ಅಪರಾಧ

ಕಾರ್ಕಳ : ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಆತ್ಮಹತ್ಯೆ

ಬ್ರಹ್ಮಾವರದಲ್ಲಿ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆಗೆ ಶರಣು ಕಾರ್ಕಳ: ಕಾರ್ಕಳ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕ ದಿ.ಎಚ್.ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸುದೀಪ್ ಭಂಡಾರಿ ಎಂದು ಗುರುತಿಸಲಾಗಿದೆ. ನಿನ್ನೆ ಸಾಯಂಕಾಲ ಅವರು ಹೆಬ್ರಿಯಲ್ಲಿದ್ದು ಬಳಿಕ ಬ್ರಹ್ಮಾವರಕ್ಕೆ ಹೋಗಿದ್ದರು ಎನ್ನಲಾಗಿದೆ. ಸುದೀಪ್‌ ಭಂಡಾರಿ ಬಾರಕೂರಿನಲ್ಲಿ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಕಾರ್ಕಳ : ಮಾಜಿ ಶಾಸಕ ದಿ.ಗೋಪಾಲ ಭಂಡಾರಿಯವರ ಪುತ್ರ ಆತ್ಮಹತ್ಯೆ Read More »

ವಿಟ್ಲ: ಮದುವೆಗೆ ಹೆಣ್ಣು ತೋರಿಸುವ ನೆಪದಲ್ಲಿ 44.80 ಲಕ್ಷ ರೂ. ಸುಲಿಗೆ

ವಿದೇಶದಲ್ಲಿದ್ದ ವ್ಯಕ್ತಿಯನ್ನು ಕರೆಸಿಕೊಂಡು ವಂಚಿಸಿದ ಪ್ರಕರಣ ವಿಟ್ಲ : ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿರುವ ಕೇರಳ ಮೂಲದ ವ್ಯಕ್ತಿಯೊಬ್ಬರಿಗೆ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಕರೆಸಿಕೊಂಡು ಹನಿಟ್ರ್ಯಾಪ್‌ಗೆ ಕೆಡವಿ 44.80 ಲಕ್ಷ ರೂ.ಸುಲಿಗೆ ಮಾಡಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಬ್ಲ್ಯಾಕ್‌ಮೇಲ್ ಮತ್ತು ಹಣಕಾಸು ವಂಚನೆಯ ಪ್ರಕರಣ ದಾಖಲಾಗಿದೆ. 53 ವರ್ಷದ ಮೊಹಮ್ಮದ್ ಅಶ್ರಫ್ ತಾವರಕಡನ್ ಎಂಬವರು 2024ರ ಸೆಪ್ಟೆಂಬರ್‌ನಲ್ಲಿ ಮಂಗಳೂರಿಗೆ ಬಂದಿದ್ದಾಗ ಹೆಣ್ಣು ತೋರಿಸುವ ನೆಪದಲ್ಲಿ ಆರೋಪಿಗಳು ಅವರನ್ನು ಭೇಟಿ ಮಾಡಿ ಸುಲಿಗೆ ಮಾಡಿದ್ದಾರೆ. ಬಶೀರ್

ವಿಟ್ಲ: ಮದುವೆಗೆ ಹೆಣ್ಣು ತೋರಿಸುವ ನೆಪದಲ್ಲಿ 44.80 ಲಕ್ಷ ರೂ. ಸುಲಿಗೆ Read More »

ಮಾಸ್ಕ್‌ಮ್ಯಾನ್ ಚಿನ್ನಯ್ಯನ ಪತ್ನಿ SIT ಕಚೇರಿಗೆ ಹಾಜರ್

ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಮಾಸ್ಕ್‌ಮ್ಯಾನ್ ಚಿನ್ನಯ್ಯ‌ನ ಎರಡನೇ ಪತ್ನಿ SIT ಕಚೇರಿಗೆ ಇಂದು ಹಾಜರಾಗಿದ್ದಾರೆ. ಅವರನ್ನು ಆರೋಪಿ ಚಿನ್ನಯ್ಯನಿಗೆ ಸಂಬಂಧಿಸಿದಂತೆ ಇರುವ ಮಾಹಿತಿಗಳನ್ನು ಸಂಗ್ರಹ ಮಾಡುವ ದೃಷ್ಟಿಯಿಂದ SIT ಅಧಿಕಾರಿಗಳು ಕಚೇರಿಗೆ ಕರೆಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಬಂಗ್ಲಗುಡ್ಡದಲ್ಲಿ ಶವಗಳನ್ನು ಹೂಳಲಾಗಿದೆ ಎಂದು ಚಿನ್ನಯ್ಯ ತೋರಿಸಿದ್ದ ಜಾಗದಲ್ಲಿ ಇತ್ತೀಚೆಗೆ ಮತ್ತೆ SIT ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಹಾಗೆಯೇ ಅರಣ್ಯಾಧಿಕಾರಿಗಳ ಜೊತೆಗೂ ಸ್ಥಳಕ್ಕೆ ಭೇಟಿ ನೀಡಿ ಸರ್ವೇ ಕಾರ್ಯ ನಡೆಸಿದ್ದರು.

ಮಾಸ್ಕ್‌ಮ್ಯಾನ್ ಚಿನ್ನಯ್ಯನ ಪತ್ನಿ SIT ಕಚೇರಿಗೆ ಹಾಜರ್ Read More »

ನಕಲಿ ಒಡವೆ ಅಡವಿಟ್ಟು ಬ್ಯಾಂಕಿಗೆ ವಂಚನೆ : ಪುತ್ತೂರಿನ ಓರ್ವನ ಸಹಿತ ಮೂವರ ಸೆರೆ

ಆರೋಪಿಗಳಿಂದ ಕಾರು ಸಹಿತ 26.5 ಲ.ರೂ. ಸೊತ್ತು ವಶ ಮಂಗಳೂರು: ನಗರದ ಕಾವೂರಿನ ಸಹಕಾರಿ ಸಂಸ್ಥೆಯೊಂದರಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 6.24 ಲಕ್ಷ ರೂ. ವಂಚಿಸಿದ್ದ ಮೂವರು ಆರೋಪಿಗಳನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಕಾಶಭವನದ ಆನಂದ ನಗರ ನಿವಾಸಿ ಹಾರೀಫ್ ಅಬೂಬಕ್ಕರ್ (39), ನಂತೂರು ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಆಶೀಕ್ ಕಟ್ಟತ್ತಾರ್ ಹುಸೈನ್ (34) ಮತ್ತು ಪುತ್ತೂರು ತಾಲೂಕು ಬೆಳಂದೂರು ಗ್ರಾಮದ ನಿವಾಸಿ ಅಬ್ದುಲ್ ರಮೀಝ್ (33) ಎಂದು ಗುರುತಿಸಲಾಗಿದೆ. ಅಕ್ಟೋಬರ್ 9ರಂದು ಹಾರೀಫ್

ನಕಲಿ ಒಡವೆ ಅಡವಿಟ್ಟು ಬ್ಯಾಂಕಿಗೆ ವಂಚನೆ : ಪುತ್ತೂರಿನ ಓರ್ವನ ಸಹಿತ ಮೂವರ ಸೆರೆ Read More »

50 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಮೂವರು ಸೆರೆ

ಬೆಂಗಳೂರು: ಬೆಂಗಳೂರಿನ ಎನ್‌ಸಿಬಿ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 50 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಅಂತಾರಾಷ್ಟ್ರೀಯ ಡ್ರಗ್ಸ್‌ ಜಾಲವೊಂದನ್ನು ಬಯಲಿಗೆಳೆದಿದ್ದಾರೆ. ಮೂವರು ಆರೋಪಿಗಳನ್ನ ಎನ್‌ಸಿಬಿ ಬಂಧಿಸಿದೆ. ಬಂಧಿತರಿಂದ ಒಟ್ಟು 45 ಕೆ ಜಿ ಹೈಡ್ರೋಗಾಂಜಾ, 6 ಕೆಜಿ ಸೈಲೋಸಿಬಿನ್ ಅಣಬೆಯನ್ನು ಜಪ್ತಿ ಮಾಡಲಾಗಿದೆ. ಥೈಲ್ಯಾಂಡ್‌ನಿಂದ ಡ್ರಗ್ಸ್‌ ಸಾಗಾಟ ಮಾಡುತ್ತಿರುವುದಾಗಿ ಅಧಿಕಾರಿಗಳಿಗೆ ಮಾಹಿತಿ ಬಂದಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಅಧಿಕಾರಿಗಳು ಕೊಲಂಬೋದಿಂದ‌ ಬರುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 31 ಕೆಜಿ

50 ಕೋ. ರೂ. ಮೌಲ್ಯದ ಡ್ರಗ್ಸ್‌ ವಶ : ಮೂವರು ಸೆರೆ Read More »

ಟ್ಯಾಕ್ಸಿ ಚಾಲಕನನ್ನು ಮುಸ್ಲಿಂ ಟೆರರಿಸ್ಟ್‌ ಎಂದು ನಿಂದಿಸಿದ ನಟ : ಎಫ್‌ಐಆರ್‌ ದಾಖಲು

ಮಂಗಳೂರಿಗೆ ಬಂದ ವೇಳೆ ಚಾಲಕನನ್ನು ಅವಹೇಳನ ಮಾಡಿದ ಮಲಯಾಳಂ ನಟ ಮಂಗಳೂರು: ಕ್ಯಾಬ್ ಚಾಲಕನಿಗೆ ಕರೆ ಮಾಡಿ ‘ಮುಸ್ಲಿಂ ಟೆರರಿಸ್ಟ್’ ಎಂದು ಅವಹೇಳನ ಮಾಡಿದ ಬಗ್ಗೆ ಮಲಯಾಳಂ ಚಿತ್ರರಂಗದ ಜನಪ್ರಿಯ ಪೋಷಕ ನಟ ಜಯಕೃಷ್ಣನ್‌ ಮತ್ತು ಅವರ ಗೆಳೆಯರಾದ ಸಂತೋಷ್ ಅಬ್ರಾಹಂ ಹಾಗೂ ವಿಮಲ್‌ ಎಂಬವರ ವಿರುದ್ಧ ಮಂಗಳೂರಿನ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿಗೆ ಗುರುವಾರ ರಾತ್ರಿ ಬಂದಿದ್ದ ಜಯಕೃಷ್ಣ್‌ ಮತ್ತು ಸ್ನೇಹಿತರು ಉಬರ್‌ ಮತ್ತು ರಾಪಿಡೊ ಕ್ಯಾಪ್ಟನ್ ಆ್ಯಪ್ ಮೂಲಕ ಕ್ಯಾಬ್ ಬುಕ್ ಮಾಡಿದ್ದರು.

ಟ್ಯಾಕ್ಸಿ ಚಾಲಕನನ್ನು ಮುಸ್ಲಿಂ ಟೆರರಿಸ್ಟ್‌ ಎಂದು ನಿಂದಿಸಿದ ನಟ : ಎಫ್‌ಐಆರ್‌ ದಾಖಲು Read More »

ಬಂಟ್ವಾಳ : ಜಾತಿ ಗಣತಿಗೆ ತೆರಳಿದ ಶಿಕ್ಷಕರ ಮೇಲೆ ಜೇನುನೊಣಗಳ ಹಿಂಡಿನಿಂದ ದಾಳಿ

ಎರಡು ಕಿ.ಮೀ. ತನಕ ಅಟ್ಟಿಸಿಕೊಂಡು ಬಂದು ದಾಳಿ ಮಾಡಿದ ಹೆಜ್ಜೇನುಗಳು ಬಂಟ್ವಾಳ : ಸರ್ಕಾರದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಗೆ ತೆರಳಿದ್ದ ಶಿಕ್ಷಕರೊಬ್ಬರ ಮೇಲೆ ಜೇನುನೊಣಗಳು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶನಿವಾರ ಬಂಟ್ವಾಳ ಸಜೀಪದ ಶಾರದಾ ನಗರ ಭಜನಾ ಮಂದಿರದ ಬಳಿ ಸಂಭವಿಸಿದೆ. ಸಜೀಪಮೂಡ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ವೆಂಕಟರಮಣ ಗಾಯಗೊಂಡವರು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಶನಿವಾರ ಬೆಳಗ್ಗೆ 9ರ ಸುಮಾರಿಗೆ ಅವರು ಒಂದು ಮನೆಯ ಗಣತಿ ಕಾರ್ಯ ಪೂರ್ಣಗೊಳಿಸಿ ಮತ್ತೊಂದು

ಬಂಟ್ವಾಳ : ಜಾತಿ ಗಣತಿಗೆ ತೆರಳಿದ ಶಿಕ್ಷಕರ ಮೇಲೆ ಜೇನುನೊಣಗಳ ಹಿಂಡಿನಿಂದ ದಾಳಿ Read More »

ಪುತ್ತೂರು : ಹೆಜ್ಜೇನು ದಾಳಿಯಿಂದ ಬಾಲಕಿ ಮೃತ್ಯು

ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಾಲಕಿಯರ ಮೇಲೆ ದಾಳಿ ನಡೆಸಿದ ಹೆಜ್ಜೇನು ಪುತ್ತೂರು: ಹೆಜ್ಜೇನು ದಾಳಿಯಿಂದ ಬಾಲಕಿ ಮೃತಪಟ್ಟ ದಾರುಣ ಘಟನೆ ಸೇಡಿಯಾಪು ಕೂಟೇಲು ಸಮೀಪ ಸಂಭವಿಸಿದೆ. ಶಾಲೆ ಮುಗಿಸಿ ಮನೆಗೆ ತೆರಳುತ್ತಿರುವಾಗ ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಮೂವರು ಗಾಯಗೊಂಡಿದ್ದರು. ಈ ಪೈಕಿ ಓರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ಎಂಬಲ್ಲಿನ ನಿವಾಸಿ ಕಿರಣ್ ಪೂಜಾರಿ ಎಂಬವರ ಪುತ್ರಿ ದಿಶಾ (7) ಮೃತ ಬಾಲಕಿ. 5ನೇ ತರಗತಿ

ಪುತ್ತೂರು : ಹೆಜ್ಜೇನು ದಾಳಿಯಿಂದ ಬಾಲಕಿ ಮೃತ್ಯು Read More »

ಪ್ರೀತ್ಸೇ ಅಂತ ಟಾರ್ಚರ್ ಕೊಟ್ಟ ಯುವಕ: 17 ರ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

ಖಾನಾಪುರ: ಯುವಕನೊಬ್ಬ ಪ್ರೀತಿ ಮಾಡು ಎಂದು ಪೀಡಿಸಿದ್ದಕ್ಕೆ ‌ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಲತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಅಶ್ವಿನಿ ಕೋಲಾರ(17) ಎಂದು ಗುರುತಿಸಲಾಗಿದೆ. ನಂದಳ್ಳಿ ಗ್ರಾಮದ ರತನ್ ಪಾಟೀಲ್ (26) ಎಂಬಾತ ಅಶ್ವಿನಿಗೆ ತನ್ನನ್ನು ಪ್ರೀತಿಸಬೇಕು‌. ಇಲ್ಲವಾದಲ್ಲಿ ನಿನ್ನನ್ನು ನಾನು ಬಿಡುವುದಿಲ್ಲ ಎಂದು ಕಳೆದೊಂದು ವರ್ಷದಿಂದ ಬೆದರಿಕೆ ಹಾಡುತ್ತಿದ್ದ. ಲೈಂಗಿಕ ಕಿರುಕುಳ ಸಹ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದ ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪ್ರೀತ್ಸೇ ಅಂತ ಟಾರ್ಚರ್ ಕೊಟ್ಟ ಯುವಕ: 17 ರ ಬಾಲಕಿ ನೇಣು ಬಿಗಿದು ಆತ್ಮಹತ್ಯೆ Read More »

ನಿಷೇಧಿತ ಪಿಎಫ್‌ಐ ಪರ ಪ್ರಚಾರ : ಕಡಬದ ವ್ಯಕ್ತಿ ಸೆರೆ

ಸೋಷಿಯಲ್‌ ಮೀಡಿಯಾದಲ್ಲಿ ನಿರಂತರ ಪ್ರಚಾರ ಮಾಡುತ್ತಿದ್ದ ಆರೋಪಿ ಮಂಗಳೂರು : ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹಾಕಿ ಆನ್‌ಲೈನ್‌ನಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ಬೀಜತ್ತಳಿ ನಿವಾಸಿ ಸೈಯದ್ ಇಬ್ರಾಹಿಂ ತಂಙಳ್ (55) ಬಂಧಿತ ಆರೋಪಿ. 2022ರಲ್ಲಿ ಕೇಂದ್ರ ಸರ್ಕಾರ ಪಿಎಫ್‌ಯನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿ ನಿಷೇಧಿಸಿದೆ. ನಿಷೇಧದ ಹೊರತಾಗಿಯೂ ಆರೋಪಿ ಸಂಘಟನೆಯ ಪರ

ನಿಷೇಧಿತ ಪಿಎಫ್‌ಐ ಪರ ಪ್ರಚಾರ : ಕಡಬದ ವ್ಯಕ್ತಿ ಸೆರೆ Read More »

error: Content is protected !!
Scroll to Top