ಅಪರಾಧ

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಇಂದು

ಬಿಜೆಪಿ ಮುಖಂಡ ಬಿ.ಎಲ್‌.ಸಂತೋಷ್‌ ನಿಂದನೆ ಪ್ರಕರಣದಲ್ಲಿ ಸೆರೆಯಾಗಿರುವ ತಿಮರೋಡಿ ಉಡುಪಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ ಜೈಲು ಸೇರಿರುವ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನಿ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಗುರುವಾರ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನು ವಶಕ್ಕೆ ಪಡೆದು ಬಳಿಕ ಅರೆಸ್ಟ್ ಮಾಡಿದ್ದರು. ನಂತರ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ತಿಮರೋಡಿ ಹಿರಿಯಡ್ಕ ಸಬ್ ಜೈಲಿನಲ್ಲಿದ್ದಾರೆ. ಬಂಧಿಸುವ ವೇಳೆ ಉಜಿರೆಯಲ್ಲಿರುವ ತಿಮರೋಡಿ ಮನೆಯಲ್ಲಿ ಹೈಡ್ರಾಮಾ ನಡೆದಿತ್ತು. ಪೊಲೀಸರ […]

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಇಂದು Read More »

ಸಂಸತ್ತಿನಲ್ಲಿ ಮತ್ತೆ ಭದ್ರತಾ ಲೋಪ : ಗೋಡೆ ಹಾರಿ ಒಳನುಗ್ಗಿದ ವ್ಯಕ್ತಿ

ಮರ ಏರಿ ಆವರಣದೊಳಗೆ ಜಿಗಿದು ಒಳ ನುಗ್ಗಿದ್ದ ಆಗಂತುಕನ ತೀವ್ರ ವಿಚಾರಣೆ ನವದೆಹಲಿ : ಹೊಸ ಸಂಸತ್ ಭವನದಲ್ಲಿ ಮತ್ತೊಮ್ಮೆ ಭದ್ರತಾ ವೈಫಲ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ಮರವನ್ನು ಬಳಸಿ ಗೋಡೆ ದಾಟಿ ಸಂಸತ್ತಿನ ಆವರಣ ಪ್ರವೇಶಿಸಿದ್ದಾನೆ. ಈ ಘಟನೆ ಬೆಳಗ್ಗೆ 6.30ಕ್ಕೆ ನಡೆದಿದ್ದು, ಆತ ರೈಲು ಭವನ ಮೂಲಕವಾಗಿ ಗರುಡ ದ್ವಾರದ ತನಕ ತಲುಪಿದ್ದಾನೆ. ಅಲ್ಲಿದ್ದ ಭದ್ರತಾ ಸಿಬ್ಬಂದಿ ಅವನನ್ನು ಹಿಡಿದು ಪ್ರಶ್ನಿಸಿ ಬಳಿಕ ಬಂಧಿಸಿದ್ದಾರೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸತ್ತಿನ ಮುಂಗಾರು

ಸಂಸತ್ತಿನಲ್ಲಿ ಮತ್ತೆ ಭದ್ರತಾ ಲೋಪ : ಗೋಡೆ ಹಾರಿ ಒಳನುಗ್ಗಿದ ವ್ಯಕ್ತಿ Read More »

ಮಗಳು ನಾಪತ್ತೆ ಪ್ರಕರಣ ವಾಪಸ್‌ ಪಡೆಯಲು ಮುಂದಾದರಾ ಸುಜಾತ ಭಟ್‌?

ಆಡಿಯೋ ಹರಿಬಿಟ್ಟು ಪ್ರಕರಣ ಬಗ್ಗೆ ಮಾತನಾಡಿದ ವೃದ್ಧೆ ಧರ್ಮಸ್ಥಳ: ತನ್ನ ಮಗಳು ಅನನ್ಯಾ ಭಟ್ ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದು, ಹುಡುಕಿಕೊಡಿ ಎಂದು ಹೇಳಿಕೊಂಡಿದ್ದ ಸುಜಾತ ಭಟ್‌ ಈಗ ದಿಢೀರ್‌ ಎಂದು ಕೇಸನ್ನು ವಾಪಸು ಪಡೆದುಕೊಳ್ಳುವುದಾಗಿ ಹೇಳಿದ್ದು, ಅವರ ಬಗ್ಗೆ ಇರುವ ಅನುಮಾನ ಇನ್ನಷ್ಟು ಹೆಚ್ಚವಾಗುವಂತೆ ಮಾಡಿದೆ. ಇತ್ತೀಚೆಗೆ ಸುಜಾತಾ ಭಟ್ ತಮ್ಮ ಮಗಳೆಂದು ಫೋಟೋವೊಂದನ್ನು​ ತೋರಿಸಿದ್ದರು. ಆದರೆ ಅದು ಅನನ್ಯಾ ಭಟ್ ಅಲ್ಲ, ಬದಲಿಗೆ ವಾಸಂತಿ ಎಂಬ ಸತ್ಯ ಹೊರಬಂದಿತ್ತು. ಹೀಗಿರುವಾಗ ಕೇಸ್ ವಾಪಸ್ ಪಡೆಯುವುದಾಗಿ ಸುಜಾತಾ ಭಟ್

ಮಗಳು ನಾಪತ್ತೆ ಪ್ರಕರಣ ವಾಪಸ್‌ ಪಡೆಯಲು ಮುಂದಾದರಾ ಸುಜಾತ ಭಟ್‌? Read More »

ಬಂಟ್ವಾಳ : ಬಾಲಕನಿಗೆ ಲೈಂಗಿಕ ಕಿರುಕುಳ

ತಲೆಮರೆಸಿಕೊಂಡ ಆರೋಪಿಗೆ ಶೋಧ ಬಂಟ್ವಾಳ : ಅಪ್ರಾಪ್ತ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಬಂಟ್ವಾಳ ಠಾಣೆಯಲ್ಲಿ ದೂರು ದಾಖಲಾಗಿದೆ. ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ನಿವಾಸಿ ಅಬ್ದುಲ್ಲಾ ಯಾನೆ ಮೋನು ಯಾನೆ ಪಿಲಿಮೋನು ಎಂಬಾತ ಆರೋಪಿಯಾಗಿದ್ದು, ಈತನ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದಾರೆ. ಬಾಲಕ ಕೂದಲು ಕಟ್ ಮಾಡುವುದಕ್ಕಾಗಿ ಸಲೂನ್‌ಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆರೋಪಿ ಪಿಲಿ ಮೋನು ಬಾಲಕನನ್ನು ತನ್ನ ಸ್ಕೂಟರ್‌ನಲ್ಲಿ ಬಲವಂತವಾಗಿ ಕರೆದುಕೊಂಡು ಹೋಗಿ

ಬಂಟ್ವಾಳ : ಬಾಲಕನಿಗೆ ಲೈಂಗಿಕ ಕಿರುಕುಳ Read More »

ಮಂಗಳಮುಖಿಯನ್ನೂ ಬಿಡದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ!

ಕಿರುಕುಳ ಆರೋಪ ಹೊತ್ತು ರಾಜೀನಾಮೆ ನೀಡಿರುವ ಕಾಂಗ್ರೆಸ್‌ ಯುವ ನಾಯಕನ ಇನ್ನಷ್ಟು ಕರ್ಮಕಾಂಡಗಳು ಬಯಲು ತಿರುವನಂತಪುರಂ: ಮಲಯಾಳಂ ನಟಿ ರಿನಿ ಆನ್ ಜಾರ್ಜ್ ಅವರಿಗೆ ಕಿರುಕುಳ ನೀಡಿದ ಆರೋಪ ಹೊತ್ತು ಕೇರಳ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಪದವಿಗೆ ಗುರುವಾರ ರಾಜೀನಾಮೆ ನೀಡಿರುವ ಶಾಸಕ ರಾಹುಲ್‌ ಮಮಕೂಟತ್ತಿಲ್‌ ತೃತೀಯ ಲಿಂಗಿಗೂ ಲೈಂಗಿಕ ಕಿರುಕುಳ ನೀಡಿದ ವಿಚಾರ ಬೆಳಕಿಗೆ ಬಂದಿದೆ. ನಟಿ ರಿನಿ ಲೈಂಗಿಕ ಕಿರುಕುಳ ಆರೋಪ ಮಾಡಿದ ಬಳಿಕ ಇನ್ನೂ ಹಲವು ಮಹಿಳೆಯರು ರಾಹುಲ್‌ ಮಮಕೂಟತ್ತಿಲ್‌ನ ಕಿರುಕುಳದ ಬಗ್ಗೆ

ಮಂಗಳಮುಖಿಯನ್ನೂ ಬಿಡದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ! Read More »

ದಿನಕ್ಕೊಂದು ಅನೂಹ್ಯ ತಿರುವು ಪಡೆಯುತ್ತಿರುವ ಧರ್ಮಸ್ಥಳ ಪ್ರಕರಣ

ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಎಂಟ್ರಿ – ಅಪಪ್ರಚಾರದ ವಿರುದ್ಧ ದೂರು ಧರ್ಮಸ್ಥಳ : ಧರ್ಮಸ್ಥಳದ ಶವ ಹೂತ ಪ್ರಕರಣ ದಿನಕಳೆದಂತೆ ಅನೂಹ್ಯ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಪ್ರಕರಣಕ್ಕೆ ದಿನಕ್ಕೊಬ್ಬರಂತೆ ಎಂಟ್ರಿಯಾಗುತ್ತಿದ್ದು, ಎಸ್‌ಐಟಿ ಅಧಿಕಾರಿಗಳೇ ಗೊಂದಲಕ್ಕೊಳಗಾಗಿದ್ದಾರೆ. ಎಸ್‌ಐಟಿ ಅಧಿಕಾರಿಗಳಿಗೆ ಬಹು ಆಯಾಮದಲ್ಲಿ ತನಿಖೆ ನಡೆಸಲು ತನಿಖಾ ತಂಡ ಪ್ರಣವ್‌ ಮೊಹಾಂತಿ ಸೂಚಿಸಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಈ ಪ್ರಕರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ವಿಡಿಯೋ ಹಾಕಿದ್ದಾರೆ ಎಂದು ನಾಲ್ವರ

ದಿನಕ್ಕೊಂದು ಅನೂಹ್ಯ ತಿರುವು ಪಡೆಯುತ್ತಿರುವ ಧರ್ಮಸ್ಥಳ ಪ್ರಕರಣ Read More »

ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ.ದಾಳಿ

ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ ವವೀರೇಂದ್ರ ಪಪ್ಪಿ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಚಳ್ಳಕೆರೆ ಪಟ್ಟಣದಲ್ಲಿರುವ ನಾಲ್ಕು ಮನೆಗಳು ಹಾಗೂ ಬೆಂಗಳೂರಿನ ಸಹಕಾರ ನಗರದಲ್ಲಿರುವ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವೀರೇಂದ್ರ ಪಪ್ಪಿಯ ಸಹೋದರರಾದ ಕೆ.ಸಿ ನಾಗರಾಜ, ಕೆ.ಸಿ ತಿಪ್ಪೇಸ್ವಾಮಿ ಅವರ ಮನೆಗಳ ಮೇಲೂ ದಾಳಿಯಾಗಿದೆ. ದಾಳಿ ನಡೆಸಿ ಶಾಕ್‌ ಕೊಟ್ಟಿರುವ ಅಧಿಕಾರಿಗಳು ಮಹತ್ವದ ದಾಖಲೆಗಳನ್ನ ಪರಿಶೀಲಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ.ದಾಳಿ Read More »

ಕುಡುಪು ಗುಂಪು ಹತ್ಯೆ ಪ್ರಕರಣ : ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಕ್ರಿಕೆಟ್‌ ಆಡುವಾಗ ಕೇರಳದ ವ್ಯಕ್ತಿಯನ್ನು ಗುಂಪುಕೂಡಿ ಥಳಿಸಿ ಕೊಂದ ಪ್ರಕರಣ ಮಂಗಳೂರು: ಮಂಗಳೂರಿನ ಕುಡುಪುವಿನಲ್ಲಿ ಕಳೆದ ಏ.27ರಂದು ಕೇರಳ ಮೂಲದ ಆಶ್ರಫ್ ಎಂಬವರನ್ನು ಗುಂಡು ಹತ್ಯೆ ಮಾಡಿದ ಪ್ರಕರಣದ 10 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಆರೋಪಿಗಳಾದ ಅನಿಲ್ ಕುಮಾರ್, ಸಾಯಿದೀಪ್, ಅನಿಲ್ ಕುಮಾರ್, ಯತಿರಾಜ್, ಮನೀಶ್ ಶೆಟ್ಟಿ, ಪ್ರದೀಪ್, ವಿವಿಯನ್ ಆಲ್ವರಿಸ್, ಶ್ರೀದತ್ತ, ಧನುಷ್, ಕಿಶೋರ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಏ.27ರರಂದು ಸಂಜೆ 5.30ರ

ಕುಡುಪು ಗುಂಪು ಹತ್ಯೆ ಪ್ರಕರಣ : ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌ Read More »

ಸಮೀರ್‌ ವಿರುದ್ಧ ಇನ್ನೊಂದು ಕೇಸ್‌ ದಾಖಲು

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಅವಹೇಳನ ಮಾಡಿದ ಆರೋಪ ಧರ್ಮಸ್ಥಳ: ಧರ್ಮಸ್ಥಳದ ವಿರುದ್ಧ ಅಪಪ್ರಚಾರದ ವಿಡಿಯೋ ಮಾಡಿ ಸದ್ಯ ಜಾಮೀನು ಪಡೆದು ಬಂಧನದಿಂದ ಪಾರಾಗಿರುವ ಯೂಟ್ಯೂಬರ್ ಮೊಹಮ್ಮದ್‌ ಸಮೀರ್ ವಿರುದ್ಧ ವಿಶ್ವ ಹಿಂದೂ ಪರಿಷತ್ ಸದಸ್ಯ ಮಂಜು ಜೈನ್ ಎಂಬವರು ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ

ಸಮೀರ್‌ ವಿರುದ್ಧ ಇನ್ನೊಂದು ಕೇಸ್‌ ದಾಖಲು Read More »

ಬಂಧನದ ಭೀತಿಯಲ್ಲಿದ್ದ ಸಮೀರನಿಗೆ ನಿರೀಕ್ಷಣಾ ಜಾಮೀನು

ಬೆಂಗಳೂರು: ಧರ್ಮಸ್ಥಳ ಪ್ರಕರಣದ ಬಗ್ಗೆ AI ವಿಡಿಯೋ ಮಾಡಿ ಸಮಾಜದ ದಾರಿ ತಪ್ಪಿಸಿದ ಆರೋಪದಲ್ಲಿ ಪೊಲೀಸರ ಬಂಧನದ ಭೀತಿಯಲ್ಲಿದ್ದ ದೂತ ಸಮೀರನಿಗೆ ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳದ ವಿರುದ್ಧ ಸಮೀರ್ ಮಾಡಿದ್ದ AI ವಿಡಿಯೋ ಸಮಾಜದಲ್ಲಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಈ ಹಿನ್ನೆಲೆ ಆತನ ವಿರುದ್ಧ ಸುಮೋಟೋ ಪ್ರಕರಣವನ್ನು ಪೊಲೀಸರು ದಾಖಲು ಮಾಡಿದ್ದರು. ಆತನನ್ನು ಬಂಧಿಸುವುದಕ್ಕಾಗಿ ಪೊಲೀಸರು ಬನ್ನೇರುಘಟ್ಟದ ಆತನ ಬಾಡಿಗೆ ಮನೆಯ ಬಳಿಗೂ ತೆರಳಿದ್ದರು. ಬಂಧನದ ಭೀತಿ

ಬಂಧನದ ಭೀತಿಯಲ್ಲಿದ್ದ ಸಮೀರನಿಗೆ ನಿರೀಕ್ಷಣಾ ಜಾಮೀನು Read More »

error: Content is protected !!
Scroll to Top