ಅಪರಾಧ

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್

ಪಟಾಕಿ ಅಂಗಡಿ ಮಾಲಕರಿಂದ ಸುಲಿಗೆ ಮಾಡಿದ ಹಿನ್ನೆಲೆಯಲ್ಲಿ ಎಚ್ಚರಿಕೆ ಮಂಗಳೂರು: ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ಜೊತೆಗೆ ತಿರುಗಾಡದಂತೆ ಈ ಮೊದಲೇ ಹೇಳಿದ್ದೆ. ರೌಡಿಗಳ ಜೊತೆಗಿದ್ದು ಅಪರಾಧದಲ್ಲಿ ಸಿಲುಕಬೇಡಿ ಎಂದೂ ಹೇಳಿದ್ದೆ. ನೀವು ನಮ್ಮ ಮಾತು ಕೇಳ್ತಾ ಇಲ್ಲ ಎನಿಸುತ್ತೆ. ನಮ್ಮ ಮಾತು ಕೇಳಲ್ಲಾಂದ್ರೆ ನಾವು ಏನು ಮಾಡಬೇಕೆಂದು ಗೊತ್ತಿದೆ. ನಾವು ನಮ್ಮ ಕೆಲಸ ಮಾಡ್ತೀವಿ. ನಿಮ್ಮ ಇಷ್ಟದಂತೆ ಮಾಡ್ಕೊಂಡ್ರೆ ನಮಗೆ ತೊಂದರೆ ಇಲ್ಲ. ಏನು ಬೇಕಾದರೂ ಮಾಡ್ಕೊಂಡು ಹೋಗಿ‌. ಪೊಲೀಸರು ತಮ್ಮ ಕೆಲಸ ಮಾಡುತ್ತಾರೆ ಎಂದು ಮಂಗಳೂರು […]

ನಮ್ಮ ಮಾತು ಕೇಳದಿದ್ದರೆ ಬೀಳುತ್ತೆ ಕೇಸ್‌ : ಕ್ರಿಮಿನಲ್‌ಗಳಿಗೆ ಕಮಿಷನರ್‌ ಸುಧೀರ್ ರೆಡ್ಡಿ ವಾರ್ನಿಂಗ್ Read More »

ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ಎಸ್‌ಪಿ ವಾರ್ನಿಂಗ್‌

ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಖಡಕ್‌ ಎಚ್ಚರಿಕೆ ನೀಡಿದ ಎಸ್‌ಪಿ ಪುತ್ತೂರು: ಘಟನೆಯನ್ನು ಎಲ್ಲರೂ ವಿಮರ್ಶೆ ಮಾಡಬಹುದು, ಆದರೆ ಸತ್ಯವನ್ನು ತಿರುಚಿ ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಎಸ್‌ಪಿ ಅರುಣ್‌ ಕುಮಾರ್‌ ಪುತ್ತೂರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚರಿಸಿದ್ದಾರೆ. ಈಶ್ವರಮಂಗಲದಲ್ಲಿ ಲಾರಿಯೊಂದರಲ್ಲಿ ಅನಧಿಕೃತ ಗೋ ಸಾಗಾಟ ಪ್ರಕರಣದಲ್ಲಿ 12 ಗೋವುಗಳನ್ನು

ಸುಳ್ಳು ನಿರೂಪಣೆ ಸೃಷ್ಟಿಸಿ ಪ್ರಚಾರ ಮಾಡಿದರೆ ಕಠಿಣ ಕ್ರಮ : ಎಸ್‌ಪಿ ವಾರ್ನಿಂಗ್‌ Read More »

ಸುರತ್ಕಲ್ ಬಾರ್‌ನಲ್ಲಿ ಗಲಾಟೆ: ಓರ್ವನಿಗೆ ಇರಿತ

ಸುರತ್ಕಲ್: ನಗರದ ಬಾರೊಂದರ ಸಮೀಪ ನಿನ್ನೆ ರಾತ್ರಿ ಸುಮಾರು 11 ಗಂಟೆ ವೇಳೆಗೆ ವ್ಯಕ್ತಿಯೊಬ್ಬರಿಗೆ ಇರಿದ ಘಟನೆ ನಡೆದಿದೆ. ಇರಿತಕ್ಕೆ ಒಳಗಾದ ವ್ಯಕ್ತಿಯನ್ನು ಮುಖೀದ್ ಎಂದು ಗುರುತಿಸಲಾಗಿದೆ. ಮುಖೀದ್ ಮತ್ತು ಇನ್ನಿಬ್ಬರು ಬಾರ್‌ನಲ್ಲಿದ್ದ ವೇಳೆ, ಅಪರಿಚಿತ ನಾಲ್ವರ ಜೊತೆ ವಾಗ್ವಾದ ಹತ್ತಿಕೊಂಡಿದೆ. ಈ ಗಲಾಟೆ ಬಾರ್ ಹೊರಗೆಯೂ ಮುಂದುವರಿದಿದ್ದು, ಒಬ್ಬ ಆರೋಪಿ ಮುಖೀದ್‌ನಿಗೆ ಇರಿದಿದ್ದಾನೆ. ಮುಖೀದ್ ಜೊತೆಗಿದ್ದ ‌ನಿಜಾಮ್ ಎಂಬವನಿಗೂ ಈ ವೇಳೆ ಗಾಯವಾಗಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರತ್ಕಲ್ ಬಾರ್‌ನಲ್ಲಿ ಗಲಾಟೆ: ಓರ್ವನಿಗೆ ಇರಿತ Read More »

ಜಾನುವಾರು ಸಾಗಿಸಿದವನ ಕಾಲಿಗೆ ಗುಂಡಿಕ್ಕಿದ ಪ್ರಕರಣ : ಅಪಪ್ರಚಾರ ಮಾಡಿದರೆ ಕಠಿಣ ಕ್ರಮ

ಕೃತ್ಯಕ್ಕೆ ಧರ್ಮ, ಜಾತಿ, ರಾಜಕೀಯವನ್ನು ಎಳೆದು ತರಬಾರದೆಂದು ಎಚ್ಚರಿಕೆ ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಮಂಗಲ ಸಮೀಪ ಬೆಳಗ್ಗೆ ಬುಧವಾರ ಜಾನುವಾರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ತಪ್ಪು ಪ್ರಚಾರಕ್ಕೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ಟೆಂಪೊದಲ್ಲಿ ಹತ್ತು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿತ್ತು. ಪೊಲೀಸರು ಸುಮಾರು 10 ಕಿ.ಮೀ. ತನಕ ಬೆನ್ನಟ್ಟಿ ಗೋ ಸಾಗಾಟ ಮಾಡುತ್ತಿದ್ದವರನ್ನು ತಡೆದಿದ್ದು, ಈ ಸಂದರ್ಭ ಟೆಂಪೊ ಚಾಲಕ ಅಬ್ದುಲ್ಲ

ಜಾನುವಾರು ಸಾಗಿಸಿದವನ ಕಾಲಿಗೆ ಗುಂಡಿಕ್ಕಿದ ಪ್ರಕರಣ : ಅಪಪ್ರಚಾರ ಮಾಡಿದರೆ ಕಠಿಣ ಕ್ರಮ Read More »

ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ : ಕೇಸ್‌ ದಾಖಲು

ಮಂಗಳೂರು: ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಹಂಚಿದ ಆರೋಪದ ಮೇರೆಗೆ ಕಂಕನಾಡಿ ನಗರ ಠಾಣೆಯಲ್ಲಿ ನಝೀರ್ ಮಂಗಳೂರು ಮತ್ತು Gandhian Nehruvian Magar ಎಂಬ ಎರಡು ಫೇಸ್‌ಬುಕ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅ.21ರಂದು ಅಪರಾಹ್ನ 3 ಗಂಟೆಗೆ ತಾನು ಸಾಮಾಜಿಕ ಜಾಲತಾಣಾ ಮಾನಿಟರಿಂಗ್ ನಿಗಾವಣೆ ಕರ್ತವ್ಯದ ಮೇರೆಗೆ ಫೇಸ್‌ಬುಕ್ ವೀಕ್ಷಿಸುತ್ತಿರುವಾಗ ನಝೀರ್ ಮಂಗಳೂರ್ ಎಂಬ ಫೇಸ್‌ಬುಕ್ ಖಾತೆಯಿಂದ Mumthas Abdul Nelyadka ಮತ್ತು Mahesh Vikram Hegde ಎಂಬ ಫೇಸ್‌ಬುಕ್ ಖಾತೆಗಳಿಗೆ ಟ್ಯಾಗ್ ಮಾಡಿರುವ Gandhian Nehruvian

ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ : ಕೇಸ್‌ ದಾಖಲು Read More »

ಮಹಿಳೆ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ

ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ ಕುಸಿತಕ್ಕೆ ಸಾರ್ವಜನಿಕರ ಆಕ್ರೋಶ ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಮಂಗಳವಾರ ರಾತ್ರಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಈ ಘೋರ ಕೃತ್ಯ ನಗರದಲ್ಲಿ ಭಾರಿ ಕಳವಳಕ್ಕೆ ಕಾರಣವಾಗಿದೆ. ಅಪರಾಧಿಗಳಿಗೆ ಪೊಲೀಸರ ಭಯ ಇಲ್ಲದಂತಾಗಿದೆ ಎಂದು ಜನರು ಾತಂಕ ವ್ಯಕ್ತಪಡಿಸಿದ್ದಾರೆ. ಬಂಧಿತರನ್ನು ಕಾರ್ತಿಕ್, ಗ್ಲೆನ್ ಮತ್ತು ಸಿಯೋಗ್ ಎಂದು ಗುರುತಿಸಲಾಗಿದೆ. ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಗಂಗೊಂಡನಹಳ್ಳಿಯಲ್ಲಿ

ಮಹಿಳೆ ಮೇಲೆ ಗ್ಯಾಂಗ್‌ರೇಪ್‌ : ಮೂವರು ಸೆರೆ Read More »

ನವದೆಹಲಿ : ಎನ್‌ಕೌಂಟರ್‌ನಲ್ಲಿ ನಾಲ್ವರು ದರೋಡೆಕೋರರ ಹತ್ಯೆ

ಪೊಲೀಸರಿಗೆ ಬಹಿರಂಗ ಸವಾಲು ಹಾಕುತ್ತಿದ್ದ ದರೋಡೆ ಗ್ಯಾಂಗ್‌ನ ರಣಬೇಟೆ ನವದೆಹಲಿ: ದೆಹಲಿಯ ರೋಹಿಣಿ ಪ್ರದೇಶದಲ್ಲಿ ಪೊಲೀಸರ ಎನ್‌ಕೌಂಟರ್‌ಗೆ ನಾಲ್ವರು ದರೋಡೆಕೋರರು ಬಲಿಯಾಗಿದ್ದಾರೆ. ಹತ್ಯೆಯಾದವರು ಬಿಹಾರದ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಸಿಗ್ಮಾ ಗ್ಯಾಂಗ್‌ನ ಸದಸ್ಯರು. ದೆಹಲಿ ಮತ್ತು ಬಿಹಾರ ಪೊಲೀಸರ ತಂಡ ಮತ್ತು ದರೋಡೆಕೋರರ ನಡುವೆ ಗುರುವಾರ ತಡರಾತ್ರಿ 2.20ಕ್ಕೆ ರೋಹಿಣಿಯ ಡಾ. ಅಂಬೇಡ್ಕರ್ ಚೌಕ್‌ನಿಂದ ಪನ್ಸಾಲಿ ಚೌಕ್‌ವರೆಗಿನ ಬಹದ್ದೂರ್ ಷಾ ಮಾರ್ಗದಲ್ಲಿ ಗುಂಡಿನ ಚಕಮಕಿ ನಡೆದಿದೆ. ದೆಹಲಿ ಪೊಲೀಸ್ ಮೂಲಗಳ ಪ್ರಕಾರ ಪೊಲೀಸರು ಸಿಗ್ಮಾ ಗ್ಯಾಂಗ್‌ನ ದರೋಡೆಕೋರರನ್ನು

ನವದೆಹಲಿ : ಎನ್‌ಕೌಂಟರ್‌ನಲ್ಲಿ ನಾಲ್ವರು ದರೋಡೆಕೋರರ ಹತ್ಯೆ Read More »

ಮೈಸೂರಿನಲ್ಲಿ ಭ್ರೂಣ ಹತ್ಯೆ ಜಾಲ ಪತ್ತೆ : ಮಹಿಳೆ ಸಹಿತ ಮೂವರು ಸೆರೆ

ಐಷಾರಾಮಿ ಬಂಗಲೆಯಲ್ಲಿ ನಡೆಯುತ್ತಿತ್ತು ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಮೈಸೂರು : ಭ್ರೂಣ ಪತ್ತೆ ಹಾಗೂ ಹತ್ಯೆ ಜಾಲವೊಂದನ್ನು ಮೈಸೂರಿನಲ್ಲಿ ಪೊಲೀಸರು ಆರೋಗ್ಯ ಇಲಾಖೆ ಸಹಕಾರದಿಂದ ಬಯಲಿಗೆಳೆದಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂ ಒಂದರ ಕೈವಾಡ ಶಂಕೆ ಕೂಡ ವ್ಯಕ್ತವಾಗಿದ್ದು, ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರು ತಾಲೂಕು ಮೆಲ್ಲಹಳ್ಳಿ ಗ್ರಾಮದ ಬಳಿಯ ಹುನಗನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಐಷಾರಾಮಿ ಬಂಗಲೆಯಲ್ಲಿ ಭ್ರೂಣ ಲಿಂಗ

ಮೈಸೂರಿನಲ್ಲಿ ಭ್ರೂಣ ಹತ್ಯೆ ಜಾಲ ಪತ್ತೆ : ಮಹಿಳೆ ಸಹಿತ ಮೂವರು ಸೆರೆ Read More »

ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 42 ಲ.ರೂ. ಸುಲಿಗೆ

ಮಂಗಳೂರು : ಡಿಜಿಟಲ್ ಅರೆಸ್ಟ್ ಮಾಡಿ ಮಹಿಳೆಯಿಂದ 42 ಲಕ್ಷ ಸುಲಿಗೆ ಮಾಡಿದ ಪ್ರಕರಣವೊಂದು ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆ ಅಪರಿಚಿತರು ಕರೆ ಮಾಡಿ 42 ಲಕ್ಷ ರೂ. ಆನ್‌ಲೈನ್ ಮೂಲಕ ವಂಚಿಸಿದ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದಾರೆ. ಅ.7ರಂದು ತನ್ನ ಮೊಬೈಲ್‌ಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಮುಂಬೈಯ ಕೊಲಾಬ ಪೊಲೀಸ್ ಠಾಣೆಯಿಂದ ತಾನು ಮಾತನಾಡುತ್ತಿರುವೆ. ನಿಮ್ಮ ಹೆಸರಿನಲ್ಲಿ ಹೊಸ ಸಿಮ್ ಖರೀದಿಸಲಾಗಿದೆ. ಬಳಿಕ ತನ್ನನ್ನು ಮುಂಬೈಗೆ ಬರುವಂತೆ ಹೇಳಿದ್ದಾನೆ. ನನಗೆ ಮುಂಬೈಗೆ ಬರಲು

ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 42 ಲ.ರೂ. ಸುಲಿಗೆ Read More »

ಗುರುವಾಯೂರು ದೇವಸ್ಥಾನದಲ್ಲೂ ಚಿನ್ನ ಕಳವು : 25 ಕೋಟಿ ಅವ್ಯವಹಾರವಾಗಿರುವ ವರದಿ

ಶಬರಿಮಲೆ ಬಳಿಕ ಇನ್ನೊಂದು ಪ್ರಸಿದ್ಧ ದೇವಸ್ಥಾನದ ಚಿನ್ನಕ್ಕೆ ಕನ್ನ ತಿರುವನಂತಪುರಂ : ಶಬರಿಮಲೆಯ ಬಳಿಕ ಇದೀಗ ಕೇರಳದ ಇನ್ನೊಂದು ಪ್ರಸಿದ್ಧ ದೇವಸ್ಥಾನ ಗುರುವಾಯೂರು ದೇವಸ್ಥಾನದಲ್ಲೂ ಬೆಲೆಬಾಳುವ ಆಭರಣಗಳು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಕೇರಳದಲ್ಲಿ 12 ಪ್ರಸಿದ್ಧ ದೇವಸ್ಥಾನಗಳ ಆಡಳಿತ ನಿಭಾಯಿಸುವ ಸರ್ಕಾರದ ಗುರುವಾಯೂರು ದೇವಸ್ವಂ ಮಂಡಳಿಯ ಆಡಿಟಿಂಗ್ ವೇಳೆ ಸಾಕಷ್ಟು ವ್ಯತ್ಯಯಗಳು ಪತ್ತೆಯಾಗಿವೆ. 2019ರಲ್ಲಿ ಮಾಡಲಾದ ಆಡಿಟಿಂಗ್​ನಲ್ಲಿ ಕೆಲ ಗಮನಾರ್ಹ ಸಂಗತಿಗಳು ಬೆಳಕಿಗೆ ಬಂದಿವೆ. ಚಿನ್ನ, ಬೆಳ್ಳಿ, ದಂತ ಇತ್ಯಾದಿ ಹಲವು ವಸ್ತುಗಳು ಕಾಣೆಯಾಗಿರುವುದು ಗೊತ್ತಾಗಿದೆ. ಗೋಲ್ಡ್

ಗುರುವಾಯೂರು ದೇವಸ್ಥಾನದಲ್ಲೂ ಚಿನ್ನ ಕಳವು : 25 ಕೋಟಿ ಅವ್ಯವಹಾರವಾಗಿರುವ ವರದಿ Read More »

error: Content is protected !!
Scroll to Top