ಅಪರಾಧ

ಅಲ್‌ಖೈದಾ ಜಿಹಾದಿಗಳಿಂದ ಐವರು ಭಾರತೀಯರ ಅಪಹರಣ

ಹಿಂಸಾತ್ರಸ್ತ ಮಾಲಿಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ಪ್ರಜೆಗಳು ಮಾಲಿ : ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದಿಂದ ತತ್ತರಿಸಿರುವ ಪಶ್ಚಿಮ ಆಫ್ರಿಕಾದ ದೇಶವಾದ ಮಾಲಿಯಲ್ಲಿ ಅಲ್‌ ಖೈದಾ ಜಿಹಾದಿಗಳು ಐವರು ಭಾರತೀಯ ಪ್ರಜೆಗಳನ್ನು ಅಪಹರಿಸಿದ್ದಾರೆ ಎಂದು ಅವರ ಕಂಪನಿ ಮತ್ತು ಭದ್ರತಾ ಮೂಲಗಳು ತಿಳಿಸಿವೆ. ಪಶ್ಚಿಮ ಮಾಲಿಯ ಕೊಬ್ರಿ ಬಳಿ ಗುರುವಾರ ಬಂದೂಕುಧಾರಿಗಳು ಕಾರ್ಮಿಕರನ್ನು ಅಪಹರಿಸಿದ್ದಾರೆ. ವಿದ್ಯುದೀಕರಣ ಯೋಜನೆಗಳಲ್ಲಿ ಕೆಲಸ ಮಾಡುತ್ತಿರುವ ಕಂಪನಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಐವರು ಭಾರತೀಯ ಪ್ರಜೆಗಳ ಅಪಹರಣವನ್ನು ನಾವು ದೃಢಪಡಿಸುತ್ತೇವೆ ಎಂದು […]

ಅಲ್‌ಖೈದಾ ಜಿಹಾದಿಗಳಿಂದ ಐವರು ಭಾರತೀಯರ ಅಪಹರಣ Read More »

ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿದಾತ ಸೆರೆ

ಪುತ್ತೂರು: ಆರೋಪಿಯೊಬ್ಬನಿಗೆ ಜಾಮೀನು ನೀಡಲು ನಕಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಪಡುವನ್ನೂರು ನಿವಾಸಿ ಅಬ್ದುಲ್ ಹಾಶೀಮ್ (34) ಬಂಧಿತ ಆರೋಪಿ. ಆರೋಪಿಯು ಪುತ್ತೂರು ನಿವಾಸಿಯೊಬ್ಬರಿಗೆ ಸೇರಿದ ಆರ್‌ಟಿಸಿ (ಹಕ್ಕುಗಳು, ಬಾಡಿಗೆ ಮತ್ತು ಬೆಳೆಗಳ ದಾಖಲೆ) ದಾಖಲೆಯನ್ನು ತನ್ನದು ಎಂದು ನಂಬಿಸಿ, ಮತ್ತೊಬ್ಬ ಆರೋಪಿಗೆ ಜಾಮೀನು ನೀಡಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ವಂಚನೆ

ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿದಾತ ಸೆರೆ Read More »

ಯುವ ಕಂಬಳ ಸಂಘಟಕ ಅಭಿಷೇಕ್‌ ಆಳ್ವ ಶವ ಪಡುಬಿದ್ರೆ ನದಿ ಕಿನಾರೆಯಲ್ಲಿ ಪತ್ತೆ

ಬುಧವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಅಭಿಷೇಕ್‌ ಆಳ್ವ ಉಡುಪಿ: ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್‌ಚಂದ್ರ ಆಳ್ವ ಅವರ ಪುತ್ರ ಉದ್ಯಮಿ ಅಭಿಷೇಕ್‌ ಆಳ್ವ (29) ಅವರ ಮೃತದೇಹ ಶುಕ್ರವಾರ ಮುಂಜಾನೆ ಕಾಪು ತಾಲೂಕಿನ ಹೆಜಮಾಡಿ ಸಮೀಪ ಶಾಂಭ ವಿ ನದಿ ಕಿನಾರೆಯಲ್ಲಿ ಕಂಡುಬಂದಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ತಂದೆಯಂತೇ ಅಭಿಷೇಕ್‌ ಆಳ್ವ ಕೂಡ ಕಂಬಳ ಪ್ರೇಮಿಯಾಗಿದ್ದು, ಜೊತೆಗೆ ತಂದೆಯ ಉದ್ಯಮವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದರು. ವಾಮಂಜೂರು ತಿರುವೈಲು ಕಂಬಳ ಬಹಳ ಪ್ರಸಿದ್ಧವಾಗಿದ್ದು, ಇದನ್ನು ಸಂಘಟಿಸಲು ಅಭಿಷೇಕ್‌

ಯುವ ಕಂಬಳ ಸಂಘಟಕ ಅಭಿಷೇಕ್‌ ಆಳ್ವ ಶವ ಪಡುಬಿದ್ರೆ ನದಿ ಕಿನಾರೆಯಲ್ಲಿ ಪತ್ತೆ Read More »

ಮೈಸೂರಿನಲ್ಲಿ ಹುಲಿ ದಾಳಿಗೆ ಇನ್ನೋರ್ವ ವ್ಯಕ್ತಿ ಬಲಿ

ಹುಲಿ ಭೀತಿಯಿಂದ ಕಂಗೆಟ್ಟು ಹೋದ ಗ್ರಾಮಸ್ಥರು ಮೈಸೂರು : ಮೈಸೂರು ಜಿಲ್ಲೆಯಲ್ಲಿ ಹುಲಿ ಮತ್ತೊಬ್ಬ ವ್ಯಕ್ತಿಯನ್ನು ಬಲಿತೆಗೆದುಕೊಂಡಿದೆ. ಸರಗೂರು ತಾಲೂಕಿನ ಹಳೇಹೆಗ್ಗೂಡಿಲು ಗ್ರಾಮದಲ್ಲಿ ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಹುಲಿ ದಾಳಿ ಮಾಡಿದ್ದು, ದಂಡನಾಯ್ಕ ಅಲಿಯಾಸ್​ ಸ್ವಾಮಿ(58) ಮೃತಪಟ್ಟಿದ್ದಾರೆ. ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ನಡೆದಿದ್ದು, ಇದೇ ರೈತ 8 ತಿಂಗಳ ಹಿಂದೆ ಆನೆ ದಾಳಿಗೆ ಒಳಗಾಗಿದ್ದರು ಎನ್ನಲಾಗಿದೆ. ಪದೇಪದೆ ಹುಲಿ ದಾಳಿ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮದ ನಿವಾಸಿಗಳು ಕಂಗಾಲಾಗಿದ್ದು, ಕೆಲಸಕ್ಕೆ ಹೋಗಲೂ ಹೆದರಬೇಕಾದ ಪರಿಸ್ಥಿತಿ

ಮೈಸೂರಿನಲ್ಲಿ ಹುಲಿ ದಾಳಿಗೆ ಇನ್ನೋರ್ವ ವ್ಯಕ್ತಿ ಬಲಿ Read More »

ವಾಕಿಂಗ್‌ ಹೋಗಿ ಕಾಡಿನಲ್ಲಿ ದಾರಿ ತಪ್ಪಿ ನಾಲ್ಕು ದಿನ ಅಲೆದಾಡಿದ ಹಿರಿಯ ವೈದ್ಯ

ಶ್ವಾನ ದಳದ ನೆರವಿನಿಂದ ರಕ್ಷಣೆ ಮಾಡಿದ ಪೊಲೀಸರು ಚಿಕ್ಕಮಗಳೂರು: ವಾಯು ವಿಹಾರಕ್ಕೆಂದು ಕಾಡಿನೊಳಗೆ ಹೋಗಿದ್ದ ಹಿರಿಯ ವೈದ್ಯರೊಬ್ಬರು ದಾರಿತಪ್ಪಿ ವಾಪಸು ಬರಲಾಗದೆ ನಾಲ್ಕು ದಿನ ಕಾಡಿನಲ್ಲೇ ಅಲೆದಾಡಿದ ಘಟನೆಯೊಂದು ಕೊಪ್ಪ ತಾಲೂಕಿನ ಕಾಡಂಚಿನ ಗುಣವಂತೆ ಗ್ರಾಮದ ಬಳಿ ನಡೆದಿದೆ. ಅವರನ್ನು ಕೊನೆಗೆ ಪೊಲೀಸ್‌ ಇಲಾಖೆಯ ಶ್ವಾನ ದಳ ಪತ್ತೆ ಮಾಡಿದೆ. ನವೆಂಬರ್ 2ರಂದು ವಾಯು ವಿಹಾರಕ್ಕೆ ಹೋಗಿದ್ದ ವೈದ್ಯ ವೆಂಕಟೇಗೌಡ (75) ದಾರಿ ತಪ್ಪಿ ಕಾಡು ಸೇರಿದ್ದರು. ಮರೆವಿನ ಕಾಯಿಲೆ ಇದ್ದ ಅವರು ವಾಪಸ್ ಬರಲು ದಾರಿ

ವಾಕಿಂಗ್‌ ಹೋಗಿ ಕಾಡಿನಲ್ಲಿ ದಾರಿ ತಪ್ಪಿ ನಾಲ್ಕು ದಿನ ಅಲೆದಾಡಿದ ಹಿರಿಯ ವೈದ್ಯ Read More »

ಕಡಬ : 14 ವರ್ಷದ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ

ಕಡಬ: ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ರಾತ್ರಿ ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಖಂಡಿಗ‌ ಮನೆಯ ಗಗನ್(14) ಎಂದು ಗುರುತಿಸಲಾಗಿದೆ. ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಗಗನ್ ಶಾಲೆಯಿಂದ‌ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ

ಕಡಬ : 14 ವರ್ಷದ ಬಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ Read More »

ಪುತ್ತೂರು : ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚಿಸಿದ ಟ್ರಾವೆಲ್ಸ್‌ ಸಂಸ್ಥೆಯ ವಿರುದ್ಧ ದೂರು

ಥಾಯ್ಲೆಂಡ್‌ ಎಂದು ನಂಬಿಸಿ ಮಯನ್ಮಾರ್‌ಗೆ ಕಳುಹಿಸಿದ್ದಾರೆ ಎಂದು ದೂರು ನೀಡಿದ ತಾಯಿ ಪುತ್ತೂರು: ಥಾಯ್ಲೆಂಡ್ ದೇಶದ ಕಂಪನಿಯೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಂಗಳೂರಿನ ಉಳ್ಳಾಲದ ಯುವಕನೊಬ್ಬನಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರಿನ ಸಂಸ್ಥೆಯೊಂದರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲ ಸೋಮೇಶ್ವರ ನಿವಾಸಿಗಳಾದ ಹುಸೈನ್-ಝುಬೈದಾ ದಂಪತಿಯ ಪುತ್ರ ಅಹ್ಮದ್ ರಝಾಕ್ ವಂಚನೆಗೊಳಗಾದವರು. ಸಂತ್ರಸ್ತ ಯುವಕ ಮಯನ್ಮಾರ್ ದೇಶದಲ್ಲಿ ಬಂಧನಕ್ಕೊಳಗಾಗಿರುವುದಾಗಿ ಕರೆ ಮಾಡಿ ತಿಳಿಸಿರುವುದಾಗಿ ತಾಯಿ ಝುಬೈದಾ ಪೊಲೀಸರಿಗೆ ನೀಡಿರುವ

ಪುತ್ತೂರು : ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ವಂಚಿಸಿದ ಟ್ರಾವೆಲ್ಸ್‌ ಸಂಸ್ಥೆಯ ವಿರುದ್ಧ ದೂರು Read More »

ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಇಬ್ಬರ ಬಂಧನ

ಸಹಪಾಠಿಯ ಆರೋಗ್ಯ ವಿಚಾರಿಸಲು ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಲ್ಲೆ ಉಪ್ಪಿನಂಗಡಿ: ಅನಾರೋಗ್ಯದಿಂದ ಬಳಲುತ್ತಿದ್ದ ಸಹಪಾರಿಯ ಆರೋಗ್ಯ ವಿಚಾರಿಸಲು ಆತನ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್ ಗಿರಿ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮುಸ್ತಾಫ ಪೆರಿಯಡ್ಕ ಹಾಗೂ ಮುಸ್ತಾಫ ಬಂಧಿತ ಆರೋಪಿಗಳು ನ.6ರಂದು ಕಾಲೇಜೊಂದರ 9 ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದ ತಮ್ಮ ಸಹಪಾಠಿಯ ಆರೋಗ್ಯ ವಿಚಾರಿಸಲು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್‌ನಲ್ಲಿ

ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ಗಿರಿ ಮಾಡಿದ ಇಬ್ಬರ ಬಂಧನ Read More »

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ

74 ನಾಪತ್ತೆ ಪ್ರಕರಣ ಕುರಿತು ಎಫ್‌ಐಆರ್‌ ದಾಖಲಿಸಿ ತನಖೆ ನಡೆಸಲು ಆಗ್ರಹ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ಸಂಭವಿಸಿದ್ದು, ಕೊಲೆಯಾದ ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿ ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲು ಮನವಿ ಮಾಡಿದ್ದಾರೆ. ಮಾಹಿತಿಗಳ ಪ್ರಕಾರ 74 ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ನಾಪತ್ತೆ ಪ್ರಕರಣಗಳನ್ನು ಎಫ್‌ಐಆರ್‌ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಪಿಐಎಲ್‌ನಲ್ಲಿ ಮನವಿ ಮಾಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಮೃತ ದೇಹಗಳನ್ನು

ಧರ್ಮಸ್ಥಳ ಪ್ರಕರಣ : ಹೈಕೋರ್ಟಿಗೆ ಪಿಐಎಲ್‌ ಹಾಕಿದ ಕುಸುಮಾವತಿ Read More »

ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ

ಕೋಲಾರ: ಮಗಳನ್ನು ಕೊಂದ ತಂದೆಯೊಬ್ಬ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಳಬಾಗಿಲು ತಾಲೂಕಿನ ಮುಡಿಯನೂರಿನಲ್ಲಿ ನಡೆದಿದೆ. ಐದು ವರ್ಷದ ಪುತ್ರಿ ನಿಹಾರಿಕಾಳನ್ನು ಕೊಂದು ತಂದೆ ಲೋಕೇಶ್ (37) ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಕೌಟುಂಬಿಕ ಕಲಹದಿಂದ ಲೋಕೇಶ್ ಅವರ ಪತ್ನಿ ಮನೆ ಬಿಟ್ಟು ನಾಪತ್ತೆಯಾಗಿದ್ದರು‌. ಇದರಿಂದ ನೊಂದ ಲೋಕೇಶ್ ಪುತ್ರಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆ ಬಳಿಕ ಶವವನ್ನು ಕಾರಿನಲ್ಲಿಟ್ಟು ಲೋಕೇಶ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಮುಳಬಾಗಿಲು ಗ್ರಾಮಾಂತರ

ಪುತ್ರಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ Read More »

error: Content is protected !!
Scroll to Top