ಅಪರಾಧ

ಮಂಗಳೂರು ಜೈಲಿನಲ್ಲಿ ಮತ್ತೆ ಹೊಡೆದಾಟ

ಮಂಗಳೂರು: ಕೋಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಇಂದು ಮಧ್ಯಾಹ್ನ ಕೈದಿಗಳ ಮಧ್ಯೆ ಮತ್ತೆ ಹೊಡೆದಾಟ ನಡೆದಿರುವ ಕುರಿತು ವರದಿಯಾಗಿದೆ. ಅಡುಗೆ ಮಾಡುತ್ತಿದ್ದ ಕೈದಿ ಅಕ್ಷಿತ್ ಎಂಬಾತನಿಗೆ ಅಬ್ದುಲ್ ರಹ್ಮಾನ್ ಯಾನೆ ಮುನ್ನಿ ಯಾನೆ ಮುನೀರ್, ಉಮರ್ ಶಿಹಾಬ್ ಮತ್ತಿತರರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಇದರಿಂದ ಕೆಲಕಾಲ ಜೈಲಿನೊಳಗೆ ಆತಂಕದ ವಾತಾವರಣ ಸೃಷ್ಟಿಯಾಯಿತು ಎಂದು ತಿಳಿದು ಬಂದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಜೈಲಿಗೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಂಗಳೂರು ಜೈಲಿನಲ್ಲಿ ಮತ್ತೆ ಹೊಡೆದಾಟ Read More »

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ನಿರ್ಲಕ್ಷ್ಯ : ಪೊಲೀಸರ ಅಮಾನತು

ವಿದೇಶದಲ್ಲಿ ನೌಕರಿ ಕೊಡಿಸುವ ಆಮಿಷದಲ್ಲಿ 300ಕ್ಕೂ ಹೆಚ್ಚು ಮಂದಿಗೆ ಪಂಗನಾಮ ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನೂರಾರು ಜನರಿಗೆ ಕೋಟಿಗಟ್ಟಲೆ ರೂಪಾಯಿ ಪಂಗನಾಮ ಹಾಕಿರುವ ಕಂಪನಿಯ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದರೂ ತನಿಖೆ ಮಾಡದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಅರೋಪ ಕೇಳಿಬಂದಿದೆ. ವಂಚನೆ ಪ್ರಕರಣದ ತನಿಖೆಯಲ್ಲಿ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ. ನಕಲಿ ಸಂಸ್ಥೆಯ ಬಗ್ಗೆ ಆಫೀಸ್ ಪ್ರೊಟೆಕ್ಟರ್

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದ ನಿರ್ಲಕ್ಷ್ಯ : ಪೊಲೀಸರ ಅಮಾನತು Read More »

ಬಾಡಿಗೆ ಮನೆಯಲ್ಲಿ ಮಹಿಳೆಯ ಶವ ಪತ್ತೆ : ಕೊಲೆ ಶಂಕೆ

ಮಂಗಳೂರು: ನಗರ ಹೊರವಲಯದ ಕುಡುಪು ಗ್ರಾಮದ ಪಾಲ್ದನೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಲ್ಲವಿ ಎಂಬ ಮಹಿಳೆಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಮನೆಯ ಕೊಠಡಿಯಲ್ಲಿ ಪತ್ತೆಯಾಗಿದೆ. ಪಲ್ಲವಿಯ ಪತಿ ನವೀನ್ ಹಾಗೂ ಅತ್ತೆ ಶಾಂತಾ ಸೇರಿಕೊಂಡು ಕೊಲೆ ಮಾಡಿದ್ದಾರೆ ಎಂದು ದೂರಲಾಗಿದೆ. ಭಾನುವಾರ ಶವ ಪತ್ತೆಯಾಗಿದ್ದು, ಘಟನೆಯ ಬಳಿಕ ನವೀನ್ ತಲೆಮರೆಸಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪಾಲ್ದನೆಯ ಕರುಣಾಕರ ಶೆಟ್ಟಿಯ ಮನೆಯ

ಬಾಡಿಗೆ ಮನೆಯಲ್ಲಿ ಮಹಿಳೆಯ ಶವ ಪತ್ತೆ : ಕೊಲೆ ಶಂಕೆ Read More »

ಮಂಗಳೂರು ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ : ಓರ್ವನಿಗೆ ಗಾಯ

ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡ ವಿಚಾರಣಾಧೀನ ಕೈದಿಗಳು ಮಂಗಳೂರು : ಮಂಗಳೂರು ಸೆಂಟ್ರಲ್‌ ಜೈಲಿನಲ್ಲಿ ನಿನ್ನೆ ಕೊಲೆ ಆರೋಪಿ ಚೊಟ್ಟೆ ನೌಷದ್‌ ಮೇಲೆ ಹಲ್ಲೆಯಾದ ಬೆನ್ನಿಗೆ ಕೈದಿಗಳ ನಡುವೆ ಹೊಡೆದಾಟ ನಡೆದ ಘಟನೆ ಸಂಭವಿಸಿದೆ. ಸಂಜೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳ ನಡುವೆ ವಾಗ್ವಾದ ನಡೆದಿದ್ದು, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಮಾರಾಮಾರಿಯಲ್ಲಿ ಓರ್ವ ಒಬ್ಬ ಕೈದಿಗೆ ಗಾಯವಾಗಿದೆ. ಜೈಲಿನ ಅದಿಕಾರಿಗಳು ಗಲಭೆ ಕುರಿತು ಅಧಿಕಾರಿಗಳು ಪೊಲೀಸ್ ದೂರು ದಾಖಲಿಸಿದ್ದಾರೆ.ಸಂಜೆ 6.40ರ ಸುಮಾರಿಗೆ ಜೈಲಿನ ಕ್ವಾರಂಟೈನ್ ಸೆಲ್ ವಿಭಾಗದಲ್ಲಿ ಮಾರಾಮಾರಿ

ಮಂಗಳೂರು ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ : ಓರ್ವನಿಗೆ ಗಾಯ Read More »

ಸುಹಾಸ್‌ ಶೆಟ್ಟಿ ಹತ್ಯೆ ಆರೋಪಿ ನೌಷದ್‌ ಮೇಲೆ ಜೈಲಿನಲ್ಲಿ ಹಲ್ಲೆ

ಪೊಲೀಸರ ಎದುರೇ ಕಲ್ಲು ಎಸೆದ ದಾಳಿ ಮಾಡಿದ ಕೈದಿಗಳು ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ಎದುರೇ ಇತರ ಕೈದಿಗಳು ದಾಳಿ ಮಾಡಿದ ಘಟನೆ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವನನ್ನು ಮೈಸೂರು ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಚೊಟ್ಟೆ ನೌಷಾದ್ ಮೇಲೆ ಮಂಗಳೂರು ಸೆಂಟ್ರಲ್‌ ಜೈಲಿನ ಬಿ ಬ್ಯಾರಕ್‌ನ ಹಲವು ಸಹಕೈದಿಗಳು ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದಾರೆ.ಚೊಟ್ಟೆ ನೌಷಾದ್‌ನ

ಸುಹಾಸ್‌ ಶೆಟ್ಟಿ ಹತ್ಯೆ ಆರೋಪಿ ನೌಷದ್‌ ಮೇಲೆ ಜೈಲಿನಲ್ಲಿ ಹಲ್ಲೆ Read More »

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಕೊಡಗು: ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಉಗೂರು ಗ್ರಾಮ ಪಂಚಾಯಿತಿ  ವ್ಯಾಪ್ತಿಯಲ್ಲಿ ನಡೆದಿದೆ. ಮಧು ಅಲಿಯಾಸ್ ಅಶೋಕ್ ಆತ್ಮಹತ್ಯೆ ಮಾಡಿಕೊಂಡವರು. ಮದ್ಯ ಸೇವಿಸಿ ಬಳಿಕ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು, ಮೂರು ವರ್ಷದ ಮಗಳಿಗೆ ಅನಾರೋಗ್ಯ ಕಾಡುತ್ತಿದ್ದ ಹಿನ್ನೆಲೆಯಲ್ಲಿ ಪತ್ನಿ ವಾರದ ಹಿಂದೆ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದರು. ನಿನ್ನ ಮಧು ಅವರ ತಾಯಿ ಕೂಡ ಬೆಂಗಳೂರಿಗೆ ಆಗಮಿಸಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮದ್ಯ

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ Read More »

ಆಕ್ಷೇಪಾರ್ಹ ಫೇಸ್‌ಬುಕ್‌ ಪೋಸ್ಟ್‌ : ಬಿಜೆಪಿ ಮಾಜಿ ಕಾರ್ಪೋರೇಟರ್‌ ವಿರುದ್ಧ ಕೇಸ್‌

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಬಗ್ಗೆ ಆಕ್ಷೇಪಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ವೇತಾ ಪೂಜಾರಿ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ ಗುಂಡುರಾವ್ ಇವರ ಭಾವ ಚಿತ್ರದ ಕೆಳಗಡೆ ಅವಹೇಳನಕಾರಿ ಪೋಸ್ಟ್, ಮಾಡಿರುವ ಆಧಾರದಲ್ಲಿ ಸುರತ್ಕಲ್

ಆಕ್ಷೇಪಾರ್ಹ ಫೇಸ್‌ಬುಕ್‌ ಪೋಸ್ಟ್‌ : ಬಿಜೆಪಿ ಮಾಜಿ ಕಾರ್ಪೋರೇಟರ್‌ ವಿರುದ್ಧ ಕೇಸ್‌ Read More »

ಪಾಕ್‌ ಪರ ಗೂಢಚಾರಿಕೆ : ಉತ್ತರ ಪ್ರದೇಶದ ಉದ್ಯಮಿ ಬಂಧನ

ವ್ಯಾಪಾರದ ನೆಪದಲ್ಲಿ ಪಾಕ್‌ಗೆ ಪ್ರಯಾಣಿಸಿ ಮಾಹಿತಿ ನೀಡುತ್ತಿದ್ದ ಪಾತಕಿ ಲಖನೌ: ಪಾಕಿಸ್ಥಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಯೂಟ್ಯೂಬರ್‌ ಜ್ಯೋತಿ ಬಂಧನ ಬಳಿಕ ದೇಶಾದ್ಯಂತ ಬೇಹಾಗಾರಿಕೆ ನಡೆಸುತ್ತಿರುವವರ ಹುಡುಕಾಟ ನಡೆಯುತ್ತಿದ್ದು, ಇದೇ ಆರೋಪದಲ್ಲಿ ಉದ್ಯಮಿಯೊಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ಥಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ)ಗಾಗಿ ಗಡಿಯಾಚೆಗಿನ ಕಳ್ಳಸಾಗಣೆ ಮತ್ತು ಬೇಹುಗಾರಿಕೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಮಾಹಿತಿಯ ನಂತರ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮೊರಾದಾಬಾದ್‌ನಲ್ಲಿ ಆರೋಪಿ ಶಹಜಾದ್‌ನನ್ನು ಬಂಧಿಸಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ

ಪಾಕ್‌ ಪರ ಗೂಢಚಾರಿಕೆ : ಉತ್ತರ ಪ್ರದೇಶದ ಉದ್ಯಮಿ ಬಂಧನ Read More »

ನಿಲ್ಲಿಸಿದ ಕಾರಿನೊಳಗೆ ಉಸಿರುಕಟ್ಟಿ ನಾಲ್ವರು ಮಕ್ಕಳು ಸಾವು

ಆಟವಾಡುತ್ತಾ ಕಾರಿನೊಳಗೆ ಹೋದ ಮಕ್ಕಳ ದುರಂತ ಅಂತ್ಯ ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಯನಗರಂ ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಸಿಲುಕಿ ಮೂವರು ಬಾಲಕಿಯರು ಸೇರಿದಂತೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಎಷ್ಟು ಹೊತ್ತಾದರೂ ಮಕ್ಕಳು ಬಾರದ ಕಾರಣ ಪೋಷಕರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಹುಡುಕಿದ ನಂತರ ಕಾರಿನಲ್ಲಿ ಸಿಲುಕಿರುವುದು ಪತ್ತೆಯಾಗಿದೆ. ಬಳಿಕ ಕಾರಿನ ಕಿಟಕಿಗಳನ್ನು ಒಡೆದು ಮಕ್ಕಳನ್ನು ಹೊರಗೆ ತಂದಿದ್ದಾರೆ. ಕೂಡಲೇ

ನಿಲ್ಲಿಸಿದ ಕಾರಿನೊಳಗೆ ಉಸಿರುಕಟ್ಟಿ ನಾಲ್ವರು ಮಕ್ಕಳು ಸಾವು Read More »

ಧರ್ಮಸ್ಥಳದ ಯುವತಿಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್‌

ಕೊಲೆಯಲ್ಲ ಆತ್ಮಹತ್ಯೆ ಎಂದ ಪೊಲೀಸರು ಮಂಗಳೂರು: ಪಂಜಾಬಿನಲ್ಲಿ ಧರ್ಮಸ್ಥಳದ ಯುವತಿಯ ಸಾವು ಆತ್ಮಹತ್ಯೆಯಿಂದ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಧರ್ಮಸ್ಥಳದ ಏರೋನಾಟಿಕ್ಸ್ ಇಂಜಿನಿಯರ್ ಯುವತಿ ಆಕಾಂಕ್ಷಾ ನಾಯರ್‌ ಎಂಬವರು ಪಂಜಾಬಿನಲ್ಲಿ ನಿಗೂಢವಾಗಿ ಸಾವಿಘಿಡಾಗಿರುವುದು ಸಾಕಷ್ಟು ಅನುಮಾನಗಳನ್ನು ಸೃಷ್ಟಿಸಿತ್ತು.ಯುವತಿ ಆಕಾಂಕ್ಷಾ ಎಸ್ ನಾಯರ್ (22) ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪಂಜಾಬ್‌ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್. ನಾಯರ್

ಧರ್ಮಸ್ಥಳದ ಯುವತಿಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್‌ Read More »

error: Content is protected !!
Scroll to Top