ಅಪರಾಧ

ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ

ದೂರು ನೀಡಿದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಸಿದ ವಂಚಕರು ಮಂಗಳೂರು : ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಗಳಿಸಬಹುದು ಎಂದು ಆಮಿಷವೊಡ್ಡಿ 2 ಕೋ.ರೂ. ವಂಚನೆ ಮಾಡಿರುವ ಬಗ್ಗೆ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ 2022ರ ಮೇ 1ರಂದು ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿ ತಾನು ಡೆಲ್ಟಿನ್ ರೋಯಲ್ ಕಂಪನಿಯ ಅಂಕಿತ್ ಎಂದು ಪರಿಚಯಿಸಿಕೊಂಡಿದ್ದ. ಆ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಹಣ ಹಾಗೂ ಲಾಭಾಂಶವನ್ನು ನೀಡುವುದಾಗಿ ತಿಳಿಸಿದ್ದ. […]

ಮಂಗಳೂರು: ಅಧಿಕ ಲಾಭಾಂಶದ ಆಮಿಷಕ್ಕೆ ಬಲಿಯಾಗಿ 2 ಕೋ. ರೂ. ಕಳೆದುಕೊಂಡ ವ್ಯಕ್ತಿ Read More »

ಕೆಂಪುಕೋಟೆ ಬಾಂಬ್‌ ಸ್ಫೋಟ ಪ್ರಕರಣ : ಮೌಲ್ವಿ ದಂಪತಿ ಬಂಧನ

ವೈಟ್ ಕಾಲರ್ ಭಯೋತ್ಪಾದಕ ಮಾಡ್ಯೂಲ್‌ನ ಹಿಂದಿನ ಮಾಸ್ಟರ್ ಮೈಂಡ್ ನವದೆಹಲಿ : ಕೆಂಪುಕೋಟೆ ಸಮೀಪ ಸೋಮವಾರ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಮೌಲ್ವಿ ದಂಪತಿಯನ್ನು ಬಂಧಿಸಲಾಗಿದೆ. ಜಂಟಿ ಭದ್ರತಾ ಪಡೆಗಳು ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ. ಶ್ರೀನಗರ ಪೊಲೀಸ್ & ಕೌಂಟರ್ ಇಂಟಲಿಜೆನ್ಸ್ ಕಾಶ್ಮೀರ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಆರೋಪಿ ಮನೆಯಿಂದ ಐದು ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನ ಪತ್ನಿಯನ್ನು ಶಂಕಿತ ಮೂಲಭೂತವಾದ ಸಂಪರ್ಕದ ಮೇಲೆ ಬಂಧಿಸಲಾಗಿದೆ. ಮೌಲ್ವಿಯ

ಕೆಂಪುಕೋಟೆ ಬಾಂಬ್‌ ಸ್ಫೋಟ ಪ್ರಕರಣ : ಮೌಲ್ವಿ ದಂಪತಿ ಬಂಧನ Read More »

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ

ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಮುಂಬೈ : ಹಿರಿಯ ನಟ ಧರ್ಮೇಂದ್ರ ನಿಧನರಾಗಿರುವ ಸುದ್ದಿ ಸುಳ್ಳು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತ್ನಿ ಹೇಮಮಾಲಿನಿ ತಿಳಿಸಿದ್ದಾರೆ. ಧರ್ಮೇಂದ್ರ ಮುಂಬೈಯ ಬ್ರೀಚ್‌ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಇಂದು ಈ ಮೊದಲು ವರದಿಯಾಗಿತ್ತು. ಇದು ಯಾರೋ ಅವಸರದಲ್ಲಿ ಹರಡಿದ ಸುಳ್ಳು ಸುದ್ದಿ ಎಂಬುದಾಗಿ ಧರ್ಮೇಂದ್ರ ಅವರ ಪುತ್ರಿ ಈಶಾ ಡಿಯೋಲ್‌ ಸ್ಪಷ್ಟೀಕರಣ ನೀಡಿದ್ದಾರೆ. ಸುದ್ದಿವಾಹಿನಿಗಳ ವಿರುದ್ಧ ಕಿಡಿಕಾರಿದ ಹೇಮಮಾಲಿನಿ ಜವಾಬ್ದಾರಿಯುತ ಮಾಧ್ಯಮಗಳು

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ Read More »

ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್

ಸಿಕ್ಕಿಬೀಳುವ ಭಯದಲ್ಲಿ ಆತ್ಮಾಹುತಿ ದಾಳಿ ಮಾಡಿ ಸತ್ತಿರುವ ಅನುಮಾನ ನವದೆಹಲಿ: ಕೆಂಪುಕೋಟೆ ಬಳಿ ನಿನ್ನೆ ಸಂಜೆ ಸ್ಫೋಟಗೊಂಡ ಐ20 ಕಾರಿನಲ್ಲಿ ಫರಿದಾಬಾದ್ ವೈದ್ಯ ಡಾ.ಉಮರ್ ಯು ನಬಿ ಸೂಸೈಡ್‌ ಬಾಂಬರ್‌ ಆಗಿ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿದೆ. 2,900 ಕೆಜಿ ಸ್ಫೋಟಕ ಪತ್ತೆಯಾದ ಫರಿದಾಬಾದ್ ಮಾಡ್ಯೂಲ್ ಜೊತೆ ಸಂಬಂಧ ಹೊಂದಿದ್ದ ಪುಲ್ವಾಮಾ ಮೂಲದ ಡಾ.ಉಮರ್ ಯು ನಬಿ ಕಾರಿನಲ್ಲಿ ಇದ್ದಿರಬಹುದು ಎಂಬ ಅನುಮಾನ ಈಗ ವ್ಯಕ್ತವಾಗಿದೆ. ತನ್ನ ತಂಡದ ಸದಸ್ಯರನ್ನು ಬಂಧಿಸಿದ ವಿಚಾರ ಗೊತ್ತಾಗಿ ಪರಾರಿಯಾಗಿದ್ದ ನಬಿ

ಇವನೇ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ಡಾ.ಉಮರ್ Read More »

ಡ್ರಗ್ಸ್‌ ದಂಧೆ : ಮೆಡಿಕಲ್‌ ವಿದ್ಯಾರ್ಥಿ ಸೇರಿ ಮೂವರು ಸೆರೆ

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಕೋಟೆಕಾರು ಗ್ರಾಮದ ಬಗಂಬಿಲ ಗೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ನ.9ರಂದು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್ (22) ವಿಲಾಸಿ ಜೀವನಕ್ಕಾಗಿ

ಡ್ರಗ್ಸ್‌ ದಂಧೆ : ಮೆಡಿಕಲ್‌ ವಿದ್ಯಾರ್ಥಿ ಸೇರಿ ಮೂವರು ಸೆರೆ Read More »

ಡಾ. ಉಮರ್‌ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ : ಸಿಸಿಟಿವಿ ದೃಶ್ಯಗಳಲ್ಲಿ ಮಹತ್ವದ ಸುಳಿವು ಪತ್ತೆ

ಮಸೀದಿ ಬಳಿ 3 ತಾಸು ನಿಂತಿದ್ದ ಕಾರು, ಚಾಲಕನ ಮುಖ ಗೋಚರ ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಬಳಸಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮೊದಲು ಸುಮಾರು ಮೂರು ಗಂಟೆ ಮಸೀದಿ ಬಳಿ ಪಾರ್ಕಿಂಗ್‌ ಆಗಿದ್ದ ವಿಚಾರ ಈಗ ಸಿಸಿಟಿವಿ ದೃಶ್ಯಗಳಿಂದ ಪತ್ತೆಯಾಗಿದೆ. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3.19ಕ್ಕೆ ಪ್ರವೇಶಿಸಿ ಸಂಜೆ 6.48ಕ್ಕೆ ನಿರ್ಗಮಿಸಿದೆ. ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಕೆಂಪು ಕೋಟೆಯ ಬಳಿ ಸಂಜೆ 6.52ಕ್ಕೆ ಸ್ಫೋಟಗೊಂಡಿದೆ. ಪಾರ್ಕಿಂಗ್

ಡಾ. ಉಮರ್‌ ದಿಲ್ಲಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ : ಸಿಸಿಟಿವಿ ದೃಶ್ಯಗಳಲ್ಲಿ ಮಹತ್ವದ ಸುಳಿವು ಪತ್ತೆ Read More »

ದಿಲ್ಲಿ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿಯೆಂಬ ಶಂಕೆ

11 ಜನರನ್ನು ಬಲಿತೆಗೆದುಕೊಂಡ ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್‌ ಬಳಕೆ ನವದೆಹಲಿ: ದೆಹಲಿಯ ಕೆಂಪುಕೋಟೆಯ ಬಳಿ ಇರುವ ಮೆಟ್ರೋ ಸ್ಟೇಷನ್​ ಗೇಟ್ ಬಳಿ ಟ್ರಾಫಿಕ್ ಸಿಗ್ನಲ್​​ನಲ್ಲಿ ನಿನ್ನೆ ಸಂಜೆ ಸಂಭವಿಸಿದ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿ ಎಂಬ ತೀರ್ಮಾನಕ್ಕೆ ತನಿಖಾ ಏಜೆನ್ಸಿಗಳು ಬಂದಿವೆ. ಕಾರಿನಲ್ಲಿ ಅಮೋನಿಯಂ ನೈಟ್ರೇಟ್‌ ಸ್ಫೋಟಕದ ಅಂಶಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಇದು ಉಗ್ರಕೃತ್ಯ ಎಂಬ ಬಲವಾದ ಸಂಶಯ ಇದೆ. ಸ್ಫೋಟವಾದ ಕಾರಿನಲ್ಲೂ ಜನರಿದ್ದರು. ಕಾರೊಳಗಿದ್ದ ಜನರು ಸೇರಿದಂತೆ ಒಟ್ಟು 11 ಜನರು ಮೃತಪಟ್ಟಿದ್ದಾರೆ. 4

ದಿಲ್ಲಿ ಕಾರು ಸ್ಫೋಟ ಉಗ್ರರ ಆತ್ಮಹತ್ಯಾ ದಾಳಿಯೆಂಬ ಶಂಕೆ Read More »

ಹರಿಯಾಣದಲ್ಲಿ ಸಿಕ್ಕಿದ್ದು ಬಾಂಬ್‌ ತಯಾರಿಸಲು ಬಳಸುವ 360 ಕೆ.ಜಿ. ಅಮೋನಿಯಂ ನೈಟ್ರೇಟ್‌

ಮಹಿಳಾ ಡಾಕ್ಟರ್‌, ಇಮಾಮ್‌ ಸೇರಿ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿರುವ ಪೊಲೀಸರು ನವದೆಹಲಿ: ಹರಿಯಾಣದ ಫರಿದಾಬಾದ್‌ನಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿರುವುದು ಆರ್‌ಡಿಎಕ್ಸ್‌ ಅಲ್ಲ ಬದಲಾಗಿ ಬಾಂಬ್‌ ತಯಾರಿಸಲು ಬಳಸುವ ಅಮೋನಿಯಂ ನೈಟ್ರೇಟ್‌ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಪ್ರಾಥಮಿಕ ವರದಿಗಳಲ್ಲಿ ಆರ್‌ಡಿಎಕ್ಸ್‌ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿತ್ತು. ಸ್ಫೋಟಕದ ಜೊತೆಗೆ ರೈಫಲ್ ಹಾಗೂ ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇತ್ತೀಚಿಗೆ ಶ್ರೀನಗರದಲ್ಲಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಅನ್ನು ಬೆಂಬಲಿಸುವ ಪೋಸ್ಟರ್‌ಗಳನ್ನು ಹಾಕಿದ್ದ ಹಿನ್ನೆಲೆ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಕಾಶ್ಮೀರಿ ಮೂಲದ

ಹರಿಯಾಣದಲ್ಲಿ ಸಿಕ್ಕಿದ್ದು ಬಾಂಬ್‌ ತಯಾರಿಸಲು ಬಳಸುವ 360 ಕೆ.ಜಿ. ಅಮೋನಿಯಂ ನೈಟ್ರೇಟ್‌ Read More »

ಹರಿಯಾಣದ ಆಸ್ಪತ್ರೆಯಿಂದ 360 ಆರ್‌ಡಿಎಕ್ಸ್‌ ಸ್ಫೋಟಕ ವಶ

ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಇಬ್ಬರು ಡಾಕ್ಟರ್‌ಗಳು ಸೆರೆ ನವದೆಹಲಿ: ಆಘಾತಕಾರಿ ಘಟನೆಯೊಂದರಲ್ಲಿ ಪರಿಯಾಣದ ಫರಿದಾಬಾದ್‌ನ ಆಸ್ಪತ್ರೆಯೊಂದಕ್ಕೆ ದಾಳಿ ಮಾಡಿರುವ ಪೊಲೀಸರು 360 ಕಿ.ಗ್ರಾಂ ಆರ್‌ಡಿಎಕ್ಸ್‌ ಸ್ಫೋಟಕ ಮತ್ತು ಒಂದು ಎ.ಕೆ. 47 ರೈಫಲ್‌ ವಶಪಡಿಸಿಕೊಂಡು ಇಬ್ಬರು ಡಾಕ್ಟರ್‌ಗಳನ್ನು ಬಂಧಿಸಿದ್ದಾರೆ. ದೇಶದಲ್ಲಿ ಇನ್ನೊಂದು ಬೃಹತ್‌ ವಿಧ್ವಂಸಕ ಕೃತ್ಯವನ್ನು ಈ ಮೂಲಕ ಪೊಲೀಸರು ವಿಫಲಗೊಳಿಸಿದ್ದಾರೆ. ಫರಿದಾಬಾದ್‌ನ ಅಲ್‌ ಫಲಾಹ ಆಸ್ಪತ್ರೆಯಿಂದ ಈ ಬೃಹತ್‌ ಪ್ರಮಾಣದ ಅಪಾಯಕಾರಿ ಸ್ಫೋಟಕವನ್ನು ಜಮ್ಮು-ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾಶ್ಮೀರದಲ್ಲಿ ಸೆರೆಯಾದ ಡಾಕ್ಟರ್‌ ನೀಡಿದ

ಹರಿಯಾಣದ ಆಸ್ಪತ್ರೆಯಿಂದ 360 ಆರ್‌ಡಿಎಕ್ಸ್‌ ಸ್ಫೋಟಕ ವಶ Read More »

ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿಯ ಇನ್ನೊಂದು ವಿಡಿಯೋ ಬಹಿರಂಗ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ಆರೋಪ ಬೆಂಗಳೂರು : ಐಸಿಸ್‌ ಉಗ್ರ ಶಕೀಲ್‌, ವಿಕೃತಕಾಮಿ ಉಮೇಶ್ ರೆಡ್ಡಿಗೆ ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿ ರಾಜಾತಿಥ್ಯ ನೀಡಿರುವ ವಿಡಿಯೋಗಳು ವೈರಲ್ ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆಯುತ್ತಿರುವ ಕೈದಿಗಳ ಮೋಜು ಮಸ್ತಿಯ ಮತ್ತೊಂದು ವಿಡಿಯೋ ಹೊರಬಂದಿದೆ. ಕೈದಿಗಳು ಮದ್ಯ ಸೇವಿಸಿ ಡಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದು ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ. ಈ ವಿಡಿಯೋಗಳು ಪರಪ್ಪನ ಅಗ್ರಹಾರ ಜೈಲಿನದ್ದಾ ಅಥವಾ ಬೇರೆ ಜೈಲಿನದ್ದಾ ಎಂಬ ಆಯಾಮದಲ್ಲಿ

ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿಯ ಇನ್ನೊಂದು ವಿಡಿಯೋ ಬಹಿರಂಗ Read More »

error: Content is protected !!
Scroll to Top