ಅಪರಾಧ

ವಿಚಾರಣಾಧೀನ ಖೈದಿ ಆಸ್ಪತ್ರೆಯ ಬಾತ್‌ರೂಮ್ ಗಾಜು ಒಡೆದು ಪರಾರಿ

ಬಳ್ಳಾರಿ: ವಿಚಾರಣಾಧೀನ ಖೈದಿಯೊಬ್ಬನನ್ನು ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆತ ಸ್ನಾನದ ಕೋಣೆಯ ಕಿಟಕಿಯ ಗಾಜು ಹುಡಿ ಮಾಡಿ ತಪ್ಪಿಸಿಕೊಂಡ ಘಟನೆ ನಡೆದಿದೆ. ಚಲನಚಿತ್ರಗಳಲ್ಲಿ ಬರುವಂತೆ ಆರೋಪಿ ಬಾತ್‌ರೂಮ್‌ಗೆ ಹೋಗುವುದಾಗಿ ‌ತಿಳಿಸಿದ್ದು, ಅಲ್ಲಿಗೆ ಹೋದ ಆತ ಬಾತ್‌ರೂಮ್‌ನ ಗಾಜು ಪುಡಿ ಮಾಡಿ ಅಲ್ಲಿಂದ ಪರಾರಿಯಾಗಿರುವುದಾಗಿದೆ. ಪರಾರಿಯಾದ ಆರೋಪಿಯನ್ನು ಹರಪ್ಪನಹಳ್ಳಿಯ ಅಣ್ಣಪ್ಪ ಎಂದು ಗುರುತಿಸಲಾಗಿದೆ. ಈತ ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿದ್ದ. ಮರದಿಂದ ಬಿದ್ದ ಪರಿಣಾಮ ಈತನಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆತನನ್ನು ವಿಮ್ಸ್‌ಗೆ […]

ವಿಚಾರಣಾಧೀನ ಖೈದಿ ಆಸ್ಪತ್ರೆಯ ಬಾತ್‌ರೂಮ್ ಗಾಜು ಒಡೆದು ಪರಾರಿ Read More »

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಯ ಆರೋಗ್ಯದ ಹೊಸ ರಹಸ್ಯಗಳು ಬಹಿರಂಗ

ಸುಟ್ಟು ಹೋದ ಮುಖ, ಊನಗೊಂಡ ಕಾಲು- ಮಾತನಾಡಲು, ನಡೆದಾಡಲು ಆಗದ ಸ್ಥಿತಿಯಲ್ಲಿ ಖಮೇನಿ ಟೆಹ್ರಾನ್: ಇಸ್ರೇಲ್‌ನ ಕ್ಷಿಪಣಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇರಾನ್‌ನ ನೂತನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಈಗಲೂ ಜೀವಂತವಾಗಿದ್ದಾರೆ. ಆದರೆ ಅವರು ನಡೆದಾಡುವ ಮತ್ತು ಮಾತನಾಡುವ ಸ್ಥಿತಯಲ್ಲಿಲ್ಲ. ಅವರ ಮುಖದ ಒಂದು ಭಾಗ ತುಟಿಯ ಸಮೇತ ಸುಟ್ಟು ಹೋಗಿದೆ. ಒಂದು ಕಾಲು ಊನಗೊಂಡಿದ್ದು ಅದಕ್ಕೆ ಈಗಾಗಲೇ ಮೂರು ಸರ್ಜರಿಗಳನ್ನು ಮಾಡಲಾಗಿದೆ ಎಂದು ವರದಿಗಳು ಹೇಳಿವೆ. ಅವರು ಅಧಿಕಾರ ನಡೆಸುತ್ತಿರುವ ರೀತಿ ಮತ್ತು ಅವರ ಪ್ರಸ್ತುತ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿಯ ಆರೋಗ್ಯದ ಹೊಸ ರಹಸ್ಯಗಳು ಬಹಿರಂಗ Read More »

ರೌಡಿಶೀಟರ್‌ ಆರಿಫ್‌ ಕೊಲೆ ಪ್ರಕರಣ : ಇನ್ನೋರ್ವ ಆರೋಪಿ ಬಂಧನ

ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಬರ್ಬರವಾಗಿ ಕೊಲೆಯಾಗಿದ್ದ ಆರಿಫ್‌ ಮಂಗಳೂರು: ತೊಕ್ಕೊಟ್ಟು ಫ್ಲೈ ಓವರ್‌ನಲ್ಲಿ ಇತ್ತೀಚೆಗೆ ನಡೆದ ರೌಡಿಶೀಟರ್ ಆರಿಫ್ ಹುಸೇನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಸುಹೈಲ್ ಅಲಿಯಾಸ್ ಚಿಯಾ(24) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರ ಸಂಖ್ಯೆ 11ಕ್ಕೆ ಏರಿದೆ. ಆರಿಫ್ ಮೇಲೆ ನಡೆದ ಮೊದಲ ದಾಳಿಗೆ ಮುಹಮ್ಮದ್ ಸುಹೈಲ್ ಸಹಕಾರ ನೀಡಿದ್ದಾನೆ. ಪೊಲೀಸರು ವಿವರವಾದ ತನಿಖೆಯ ನಂತರ ಸುಹೈಲ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,

ರೌಡಿಶೀಟರ್‌ ಆರಿಫ್‌ ಕೊಲೆ ಪ್ರಕರಣ : ಇನ್ನೋರ್ವ ಆರೋಪಿ ಬಂಧನ Read More »

ತಡರಾತ್ರಿ ದೇವಸ್ಥಾನಕ್ಕೆ ನುಗ್ಗಿ ಮೂರ್ತಿಯನ್ನು ಭಗ್ನಗೊಳಿಸಿದ ಯುವಕ

ಬೆಳ್ತಂಗಡಿ: ಬೆಳ್ತಂಗ ತಾಲೂಕಿನ ಪ್ರಸಿದ್ಧ ಬಳಂಜ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬುಧವಾರ ತಡರಾತ್ರಿ ವ್ಯಕ್ತಿಯೋರ್ವ ದೇಗುಲಕ್ಕೆ ನುಗ್ಗಿ ದಾಂಧಲೆ ಎಸಗಿ ದೈವದ ಮೂರ್ತಿ ಭಗ್ನಗೊಳಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಅಜೇಯ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಮಾನಸಿಕ ಅಸ್ವಸ್ಥತೆಯಿಂದ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ತಡರಾತ್ರಿ ಸುಬ್ರಹ್ಮಣ್ಯ ಭಟ್‌ ಎಂಬವರ ಮನೆಗೆ ಥಾರ್‌ ಕಾರಿನಲ್ಲಿ ಬಂದ ಅಜೇಯ್‌ ಎನನ್‌ ಬಚಾವು ಮಲ್ಪಿ ಎಂದು ತುಳುವಿನಲ್ಲಿ

ತಡರಾತ್ರಿ ದೇವಸ್ಥಾನಕ್ಕೆ ನುಗ್ಗಿ ಮೂರ್ತಿಯನ್ನು ಭಗ್ನಗೊಳಿಸಿದ ಯುವಕ Read More »

ತಾಯಿಗೆ ಬೈಕ್‌ನಿಂದ ಗುದ್ದಿದ ಪಾಪಿ ಮಗ: ದೂರು ದಾಖಲು

ಕಡಬ: ಮಗನೇ ತಾಯಿಗೆ ಬೈಕ್ ಢಿಕ್ಕಿ ಹೊಡೆಸಿ ಗಾಯಗೊಳಿಸಿದ್ದು, ಆರೋಪಿ ಮಗ ದಯಾನಂದನ ‌ವಿರುದ್ಧ ಕಡಬ ‌ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳು ಮಹಿಳೆಯನ್ನು ಕುಂತೂರು ಗ್ರಾಮದ ಬೀರಂತಡ್ಕ ನಿವಾಸಿ ಪುಷ್ಪಾವತಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಪುಷ್ಪಾವತಿ ಅವರ ಪುತ್ರಿ ಬಂಟ್ವಾಳದ ಇರ್ವತ್ತೂರು ನಿವಾಸಿ ಚೇತನಾ ಬಿ. ಅವರು ಪೊಲೀಸರಿಗೆ ದೂರು ನೀಡಿರುವುದಾಗಿದೆ. ದೂರಿನಲ್ಲಿ ಎ. 4 ರಂದು ದಯಾನಂದ್ ಅವರು ತಮ್ಮ ತಾಯಿ ಪುಷ್ಪಾವತಿ ಅವರನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಅಜ್ಜಿ ಮನೆಗೆ ಹೋಗುವುದಾಗಿ ಕರೆದುಕೊಂಡು

ತಾಯಿಗೆ ಬೈಕ್‌ನಿಂದ ಗುದ್ದಿದ ಪಾಪಿ ಮಗ: ದೂರು ದಾಖಲು Read More »

ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಏಳು ಜನರಿಂದ ಹಲ್ಲೆ: ದೂರು ದಾಖಲು

ಪುತ್ತೂರು: ಏಳು ಜನರ ಗುಂಪೊಂದು ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ಪುತ್ತೂರಿನ ಸರ್ಕಾರಿ ಬಸ್ ನಿಲ್ದಾಣದ ಸಮೀಪ ನಡೆದಿದೆ. ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಬೆಳ್ತಂಗಡಿ ಆದಿಲ್ ಹುಸೈನ್ (21) ಎಂದು ಗುರುತಿಸಲಾಗಿದೆ. ಈ ಹಿಂದೆ ನಡೆದಿದ್ದ ಜಗಳವೊಂದನ್ನು ಬಿಡಿಸಿದ್ದಕ್ಕೆ ‌ಪ್ರತಿಕಾರವಾಗಿ ಈತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಈತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದು, ಎ. 22 ರಂದು ತನ್ನ ಗೆಳೆಯರಿಬ್ಬರ ಜೊತೆಗೆ ಪುತ್ತೂರು ಬಸ್‌ಸ್ಟಾಂಡ್‌ನಲ್ಲಿ ‌ಟಿ ಕುಡಿಯುತ್ತಿದ್ದ ವೇಳೆ ಈ ಹಲ್ಲೆ ನಡೆದಿದೆ.

ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಏಳು ಜನರಿಂದ ಹಲ್ಲೆ: ದೂರು ದಾಖಲು Read More »

ಪತಿಯ ಮನೆಯವರ ವರದಕ್ಷಿಣೆ ದಾಹಕ್ಕೆ ‌ಮಹಿಳೆ ಆತ್ಮಹತ್ಯೆ: ಒಂದೂವರೆ ವರ್ಷದ ಕೂಸು ಅನಾಥ

ಬೆಂಗಳೂರು: ಪತಿಯ ಮನೆಯವರ ವರದಕ್ಷಿಣೆ ಕಿರುಕುಳ ಸಹಿಸಲಾರದೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ತಲಘಟ್ಟಪುರದಲ್ಲಿ ನಡೆದಿದೆ. ಇವರ ಒಂದೂವರೆ ವರ್ಷದ ಮಗು ತಾಯಿಯ ಸಾವಿನಿಂದ ಅನಾಥವಾಗಿದೆ. ಮೃತರನ್ನು ತಮಿಳುನಾಡಿನ ತಿರುವಾರೂರ್ ಜಿಲ್ಲೆಯ ನೀಡಮಂಗಳಂ ನಿವಾಸಿ, ಸಾಫ್ಟ್‌ವೇರ್ ಉದ್ಯೋಗಿ ಭುವನೇಶ್ವರಿ ಎಂದು ಗುರುತಿಸಲಾಗಿದೆ. ಭುವನೇಶ್ವರಿ ಮತ್ತು ಹರೀಶ್ ಕುಮಾರ್ ಪ್ರೀತಿಸಿ ಮದುವೆಯಾಗಿದ್ದರು. ಅದ್ಧೂರಿಯಾಗಿ ಈ ಮದುವೆಯನ್ನು ಸಹ ಭುವನೇಶ್ವರಿ ಕುಟುಂಬಸ್ಥರು ‌ಮಾಡಿಕೊಟ್ಟಿದ್ದು, ಇದಕ್ಕಾಗಿ 25 ಲಕ್ಷ ರೂ. ವ್ಯಯಿಸಿದ್ದರು. ಹೀಗಿದ್ದರೂ ಪತಿ, ಪತಿಯ ತಾಯಿ ಮತ್ತು ಸಹೋದರ ಭುವನೇಶ್ವರಿ

ಪತಿಯ ಮನೆಯವರ ವರದಕ್ಷಿಣೆ ದಾಹಕ್ಕೆ ‌ಮಹಿಳೆ ಆತ್ಮಹತ್ಯೆ: ಒಂದೂವರೆ ವರ್ಷದ ಕೂಸು ಅನಾಥ Read More »

ಪಶ್ಚಿಮ ಬಂಗಾಳದಲ್ಲಿ ಮತದಾನದ ವೇಳೆ ಬಾಂಬ್‌ ದಾಳಿ : ಹಲವರಿಗೆ ಗಾಯ

ಅಪರಿಚಿತ ದುಷ್ಕರ್ಮಿಗಳಿಂದ ಕಚ್ಚಾ ಬಾಂಬ್‌ ದಾಳಿ ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಸಲುವಾಗಿ ಚುನಾವಣಾ ಆಯೋಗ ಅಭೂತಪೂರ್ವ ಬಂದೋಬಸ್ತಿನ ವ್ಯವಸ್ಥೆ ಮಾಡಿದ್ದರೂ ಹಿಂಸಾಚಾರದ ಘಟನೆಗಳು ನಡೆಯುತ್ತಿವೆ. ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ ದಾಳಿ ನಡೆಸಿದ್ದಾರೆ. ಜಿಲ್ಲೆಯ ನೌಡಾದಲ್ಲಿ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಇದು ಸ್ಥಳೀಯರಲ್ಲಿ ಭೀತಿ ಹೆಚ್ಚಿಸಿದೆ. ಬಾಂಬ್‌ ದಾಳಿಯ ಬಳಿಕ ಹಿಂಸಾಚಾರ ಪೀಡಿತವಾಗಿರುವ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಕಳೆದ ತಿಂಗಳು ಜಿಲ್ಲೆಯ

ಪಶ್ಚಿಮ ಬಂಗಾಳದಲ್ಲಿ ಮತದಾನದ ವೇಳೆ ಬಾಂಬ್‌ ದಾಳಿ : ಹಲವರಿಗೆ ಗಾಯ Read More »

ಬೆಳ್ತಂಗಡಿ : ಮಗನಿಂದಲೇ ತಂದೆಯ ಕೊಲೆ ಯತ್ನ

ಬೆಳ್ತಂಗಡಿ : ಮದ್ಯದ ಅಮಲಿನಲ್ಲಿ ಮಗನೇ ತಂದೆಯ ಮೇಲೆಯೇ ಮಚ್ಚಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿ ಭರತ್ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದವರು ಉಜಿರೆ ಗ್ರಾಮದ ಮಣಿಕೆ ನಿವಾಸಿ, ಗಾರೆ ಕೆಲಸ ಮಾಡುವ ನಾರಾಯಣ (52) ಎಂದು ಗುರುತಿಸಲಾಗಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮರದ ಮಿಲ್‌ನಲ್ಲಿ ಕೆಲಸ ಮಾಡುವ ಭರತ್ ಮತ್ತು ಆತನ ತಂದೆ ನಾರಾಯಣ ಇಬ್ಬರೂ ಮದ್ಯ ಸೇವಿಸಿದ್ದರು.

ಬೆಳ್ತಂಗಡಿ : ಮಗನಿಂದಲೇ ತಂದೆಯ ಕೊಲೆ ಯತ್ನ Read More »

ತಣ್ಣೀರುಬಾವಿ ದರೋಡೆ ಕೃತ್ಯದ ಅರೋಪಿ ಸೆರೆ

ಹುಟ್ಟುಹಬ್ಬ ಆಚರಿಸಲು ಬಂದವರನ್ನು ಬೆದರಿಸಿ ದರೋಡೆ ಮಾಡಿದ್ದ ರೌಡಿಶೀಟರ್‌ ಮಂಗಳೂರು: ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣದ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್(33) ಬಂಧಿತ ಆರೋಪಿ. ಆರೋಪಿಯಿಂದ ಸುಲಿಗೆ ಮಾಡಿದ ವಸ್ತುಗಳಾದ ಸ್ಮಾರ್ಟ್ ವಾಚ್, ಪವರ್ ಬ್ಯಾಂಕ್ ಮತ್ತು ಕೃತ್ಯಕ್ಕೆ ಬಳಸಿದ ಬೈಕನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಈಗಾಗಲೇ ರೌಡಿಶೀಟ್ ತೆರೆಯಲಾಗಿದೆ. ಏಪ್ರಿಲ್

ತಣ್ಣೀರುಬಾವಿ ದರೋಡೆ ಕೃತ್ಯದ ಅರೋಪಿ ಸೆರೆ Read More »

error: Content is protected !!
Scroll to Top