ಅಪರಾಧ

ನಿಲ್ಲಿಸಿದ್ದ ಬಸ್ಸಿನ ಒಳಗೆ ಬೆಂಕಿ ಅವಘಡ : ಅಪರಿಚಿತ ವ್ಯಕ್ತಿ ಸಜೀವ ದಹನ

ಮೂರು ತಿಂಗಳಿಂದ ರಸ್ತೆ ಬದಿ ಅನಾಥ ಸ್ಥಿತಿಯಲ್ಲಿದ್ದ ಬಸ್‌ ಬೆಂಗಳೂರು: ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದರ ಒಳಗೆ ಬೆಂಕಿ ಅವಘಡ ಸಂಭವಿಸಿ ಅದರೊಳಗಿದ್ದ ವ್ಯಕ್ತಿ ಸಜೀವ ದಹನ ಆದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಒಎಂಬಿಆರ್‌ ಲೇಔಟ್‌ನಲ್ಲಿ ರಾತ್ರಿ 10 ಗಂಟೆ ವೇಳೆಗೆ ಬಸ್ಸಿನ ಒಳಗೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕದಳ ವಾಹನ ದೌಡಾಯಿಸಿ ಬೆಂಕಿ‌ ನಂದಿಸಿದೆ. ಆದರೆ ಬಸ್ಸಿನ ಒಳಗೆ ಇದ್ದ ವ್ಯಕ್ತಿಯನ್ನು ಉಳಿಸಲು ಸಾಧ್ಯವಾಗಿಲ್ಲ. ಬಸ್‌ನ ಒಳಗೆ ಸಂಪೂರ್ಣ ಸುಟ್ಟು ಕರಕಲಾದ […]

ನಿಲ್ಲಿಸಿದ್ದ ಬಸ್ಸಿನ ಒಳಗೆ ಬೆಂಕಿ ಅವಘಡ : ಅಪರಿಚಿತ ವ್ಯಕ್ತಿ ಸಜೀವ ದಹನ Read More »

ಗಿರೀಶ್‌ ಮಟ್ಟೆಣ್ಣವರ್‌, ಯೂಟ್ಯೂಬರ್‌ ವಿರುದ್ಧ ಜೈನರಿಗೆ ಅಪಮಾನ ಮಾಡಿದ ಕೇಸ್‌

ಧರ್ಮಸ್ಥಳ ಅವಹೇಳನ, ಅಪಪ್ರಚಾರ ವಿರುದ್ಧ ರಾಜ್ಯಾದ್ಯಂತ ಹೆಚ್ಚುತ್ತಿದೆ ಅಸಹನೆ ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ ಮಟ್ಟೆಣ್ಣವರ್‌ ಹಾಗೂ ಯೂಟ್ಯೂಬರ್‌ ವಿರುದ್ಧ ಹುಬ್ಬಳ್ಳಿಯಲ್ಲಿ ಕೇಸ್‌ ದಾಖಲಾಗಿದೆ. ಧರ್ಮಸ್ಥಳಕ್ಕೆ ಸಂಬಂಧಿಸಿ ಮಾತನಾಡುತ್ತ ಜೈನ ಧರ್ಮೀಯರ ವಿರುದ್ಧ ಅವಮಾನಕರ ಹೇಳಿಕೆ, ಜೈನರ ನಂಬಿಕೆಗಳಿಗೆ ಧಕ್ಕೆ ಎಸಗಿದ್ದಾರೆ ಎಂದು ಹುಬ್ಬಳ್ಳಿಯ ಛಬ್ಬಿ ಗ್ರಾಮದ ಅಜೀತ್‌ ಬಸಾಪುರ ಎಂಬವರು ಹುಬ್ಬಳ್ಳಿ ಗ್ರಾಮೀನ ಪೊಲೀಸ್‌ ಟಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್‌ಸ್ಪೆಕ್ಟರ್‌ ಜೀರೊ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ

ಗಿರೀಶ್‌ ಮಟ್ಟೆಣ್ಣವರ್‌, ಯೂಟ್ಯೂಬರ್‌ ವಿರುದ್ಧ ಜೈನರಿಗೆ ಅಪಮಾನ ಮಾಡಿದ ಕೇಸ್‌ Read More »

12ರ ಬಾಲಕಿ ಮೇಲೆ 200 ಮಂದಿಯಿಂದ ಅತ್ಯಾಚಾರ : ಮುಂಬಯಿಯಲ್ಲಿ ಬೆಳಕಿಗೆ ಬಂದ ಭಯಾನಕ ಕೃತ್ಯ

ಅಮಲು ಬರುವ ಪಾನೀಯ, ಚುಚ್ಚುಮದ್ದು ನೀಡಿ ಲೈಂಗಿಕ ಶೋಷಣೆ ಮುಂಬಯಿ : ಬಾಂಗ್ಲಾದೇಶ ಮೂಲದ 12 ವರ್ಷದ ಬಾಲಕಿಯ ಮೇಲೆ ಮೂರು ತಿಂಗಳಲ್ಲಿ 200ಕ್ಕೂ ಹೆಚ್ಚು ಮಂದಿ ಅತ್ಯಾಚಾರವೆಸಗಿದ ಭಯಾನಕ ಕೃತ್ಯವೊಂದು ಮುಂಬಯಿಯಲ್ಲಿ ಬೆಳಕಿಗೆ ಬಂದಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದ ಕಾರಣ ಬೇಸರಗೊಂಡು ಪರಿಚಯಸ್ಥ ಮಹಿಳೆಯೊಬ್ಬಳ ಜತೆಗೆ ದೇಶಬಿಟ್ಟು ಓಡಿಬಂದಿದ್ದ ಬಾಲಕಿ ಮುಂಬಯಿಯಲ್ಲಿ ಮಾನವ ಕಳ್ಳಸಾಗಣೆ ಜಾಲದಲ್ಲಿ ಆಕೆ ಸಿಕ್ಕಿಬಿದ್ದು ನರಕ ಯಾತನೆ ಅನುಭವಿಸಿದ್ದಾಳೆ. ಯಾರೋ ಆಕೆಗೆ ಭಾರತದೊಳಗೆ ನುಸುಳಲು ಅವಕಾಶ ಮಾಡಿಕೊಟ್ಟಿದ್ದರು. ಇಲ್ಲಿ ಮಾನವ ಕಳ್ಳಸಾಗಣೆ ಜಾಲದಲ್ಲಿ

12ರ ಬಾಲಕಿ ಮೇಲೆ 200 ಮಂದಿಯಿಂದ ಅತ್ಯಾಚಾರ : ಮುಂಬಯಿಯಲ್ಲಿ ಬೆಳಕಿಗೆ ಬಂದ ಭಯಾನಕ ಕೃತ್ಯ Read More »

ಮನೆಯ ಸುತ್ತ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ : ರಕ್ಷಣೆ ಕೋರಿ ಸಂತ್ರಸ್ತ ಯುವತಿಯಿಂದ ಐಜಿಪಿಗೆ ಮನವಿ

ಯಾರೋ ಗೇಟ್‌ ಬಡಿದಂತೆ, ಟೆರೇಸ್‌ ಮೇಲೆ ಹತ್ತಿ ಹೋದಂತಾಗುತ್ತದೆ ಎಂದು ದೂರು ಪುತ್ತೂರು : ಪುತ್ತೂರಿನ ಬಿಜೆಪಿ ನಾಯಕ ಪಿ.ಜಿ.ಜಗನ್ನಿವಾಸ ರಾವ್ ಅವರ ಪುತ್ರ ಶ್ರೀಕೃಷ್ಣ ಜೆ. ರಾವ್ ಅವರಿಂದ ಅತ್ಯಾಚಾರ ಮತ್ತು ವಂಚನೆಗೊಳಗಾಗಿ ತಾಯಿಯಾಗಿರುವ ವಿದ್ಯಾರ್ಥಿನಿ ತನಗೆ ಮತ್ತು ನವಜಾತ ಶಿಶುವಿಗೆ ಬೆದರಿಕೆ ಇದೆ ಎಂದು ಪೊಲೀಸ್ ರಕ್ಷಣೆ ಕೋರಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಅವರನ್ನು ಭೇಟಿ ಮಾಡಿ ಮಾನವಿ ನೀಡಿದ್ದಾರೆ. ಸೋಮವಾರ ಸಂತ್ರಸ್ತೆ ಮಂಗಳೂರಿನಲ್ಲಿರುವ ಪಶ್ಚಿಮ ವಲಯ ಐಜಿಪಿ ಕಚೇರಿಗೆ ಭೇಟಿ

ಮನೆಯ ಸುತ್ತ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ : ರಕ್ಷಣೆ ಕೋರಿ ಸಂತ್ರಸ್ತ ಯುವತಿಯಿಂದ ಐಜಿಪಿಗೆ ಮನವಿ Read More »

ಧರ್ಮಸ್ಥಳ ಪ್ರಕರಣ : ಮಾನವ ಹಕ್ಕು ಆಯೋಗದಿಂದಲೂ ತನಿಖೆ

ಐಪಿಎಸ್‌ ಅಧಿಕಾರಿಯನ್ನೊಳಗೊಂಡಿರುವ ತಂಡದಿಂದ ವಿವಿಧೆಡೆ ತೆರಳಿ ಮಾಹಿತಿ ಸಂಗ್ರಹ ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತನಿಖೆ ಆರಂಭಿಸಿದೆ. ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಆಯೋಗದ ಅಧಿಕಾರಿಗಳ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಬೀಡುಬಿಟ್ಟ ನಾಲ್ವರು ಅಧಿಕಾರಿಗಳ ತಂಡದಲ್ಲಿ ಓರ್ವ ಐಪಿಎಸ್ ಅಧಿಕಾರಿ ಇದ್ದಾರೆ. ವಿವಿಧ ಆಯಾಮಗಳಲ್ಲಿ ದಾಖಲೆ ಮತ್ತು ಮಾಹಿತಿಗಳ ಸಂಗ್ರಹ ಮಾಡುತ್ತಿರುವ ತಂಡ ಪಂಚಾಯತ್‌ನಿಂದ ದಾಖಲೆಗಳನ್ನು ಕೇಳಿ ಪರಿಶೀಲನೆ ನಡೆಸುತ್ತಿದೆ. ಮುಂದಿನ

ಧರ್ಮಸ್ಥಳ ಪ್ರಕರಣ : ಮಾನವ ಹಕ್ಕು ಆಯೋಗದಿಂದಲೂ ತನಿಖೆ Read More »

ಧರ್ಮಸ್ಥಳ ಪ್ರಕರಣದ ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ SIT ತನಿಖೆ ನಡೆಸುತ್ತಿದ್ದು, ಅದು ಪೂರ್ಣವಾಗುವ ವರೆಗೆ ತಾನು ಈ ಸಂಬಂಧ ಮಾತನಾಡುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಹಲವರು ಸಾಕಷ್ಟು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ನನ್ನ ಗಮನಕ್ಕೂ ಬಂದಿದೆ. ಆದರೆ ತನಿಖೆ ಮುಗಿಯುವ ವರೆಗೆ ಈ ಬಗ್ಗೆ ಮಾತನಾಡುವುದು ಸಮಂಜಸವಲ್ಲ. ತನಿಖೆಯ ಬಳಿಕ ವಾಸ್ತವಾಂಶ ಬೆಳಕಿಗೆ ಬರಲಿದೆ ಎಂದಿದ್ದಾರೆ. ಈ ಬಗ್ಗೆ ಸದನದಲ್ಲಿ ಪ್ರಶ್ನೆಗಳು ಬಂದರೆ ಉತ್ತರ ನೀಡಲಾಗುವುದು ಎಂದು ಅವರು ನುಡಿದಿದ್ದಾರೆ.

ಧರ್ಮಸ್ಥಳ ಪ್ರಕರಣದ ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ: ಡಾ. ಜಿ. ಪರಮೇಶ್ವರ್ Read More »

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್ ಶೋಧನೆಗೆ ಡ್ರೋಣ್ ಜಿಪಿಆರ್ ಬಲ

ಧರ್ಮಸ್ಥಳ: ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಈಗಾಗಲೇ ಮುಸುಕುಧಾರಿ ‌ದೂರುದಾರ ಗುರುತಿಸಿದ 13 ನೇ ಪಾಯಿಂಟ್ ಉತ್ಖನನಕ್ಕೆ ಡ್ರೋಣ್- ಮೌಂಟೆಡ್ GPR ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ಆರಂಭ ಮಾಡಲಾಗಿದೆ. ಸಾಮಾನ್ಯ GPR ಆ್ಯಂಟೆನಾ‌ವನ್ನು ಡ್ರೋಣ್ ಕೆಳಭಾಗದಲ್ಲಿ ಅಳವಡಿಕೆ ಮಾಡುವ ಮೂಲಕ ಭೂಮಿಯೊಳಗೆ ಸಿಗ್ನಲ್ ರವಾನೆ ಮಾಡುತ್ತದೆ. ಈ ಸಿಗ್ನಲ್‌ಗೆ ಭೂಮಿಯೊಳಗಿಂದ ಮರು‌‌ ಸಿಗ್ನಲ್ ಬರುತ್ತದೆ. ಈ ಸಿಗ್ನಲ್‌ಗಳನ್ನು ಸೆನ್ಸಾರ್‌ಗಳು ದಾಖಲಿಸಿಕೊಂಡು 2D ಅಥವಾ 3 D ಚಿತ್ರವಾಗಿ ಪರಿವರ್ತಿಸಿ ಫಲಿತಾಂಶ ನೀಡುತ್ತದೆ. ಈ

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್ ಶೋಧನೆಗೆ ಡ್ರೋಣ್ ಜಿಪಿಆರ್ ಬಲ Read More »

ಧರ್ಮಸ್ಥಳ ತೇಜೋವಧೆ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು : ಸಿ.ಟಿ.ರವಿ

ಸದನದಲ್ಲಿ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪ ಮಾಡಲು ಸಿದ್ಧತೆ ಬೆಂಗಳೂರು : ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು ಇದ್ದಾರೆ ಎಂದು ಬಿಜೆಪಿ ನಾಯಕ ಸಿ .ಟಿ. ರವಿ ಆರೋಪಿಸಿದ್ದಾರೆ. ಕೋಟ್ಯಂತರ ಜನರ ಶ್ರದ್ಧೆ, ಭಕ್ತಿ, ನಂಬಿಕೆಯ ಸ್ಥಳ ಧರ್ಮಸ್ಥಳ. ಅದಕ್ಕೆ ಘಾಸಿ ಮಾಡುವ ಅಧಿಕಾರವನ್ನು ಯಾರಿಗೂ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು ಸದನದಲ್ಲಿ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪ ಮಾಡುತ್ತೇವೆ ಎಂದಿದ್ದಾರೆ. ಆ ಯೂಟ್ಯೂಬರ್ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ? ಆತ ನ್ಯಾಯಾಲಯಕ್ಕೆ ದಾಖಲೆ

ಧರ್ಮಸ್ಥಳ ತೇಜೋವಧೆ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು : ಸಿ.ಟಿ.ರವಿ Read More »

ಮಂಗಳೂರು : ನಿವೃತ್ತ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 3.9 ಕೋ. ರೂ. ಲಪಟಾಯಿಸಿದ ವಂಚಕರು

ಚೀನಕ್ಕೆ ಕಳುಹಿಸಿದ ಪಾರ್ಸೆಲ್‌ನಲ್ಲಿ ಡ್ರಗ್ಸ್‌ ಇದೆ ಎಂದು ಹೆದರಿಸಿ ಮೋಸ ಮಂಗಳೂರು: ನಗರದ ವೃದ್ಧ ಮಹಿಳೆಯೊಬ್ಬರನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ ಬರೋಬ್ಬರಿ 3.9 ಕೋ. ರೂ. ಸುಲಿಗೆ ಮಾಡಿರುವ ಕೃತ್ಯವೊಂದು ಬೆಳಕಿಗೆ ಬಂದಿದೆ. ಸೇವಾ ನಿವೃತ್ತಿ ಹೊಂದಿದ್ದ ಲೆನಿ ಪ್ರಭು ಎಂಬ ಮಹಿಳೆ ವಂಚನೆಗೊಳಗಾಗಿದ್ದು, ಈ ಕುರಿತು ಅವರು ಸೆನ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲೆನಿ ಪ್ರಭು ಅವರಿಗೆ ಕಳೆದ ಜನವರಿ 15ರಂದು ಅಪರಿಚಿತ ಸಂಖ್ಯೆಯೊಂದರಿಂದ ಮಿಸ್‌ ಕಾಲ್‌ ಬಂದಿದ್ದು, ಸ್ವಲ್ಪ ಹೊತ್ತಾದ ಬಳಿಕ ಈ

ಮಂಗಳೂರು : ನಿವೃತ್ತ ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 3.9 ಕೋ. ರೂ. ಲಪಟಾಯಿಸಿದ ವಂಚಕರು Read More »

ಧರ್ಮಸ್ಥಳ : ಮೂವರು ಯೂಟ್ಯೂಬರ್‌ಗಳ ವಿರುದ್ಧ ಹಲ್ಲೆ ಕೇಸ್‌ ದಾಖಲು

ಬೆಳ್ತಂಗಡಿ: ಬೈಕ್ ಸವಾರನನ್ನು ತಡೆದು ನಿಲ್ಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಮೂವರು ಯೂಟ್ಯೂಬರ್‌ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆ.6ರಂದು ಘಟನೆ ನಡೆದಿದ್ದು, ಈ ಬಗ್ಗೆ ಹರೀಶ್ ನಾಯ್ಕ ಎಂಬವರು ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ತಾನು ಬೈಕ್‌ನಲ್ಲಿ ಹೋಗುತ್ತಿದ್ದ‌ ವೇಳೆ ಪಾಂಗಳ ಕ್ರಾಸ್ ಬಳಿ ತಡೆದು ನಿಲ್ಲಿಸಿದ ಯುಟ್ಯೂಬರ್‌ಗಳು ತಾವು ಕುಡ್ಲ ರಾಂಪೇಜ್‌ನವರು ಎಂದು ಹೇಳಿದ್ದು, ಈ ರಸ್ತೆಯ ಪಕ್ಕದಲ್ಲಿ ಹೆಣಗಳನ್ನು ಹೂತು ಹಾಕಿದ್ದೀರಾ? ಇದರ ಬಗ್ಗೆ ನಿಮಗೆ ಗೊತ್ತಿದೆಯಾ

ಧರ್ಮಸ್ಥಳ : ಮೂವರು ಯೂಟ್ಯೂಬರ್‌ಗಳ ವಿರುದ್ಧ ಹಲ್ಲೆ ಕೇಸ್‌ ದಾಖಲು Read More »

error: Content is protected !!
Scroll to Top