸಿ ಬೆಂಗಳೂರು : ರಾಜ್ಯದ ವಿವಿಧೆಡೆ ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್​​ ಕೊಟ್ಟಿದೆ. ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಸೇರಿ ವಿವಿಧೆಡೆ ಶೋಧ ನಡೆಸಿರುವ ಲೋಕಾಯುಕ್ತ ಸಿಬ್ಬಂದಿ ಕೆಲವೆಡೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು, ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆದಿದೆ. ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿರುವ ರಾಜಶೇಖರ್​ ಅವರ ಧಾರವಾಡದ ಸಿಲ್ವರ್ ಆರ್ಕೇಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ದಾಳಿಯಾದಾಗ 50 ಸಾವಿರ ರೂ. ಟಾಯ್ಲೆಟ್‌ ಕಮೋಡ್‌ಗೆ ಹಾಕಿದ ಅಧಿಕಾರಿ Read More »

ಬಂಟ್ವಾಳ : ಮದುವೆಗೆ ಕೆಲವೇ ತಾಸು ಬಾಕಿಯಿರುವಾಗ ವಧು ನಾಪತ್ತೆ!

ಬಂಟ್ವಾಳ : ಮದುವೆಗೆ ಕೆಲವೇ ತಾಸುಗಳು ಬಾಕಿಯಿರುವಾಗ ವಧು ಮನೆ ಬಿಟ್ಟು ಹೋದ ಘಟನೆಯೊಂದು ಬಂಟ್ವಾಳದ ಬಿ.ಸಿ.ರೋಡಿನ ಪಲ್ಲಮಜಲು ಎಂಬಲ್ಲಿ ಸಂಭವಿಸಿದೆ. ಅಶ್ಪಿಯ (21) ನಾಪತ್ತೆಯಾದ ಯುವತಿಯಾಗಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಡಿ.14ರಂದು ಅಶ್ಪಿಯಳ ಮದುವೆ ಬಂಟ್ವಾಳ ಬಿ ಮೂಡ ಗ್ರಾಮದ ಯುವಕನೊಂದಿಗೆ ನಿಶ್ಚಯವಾಗಿತ್ತು. ಹಿರಿಯರು ನಿಶ್ಚಯಿಸಿದ ಮದುವೆಗೆ ಎಲ್ಲ ತಯಾರಿ ಮುಗಿದಿತ್ತು. ಡಿ.14ರಂದು ಯುನಿಟಿ ಹಾಲ್‌ನಲ್ಲಿ ಮದುವೆ ನೆರವೇರಬೇಕಿತ್ತು. ಈ ನಡುವೆ ವಧು ಏಕಾಏಕಿ ಮನೆಯಿಂದ ನಾಪತ್ತೆಯಾಗಿದ್ದಾಳೆ. ಡಿ‌.14ರಂದು ನಸುಕಿನ

ಬಂಟ್ವಾಳ : ಮದುವೆಗೆ ಕೆಲವೇ ತಾಸು ಬಾಕಿಯಿರುವಾಗ ವಧು ನಾಪತ್ತೆ! Read More »

ವೃದ್ಧೆಯ ಮನೆಯಿಂದ ಚಿನ್ನ ದರೋಡೆಗೈದಿದ್ದ ಆರೋಪಿಗಳು ಸೆರೆ

ಒಂಟಿ ವೃದ್ಧೆಯನ್ನು ಬೆದರಿಸಿ ಚಿನ್ನ-ನಗದು ದೋಚಿದ್ದ ದುಷ್ಕರ್ಮಿಗಳು ಮಂಗಳೂರು: ಕುಡಿಯಲು ನೀರು ಕೇಳುವ ನೆಪದಲ್ಲಿ ವೃದ್ಧೆಯೊಬ್ಬರೇ ಇದ್ದ ಮನೆಗೆ ನುಗ್ಗಿ ಚಿನ್ನ ಹಾಗೂ ನಗದು ದೋಚಿದ ಪ್ರಕರಣವನ್ನು ಸುರತ್ಕಲ್ ಪೊಲೀಸರು ಭೇದಿಸಿದ್ದು, 4.43 ಲಕ್ಷ ರೂ.ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಸುರತ್ಕಲ್ ಮುಕ್ಕದ ಸಸಿಹಿತ್ಲು ರಸ್ತೆಯ ಮಿತ್ರಪಟ್ಟಣದ ಜಯಲಕ್ಷ್ಮೀ ನಿವಾಸದಲ್ಲಿ ವಾಸವಾಗಿರುವ ದಿ.ಜಿನ್ನಪ್ಪ ಸುವರ್ಣ ಅವರ ಪತ್ನಿ ಜಲಜ (85) ನೀಡಿದ ದೂರಿನ ಪ್ರಕಾರ, ಡಿಸೆಂಬರ್ 3ರಂದು ಮಧ್ಯಾಹ್ನ

ವೃದ್ಧೆಯ ಮನೆಯಿಂದ ಚಿನ್ನ ದರೋಡೆಗೈದಿದ್ದ ಆರೋಪಿಗಳು ಸೆರೆ Read More »

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಜಲ್ಟಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಪ್ರದೇಶಗಳನ್ನು ಸುತ್ತುವರಿದು ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಚಕಮಕಿ ನಡೆಯಿತು. ಭದ್ರತಾ ಪಡೆಗಳು ಭದ್ರತೆಯನ್ನು ಬಿಗಿಗೊಳಿಸಿ ಶೋಧ ಆರಂಭಿಸುತ್ತಿದ್ದಂತೆ, ಉಗ್ರರು ಗುಂಡು ಹಾರಿಸಿದರು. ಗುಂಡಿನ ಚಕಮಕಿ ನಡೆಯಿತು. ಆರಂಭಿಕ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡರು.

ಉಗ್ರರ ಜೊತೆ ಎನ್‌ಕೌಂಟರ್‌ನಲ್ಲಿ ಪೊಲೀಸ್‌ ಸಿಬ್ಬಂದಿ ಹುತಾತ್ಮ Read More »

ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ

ಶಬರಿಮಲೆ ಯಾತ್ರೆ ಮುಗಿಸಿ ಬಂದ ಖುಷಿಯಲ್ಲಿ ಎಣೆಣೆ ಪಾರ್ಟಿ ಮಾಡುತ್ತಿದ್ದ ಗೆಳೆಯರು ಉಡುಪಿ : ಸ್ನೇಹಿತರ ನಡುವೆ ಗುಂಡಿನ ಪಾರ್ಟಿಯಲ್ಲಿ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ಉಡುಪಿಯ ಬ್ರಹ್ಮಾವರ ಸಮೀಪ ನಡೆದಿದೆ. ನಾಲ್ವರು ಗೆಳೆಯರು ಸೇರಿ ತಮ್ಮ ಓರ್ರವ ಗೆಳೆಯನನ್ನು ಕೊಲೆ ಮಾಡಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶಬರಿಮಲೆ ಯಾತ್ರೆ ಮುಗಿಸಿಬಂದ ಖುಷಿಯಲ್ಲಿ ಮರುದಿನವೇ ಸ್ನೇಹಿತರು ಗುಂಡು ಹಾಕಲು ಕುಳಿತಿದ್ದರು ಎನ್ನಲಾಗಿದೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆಯಲ್ಲಿ ಘಟನೆ ನಡೆದಿದ್ದು, ಬ್ಯಾಂಕ್‌

ಸ್ನೇಹಿತರ ನಡುವೆ ಶುರುವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯ Read More »

ಸಿಡ್ನಿಯ ಭಯೋತ್ಪಾದಕ ದಾಳಿ ಪಾಕ್‌ ಮೂಲದ ತಂದೆ-ಮಗನ ಕೃತ್ಯ

ಯೆಹೂದಿಗಳನ್ನು ಗುರಿ ಮಾಡಿಕೊಂಡು ನಡೆದ ದಾಳಿಯಲ್ಲಿ ಸಾವಿನ ಸಂಖ್ಯೆ 16ಕ್ಕೇರಿಕೆ ಸಿಡ್ನಿ: ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಭಾನುವಾರ ಸಂಜೆ ಯಹೂದಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ 16 ಜನರನ್ನು ಕೊಂದ ಇಬ್ಬರು ಬಂದೂಕುಧಾರಿಗಳು ತಂದೆ ಮತ್ತು ಮಗ ಎಂದು ಪೊಲೀಸರು ತಿಳಿಸಿದ್ದಾರೆ. ಯೆಹೂದಿಗಳ ಹನುಕ್ಕಾ ಹಬ್ಬದ ಆಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೇರಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಆಸ್ಟ್ರೇಲಿಯಾ ಸರ್ಕಾರ ಈ ಹತ್ಯಾಕಾಂಡವನ್ನು ಭಯೋತ್ಪದನಾ ಕೃತ್ಯ ಎಂದು ಪರಿಗಣಿಸಿದ್ದು ಪಾಕಿಸ್ತಾನ ಮೂಲದ

ಸಿಡ್ನಿಯ ಭಯೋತ್ಪಾದಕ ದಾಳಿ ಪಾಕ್‌ ಮೂಲದ ತಂದೆ-ಮಗನ ಕೃತ್ಯ Read More »

ಹತ್ಯೆ ಮಾಡಲು ಜಾನುವಾರು ನೀಡಿದ ವ್ಯಕ್ತಿಯ ಮನೆ, ಕೊಟ್ಟಿಗೆ ಜಪ್ತಿ

ಬಂಟ್ವಾಳ : ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್‌ ಅಟೋದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಮುಂದುವರಿಸಿ ಆರೋಪಿ ಭೋಜ ಮೂಲ್ಯ ಎಂಬವರ ಮನೆ ಹಾಗೂ ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ. ಅಕ್ರಮ ದನ ಸಾಗಾಟದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಮತ್ತು ಸಿಬ್ಬಂದಿಗಳು KA-70-8686 ನೇ ನೊಂದಣಿಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ

ಹತ್ಯೆ ಮಾಡಲು ಜಾನುವಾರು ನೀಡಿದ ವ್ಯಕ್ತಿಯ ಮನೆ, ಕೊಟ್ಟಿಗೆ ಜಪ್ತಿ Read More »

ಸುಳ್ಯ: ಅಕ್ರಮವಾಗಿ ಸಾಗಿಸುತ್ತಿದ್ದ 10 ಲ.ರೂ. ಮೌಲ್ಯದ ಮರದ ದಿಮ್ಮಿ ವಶ

ಸುಳ್ಯ: ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಅಂದಾಜು 10 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ವಾಹನಗಳನ್ನು ಡಿಸೆಂಬರ್ 13 ರಂದು ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಯದ ದೇವಚಳ್ಳ ಗ್ರಾಮದ ಮುಂಡೋಡಿಯಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದಾರೆ. ಮುಂಡೋಡಿಯ ನಾಗೇಶ್ ಎಂಬವರಿಗೆ ಸೇರಿದ ಜಾಗದಿಂದ ಒಂದು ಹೆಬ್ಬಲಸಿನ ಮರ ಮತ್ತು ಒಂದು ಮಾವಿನ ಮರವನ್ನು ಅಕ್ರಮವಾಗಿ ಕಡಿದು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪವಲಯ ಅರಣ್ಯಾಧಿಕಾರಿ ಸೌಮ್ಯಾ ಪಿ.ಎನ್. ಅವರ ನೇತೃತ್ವದಲ್ಲಿ ನೆಲ್ಲೂರು-ಕೆಮ್ರಾಜೆ

ಸುಳ್ಯ: ಅಕ್ರಮವಾಗಿ ಸಾಗಿಸುತ್ತಿದ್ದ 10 ಲ.ರೂ. ಮೌಲ್ಯದ ಮರದ ದಿಮ್ಮಿ ವಶ Read More »

error: Content is protected !!
Scroll to Top