ಅಪರಾಧ

ಹರಿಯಾಣದಲ್ಲಿ ಸಿಕ್ಕಿದ್ದು ಬಾಂಬ್‌ ತಯಾರಿಸಲು ಬಳಸುವ 360 ಕೆ.ಜಿ. ಅಮೋನಿಯಂ ನೈಟ್ರೇಟ್‌

ಮಹಿಳಾ ಡಾಕ್ಟರ್‌, ಇಮಾಮ್‌ ಸೇರಿ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿರುವ ಪೊಲೀಸರು ನವದೆಹಲಿ: ಹರಿಯಾಣದ ಫರಿದಾಬಾದ್‌ನಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿರುವುದು ಆರ್‌ಡಿಎಕ್ಸ್‌ ಅಲ್ಲ ಬದಲಾಗಿ ಬಾಂಬ್‌ ತಯಾರಿಸಲು ಬಳಸುವ ಅಮೋನಿಯಂ ನೈಟ್ರೇಟ್‌ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರಾಥಮಿಕ ವರದಿಗಳಲ್ಲಿ ಆರ್‌ಡಿಎಕ್ಸ್‌ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿತ್ತು. ಸ್ಫೋಟಕದ ಜೊತೆಗೆ ರೈಫಲ್ ಹಾಗೂ ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚಿಗೆ ಶ್ರೀನಗರದಲ್ಲಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಅನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿದ್ದ ಹಿನ್ನೆಲೆ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಕಾಶ್ಮೀರಿ ಮೂಲದ […]

ಹರಿಯಾಣದಲ್ಲಿ ಸಿಕ್ಕಿದ್ದು ಬಾಂಬ್‌ ತಯಾರಿಸಲು ಬಳಸುವ 360 ಕೆ.ಜಿ. ಅಮೋನಿಯಂ ನೈಟ್ರೇಟ್‌ Read More »

ಹರಿಯಾಣದ ಆಸ್ಪತ್ರೆಯಿಂದ 360 ಆರ್‌ಡಿಎಕ್ಸ್‌ ಸ್ಫೋಟಕ ವಶ

ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಇಬ್ಬರು ಡಾಕ್ಟರ್‌ಗಳು ಸೆರೆ ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಪರಿಯಾಣದ ಫರಿದಾಬಾದ್‌ನ ಆಸ್ಪತ್ರೆಯೊಂದಕ್ಕೆ ದಾಳಿ ಮಾಡಿರುವ ಪೊಲೀಸರು 360 ಕಿ.ಗ್ರಾಂ ಆರ್‌ಡಿಎಕ್ಸ್‌ ಸ್ಫೋಟಕ ಮತ್ತು ಒಂದು ಎ.ಕೆ. 47 ರೈಫಲ್‌ ವಶಪಡಿಸಿಕೊಂಡು ಇಬ್ಬರು ಡಾಕ್ಟರ್‌ಗಳನ್ನು ಬಂಧಿಸಿದ್ದಾರೆ. ದೇಶದಲ್ಲಿ ಇನ್ನೊಂದು ಬೃಹತ್‌ ವಿಧ್ವಂಸಕ ಕೃತ್ಯವನ್ನು ಈ ಮೂಲಕ ಪೊಲೀಸರು ವಿಫಲಗೊಳಿಸಿದ್ದಾರೆ. ಫರಿದಾಬಾದ್‌ನ ಅಲ್‌ ಫಲಾಹ ಆಸ್ಪತ್ರೆಯಿಂದ ಈ ಬೃಹತ್‌ ಪ್ರಮಾಣದ ಅಪಾಯಕಾರಿ ಸ್ಫೋಟಕವನ್ನು ಜಮ್ಮು-ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾಶ್ಮೀರದಲ್ಲಿ ಸೆರೆಯಾದ ಡಾಕ್ಟರ್‌ ನೀಡಿದ

ಹರಿಯಾಣದ ಆಸ್ಪತ್ರೆಯಿಂದ 360 ಆರ್‌ಡಿಎಕ್ಸ್‌ ಸ್ಫೋಟಕ ವಶ Read More »

ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿಯ ಇನ್ನೊಂದು ವಿಡಿಯೋ ಬಹಿರಂಗ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಆರೋಪ ಬೆಂಗಳೂರು : ಐಸಿಸ್‌ ಉಗ್ರ ಶಕೀಲ್‌, ವಿಕೃತಕಾಮಿ ಉಮೇಶ್ ರೆಡ್ಡಿಗೆ ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಕೈದಿಗಳ ಮೋಜು ಮಸ್ತಿಯ ಮತ್ತೊಂದು ವಿಡಿಯೋ ಹೊರಬಂದಿದೆ. ಕೈದಿಗಳು ಮದ್ಯ ಸೇವಿಸಿ ಡಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದು ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ವಿಡಿಯೋಗಳು ಪರಪ್ಪನ ಅಗ್ರಹಾರ ಜೈಲಿನದ್ದಾ ಅಥವಾ ಬೇರೆ ಜೈಲಿನದ್ದಾ ಎಂಬ ಆಯಾಮದಲ್ಲಿ

ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿಯ ಇನ್ನೊಂದು ವಿಡಿಯೋ ಬಹಿರಂಗ Read More »

ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ : ಮೂವರು ಬಾಲಕರು, ಶಾಲೆಯ ವಿರುದ್ಧ ಕೇಸ್‌

13ರ ಹರೆಯದ ಬಾಲಕನ ಮೇಲೆ ಸಹಪಾಠಿಗಳಿಂದ ಬರ್ಬರ ಹಲ್ಲೆ ಮೈಸೂರು : ಮೈಸೂರಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ವಿದ್ಯಾರ್ಥಿಯ ಮೇಲೆ ನಡೆದ ರ‍್ಯಾಗಿಂಗ್ ಕೃತ್ಯಕ್ಕೆ ಸಂಬಂಧಿಸಿ ಪೊಲೀಸರು ಮತ್ತು ರ‍್ಯಾಗಿಂಗ್ ನಡೆಸಿದ ಬಾಲಕರು ಮತ್ತು ಶಾಲೆಯ ಆಡಳಿತ ಮಂಡಳಿ ವಿರುದ್ಧ ಕೇಸ್‌ದಾಖಲಿಸಿಕೊಂಡಿದೆ. ವಿದ್ಯಾರ್ಥಿಯೊಬ್ಬನ ಮೇಲೆ ಕೆಲವು ಹುಡುಗರು ಸೇರಿಕೊಂಡು ಬರ್ಬರವಾಗಿ ರ್‍ಯಾಗಿಂಗ್ ಮಾಡಿದ ಘಟನೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಹಲ್ಲೆಗೊಳಗಾದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆಗೆ ಮುಂದಾಗಿದ್ದಾರೆ. ಮೈಸೂರಿನ

ವಿದ್ಯಾರ್ಥಿ ಮೇಲೆ ರ‍್ಯಾಗಿಂಗ್ : ಮೂವರು ಬಾಲಕರು, ಶಾಲೆಯ ವಿರುದ್ಧ ಕೇಸ್‌ Read More »

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜು : ಬಿಜೆಪಿ ಆಕ್ರೋಶ

ಗರಿಷ್ಠ ಭದ್ರತೆ ಇರುವ ನಿರ್ಬಂಧಿತ ಪ್ರದೇಶದಲ್ಲಿ ನಮಾಜು ಮಾಡಲು ಅನುಮತಿ ಕೊಟ್ಟದ್ದು ಯಾರು ಎಂದು ಪ್ರಶ್ನೆ ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಸಾಮೂಹಿಕ ನಮಾಜ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹಜ್ ಯಾತ್ರಿಕರನ್ನು ಬೀಳ್ಕೊಡಲು ಬಂದಿದ್ದ ಕೆಲವರು ವಿಮಾನ ನಿಲ್ದಾಣದ ಟರ್ಮಿನಲ್ ಒಳಭಾಗದಲ್ಲೇ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಾಮೂಹಿಕ ನಮಾಜ್ ನಡೆಯುತ್ತಿದ್ದರೂ ಸಿಬ್ಬಂದಿ ನೋಡುತ್ತಾ ಮೌನವಾಗಿದ್ದರು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜು : ಬಿಜೆಪಿ ಆಕ್ರೋಶ Read More »

ಶಾಲಾ ಬಾಲಕಿಯರಿಗೆ ಕಿರುಕುಳ ನೀಡಿದ ಆಟೋ ಚಾಲಕನ ವಿರುದ್ಧ ಕೇಸ್‌

ಮಂಗಳೂರು: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಪ್ರಾಯದ ಇಬ್ಬರು ಬಾಲಕಿಯರಿಗೆ ಆಟೋರಿಕ್ಷಾ ಚಾಲಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ.ಅಪ್ರಾಪ್ತ ಪ್ರಾಯದ ಮಗಳು ಹಾಗೂ ಮತ್ತೊಬ್ಬ ವಿದ್ಯಾರ್ಥಿನಿ ಸ್ಥಳೀಯ ಶಾಲೆಗೆ ಹೋಗುವಾಗ ಕೆಲವು ದಿನಗಳ ಹಿಂದೆ ಅವರು ಶಾಲೆಗೆ ತೆರಳುತ್ತಿದ್ದಾಗ, ಒಬ್ಬ ಅಪರಿಚಿತ ವ್ಯಕ್ತಿ ಆಟೋ ರಿಕ್ಷಾದಲ್ಲಿ ಹಿಂಬಾಲಿಸಿ ಕಿರುಕುಳ ನೀಡಿದ್ದಾನೆ ಎಂದು ಓರ್ವ ಬಾಲಕಿಯ ತಂದೆ ದೂರು ನೀಡಿದ್ದಾರೆ. ಈ ಕಿರುಕುಳ ಮುಂದುವರಿದಿದ್ದು ಅ.8ರಂದು ಬೆಳಗ್ಗೆ ಅದೇ ವ್ಯಕ್ತಿ ಮತ್ತೆ ಆಟೋರಿಕ್ಷಾದಲ್ಲಿ ಬಂದು ಇಬ್ಬರು ಬಾಲಕಿಯರಿಗೆ ಕಿರುಕುಳ

ಶಾಲಾ ಬಾಲಕಿಯರಿಗೆ ಕಿರುಕುಳ ನೀಡಿದ ಆಟೋ ಚಾಲಕನ ವಿರುದ್ಧ ಕೇಸ್‌ Read More »

ಎಂಟು ವರ್ಷದ ಹಿಂದೆ ಕಾಣೆಯಾದ ವಿದ್ಯಾರ್ಥಿಯ ಪತ್ತೆಗೆ ಮನವಿ

ಉಳ್ಳಾಲದ ಕಾಲೇಜಿನಿಂದ ನಾಪತ್ತೆಯಾದ ವಿದ್ಯಾರ್ಥಿ ಮಂಗಳೂರು: ಸುಮಾರು ಎಂಟು ವರ್ಷದ ಹಿಂದೆ ಕಾಣೆಯಾಗಿರುವ ನಗರದ ಕಾಲೇಜೊಂದರ ವಿದ್ಯಾರ್ಥಿಯ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಿಂದ ಮನವಿ ಮಾಡಿದ್ದಾರೆ. 18-04-2018ರಂದು ಉಳ್ಳಾಲ ತಾಲೂಕಿನ ಕೈರಂಗಳ ಗ್ರಾಮದ ಪಿ.ಎ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಶರೀಫ್‌ ಅವರು ಕೊಣಾಜೆ ಪೊಲೀಸ್ ಠಾಣೆಗೆ ನೀಡಿದ ದೂರಿನ ಪ್ರಕಾರ, ಅವರ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಕಾಸರಗೋಡು ಪಚ್ಚಕಾಡ್‌ನ ಸಲೀಂ ಕೆ.ಎಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್ (21) 17-04-2018ರಂದು ಬೆಳಗ್ಗೆ 11.34ಕ್ಕೆ ಕಾಲೇಜಿನ ಪಾರ್ಕಿಂಗ್

ಎಂಟು ವರ್ಷದ ಹಿಂದೆ ಕಾಣೆಯಾದ ವಿದ್ಯಾರ್ಥಿಯ ಪತ್ತೆಗೆ ಮನವಿ Read More »

ಮನೆಗೆ ನುಗ್ಗಿ ನಗ-ನಗದು ಕಳವು

ಪುತ್ತೂರು: ಬಲ್ನಾಡಿನ ಪಾಲೆಚ್ಚಾರ್ ಎಂಬಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಎಗರಿಸಿದ ಘಟನೆ ನಡೆದಿದ್ದು, ಈ ಸಂಬಂಧ ಮನೆಯಲ್ಲಿ ವಾಸ್ತವ್ಯ ಇರುವ ಉಮಾವತಿ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕುದ್ದುಪದವಿನ ಅಂಗನವಾಡಿಯಲ್ಲಿ ‌ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ಉಮಾವತಿ ಅವರು ಅಲ್ಲೇ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಅಕ್ಟೋಬರ್ 22 ರಂದು ತಮ್ಮ ಪಾಲೆಚ್ಚಾರ್ ಮನೆಗೆ ಹೋಗಿ ಬಂದಿದ್ದರು. ಆ ಬಳಿಕ ನ. 5 ರಂದು ಮತ್ತೆ ಪಾಲೆಚ್ಚಾರ್ ಮನೆಗೆ ಹೋದಾಗ ಕಳ್ಳತನವಾಗಿರುವುದು

ಮನೆಗೆ ನುಗ್ಗಿ ನಗ-ನಗದು ಕಳವು Read More »

ಜಾನುವಾರು ಅಕ್ರಮ ಸಾಗಾಟ ಪ್ರಕರಣ : ಜಪ್ತಿ ಮಾಡಿದ ಮನೆ ವಾಪಸು ನೀಡಲು ಆದೇಶ

ಕರು ಮಾರಾಟ ಮಾಡಿದವರ ಮನೆ ಜಪ್ತಿ ಮಾಡಿದ್ದು ಕಾನೂನು ವ್ಯಾಪ್ತಿ ಮೀರಿದ ಕ್ರಮ ಎಂದ ಪುತ್ತೂರು ಎಸಿ ಬೆಳ್ತಂಗಡಿ : ದನ ಮಾರಾಟ ಮಾಡಿದ ಕಾರಣಕ್ಕೆ ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಮನೆ ಜಪ್ತಿ ಮಾಡಿದ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸರು ಕಾನೂನು ವ್ಯಾಪ್ತಿಯನ್ನು ಮೀರಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಜೊಹರಾ ಸಾರಮ್ಮ ಅವರ ವಾಸದ ಮನೆಯನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅಕ್ರಮವಾಗಿ ಕಾರಿನಲ್ಲಿ ದನ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಧರ್ಮಸ್ಥಳ

ಜಾನುವಾರು ಅಕ್ರಮ ಸಾಗಾಟ ಪ್ರಕರಣ : ಜಪ್ತಿ ಮಾಡಿದ ಮನೆ ವಾಪಸು ನೀಡಲು ಆದೇಶ Read More »

ವಂಚಕ ರೋಷನ್‌ ಸಲ್ಡಾನನ 2.85 ಕೋ. ರೂ. ಮೌಲ್ಯದ ಆಸ್ತಿ ಜಪ್ತಿ

ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ 200 ಕೋ. ರೂ. ವಂಚಿಸಿದ್ದ ಆರೋಪಿ ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನನ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ರೋಷನ್ ಸಲ್ಡಾನನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿದ್ದಾರೆ. ರೋಷನ್ ಸಲ್ಡಾನ ಸಾಲ

ವಂಚಕ ರೋಷನ್‌ ಸಲ್ಡಾನನ 2.85 ಕೋ. ರೂ. ಮೌಲ್ಯದ ಆಸ್ತಿ ಜಪ್ತಿ Read More »

error: Content is protected !!
Scroll to Top