ಅಪರಾಧ

ಬೆಂಗಳೂರು ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಮೃತಪಟ್ಟ ಪ್ರಕರಣ : ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಕಾರಣ

ಪ್ರೇಯಸಿ ಜೊತೆ ಒಂದು ವಾರ ಲಾಡ್ಜ್‌ನಲ್ಲಿ ತಂಗಿದ್ದ ಯುವಕ ನಿಗೂಢವಾಗಿ ಸಾವಿಗೀಡಾದ ಪ್ರಕರಣ ಪುತ್ತೂರು : ಬೆಂಗಳೂರಿನ ಮಡಿವಾಳದ ಲಾಡ್ಜೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಪುತ್ತೂರು ಸಮೀಪದ ಸೇಡಿಯಾಪಿನ ಯುವಕ ತಕ್ಷಿತ್‌ನ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕಿಡ್ನಿ ವಿಫಲಗೊಂಡಿದ್ದ ಅಂಶ ಪತ್ತೆಯಾಗಿದೆ. ತಕ್ಷಿತ್‌ಗೆ ಕಿಡ್ನಿ ವೈಫಲ್ಯ ಮಾತ್ರವಲ್ಲದೆ ಲಿವರ್ ಸಮಸ್ಯೆ ಹಾಗೂ ಅಸ್ತಮಾ ಕಾಯಿಲೆ ಇತ್ತು ಎನ್ನುವುದು ಪತ್ತೆಯಾಗಿದೆ. ಹೀಗಾಗಿ ಇದೇ ಕಾರಣಕ್ಕೆ ಸಾವನ್ನಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ತಕ್ಷಿತ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆ ಮಾಡಿಕೊಳ್ಳಬೇಕು […]

ಬೆಂಗಳೂರು ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಮೃತಪಟ್ಟ ಪ್ರಕರಣ : ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಕಾರಣ Read More »

ಪುತ್ತೂರು : ದನ ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು

ದನಗಳನ್ನು ಸಾಗಿಸುತ್ತಿದ್ದ ವಾಹನವನ್ನು 10 ಕಿ.ಮೀ. ಬೆನ್ನಟ್ಟಿ ಹಿಡಿದ ಪೊಲೀಸರು ಪುತ್ತೂರು : ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಪೊಲೀಸರು ಬೆನ್ನಟ್ಟಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಇಂದು ಬೆಳಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಗುಂಡು ಕಾಲಿಗೆ ತಗುಲಿದ ಆರೋಪಿಯನ್ನು ಕೇರಳದ ಕಾಸರಗೋಡಿನ ಅಬ್ದುಲ್ಲಾ (40 ವರ್ಷ) ಎಂದು ಗುರುತಿಸಲಾಗಿದೆ. ಐಶರ್ ವಾಹನದಲ್ಲಿ 10 ಜಾನುವಾರಗಳನ್ನು ಸಾಗಿಸಲಾಗುತ್ತಿತ್ತು. ಅಬ್ದುಲ್ಲಾ ಈ ವಾಹನದ ಚಾಲಕನಾಗಿದ್ದ. ವಾಹನದಲ್ಲಿ ಇನ್ನೂ ಓರ್ವ ವ್ಯಕ್ತಿ ಇದ್ದ.

ಪುತ್ತೂರು : ದನ ಸಾಗಿಸುತ್ತಿದ್ದ ಆರೋಪಿಯ ಕಾಲಿಗೆ ಗುಂಡು Read More »

ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ

ಮನೆಯವರು ಮಲಗಿರುವಾಗಲೇ 20 ಲ.ರೂ. ಮೌಲ್ಯದ ಸೊತ್ತು ಕಳವು ಮಾಡಿದ್ದ ಚಾಲಾಕಿಗಳು ಮಂಗಳೂರು: ನಗರದ ಲಾಲ್‌ಬಾಗ್‌ನ ಅಪಾರ್ಟ್ಮೆಂಟ್‌ವೊಂದರ ಮೂರು ಫ್ಲಾಟ್‌ಗಳಿಂದ ಮನೆಯವರು ಮಲಗಿರುವಾಗಲೇ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವುಗೈದ ಪ್ರಕರಣಕ್ಕೆ ಸಂಭಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಸ್ಸಾಂನ ಕಾಚಾರ್‌ ಜಿಲ್ಲೆಯ ಅಭಿಜಿತ್ ದಾಸ್ (24) ಹಾಗೂ ದೇಬಾ ದಾಸ್ (21) ಎಂದು ಗುರುತಿಸಲಾಗಿದೆ. ಆರೋಪಿ ಅಭಿಜಿತ್ ದಾಸ್ ಎಂಬಾತನ ಮೇಲೆ

ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರ ಬಂಧನ Read More »

ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ : ಯುವಕ ಸೆರೆ

ನಿಟ್ಟೆ ಅಭಿಷೇಕ್‌ ಆಚಸರ್ಯ ಅತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ನಡೆದ ಕೃತ್ಯ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪರಿಶಿಷ್ಟ ಜಾತಿಯ ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಅವಮಾನ ಮತ್ತು ಮಾನಸಿಕ ಯಾತನೆಯನ್ನುಂಟು ಮಾಡಿದ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ಯುವಕ ಓರ್ವನನ್ನು ಬಂಧಿಸಿದ್ದಾರೆ. ಮಂಗಳೂರಿನ ಕಾವೂರು ಕಾಪಿಗುಡ್ಡದ ಆಕಾಶ್ ಭವನ ನಿವಾಸಿ ನಿಖಿಲ್ ರಾಜ್ (27) ಸೆರೆಯಾಗಿರುವ ಆರೋಪಿ. ಬೆಳ್ಮಣ್‌ನ ಲಾಡ್ಜ್‌ನಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಕಾರ್ಕಳದ ನಿಟ್ಟೆ ಪರಪ್ಪಾಡಿಯ ಅಭಿಷೇಕ್ ಆಚಾರ್ಯ ದೂರುದಾರರಿಗೆ

ಮಹಿಳೆಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ : ಯುವಕ ಸೆರೆ Read More »

ವಿಷ ಸೇವಿಸಿದ್ದ ವ್ಯಕ್ತಿ ಮೃತ್ಯು

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿಯ ಕಳೆಂಜದಲ್ಲಿ ನಡೆದಿದ್ದು ಧರ್ಮಸ್ಥಳ ‌ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ. ಕಳೆಂಜ ಗ್ರಾಮದ ನಿವಾಸಿ ಅನುರಾಜ್ (43) ಮೃತ ವ್ಯಕ್ತಿಯಾಗಿದ್ದಾರೆ. ವಿಪರೀತ ಕುಡಿತದ ಚಟ ಹೊಂದಿದ್ದ ಈತ ಅ.17ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿದ್ದು ಆತನನ್ನು ಕೂಡಲೇ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆಗೆ ಸ್ಪಂದಿಸದೆ ಅ18ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮೃತನ ಸಹೋದರ ಬಾಬು ನೀಡಿರುವ ದೂರಿನಂತೆ‌ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ವಿಷ ಸೇವಿಸಿದ್ದ ವ್ಯಕ್ತಿ ಮೃತ್ಯು Read More »

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಮಲತಂದೆ ಬಂಧನ

ಐದು ವರ್ಷ ಸತತವಾಗಿ ಲೈಂಗಿಕ ದೌರ್ಜನ್ಯಕ್ಕೊಳಪಡಿಸಿ ಪೀಡಿಸಿದ್ದ ತಂದೆ ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಆಕೆಯ ಮಲತಂದೆಯೇ ಹಲವು ವರ್ಷಗಳಿಂದ ಅತ್ಯಾಚಾರಗೈದ ಆಘಾತಕಾರಿ ಘಟನೆ ಉಳ್ಳಾಲದಲ್ಲಿ ಬೆಳಕಿಗೆ ಬಂದಿದೆ. ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅಮೀರ್ (40) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯ ತಂದೆ ಮೃತಪಟ್ಟ ಬಳಿಕ ಆಕೆಯ ತಾಯಿ ಅಮೀರ್ ಎಂಬಾತನ ಜೊತೆ ವಿವಾಹವಾಗಿ ಕುಂಪಲದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಈ ಮಧ್ಯೆ ತಾಯಿ

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ಎಸಗಿದ ಮಲತಂದೆ ಬಂಧನ Read More »

ಬೆಂಗಳೂರಿನ ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು : ಜೊತೆಗಿದ್ದ ಯುವತಿ ಎಸ್ಕೇಪ್‌

ಒಂದು ವಾರದಿಂದ ಹೋಟೆಲ್‌ ಕೊಠಡಿಯಲ್ಲಿ ತಂಗಿದ್ದ ಯುವಕ-ಯುವತಿ ಬೆಂಗಳೂರು: ಎಂಟು ದಿನ ಪ್ರೇಯಸಿ ಜೊತೆಗೆ ಹೋಟೆಲಿನಲ್ಲಿ ತಂಗಿದ್ದ ಪುತ್ತೂರಿನ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮಡಿವಾಳದ ಲಾಡ್ಜ್‌ವೊಂದರಲ್ಲಿ ಸಂಭವಿಸಿದ್ದು, ಈ ಘಟನೆ ನಾನಾ ರೀತಿಯ ಅನುಮಾನಗಳಿಗೆ ಕಾರಣವಾಗಿದೆ. ಯುವಕನನ್ನು ಪುತ್ತೂರಿನ ತಕ್ಷಿತ್ (20) ಎಂದು ಗುರುತಿಸಲಾಗಿದೆ. ಅವನ ಜೊತೆಗಿದ್ದ ಯುವತಿ ಎಸ್ಕೇಪ್‌ ಆಗಿದ್ದಾಳೆ. ಶುಕ್ರವಾರ (ಅ.18) ಯುವಕ ಸಾವನ್ನಪ್ಪಿದ್ದು, ಬೆಳಗ್ಗೆ ಲಾಡ್ಜ್ ಸಿಬ್ಬಂದಿ ರೂಂ ಬಾಗಿಲು ತೆಗೆದಾಗ ಘಟನೆ ಬೆಳಕಿಗೆ ಬಂದಿದೆ. ಕಳೆದ ವಾರ ತನ್ನ ಪ್ರೇಯಸಿಯೊಂದಿಗೆ

ಬೆಂಗಳೂರಿನ ಲಾಡ್ಜ್‌ನಲ್ಲಿ ಪುತ್ತೂರಿನ ಯುವಕ ಅನುಮಾನಾಸ್ಪದ ಸಾವು : ಜೊತೆಗಿದ್ದ ಯುವತಿ ಎಸ್ಕೇಪ್‌ Read More »

ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅಳವಡಿಸಿದ್ದ ಕೇಸರಿ ಅಲಂಕಾರ ತೆರವು

ಕಾಂಗ್ರೆಸ್‌ ದ್ವೇಷದ ಕ್ರಮ ಎಂದು ಹರಿಹಾಯ್ದ ಬಿಜೆಪಿ, ಆರ್‌ಎಸ್‌ಎಸ್‌ ನಾಯಕರು ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್‌ಗೆ ನಿರ್ಬಂಧ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಯವರ ಚಿತ್ತಾಪುರ ಕ್ಷೇತ್ರದಲ್ಲಿ ಅ. 19ರಂದು ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕಾಗಿ ಅಳವಡಿಸಿದ ಅಲಂಕಾರಿಕ ಕೇಸರಿ ಧ್ವಜಗಳು, ಬ್ಯಾನರ್‌ಗಳನ್ನು, ಕೇಸರಿ ಪತಾಕೆಗಳನ್ನು ತೆರವುಗೊಳಿಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ವಿಜಯ ದಶಮಿ ಉತ್ಸವ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಸಂಭ್ರಮಕ್ಕಾಗಿ ಭರ್ಜರಿ ತಯಾರಿಯನ್ನು ನಡೆಸಿಕೊಳ್ಳಲಾಗುತ್ತಿತ್ತು. ಚಿತ್ತಾಪುರ

ಪ್ರಿಯಾಂಕ್‌ ಖರ್ಗೆ ಕ್ಷೇತ್ರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅಳವಡಿಸಿದ್ದ ಕೇಸರಿ ಅಲಂಕಾರ ತೆರವು Read More »

ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಗಡಿಪಾರಿಗೆ ಸಮ್ಮತಿ

ಮುಂಬಯಿಯ ಆರ್ಥರ್‌ ರೋಡ್‌ ಜೈಲಿನಲ್ಲಿ ತಯಾರಾಗಿದೆ ಚೋಕ್ಸಿಗೆ ಸೆಲ್‌ ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 13,000 ಕೋಟಿ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ, ದೇಶದಿಂದ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧ ಭಾರತವು ಪ್ರಮುಖ ಯಶಸ್ಸನ್ನು ಸಾಧಿಸಿದೆ. ಬೆಲ್ಜಿಯಂನ ನ್ಯಾಯಾಲಯ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಅನುಮೋದನೆ ನೀಡಿದೆ. ನ್ಯಾಯಾಲಯವು ಭಾರತದ ಹಸ್ತಾಂತರ ವಿನಂತಿಯನ್ನು ಎತ್ತಿಹಿಡಿದ್ದು ಚೋಕ್ಸಿಯ ಬಂಧನ ಕಾನೂನುಬದ್ಧವಾಗಿದೆ ಎಂದು ಘೋಷಿಸಿದೆ. ಆದಾಗ್ಯೂ, ಚೋಕ್ಸಿಗೆ ಈ ನಿರ್ಧಾರವನ್ನು ಬೆಲ್ಜಿಯಂ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವ ಆಯ್ಕೆ

ಬ್ಯಾಂಕಿಗೆ 13 ಸಾವಿರ ಕೋಟಿ ರೂ. ವಂಚಿಸಿದ ಉದ್ಯಮಿ ಮೆಹುಲ್‌ ಚೋಕ್ಸಿ ಗಡಿಪಾರಿಗೆ ಸಮ್ಮತಿ Read More »

ಪಾಕಿಸ್ತಾನ ವಾಯುದಾಳಿಗೆ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸಾವು

ಕದನ ವಿರಾಮ ಇರುವಾಗಲೇ ದಾಳಿ-ತ್ರಿಕೋನ ಸರಣಿಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದ ಎಸಿಬಿ ಕಾಬೂಲ್: ಪಾಕಿಸ್ತಾನದ ಗಡಿಯಲ್ಲಿರುವ ಅಫ್ಘಾನಿಸ್ತಾನದ ಪಕ್ತಿಕಾ ಪ್ರಾಂತ್ಯದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಮೂವರು ಆಫ್ಘನ್ ಕ್ರಿಕೆಟಿಗರು ಸೇರಿದಂತೆ ಕನಿಷ್ಠ ಎಂಟು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಉಭಯ ದೇಶಗಳ ನಡುವೆ ಈಗಾಗಲೇ ಹದಗೆಟ್ಟಿರುವ ಸಂಬಂಧವನ್ನು ಮತ್ತಷ್ಟು ಬಿಗಡಾಯಿಸಿದೆ. ಆಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (ಎಸಿಬಿ) ಪ್ರಕಾರ, ಮುಂದಿನ ತಿಂಗಳು ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ನಡೆಯಲಿರುವ ತ್ರಿಕೋನ ಸರಣಿಯಲ್ಲಿ ಭಾಗವಹಿಸಲು ಆಟಗಾರರು ಉರ್ಗುನ್‌ನಿಂದ ಪಕ್ತಿಕಾ

ಪಾಕಿಸ್ತಾನ ವಾಯುದಾಳಿಗೆ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸಾವು Read More »

error: Content is protected !!
Scroll to Top