ಅಪರಾಧ

ಪುತ್ತೂರು : ಹೆಜ್ಜೇನು ದಾಳಿಯಿಂದ ಬಾಲಕಿ ಮೃತ್ಯು

ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಬಾಲಕಿಯರ ಮೇಲೆ ದಾಳಿ ನಡೆಸಿದ ಹೆಜ್ಜೇನು ಪುತ್ತೂರು: ಹೆಜ್ಜೇನು ದಾಳಿಯಿಂದ ಬಾಲಕಿ ಮೃತಪಟ್ಟ ದಾರುಣ ಘಟನೆ ಸೇಡಿಯಾಪು ಕೂಟೇಲು ಸಮೀಪ ಸಂಭವಿಸಿದೆ. ಶಾಲೆ ಮುಗಿಸಿ ಮನೆಗೆ ತೆರಳುತ್ತಿರುವಾಗ ಮಕ್ಕಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಮೂವರು ಗಾಯಗೊಂಡಿದ್ದರು. ಈ ಪೈಕಿ ಓರ್ವ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಸೇಡಿಯಾಪು ಕೂಟೇಲು ಎಂಬಲ್ಲಿನ ನಿವಾಸಿ ಕಿರಣ್ ಪೂಜಾರಿ ಎಂಬವರ ಪುತ್ರಿ ದಿಶಾ (7) ಮೃತ ಬಾಲಕಿ. 5ನೇ ತರಗತಿ […]

ಪುತ್ತೂರು : ಹೆಜ್ಜೇನು ದಾಳಿಯಿಂದ ಬಾಲಕಿ ಮೃತ್ಯು Read More »

ಪ್ರೀತ್ಸೇ ಅಂತ ಟಾರ್ಚರ್ ಕೊಟ್ಟ ಯುವಕ: 17 ರ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

ಖಾನಾಪುರ: ಯುವಕನೊಬ್ಬ ಪ್ರೀತಿ ಮಾಡು ಎಂದು ಪೀಡಿಸಿದ್ದಕ್ಕೆ ‌ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಲತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಅಶ್ವಿನಿ ಕೋಲಾರ(17) ಎಂದು ಗುರುತಿಸಲಾಗಿದೆ. ನಂದಳ್ಳಿ ಗ್ರಾಮದ ರತನ್ ಪಾಟೀಲ್ (26) ಎಂಬಾತ ಅಶ್ವಿನಿಗೆ ತನ್ನನ್ನು ಪ್ರೀತಿಸಬೇಕು‌. ಇಲ್ಲವಾದಲ್ಲಿ ನಿನ್ನನ್ನು ನಾನು ಬಿಡುವುದಿಲ್ಲ ಎಂದು ಕಳೆದೊಂದು ವರ್ಷದಿಂದ ಬೆದರಿಕೆ ಹಾಡುತ್ತಿದ್ದ. ಲೈಂಗಿಕ ಕಿರುಕುಳ ಸಹ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದ ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪ್ರೀತ್ಸೇ ಅಂತ ಟಾರ್ಚರ್ ಕೊಟ್ಟ ಯುವಕ: 17 ರ ಬಾಲಕಿ ನೇಣು ಬಿಗಿದು ಆತ್ಮಹತ್ಯೆ Read More »

ನಿಷೇಧಿತ ಪಿಎಫ್‌ಐ ಪರ ಪ್ರಚಾರ : ಕಡಬದ ವ್ಯಕ್ತಿ ಸೆರೆ

ಸೋಷಿಯಲ್‌ ಮೀಡಿಯಾದಲ್ಲಿ ನಿರಂತರ ಪ್ರಚಾರ ಮಾಡುತ್ತಿದ್ದ ಆರೋಪಿ ಮಂಗಳೂರು : ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳನ್ನು ಹಾಕಿ ಆನ್‌ಲೈನ್‌ನಲ್ಲಿ ಪ್ರಚಾರ ಮಾಡಿದ ಆರೋಪದ ಮೇಲೆ ಓರ್ವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ಬೀಜತ್ತಳಿ ನಿವಾಸಿ ಸೈಯದ್ ಇಬ್ರಾಹಿಂ ತಂಙಳ್ (55) ಬಂಧಿತ ಆರೋಪಿ. 2022ರಲ್ಲಿ ಕೇಂದ್ರ ಸರ್ಕಾರ ಪಿಎಫ್‌ಯನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿ ನಿಷೇಧಿಸಿದೆ. ನಿಷೇಧದ ಹೊರತಾಗಿಯೂ ಆರೋಪಿ ಸಂಘಟನೆಯ ಪರ

ನಿಷೇಧಿತ ಪಿಎಫ್‌ಐ ಪರ ಪ್ರಚಾರ : ಕಡಬದ ವ್ಯಕ್ತಿ ಸೆರೆ Read More »

ತಂಗಿಯ ಮರ್ಯಾದೆ ಹತ್ಯೆ ಮಾಡಿದ ಸಹೋದರರಿಗೆ ಗಲ್ಲು ಶಿಕ್ಷೆ

ದಲಿತ ಯುವಕನನನ್ನು ಮದುವೆಯಾದದ್ದಕ್ಕೆ ತುಂಬು ಗರ್ಭಿಣಿ ತಂಗಿಯನ್ನು ಜೀವಂತ ದಹಿಸಿದ್ದ ಸಹೋದರರು ಬೆಂಗಳೂರು : ದಲಿತ ಯುವಕನ್ನು ಪ್ರೀತಿಸಿ ಮದುವೆಯಾಗಿದ್ದ ಸಹೋದರಿಯನ್ನು ಜೀವಂತ ಸುಟ್ಟುಕೊಂದಿದ್ದ ವಿಜಯಪುರದ ಮರ್ಯಾದ ಹತ್ಯೆ ಪ್ರಕರಣದ ಇಬ್ಬರು ಸಹೋದರರಿಗೆ ನ್ಯಾಯಾಲಯ ಗಲ್ಲುಶಿಕ್ಷೆ ವಿಧಿಸಿದೆ. ಮರ್ಯಾದೆ ಹತ್ಯೆಗೈದ ಇಬ್ಬರು ಸಹೋದರರಿಗೆ ಮರಣದಂಡನೆ, ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಗುಂಡಕನಲ್ ಗ್ರಾಮದ ಇಬ್ರಾಹಿಂ ಸಾಬ್ (31) ಹಾಗೂ ಈತನ ಸಹೋದರ

ತಂಗಿಯ ಮರ್ಯಾದೆ ಹತ್ಯೆ ಮಾಡಿದ ಸಹೋದರರಿಗೆ ಗಲ್ಲು ಶಿಕ್ಷೆ Read More »

ಬಾಲಕನಿಗೆ ಲೈಂಗಿಕ ಕಿರುಕುಳ : ಆರೋಪಿ ವಿರುದ್ಧ ಪೋಕ್ಸೊ ಕೇಸ್‌

ಬೀಚ್‌ಗೆ ತಿರುಗಾಡಲು ಬಂದಿದ್ದ ಬಾಲಕನಿಗೆ ಕಿರುಕುಳ ಉಡುಪಿ: ಕಾಪು ಬೀಚ್‌ನಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದೆ. ಮೈಸೂರಿನಿಂದ ಮಗನ ಜೊತೆ ಪ್ರವಾಸ ಬಂದಿದ್ದ ದಂಪತಿ ಕಾಪು ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಶೌಕತ್‌ ಅಲಿ (47) ಎಂಬಾತ ಶೌಚಾಲಯದ ಬಳಿ ಬಾಲಕನನ್ನು ಹಿಡಿದು ಚುಂಬಿಸಿ ಕಿರುಕುಳ ನೀಡಿದ್ದ. ಇದನ್ನು ನೋಡಿ ಬಾಲಕನ ತಂದೆ ಬೊಬ್ಬೆ ಹಾಕಿದ್ದು, ಆಗ ಆರೋಪಿ ಸ್ಥಳದಿಂದ ಪಲಾಯನ ಮಾಡಲು ಯತ್ನಿಸಿದ್ದ. ಆದರೆ ಬೀಚ್‌ನಲ್ಲಿ ಗಸ್ತು ನಿರತ ಪೊಲೀಸರು ಮತ್ತು

ಬಾಲಕನಿಗೆ ಲೈಂಗಿಕ ಕಿರುಕುಳ : ಆರೋಪಿ ವಿರುದ್ಧ ಪೋಕ್ಸೊ ಕೇಸ್‌ Read More »

ಅಶ್ರಫ್ ಕಲಾಯಿ ಕೊಲೆ ಕೇಸ್: ಭರತ್ ಕುಮ್ಡೇಲು ಕೋರ್ಟ್‌ಗೆ ‌ಶರಣು

ಮಂಗಳೂರು: ಅಶ್ರಫ್ ಕಲಾಯಿ, ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಭರತ್ ಕುಮ್ಡೇಲು ಕೋರ್ಟ್‌ಗೆ ಶರಣಾಗಿದ್ದಾರೆ‌. SDPI ಕಾರ್ಯಕರ್ತ ಅಶ್ರಫ್ ಕಲಾಯಿ, ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿದೆ. ಅಶ್ರಫ್ ಕಲಾಯಿ ಕೊಲೆ ಪ್ರಕರಣದಲ್ಲಿ ಚಾರ್ಜ್ ಶೀಟ್ ಆಗಿ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಕರಣದ ಆರೋಪಿಗಳು ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದೆ ಭರತ್

ಅಶ್ರಫ್ ಕಲಾಯಿ ಕೊಲೆ ಕೇಸ್: ಭರತ್ ಕುಮ್ಡೇಲು ಕೋರ್ಟ್‌ಗೆ ‌ಶರಣು Read More »

ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಯನ್ನು ಕೂಡಿ ಹಾಕಿದ ಆರೋಪಿ ಅಂದರ್

ಬೆಂಗಳೂರು: ಜತಿಗಣತಿ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಯನ್ನು ಕಾಂಪೌಂಡ್ ಒಳಗೆ ಕೂಡಿ ಹಾಕಿದ್ದ ವ್ಯಕ್ತಿಯನ್ನು ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಭದ್ರಪ್ಪ ಲೇಔಟ್‌ನ ಸಂದೀಪ್ (31) ಎಂದು ಗುರುತಿಸಲಾಗಿದೆ. ಸಂದೀಪ್ ಮನೆಗೆ ಸಮೀಕ್ಷೆ ನಡೆಸಲು ಶಿಕ್ಷಕಿ ಸುಶೀಲಾ ತೆರಳಿದ್ದು, ಈ ವೇಳೆ ಅವರ ತಾಯಿಯ ಬಳಿ ದಾಖಲೆಗಳನ್ನು ಕೇಳಿದ್ದಾರೆ. ಆಗ ಅಲ್ಲಿಗೆ ಬಂದ ಸಂದೀಪ್ ನೀವು ಯಾರು?, ನಿಮ್ಮನ್ನು ಸಮೀಕ್ಷೆಗೆ ಕಳುಹಿಸಿದ್ದು ಯಾರು?, ನೀವು ಸರ್ಕಾರಿ ನೌಕರರು ಎಂದು ನಂಬುವುದು ಎಂದೆಲ್ಲಾ ಪ್ರಶ್ನೆ ಮಾಡಿದ್ದಾನೆ. ಜೊತೆಗೆ ಅವಾಚ್ಯ

ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಯನ್ನು ಕೂಡಿ ಹಾಕಿದ ಆರೋಪಿ ಅಂದರ್ Read More »

ಗಿರೀಶ್‌ ಮಟ್ಟಣ್ಣವರ್‌ ಬಾಂಬ್‌ ಪ್ರಕರಣಕ್ಕೆ ಮರುಜೀವ : ತನಿಖೆಗೆ ಒತ್ತಾಯಿಸಿ ಅರ್ಜಿ

ಮಂಗಳೂರು ಕುಕ್ಕರ್‌ ಬಾಂಬ್‌ ಮತ್ತು ಮಟ್ಟಣ್ಣವರ್‌ ಬಾಂಬ್‌ ನಡುವೆ ಲಿಂಕ್‌ ಇರುವ ಅನುಮಾನ ಬೆಂಗಳೂರು: ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ಈ ಹಿಂದೆ ವಿಧಾನಸೌಧದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣದ ಮರು ತನಿಖೆಯಾಗಬೇಕೆಂದು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದಾರೆ. ಪೊಲೀಸ್‌ ಇಲಾಖೆಯಲ್ಲಿದ್ದ ಗಿರೀಶ್‌ ಮಟ್ಟಣ್ಣವರ್‌ ವಿಧಾನಸಭೆಯಲ್ಲಿ ಬಾಂಬಿಟ್ಟ ಕೃತ್ಯದಿಂದಲೇ ಕುಖ್ಯಾತಿಗೊಳಗಾಗಿದ್ದರು. ಈ ಪ್ರಕರಣ ನ್ಯಾಯಾಲಯದಲ್ಲಿ ಖುಲಾಸೆಯಾಗಿದ್ದರೂ ಪೊಲೀಸ್‌ ಇಲಾಖೆಯಿಂದ ಅವರು ವಜಾಗೊಂಡಿದ್ದರು. ಈಗ ಮತ್ತೆ ಈ

ಗಿರೀಶ್‌ ಮಟ್ಟಣ್ಣವರ್‌ ಬಾಂಬ್‌ ಪ್ರಕರಣಕ್ಕೆ ಮರುಜೀವ : ತನಿಖೆಗೆ ಒತ್ತಾಯಿಸಿ ಅರ್ಜಿ Read More »

ಮುಂಬೈ : ಕಟ್ಟಡದಿಂದ ಸಿಮೆಂಟ್‌ ಬ್ಲಾಕ್‌ ಬಿದ್ದು ಕಿನ್ನಿಗೋಳಿಯ ಯುವತಿ ಸಾವು

ನಡೆದುಕೊಂಡು ಹೋಗುತ್ತಿರುವಾಗ ತಲೆ ಮೇಲೆ ಬಿದ್ದ ಸಿಮೆಂಟ್‌ ಬ್ಲಾಕ್‌ ಮುಂಬೈ : ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್‌ ಬ್ಲಾಕ್‌ ತಲೆಮೇಲೆ ಬಿದ್ದು ಕಿನ್ನಿಗೋಳಿ ಮೂಲದ ಯುವತಿಯೊಬ್ಬರು ಮುಂಬೈಯಲ್ಲಿ ಮೃತಪಟ್ಟಿರುವ ದಾರುಣ ಘಟನೆ ಗುರುವಾರ ಸಂಭವಿಸಿದೆ. ಮುಂಬೈಯ ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆಯಲ್ಲಿರುವ ಮಹಾರಾಜ ಭವನ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ 22 ವರ್ಷದ ಸಂಸ್ಕೃತಿ ಅಮೀನ್ ಎಂಬ ಯುವತಿ ಸಾವನ್ನಪ್ಪಿದ್ದಾರೆ. ಕಿನ್ನಿಗೋಳಿಯ ಪದ್ಮಾವತಿ ಲಾನ್ ಮತ್ತು ಮಲ್ಟಿಪರ್ಪಸ್ ಹಾಲ್ ಮತ್ತು ಮುಂಬೈಯ ಕೋಟ್ಯಾನ್

ಮುಂಬೈ : ಕಟ್ಟಡದಿಂದ ಸಿಮೆಂಟ್‌ ಬ್ಲಾಕ್‌ ಬಿದ್ದು ಕಿನ್ನಿಗೋಳಿಯ ಯುವತಿ ಸಾವು Read More »

ಸ್ನೇಹಿತರಿಂದ ವಿಡಿಯೋ ಬಹಿರಂಗ ಮಾಡುವ ಬೆದರಿಕೆ : ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ

ಗೆಳತಿ ಜೊತೆಗಿದ್ದ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಸ್ನೇಹಿತರು ಕಾರ್ಕಳ : ತನ್ನ ಗೆಳತಿಯೊಂದಿಗೆ ಇರುವ ಖಾಸಗಿ ವಿಡಿಯೋವನ್ನು ಸೋರಿಕೆ ಮಾಡುವುದಾಗಿ ಸ್ನೇಹಿತರು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮನನೊಂದ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಗುರುವಾರ ಸಂಜೆ ಬೆಳ್ಮಣ್‌ನಲ್ಲಿ ನಡೆದಿದೆ. ನಿಟ್ಟೆ ಗ್ರಾಮದ ಪರಪ್ಪಾಡಿ ನಿವಾಸಿ ಅಭಿಷೇಕ್ ಆಚಾರ್ಯ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಅಭಿಷೇಕ್ ಮಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು ಮತ್ತು ಸ್ಥಳೀಯ ಯುವತಿಯನ್ನು ಪ್ರೀತಿಸುತ್ತಿದ್ದರು. ಇಬ್ಬರ ಸಂಬಂಧ ಬಹಳ

ಸ್ನೇಹಿತರಿಂದ ವಿಡಿಯೋ ಬಹಿರಂಗ ಮಾಡುವ ಬೆದರಿಕೆ : ಲಾಡ್ಜ್‌ನಲ್ಲಿ ಯುವಕ ಆತ್ಮಹತ್ಯೆ Read More »

error: Content is protected !!
Scroll to Top