ಅಪರಾಧ

ನಸುಕಿನವರೆಗೂ ನಡೆದ ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಶೋಧ

ಶೂಟಿಂಗ್‌ ಮಾಡಿಟ್ಟಿದ್ದ 25ಕ್ಕೂ ಹೆಚ್ಚು ವಿಡಿಯೋಗಳು ಎಸ್‌ಐಟಿ ವಶ ಧರ್ಮಸ್ಥಳ : ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನಿಗೆ ಆಶ್ರಯ ಕೊಟ್ಟ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಮಂಗಳವಾರ ಬೆಳಗ್ಗೆ ಶುರುವಾದ ಎಸ್‌ಐಟಿಯ ಶೋಧ ಕಾರ್ಯಾಚರಣೆ ತಡರಾತ್ರಿ ದಾಟಿ ನಸುಕಿನ 2.30ರವರೆಗೂ ಮುಂದುವರಿದಿದೆ. ವಿಡಿಯೋ ರೆಕಾರ್ಡಿಂಗ್, ಫೋನ್ ಮಾಹಿತಿ ಹಾಗೂ ಹಲವು ಮಹತ್ವದ ದಾಖಲೆಗಳನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬುರುಡೆ ಗ್ಯಾಂಗ್ ಮಾಡಿದ ಷಡ್ಯಂತ್ರದ ಮಹತ್ವದ ಮಾಹಿತಿಗಳು ಎಸ್‌ಐಟಿಗೆ ಸಿಕ್ಕಿದೆ. ಮುಖ್ಯವಾಗಿ 25ಕ್ಕೂ ಅಧಿಕ ವಿಡಿಯೋಗಳು […]

ನಸುಕಿನವರೆಗೂ ನಡೆದ ಮಹೇಶ್‌ ಶೆಟ್ಟಿ ತಿಮರೋಡಿ ಮನೆ ಶೋಧ Read More »

ಶಾರುಕ್‌ ಖಾನ್‌, ದೀಪಿಕಾ ಪಡುಕೋಣೆ ವಿರುದ್ಧ ವಂಚನೆ ದೂರು

ಹೇಗೆಲ್ಲ ಮೋಸ ಮಾಡುತ್ತಾರೆ ಈ ತಾರೆಯರು ಗೊತ್ತಾ? ನವದೆಹಲಿ: ಬಾಲಿವುಡ್‌ನ ಜನಪ್ರಿಯ ತಾರೆಯರಾದ ಶಾರುಕ್‌ ಖಾನ್‌ ಮತ್ತು ದೀಪಿಕಾ ಪಡುಕೋಣೆ ವಿರುದ್ಧ ವಂಚನೆ ದೂರು ದಾಖಲಾಗಿದೆ. ಉತ್ಪಾದನಾ ದೋಷಗಳನ್ನು ಹೊಂದಿರುವ ಹ್ಯುಂಡೈ ಕಾರು ಖರೀದಿಸಿದ್ದ ರಾಜಸ್ಥಾನದ ಭರತ್‌ಪುರದ ವ್ಯಕ್ತಿಯೊಬ್ಬರು ಆ ಕಾರಿನ ರಾಯಭಾರಿಗಳಾಗಿದ್ದ ಬಾಲಿವುಡ್ ನಟರಾದ ಶಾರುಕ್‌ ಖಾನ್ ಹಾಗೂ ದೀಪಿಕಾ ಪಡುಕೋಣೆ ಸೇರಿದಂತೆ ಒಟ್ಟು ಆರು ಮಂದಿಯ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ರಾಜಸ್ಥಾನದ ಭರತ್‌ಪುರ ನಿವಾಸಿ ಕೀರ್ತಿ ಸಿಂಗ್ ದೂರು ದಾಖಲಿಸಿದವರು. ಹ್ಯುಂಡೈ ಕಾರನ್ನು

ಶಾರುಕ್‌ ಖಾನ್‌, ದೀಪಿಕಾ ಪಡುಕೋಣೆ ವಿರುದ್ಧ ವಂಚನೆ ದೂರು Read More »

ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್‌, ಬಟ್ಟೆ ಪತ್ತೆ

ಸಿಸಿಟಿವಿ ಹಾರ್ಸ್‌ ಡಿಸ್ಕ್‌ ವಶಪಡಿಸಿಕೊಂಡು ಸ್ಥಳ ಮಹಜರು ಮಾಡಿದ ಎಸ್‌ಐಟಿ ತಂಡ ಉಜಿರೆ: ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧದ ವೇಳೆ ಸಿಸಿಟಿವಿ ಮತ್ತು ಚಿನ್ನಯ್ಯ ಬಳಸುತ್ತಿದ್ದ ಮೊಬೈಲ್‌ ಫೋನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬುರುಡೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿನ್ನಯ್ಯನ್ನು ಎಸ್‌ಐಟಿ ಪೊಲೀಸರು ಕರೆದುಕೊಂಡು ಬಂದು ಸ್ಥಳ ಮಹಜರು ನಡೆಸಿದ್ದಾರೆ. ಎಸ್‌ಐಟಿ ಉತ್ಖನನ ನಡೆಸಿದ ಬಳಿಕ ತಾನು ತಿಮರೋಡಿಯ ನಿವಾಸಕ್ಕೆ ಹೋಗುತ್ತಿದ್ದೆ. ಅಲ್ಲಿ ನನಗೆ ಒಂದು ಕೊಠಡಿಯನ್ನು ನೀಡಲಾಗಿತ್ತು. ಅಲ್ಲಿ ನಾನು ಬಟ್ಟೆ, ಬ್ಯಾಗ್ ಇಟ್ಟಿದ್ದೇನೆ.

ತಿಮರೋಡಿ ಮನೆಯಲ್ಲಿ ಚಿನ್ನಯ್ಯನ ಮೊಬೈಲ್‌, ಬಟ್ಟೆ ಪತ್ತೆ Read More »

ಧರ್ಮಸ್ಥಳ ಕೇಸ್‌ : ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ

ಸರ್ಚ್‌ ವಾರಂಟ್‌ನೊಂದಿಗೆ ಹೋಗಿ ಮನೆ ಶೋಧಿಸುತ್ತಿರುವ ಎಸ್‌ಐಟಿ ತಂಡ ಬೆಳ್ತಂಗಡಿ: ಧರ್ಮಸ್ಥಳ ಕೇಸಿನ ಬುರುಡೆಮ್ಯಾನ್‌ ಸಿ.ಎನ್‌.ಚಿನ್ನಯ್ಯ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಕೆಲದಿನ ತಂಗಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತಂಡ ತಿಮರೋಡಿ ಮತ್ತು ಅವರ ಸಹೋದರನ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿಕೊಂಡಿದ್ದ ಚಿನ್ನಯ್ಯ ಈಗ ಎಸ್‌ಐಟಿ ಬಂಧನದಲ್ಲಿದ್ದು, ವಿಚಾರಣೆ ವೇಳೆ ತಾನು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ್ದ. ಈ

ಧರ್ಮಸ್ಥಳ ಕೇಸ್‌ : ತಿಮರೋಡಿ ಮನೆಯಲ್ಲಿ ಎಸ್‌ಐಟಿ ಶೋಧ Read More »

ಬೆಳಕು ಹರಿಯುವ ಮೊದಲೇ ಎಸ್‌ಐಟಿ ಕಚೇರಿಯಲ್ಲಿ ಹಾಜರಾದ ಸುಜಾತ ಭಟ್‌

ಧರ್ಮಸ್ಥಳ ಪ್ರಕರಣದಲ್ಲಿ ಮತ್ತೊಂದು ಶಾಕ್‌ ನೀಡಿದ ಅಜ್ಜಿ ಧರ್ಮಸ್ಥಳ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ನೀಡುತ್ತಿರುವ ವೃದ್ಧೆ ಸುಜಾತ ಭಟ್‌ ಎಸ್‌ಐಟಿ ವಿಚಾರಣೆಗೆ ಹಾಜರಾಗುವ ವಿಚಾರದಲ್ಲೂ ಶಾಕ್‌ ನೀಡಿದ್ದಾರೆ. ಅನನ್ಯಾ ಭಟ್‌ ನಾಪತ್ತೆ ಪ್ರಕರಣದ ಸೃಷ್ಟಿಕರ್ತೆಯಾದ ಸುಜಾತ ಭಟ್‌ ಮಂಗಳವಾರ ಬೆಳ್ಳಂಬೆಳಗ್ಗೆ ವಿಶೇಷ ತನಿಖಾ ತಂಡದ ಕಚೇರಿಗೆ ಆಗಮಿಸಿ ಎಸ್‌ಐಟಿ ಅಧಿಕಾರಿಗಳೇ ಚಕಿತರಾಗುವಂತೆ ಮಾಡಿದ್ದಾರೆ. ಅನನ್ಯಾ ಭಟ್‌ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಪೊಲೀಸರು ಆ.29ರಂದು ವಿಚಾರಣೆಗೆ ಹಾಜರಾಗುವಂತೆ ಸುಜಾತ ಭಟ್‌ಗೆ ನೋಟಿಸ್‌ ನೀಡಿದ್ದರು. ಶುಕ್ರವಾರ

ಬೆಳಕು ಹರಿಯುವ ಮೊದಲೇ ಎಸ್‌ಐಟಿ ಕಚೇರಿಯಲ್ಲಿ ಹಾಜರಾದ ಸುಜಾತ ಭಟ್‌ Read More »

ಕಾರ್ಕಳ: ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಇರಿದು ಕೊಲೆ

ಕಾರ್ಕಳದಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಕಾರ್ಕಳ : ಕಾರ್ಕಳ ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ನವೀನ್‌ ಪೂಜಾರಿ (50) ಎಂದು ಗುರುತಿಸಲಾಗಿದೆ. ನವೀನ್‌ ಪೂಜಾರಿ ಕಾರ್ಕಳದಲ್ಲಿ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಸ್ಥಳೀಯವಾಗಿ ಅವರು ಬಡ್ಡಿ ನವೀನ ಎಂದು ಪರಿಚಿತರಾಗಿದ್ದರು. ಬಹಳ ಸಮಯದಿಂದ ಕಾರ್ಕಳದಲ್ಲೇ ವಾಸವಾಗಿದ್ದರು. ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ

ಕಾರ್ಕಳ: ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಇರಿದು ಕೊಲೆ Read More »

ಮಂಗಳೂರು : ಕೆಎಸ್‌ಆರ್‌ಪಿ ಹೆಡ್‌ಕಾನ್‌ಸ್ಟೆಬಲ್‌ ಆತ್ಮಹತ್ಯೆ

ಮಂಗಳೂರು: ಕೊಣಾಜೆಯ ಅಸೈಗೋಳಿಯಲ್ಲಿ ಕರ್ನಾಟಕ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಹೆಡ್‌ಕಾನ್‌ಸ್ಟೆಬಲ್‌ ಒಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೂಲತಃ ಉತ್ತರ ಕರ್ನಾಟಕದ‌ ಸಂಜೀವ (38) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಪತ್ನಿ ಮತ್ತು ಮಕ್ಕಳು ಊರಿಗೆ ಹೋಗಿದ್ದಾಗ ಸೋಮವಾರ ತಾವು ವಾಸವಾಗಿದ್ದ ಕ್ವಾರ್ಟರ್ಸ್‌ನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು : ಕೆಎಸ್‌ಆರ್‌ಪಿ ಹೆಡ್‌ಕಾನ್‌ಸ್ಟೆಬಲ್‌ ಆತ್ಮಹತ್ಯೆ Read More »

ಸುಳ್ಯ : ಕೆಂಪುಕಲ್ಲು ಅಕ್ರಮವಾಗಿ ಸಾಗಿಸುತ್ತಿದ್ದ 4 ಲಾರಿಗಳು ವಶ

ಸುಳ್ಯ : ಕೆಂಪುಕಲ್ಲು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಭಾನುವಾರ ನಡೆದಿದೆ. ಮಿಂಚಪದವಿನಿಂದ ಸುಳ್ಯದ ಕಡೆ ಬರುತ್ತಿದ್ದ ಲಾರಿಗಳಲ್ಲಿ ಅಕ್ರಮವಾಗಿ ಕೆಂಪುಕಲ್ಲು ಸಾಗಾಟ ನಡೆಸುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸುಳ್ಯ ಪೊಲೀಸರು ಖಚಿತ ಮಾಹಿತಿ ಮೇರೆಗೆ ಲಾರಿಗಳನ್ನು ವಶಪಡಿಸಿದ್ದು ಸುಳ್ಯ ಪೊಲೀಸ್ ಠಾಣೆಗೆ ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುಳ್ಯ : ಕೆಂಪುಕಲ್ಲು ಅಕ್ರಮವಾಗಿ ಸಾಗಿಸುತ್ತಿದ್ದ 4 ಲಾರಿಗಳು ವಶ Read More »

ಕೊಲೆ ಆರೋಪಿಯನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿದ ಮಟ್ಟಣ್ಣವರ್‌

ವಿಡಿಯೋ ಭಾರಿ ವೈರಲ್‌ ಧರ್ಮಸ್ಥಳ : ಧರ್ಮಸ್ಥಳ ವಿರುದ್ಧ ನಡೆಸುತ್ತಿರುವ ಹೋರಾಟದ ಮುಂಚೂಣಿಯಲ್ಲಿರುವ ಗಿರೀಶ್‌ ಮಟ್ಟಣ್ಣನವರ್‌ ಕೊಲೆ ಆರೋಪಿಯನ್ನು ತನ್ನ ಜೊತೆ ಇಟ್ಟುಕೊಂಡು ಆತನನ್ನು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯಿಸಿದ ವಿಡಿಯೋ ಒಂದು ನಿನ್ನೆಯಿಂದ ವೈರಲ್‌ ಆಗಿದ್ದು, ಅವರು ನಡೆಸುತ್ತಿರುವ ಹೋರಾಟದ ಸಾಚಾತನವನ್ನು ಬಯಲುಗೊಳಿಸಿದೆ. ಮಾಧ್ಯಮಗಳ ಜೊತೆಗೆ ಮಾತನಾಡುವಾಗ ರೌಡಿಶೀಟರ್‌ ಒಬ್ಬನನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಗಿರೀಶ್ ಮಟ್ಟಣ್ಣನವರ್ ಪರಿಚಯಿಸಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ನೀಡುವ ವೇಳೆ ತಮ್ಮ ಪಕ್ಕದಲ್ಲಿ ನಿಂತಿದ್ದ ಮದನ ಬುಗಡಿ

ಕೊಲೆ ಆರೋಪಿಯನ್ನು ಮಾನವ ಹಕ್ಕುಗಳ ಅಧಿಕಾರಿ ಎಂದು ಪರಿಚಯಿಸಿದ ಮಟ್ಟಣ್ಣವರ್‌ Read More »

ಇಂದು ಮತ್ತೆ ನಡೆಯಲಿದೆ ಯೂಟ್ಯೂಬರ್‌ ಸಮೀರ್‌ ವಿಚಾರಣೆ

ಪೊಲೀಸರ ಪ್ರಶ್ನೆಗಳ ಬಾಣದಿಂದ ಕಂಗಾಲಾದ ಸುಳ್ಳು ಸುದ್ದಿಕೋರ ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಮಹಿಳೆಯರ ರೇಪ್ ಮತ್ತು ಮರ್ಡರ್ ಆಗಿದೆ ಎಂದು ಎಐ ವಿಡಿಯೋ ಮಾಡಿ ಅಪಪ್ರಚಾರ ಮಾಡಿದ್ದ ಯೂಟ್ಯೂಬರ್‌ ಮಹಮ್ಮದ್‌ ಸಮೀರ್ ಬೆಳ್ತಂಗಡಿ ಠಾಣೆಯಲ್ಲಿ ಭಾನುವಾರ ಮಧ್ಯಾಹ್ನ ವಿಚಾರಣೆಗೆ ಹಾಜರಾಗಿದ್ದ. ಅಧಿಕಾರಿಗಳು ಆತನನ್ನು ಸುಮಾರು 4.30 ತಾಸುಗಳ ಕಾಲ ತೀವ್ರ ವಿಚಾರಣೆ ನಡೆಸಿದ್ದಾರೆ. ಸೋಮವಾರ ಕೂಡ ಸಮೀರ್‌ ವಿಚಾರಣೆ ನಡೆಯಲಿದೆ. ಸೋಮವಾರ ಲ್ಯಾಪ್‌ಟಾಪ್‌ ಮತ್ತು ಮೊಬೈಲ್‌ ಜೊತೆ ಬರಬೇಕೆಂದು ಪೊಲೀಸರು ಹೇಳಿದ್ದಾರೆ. ಕಾಲ್ಪನಿಕ ವಿಡಿಯೋ ಮೂಲಕ ದೊಂಬಿ

ಇಂದು ಮತ್ತೆ ನಡೆಯಲಿದೆ ಯೂಟ್ಯೂಬರ್‌ ಸಮೀರ್‌ ವಿಚಾರಣೆ Read More »

error: Content is protected !!
Scroll to Top