ಅಪರಾಧ

ದರ್ಶನ್‌ಗೆ ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳನ್ನೂ ನೀಡಲಾಗುತ್ತಿಲ್ಲ: ವಕೀಲರಿಂದ ನ್ಯಾಯಾಲಯಕ್ಕೆ ದೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ್ ಅವರು ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳೂ ದೊರೆಯುತ್ತಿಲ್ಲ ಎಂದು ವಕೀಲರು ನ್ಯಾಯಾಲಯದ ಮುಂದೆ ದೂರಿದ್ದಾರೆ. ಹಾಸಿಗೆ, ತಲೆದಿಂಬು, ಹೊದಿಕೆ ಸೇರಿದಂತೆ ಖೈದಿಗೆ ನೀಡಲಾಗುವ ಸಾಮಾನ್ಯ ಸೌಲಭ್ಯಗಳನ್ನು ನೀಡದೆ ಅಧಿಕಾರಿಗಳು ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಕಾನೂನು ಪ್ರಕಾರ ಈ ಸೌಲಭ್ಯಗಳನ್ನು ನಿರಾಕರಿಸುವ ಹಕ್ಕು ಅಧಿಕಾರಿಗಳಿಗೆ ಇಲ್ಲ ಎಂದು ಹೇಳಿದ್ದಾರೆ. ದರ್ಶನ್ ಧರಿಸಿದ ಶೂ ಬಿಚ್ಚಿಸುತ್ತಾರೆ. ಆಹಾರದ ತಟ್ಟೆಯನ್ನು ಎಸೆದು ಹೋಗುತ್ತಾರೆ‌. ಈ ಬಗ್ಗೆ ಜೈಲಧಿಕಾರಿಗಳಿಗೆ ಮೌಖಿಕ […]

ದರ್ಶನ್‌ಗೆ ಜೈಲಿನಲ್ಲಿ ಕನಿಷ್ಟ ಸೌಲಭ್ಯಗಳನ್ನೂ ನೀಡಲಾಗುತ್ತಿಲ್ಲ: ವಕೀಲರಿಂದ ನ್ಯಾಯಾಲಯಕ್ಕೆ ದೂರು Read More »

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಸೌಜನ್ಯಾ ಕೇಸ್‌ನಲ್ಲಿ ಕ್ಲೀನ್‌ಚಿಟ್‌ ಪಡೆದವರಿಗೆ ಎಸ್‌ಐಟಿ ನೋಟಿಸ್‌

ವಿಚಾರಣೆಗೆ ಹಾಜರಾದ ಸೌಜನ್ಯಾ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಉದಯಕುಮಾರ್‌ ಜೈನ್‌ ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ದಿನಕಳೆದಂತೆ ಅನೂಹ್ಯ ತಿರುವುಗಳನ್ನು ಪಡೆಯುತ್ತಿದೆ. ಇಂದು ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿದ್ದ ಆರೋಪಿಗಳನ್ನು ಎಸ್‌ಐಟಿ ಇಂದು ವಿಚಾರಣೆಗೆ ಕರೆಸಿರುವುದು ಕುತೂಹಲ ಮೂಡಿಸಿದೆ. ಈ ನಡೆಯಿಂದ ಸೌಜನ್ಯಾ ಪ್ರಕರಣದ ತನಿಖೆಯನ್ನು ಎಸ್‌ಐಟಿ ಕೈಗೆತ್ತಿಕೊಂಡಿತಾ ಎಂಬ ಪ್ರಶ್ನೆಯೂ ಮೂಡಿದೆ. ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪ ಹೊತ್ತು ಕ್ಲೀನ್‌ಚಿಟ್‌ ಪಡೆದವರಿಗೆ ವಿಶೇಷ ತನಿಖಾ ತಂಡ ಬುಲಾವ್‌

ಧರ್ಮಸ್ಥಳ ಪ್ರಕರಣಕ್ಕೆ ದಿಢೀರ್‌ ತಿರುವು : ಸೌಜನ್ಯಾ ಕೇಸ್‌ನಲ್ಲಿ ಕ್ಲೀನ್‌ಚಿಟ್‌ ಪಡೆದವರಿಗೆ ಎಸ್‌ಐಟಿ ನೋಟಿಸ್‌ Read More »

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಿಬ್ಬಂದಿ ಅಮಾನತು

ಕರೆ ಮಾಡಿ, ಸಂದೇಶ ಕಳುಹಿಸಿ ಕಿರುಕುಳ ನೀಡುತ್ತಿದ್ದ ಪೊಲೀಸ್‌ ಸಿಬ್ಬಂದಿ ಮಂಗಳೂರು: ಮಹಿಳೆಗೆ ಅಶ್ಲೀಲ ಕರೆ ಮತ್ತು ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ತೋಡಾರು ಬಳಿಯ ವಿವಾಹಿತ ಮಹಿಳೆಯೊಬ್ಬರು ಆಗಸ್ಟ್ 23ರಂದು ಕೌಟುಂಬಿಕ ಕಲಹದ ಬಗ್ಗೆ ದೂರು ನೀಡಲು ಠಾಣೆಗೆ ಭೇಟಿ ನೀಡಿದ್ದರು. ಆಗ ಇನ್ಸ್‌ಪೆಕ್ಟರ್ ಸಂದೇಶ್ ಅವರು ಪತಿ ಮತ್ತು ಪತ್ನಿ ಇಬ್ಬರನ್ನೂ ಕರೆದು ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ಇತ್ಯರ್ಥಗೊಳಿಸಿ

ಮಂಗಳೂರು: ಮಹಿಳೆಗೆ ಕಿರುಕುಳ ನೀಡಿದ ಪೊಲೀಸ್‌ ಸಿಬ್ಬಂದಿ ಅಮಾನತು Read More »

ಮಹಿಳೆಯ ಆಭರಣ ಕಳವು : ವಿಮಾನ ನಿಲ್ದಾಣದ ಸಿಬ್ಬಂದಿ ಸಹಿತ ಐವರ ಬಂಧನ

ಮಹಿಳೆಯ ಬ್ಯಾಗಿನಿಂದ 4.5 ಲ.ರೂ. ಮೌಲ್ಯದ ನೆಕ್ಲೆಸ್‌ ಎಗರಿಸಿದ್ದ ಆರೋಪಿಗಳು ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಚೆಕ್-ಇನ್ ಲಗೇಜ್‌ನಿಂದ ಚಿನ್ನಾಭರಣಗಳನ್ನು ಕದ್ದ ಆರೋಪದ ಮೇಲೆ ಏರ್ ಇಂಡಿಯಾ SATSನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಬ್ಯಾಗೇಜ್ ನಿರ್ವಹಣಾ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಕಳವು ಮಾಲನ್ನು ಖರೀದಿಸಿದ ಆರೋಪ ಹೊತ್ತಿರುವ ಐದನೇ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ. ಕಾಣೆಯಾದ ಚಿನ್ನದ ಗಣನೀಯ ಭಾಗವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಆಗಸ್ಟ್ 30ರಂದು ಬೆಳಗ್ಗೆ ಬೆಂಗಳೂರಿನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್

ಮಹಿಳೆಯ ಆಭರಣ ಕಳವು : ವಿಮಾನ ನಿಲ್ದಾಣದ ಸಿಬ್ಬಂದಿ ಸಹಿತ ಐವರ ಬಂಧನ Read More »

ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಸಿಂಗಲ್‌ ಮದರ್‌ ಆಗಿರುವುದರಿಂದ ಜಾಮೀನು ಕೊಡಬೇಕೆಂದು ಕೋರಿದ್ದ ಪವಿತ್ರಾ ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ. ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ವಜಾ ಮಾಡಿದ ಕಾರಣ ಅವರೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ

ಕೊಲೆ ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ Read More »

232 ಕೋ. ರೂ. ವಂಚನೆ : ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್‌ ಬಂಧನ

ಸರ್ಕಾರದ ಹಣವನ್ನು ತನ್ನ ಖಾತೆಗಳಿಗೆ ವರ್ಗಾಯಿಸಿಕೊಂಡು ಗೋಲ್‌ಮಾಲ್‌ ನವದೆಹಲಿ: 232 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಹಿರಿಯ ಮ್ಯಾನೇಜರ್‌ ರಾಹುಲ್ ವಿಜಯ್‌ ಅವರನ್ನು ಸಿಬಿಐ ಬಂಧಿಸಿದೆ. ರಾಹುಲ್ ವಿಜಯ್ ಸುಮಾರು 232 ಕೋಟಿ ರೂ. ಸರ್ಕಾರದ ಹಣವನ್ನು ನೇರವಾಗಿ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ. ನಂತರ ಆ ಹಣವನ್ನು ಬ್ಯುಸಿನೆಸ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ತನಿಖಾಧಿಕಾರಿಗಳು ಈ ಪ್ರಕರಣವನ್ನು ವರ್ಷದ ಅತಿದೊಡ್ಡ ಹಣಕಾಸು ಹಗರಣಗಳಲ್ಲಿ ಒಂದು ಎಂದು ಹೇಳಿದ್ದಾರೆ.

232 ಕೋ. ರೂ. ವಂಚನೆ : ವಿಮಾನ ನಿಲ್ದಾಣ ಪ್ರಾಧಿಕಾರದ ಮ್ಯಾನೇಜರ್‌ ಬಂಧನ Read More »

ಬಿಜೆಪಿ ನೆರವಿನ ಕೊಡುಗೆಯನ್ನು ನಿರಾಕರಿಸಿದ ಸೌಜನ್ಯಾ ತಾಯಿ

ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದರೆ ಖರ್ಚುವೆಚ್ಚ ಭರಿಸುವ ಭರವಸೆ ನೀಡಿದ ವಿಜಯೇಂದ್ರ ಧರ್ಮಸ್ಥಳ: ಸೌಜನ್ಯಾ ಅತ್ಯಾಚಾರ-ಹತ್ಯೆ ಪ್ರಕರಣದ ಮರುತನಿಖೆ ಕೋರಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದರೆ ಅದರ ಪೂರ್ತಿ ಖರ್ಚನ್ನು ಭರಿಸುವ ಬಿಜೆಪಿ ಕೊಡುಗೆಯನ್ನು ಸೌಜನ್ಯಾ ತಾಯಿ ಕುಸುಮಾವತಿ ನಿರಾಕರಿಸಿದ್ದಾರೆ. ಬಿಜೆಪಿ ನಿಯೋಗ ಮನೆಗೆ ಬಂದು ಹೋದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಕುಸುಮಾವತಿ ತನಗೆ ರಾಜಕೀಯದವರ ಮೇಲೆ ನಂಬಿಕೆ ಇಲ್ಲ. ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ನಮ್ಮನ್ನು ವಿರೋಧಿಸಿದವರು ಈಗ ಸಹಾಯ ಮಾಡಲು ಬಂದಿರುವುದು ಏಕೆ ಎಂದು

ಬಿಜೆಪಿ ನೆರವಿನ ಕೊಡುಗೆಯನ್ನು ನಿರಾಕರಿಸಿದ ಸೌಜನ್ಯಾ ತಾಯಿ Read More »

ಒಂದೂವರೆ ವರ್ಷದ ಮಗುವನ್ನು ನೇಣಿಗೆ ಹಾಕಿ ಪಕ್ಕದಲ್ಲೇ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಗಂಡನನ್ನು ಪೊಲೀಸರು ಬಂಧಿಸುತ್ತಾರೆ ಎಂಬ ಭೀತಿಯಲ್ಲಿ ಎಸಗಿದ ಕೃತ್ಯ ಉಡುಪಿ: ಮಹಿಳೆಯೊಬ್ಬರು ಒಂದೂವರೆ ವರ್ಷ ಪ್ರಾಯದ ಮಗುವನ್ನು ನೇಣಿಗೆ ಹಾಕಿ ಸಾಯಿಸಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆಯೊಂದು ಸೋಮವಾರ ಉಡುಪಿ ಸಮೀಪ ಬ್ರಹ್ಮಾವರದಲ್ಲಿ ಸಂಭವಿಸಿದೆ. ಗಲಾಟೆ ಪ್ರಕರಣವೊಂದರಲ್ಲಿ ಪತಿಯ ಬಂಧನಕ್ಕೆ ನ್ಯಾಯಾಲಯ ಆದೇಶಿಸಿದ ಹಿನ್ನೆಲೆಯಲ್ಲಿ ಮಹಿಳೆ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಬ್ರಹ್ಮಾವರದ ಹೇರಂಜೆ ಸಮೀಪ ಆರೂರಿನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯನ್ನು ಸುಶ್ಮಿತಾ (23) ಎಂದು ಗುರುತಿಸಲಾಗಿದೆ. ಮನೆಯ ಚಾವಡಿಯಲ್ಲೇ

ಒಂದೂವರೆ ವರ್ಷದ ಮಗುವನ್ನು ನೇಣಿಗೆ ಹಾಕಿ ಪಕ್ಕದಲ್ಲೇ ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ Read More »

ಮಂಗಳೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಹಂಚಿಕೊಂಡ ದುರುಳರು

ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾದವಳನ್ನು ನಂಬಿಸಿ ದುಷ್ಕೃತ್ಯ; ಏಳು ಯುವಕರು ಸೆರೆ ಮಂಗಳೂರು : ಅಪ್ರಾಪ್ತ‌ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಮಾಡಿ ಅದನ್ನು ಹರಿಬಿಟ್ಟ ಪ್ರಕರಣ ಆಘಾತಕಾರಿ ಪ್ರಕರಣ ಬಜಪೆಯಲ್ಲಿ ಸಂಭವಿಸಿದ್ದು, ಈ ಸಂಬಂಧ ಏಳು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಪರಿಚಿತಳಾದ ಕಾಲೇಜು ವಿದ್ಯಾರ್ಥಿನಿಯನ್ನು ಪ್ರೇಮಿಸುವ ನೆಪದಲ್ಲಿ ಅತ್ಯಾಚಾರ ಎಸಗಲಾಗಿದೆ ಎಂಬ ವಿಚಾರ ತನಿಖೆಯಿಂದ ತಿಳಿದುಬಂದಿದೆ. ಬಂಧಿತರನ್ನು ಕಾರ್ತಿಕ್, ರಾಕೇಶ್‌ ಸಲ್ಡಾನ, ಜೀವನ್‌, ಸಂದೀಪ್‌, ರಕ್ಷಿತ್, ಶ್ರವಣ್, ಸುರೇಶ್ ಎಂದು ಗುರುತಿಲಾಗಿದೆ. ಅಪ್ರಾಪ್ತ ವಯಸ್ಸಿನ

ಮಂಗಳೂರು : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಹಂಚಿಕೊಂಡ ದುರುಳರು Read More »

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಹಿಳೆಯ 4.5 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

ಸಿಬ್ಬಂದಿಯ ಮೇಲೆ ಅನುಮಾನ, ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವುಗೈದಿರುವ ಆರೋಪದಲ್ಲಿ ನಾಲ್ಕು ಮಂದಿ ಸಿಬ್ಬಂದಿಯನ್ನು ಬಜ್ಪೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌. ವಶಕ್ಕೆ ಪಡೆದುಕೊಂಡವರು ವಿಮಾನ‌ ನಿಲ್ದಾಣದಲ್ಲಿ ಲಗೇಜ್ ಲೋಡ್- ಅನ್‌ಲೋಡ್ ಮಾಡುತ್ತಿದ್ದವರು ಎಂದು ತಿಳಿದು ಬಂದಿದೆ. ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಸಂಬಂಧಿಕರ ಮದುವೆಗಾಗಿ ಶನಿವಾರ ಬೆಳಗ್ಗೆ 8.45ರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಹಿಳೆಯ 4.5 ಲ.ರೂ. ಮೌಲ್ಯದ ಚಿನ್ನಾಭರಣ ಕಳವು Read More »

error: Content is protected !!
Scroll to Top