ಅಪರಾಧ

ಕೌನ್ಸೆಲಿಂಗ್‌ ಸೆಂಟರ್‌ನಲ್ಲಿ ಮಹಿಳೆಗೆ ಕಿರುಕುಳ : ಆರೋಪಿ ಸೆರೆ

ಉಡುಪಿ: ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿರುವ ‘ಸುನಂದಾ ವೆಲ್ನೆಸ್ ಸೆಂಟರ್’ನಲ್ಲಿ ಕೌನ್ಸೆಲಿಂಗ್‌ಗೆ ಬಂದಿದ್ದ ಮಹಿಳೆಯ ದೇಹ ಸ್ಪರ್ಶ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪಿ ನಿರಂಜನ ಶೇಖರ ಶೆಟ್ಟಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದಾಂಪತ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆ ಕೌನ್ಸಿಲಿಂಗ್‌ಗಾಗಿ ಕಂಕಣಗುತ್ತು ಕಂಪೌಂಡ್‌ನಲ್ಲಿರುವ ವೆಲ್ನೆಸ್ ಸೆಂಟರ್‌ಗೆ ಭೇಟಿ ನೀಡಿದ್ದರು. ಈ ವೇಳೆ ಕೌನ್ಸೆಲಿಂಗ್‌ ಮಾಡುತ್ತಿದ್ದ ನಿರಂಜನ ಶೇಖರ ಶೆಟ್ಟಿ ದೈಹಿಕ ಸ್ಪರ್ಶ ಮಾಡಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿದೆ. ಘಟನೆ ಬಳಿಕ […]

ಕೌನ್ಸೆಲಿಂಗ್‌ ಸೆಂಟರ್‌ನಲ್ಲಿ ಮಹಿಳೆಗೆ ಕಿರುಕುಳ : ಆರೋಪಿ ಸೆರೆ Read More »

ವಿದ್ಯಾರ್ಥಿನಿಗೆ ಕಿರುಕುಳ : ಉಪನ್ಯಾಸಕನ ವಿರುದ್ಧ ಎಫ್‌ಐಆರ್‌

ಹೆಚ್ಚು ಮಾರ್ಕ್‌ ಕೊಡುತ್ತೇನೆ ಎಂದು ಕಿರುಕುಳ ನೀಡುತ್ತಿದ್ದ ಇಂಜಿನಿಯರಿಂಗ್‌ ಕಾಲೇಜು ಉಪನ್ಯಾಸಕ ಮೈಸೂರು : ನಗರದ ಪ್ರತಿಷ್ಠಿತ ಇಂಜಿನಿಯರಿಂಗ್​​ ಕಾಲೇಜಿನಲ್ಲಿ ಉಪನ್ಯಾಸಕನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತು ಕೇಸ್‌ ದಾಖಲಾಗಿದೆ. ಹೆಚ್ಚು ಮಾರ್ಕ್ಸ್ ನೀಡ್ತೇನೆ, ಒಳ್ಳೆಯ ಕೆಲಸ ಕೊಡಿಸುತ್ತೇನೆ. ಹೊರಗಡೆ ಪಬ್‌ಗೆ ಹೋಗಿ ಮಜಾ ಮಾಡೋಣ ಬಾ ಎಂದು ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿನಿ ದೂರು ನೀಡಿದ್ದು, ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಉಪನ್ಯಾಸಕ ನೀಡುತ್ತಿದ್ದ ಲೈಂಗಿಕ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ಮಹಿಳಾ ಉಪನ್ಯಾಸಕರ

ವಿದ್ಯಾರ್ಥಿನಿಗೆ ಕಿರುಕುಳ : ಉಪನ್ಯಾಸಕನ ವಿರುದ್ಧ ಎಫ್‌ಐಆರ್‌ Read More »

ಲಂಚ ಪಡೆದು ಪ್ರಶ್ನೆ ಕೇಳಿದ ಪ್ರಕರಣ : ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿ

ಉದ್ಯಮಿಯಿಂದ ಲಂಚ ಪಡೆದು ಸಂಸತ್ತಿನಲ್ಲಿ ಪ್ರಶ್ನೆ ಕೇಳಿದ ಟಿಎಂಸಿ ಸಂಸದೆ ನವದೆಹಲಿ : ತೃಣಮೂಲ ಕಾಂಗ್ರೆಸ್‌ ಪಕ್ಷದ ಸಂಸದೆ ಮಹುವಾ ಮೊಯಿತ್ರಾ ವಿರುದ್ಧವಿರುವ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಹಣ ಕೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ನಾಲ್ಕು ವಾರಗಳಲ್ಲಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಲೋಕಪಾಲವು ಸಿಬಿಐಗೆ ಅನುಮತಿ ನೀಡಿದೆ. ಇದರೊಂದಿಗೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಕೃಷ್ಣನಗರ ಕ್ಷೇತ್ರದ ಸಂಸದೆ ವಿರುದ್ಧ ಸಿಬಿಐ ಕಾನೂನು ಪ್ರಕ್ರಿಯೆ ಆರಂಭಿಸಿದೆ. ಈ ಸಂಬಂಧ ನವೆಂಬರ್ 12ರಂದು ಸಭೆ ನಡೆಸಿದ

ಲಂಚ ಪಡೆದು ಪ್ರಶ್ನೆ ಕೇಳಿದ ಪ್ರಕರಣ : ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿ Read More »

ಎಸ್‌ಐಟಿ ಅಧಿಕಾರಿಗಳ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ ಜಯಂತ್‌ ಟಿ.

ಜಿತೇಂದ್ರ ದಯಾಮ, ಸೈಮನ್‌, ಆರ್‌.ಜಿ.ಮಂಜುನಾಥ ಮತ್ತಿತರರ ವಿರುದ್ಧ ದೂರು ಬೆಳ್ತಂಗಡಿ: ಎಸ್‌ಐಟಿ ತನ್ನ ಮೇಲೆ ಮಾಡಿ, ಬಲವಂತವಾಗಿ ಹೇಳಿಕೆ ಪಡೆದುಕೊಂಡಿದೆ ಎಂದು ಆರೋಪಿಸಿ ರಾಜ್ಯಪಾಲರು ಮತ್ತು ಪೊಲೀಸ್‌ ಮಹಾವರಿಷ್ಠರಿಗೆ ದೂರು ನೀಡಿದ್ದ ಜಯಂತ್‌ ಟಿ. ಈಗ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ. ದೂರು ನೀಡಿದ್ದಾರೆ. ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್‌ಸ್ಪೆಕ್ಟ‌ರ್ ಮಂಜುನಾಥ

ಎಸ್‌ಐಟಿ ಅಧಿಕಾರಿಗಳ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಿದ ಜಯಂತ್‌ ಟಿ. Read More »

ಬಿ.ಸಿ.ರೋಡ್‌ : ಕಾರು ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು

ಬಂಟ್ವಾಳ : ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿನತ್ತ ಬರುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ಬಿ.ಸಿ.ರೋಡ್‌ : ಕಾರು ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವು Read More »

ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ : ಏಳು ಪೊಲೀಸರ ಸಾವು; 30 ಮಂದಿಗೆ ಗಾಯ

ಫರಿದಾಬಾದ್‌ನಿಂದ ವಶಪಡಿಸಿಕೊಂಡ ಸ್ಫೋಟಕ ವಸ್ತು ಸ್ಫೋಟಿಸಿ ಭೀಕರ ಅನಾಹುತ ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ನೌಗಾಮ್ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ತಡರಾತ್ರಿ ಭಾರಿ ಸ್ಫೋಟ ಸಂಭವಿಸಿದೆ. ಹರಿಯಾಣದ ಫರಿದಾಬಾದ್‌ನಲ್ಲಿ ವಶಪಡಿಸಿಕೊಂಡಿದ್ದ ಸ್ಫೋಟಕ ವಸ್ತು ಸ್ಫೋಟಿಸಿ 7 ಮಂದಿ ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು 30 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ತೀವ್ರತೆಗೆ ಪೊಲೀಸ್ ಠಾಣೆಯಿಂದ ಭಾರಿ ಪ್ರಮಾಣದ ಹೊಗೆ ಮತ್ತು ಜ್ವಾಲೆಗಳು ಹೊರಬರುತ್ತಿರುವುದು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಲ್ಲಿ ಕಾಣಿಸಿವೆ. ಗಾಯಗೊಂಡ

ಪೊಲೀಸ್‌ ಠಾಣೆಯಲ್ಲಿ ಭೀಕರ ಸ್ಫೋಟ : ಏಳು ಪೊಲೀಸರ ಸಾವು; 30 ಮಂದಿಗೆ ಗಾಯ Read More »

ಕೆಂಪುಕೋಟೆ ಸ್ಫೋಟದ ಆರೋಪಿ ಡಾ.ಉಮರ್‌ನ ಮನೆ ಧ್ವಂಸ

ಬುಡೋಜರ್‌ ನುಗ್ಗಿಸಿ ಮನೆಯನ್ನು ಕೆಡವಿ ಹಾಕಿದ ಭದ್ರತಾ ಪಡೆಗಳು ಶ್ರೀನಗರ : ದೆಹಲಿಯ ಕೆಂಪುಕೋಟೆಯ ಬಳಿ ಕಳೆದ ಸೋಮವಾರ ಸಂಭವಿಸಿದ್ದ ಕಾರು ಬಾಂಬ್‌ ಸ್ಫೋಟದ ಪ್ರಮುಖ ಆರೋಪಿ ಡಾ.ಉಮರ್ ನಬಿ ಅಲಿಯಾಸ್‌ ಡಾ. ಮೊಹಮ್ಮದ್‌ ಉಮರ್‌ನ ಮನೆಯನ್ನು ಭದ್ರತಾ ಪಡೆ ಧ್ವಂಸಗೊಳಿಸಿದೆ. ಈ ಸ್ಫೋಟದಲ್ಲಿ ಅತ್ಮಾಹುತಿ ಬಾಂಬರ್‌ ಆಗಿದ್ದ ಡಾ. ಉಮರ್‌ ಸತ್ತಿರುವುದು ಡಿಎನ್‌ಎ ಪರೀಕ್ಷೆಯಲ್ಲಿ ದೃಢಪಟ್ಟಿದೆ. ದೆಹಲಿ ಸ್ಫೋಟದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಉಗ್ರರ ಹಿಂದಿನ ರಹಸ್ಯ ಒಂದೊಂದಾಗಿಯೇ ಹೊರಬರುತ್ತಿದೆ. ಡಾ.ಉಮರ್ ನಬಿ ತಾಯಿಯ ಡಿಎನ್‌ಎ ಪರೀಕ್ಷೆ

ಕೆಂಪುಕೋಟೆ ಸ್ಫೋಟದ ಆರೋಪಿ ಡಾ.ಉಮರ್‌ನ ಮನೆ ಧ್ವಂಸ Read More »

ಎಸ್‌ಐಟಿ ವಿರುದ್ಧವೇ ದೂರು ನೀಡಿದ ಜಯಂತ

ಹಲ್ಲೆ ಮಾಡಿ ಬಲವಂತದಿಂದ ಹೇಳಿಕೆ ಪಡೆದಿದ್ದಾರೆ ಎಂದು ಆರೋಪ ಬೆಳ್ತಂಗಡಿ: ಎಸ್.ಐ.ಟಿ‌ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ಹಲ್ಲೆ ಮಾಡಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಹೋರಾಟಗಾರ ಜಯಂತ್ ಟಿ. ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಎಸ್.ಐ.ಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಸೈಮನ್, ಮಂಜುನಾಥ್ ಆರ್.ಜೆ, ಮಂಜುನಾಥ ಗೌಡ, ಹಾಗೂ ಗುಣಪಾಲ ಸೇರಿ ತನಗೆ ಬೆದರಿಕೆ ಹಾಕಿದ್ದರು, ಬಳಿಕ ದೂರುದಾರ ಚಿನ್ನಯ್ಯನನ್ನು ಕರೆಸಿ ಆತನ ಮೂಲಕ ತನಗೆ ತೀವ್ರವಾಗಿ ಹಲ್ಲೆ ಮಾಡಿಸಿದರು. ಅದೇ ರೀತಿ ಚಿನ್ನಯ್ಯನ ಮೇಲೆ

ಎಸ್‌ಐಟಿ ವಿರುದ್ಧವೇ ದೂರು ನೀಡಿದ ಜಯಂತ Read More »

ಮಂಗಳೂರು: ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.81 ಕೋ. ರೂ. ದೋಚಿದ ಖದೀಮರು

ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂದು ಬೆದರಿಸಿ ಡಿಜಿಟಲ್‌ ಅರೆಸ್ಟ್‌ ಮಂಗಳೂರು: ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 1,81,50,000ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಮಹಿಳೆಯೊಬ್ಬರ ಮೊಬೈಲ್‌ಗೆ ಅ.24ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಮುಂಬೈನ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಆಕೆಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಮಾಡಿ ಕಮಿಷನ್ ತೆಗೆದುಕೊಂಡ ಆರೋಪವಿದೆ ಎಂದು

ಮಂಗಳೂರು: ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.81 ಕೋ. ರೂ. ದೋಚಿದ ಖದೀಮರು Read More »

ಕೆಂಪುಕೋಟೆ ಸ್ಫೋಟಕ್ಕೆ ಇನ್ನೂ ಒಂದು ಕಾರು ಬಳಕೆ

ಮೂರನೇ ಕಾರನ್ನು ಹುಡುಕುತ್ತಿರುವ ಪೊಲೀಸರು ನವದೆಹಲಿ: ಕೆಂಪುಕೋಟೆ ಮೆಟ್ರೊ ನಿಲ್ದಾಣದ ಬಳಿ ಸೋಮವಾರ ಸಂಭವಿಸಿದ ಕಾರು ಸ್ಫೋಟಕ್ಕೆ ಇನ್ನೂ ಒಂದು ಕಾರು ಬಳಕೆಯಾಗಿರುವ ಕುರಿತು ತನಿಖಾಧೀಕಾರಿಗಳಿಗೆ ಮಾಹಿತಿ ಸಿಕ್ಕಿದ್ದು, ಈ ಮೂರನೇ ಕಾರನ್ನು ಹಲವು ಭದ್ರತಾ ಸಂಸ್ಥೆಗಳು ಹುಡುಕುತ್ತಿವೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ. ಸೋಮವಾರ ಸಂಜೆ ಕೆಂಪುಕೋಟೆ ಮೆಟ್ರೊ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹನ್ನೆರಡು ಜನರು ಸಾವಿಗೀಡಾಗಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ತನಿಖಾಧಿಕಾರಿಗಳು ಶಂಕಿತ

ಕೆಂಪುಕೋಟೆ ಸ್ಫೋಟಕ್ಕೆ ಇನ್ನೂ ಒಂದು ಕಾರು ಬಳಕೆ Read More »

error: Content is protected !!
Scroll to Top