ಅಪರಾಧ

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್‌ನಲ್ಲಿ ಭುಗಿಲೆದ್ದ ಹಿಂಸಾಚಾರ

13 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ; ಇಂಟರ್‌ನೆಟ್‌ ಸ್ಥಗಿತ ಭುವನೇಶ್ವರ: ಒಡಿಶಾದ ಕಟಕ್ ​​ನಗರದಲ್ಲಿ ದುರ್ಗಾ ಪೂಜೆಯ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಳಿಕ ಭಾನುವಾರದಿಂದ 36 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ. ಭಾನುವಾರ ರಾತ್ರಿ 10 ಗಂಟೆಯಿಂದ 13 ಪೊಲೀಸ್ ಠಾಣೆ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಸಂಜೆ 7 ಗಂಟೆಯಿಂದ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸಿಎಂಸಿ, ಸಿಡಿಎ ಮತ್ತು ಬಯಾಲಿಶ್ ಮೌಜಾ ಪ್ರದೇಶಗಳಲ್ಲಿ ನಿರ್ಬಂಧಗಳು ಜಾರಿಯಲ್ಲಿವೆ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮೋಹನ್ […]

ದುರ್ಗಾ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟ : ಕಟಕ್‌ನಲ್ಲಿ ಭುಗಿಲೆದ್ದ ಹಿಂಸಾಚಾರ Read More »

50 ಸಾವಿರ ರೂ. ಲಂಚ ಸ್ವೀಕಾರ : ಇಂಧನ ಸಚಿವ ಜಾರ್ಜ್‌ ಸಹಾಯಕ ಲೋಕಾಯುಕ್ತ ಬಲೆಗೆ

ನಿರಾಕ್ಷೇಪಣಾ ಪ್ರಮಾಣಪತ್ರ ನೀಡಲು ಲಂಚ ಸ್ವೀಕರಿಸಿದ್ದ ಒಎಸ್‌ಡಿ ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರ ವಿಶೇಷ ಕರ್ತವ್ಯ ಅಧಿಕಾರಿ(ಒಎಸ್‌ಡಿ) ಶನಿವಾರ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಪಿಟಿಸಿಎಲ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇಂಧನ ಸಚಿವರ ಒಎಸ್‌ಡಿ ಜ್ಯೋತಿ ಪ್ರಕಾಶ್(50), ಅವರ ಕಾರು ಚಾಲಕ ನವೀನ್ ಎಂ(34) ಅವರನ್ನು ಲಂಚಕ್ಕೆ ಬೇಡಿಕೆ ಇಟ್ಟ ಮತ್ತು ಸ್ವೀಕರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬ್ಯಾಡರಹಳ್ಳಿ ನಿವಾಸಿ ಅನಂತರಾಜು ಕೆ.ಎಂ(37)

50 ಸಾವಿರ ರೂ. ಲಂಚ ಸ್ವೀಕಾರ : ಇಂಧನ ಸಚಿವ ಜಾರ್ಜ್‌ ಸಹಾಯಕ ಲೋಕಾಯುಕ್ತ ಬಲೆಗೆ Read More »

ಅಬ್ದುಲ್‌ ರಹಿಮಾನ್‌ ಕೊಲೆ ಆರೋಪಿಗಳ ವಿರುದ್ಧ ಕೋಕಾ ಅನ್ವಯ

ಸೆರೆಯಾಗಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ವಿರುದ್ಧ ಕೋಕಾ ಕೇಸ್‌ ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಎಂಬಲ್ಲಿ ಕಳೆದ ಮೇ 27ರಂದು ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಸಂಘಟಿತ ಅಪರಾಧ ತಡೆ ಕಾಯ್ದೆ (ಕೋಕಾ) ಅಡಿ ಕೇಸ್‌ ದಾಖಲಿಸಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಡಾ.ಅರುಣ್‌ ಕೆ. ತಿಳಿಸಿದ್ದಾರೆ. ದೀಪಕ್, ಚಿಂತನ್, ಪೃಥ್ವಿರಾಜ್ ಜೋಗಿ, ಸುಮಿತ್ ಬಿ.ಆಚಾರ್ಯ, ವಿ.ರವಿರಾಜ ಮೂಲ್ಯ, ಅಭಿನ್ ರೈ, ತೇಜಾಕ್ಷ, ರವಿಸಂಜಯ್ ಜಿ.ಎಸ್, ಶಿವಪ್ರಸಾದ್ ತುಂಬೆ,

ಅಬ್ದುಲ್‌ ರಹಿಮಾನ್‌ ಕೊಲೆ ಆರೋಪಿಗಳ ವಿರುದ್ಧ ಕೋಕಾ ಅನ್ವಯ Read More »

ಹೆಚ್ಚು ಲಾಭ ಗಳಿಸುವ ಹೂಡಿಕೆ ನಂಬಿ 42.50 ಲ.ರೂ. ಕಳೆದುಕೊಂಡ ವ್ಯಕ್ತಿ

ವಾಟ್ಸ್‌ಆ್ಯಪ್‌ ಲಿಂಕ್‌ ಕಳುಹಿಸಿ ವಂಚನೆ ಮಂಗಳೂರು: ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸುವ ಲಿಂಕ್‌ ನಂಬಿ ವ್ಯಕ್ತಿಯೊಬ್ಬರು ಬರೋಬ್ಬರಿ 42.50 ಲಕ್ಷ ರೂ. ಕಳೆದುಕೊಂಡಿದ್ದಾರೆ. ಅಪರಿಚಿತ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ಗೆ ಬಂದ ಲಿಂಕ್ ಕ್ಲಿಕ್ ಮಾಡಿ 42.50 ಲಕ್ಷ ರೂ. ಕಳೆದುಕೊಂಡ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜು.13ರಂದು ಪ್ರಿಯಾ ಅಗರ್ವಾಲ್ ಎಂಬ ಹೆಸರಿನ ಅಪರಿಚಿತ ವ್ಯಕ್ತಿಯು ಹೂಡಿಕೆ ಬಗ್ಗೆ ಮಾಹಿತಿ ಇರುವ ಲಿಂಕ್ ತನಗೆ ಕಳುಹಿಸಿದ್ದರು. ಅದನ್ನು ಕ್ಲಿಕ್ ಮಾಡಿ ನೋಡಿದ ಬಳಿಕ

ಹೆಚ್ಚು ಲಾಭ ಗಳಿಸುವ ಹೂಡಿಕೆ ನಂಬಿ 42.50 ಲ.ರೂ. ಕಳೆದುಕೊಂಡ ವ್ಯಕ್ತಿ Read More »

ಬೆಳಗಾವಿಯಲ್ಲಿ ಐ ಲವ್‌ ಮೊಹಮ್ಮದ್‌ ವಿವಾದ : ಕಲ್ಲು ತೂರಾಟ

ಕೋಮು ಸಂಘರ್ಷಕ್ಕೆ ತಿರುಗಿದ ಉರೂಸ್‌ ಮೆರವಣಿಗೆ ಬೆಂಗಳೂರು : ಬೆಳಗಾವಿಯಲ್ಲಿ ಶುಕ್ರವಾರ ನಡೆದ ಉರೂಸ್ ಮೆರವಣಿಗೆ ಹಿಂದೂ-ಮುಸ್ಲಿಮರ ನಡುವೆ ಜಟಾಪಟಿಗೆ ಕಾರಣವಾಗಿದೆ. ಭಾರಿ ಕಲ್ಲು ತೂರಾಟ ನಡೆದಿದ್ದು, ಅಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿಯ ಖಡೇಬಜಾರ್‌ನ ಖಡಕ್‌ ಗಲ್ಲಿಯಲ್ಲಿ ಶುಕ್ರವಾರ ರಾತ್ರಿ ಕಲ್ಲು ತೂರಾಟ ನಡೆದಿದೆ. ಪ್ರತಿವರ್ಷದಂತೆ ಈ ವರ್ಷವೂ ಮಾಬುಸುಬಾನಿ ದರ್ಗಾ ಉರೂಸ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಖಡಕ್‌ ಗಲ್ಲಿ ಮೂಲಕ ಮೆರವಣಿಗೆ ಸಾಗಿದೆ. ಕೆಲ

ಬೆಳಗಾವಿಯಲ್ಲಿ ಐ ಲವ್‌ ಮೊಹಮ್ಮದ್‌ ವಿವಾದ : ಕಲ್ಲು ತೂರಾಟ Read More »

ಕತ್ತು ಹಿಸುಕಿ ಮಗಳನ್ನೇ ಕೊಂದ ತಾಯಿ

ಕಾರ್ಕಳ : ಮಗಳನ್ನೇ ತಾಯಿ ಕತ್ತು ಹಿಸುಕಿ ಹತ್ಯೆಗೈದಿರುವ ಘಟನೆ ಕಾರ್ಕಳದ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ವರದಿಯಾಗಿದೆ. ಮೃತಳನ್ನು 17 ವರ್ಷದ ಶಿಫನಾಜ್‌ ಎಂದು ಗುರುತಿಸಲಾಗಿದೆ. ಸೆ. 20ರಂದು ಶಿಫನಾಜ್‌ ತನ್ನ ಗೆಳೆಯನನ್ನು ಭೇಟಿಯಾಗಲು ಉಡುಪಿಗೆ ಹೋಗಿ ಬರುವುದಾಗಿ ತಾಯಿಯಲ್ಲಿ ಹೇಳಿದ್ದಾಳೆ. ಅದಕ್ಕೆ ತಾಯಿ ಗುಲ್ಜಾರ್‌ ಬಾನು (45) ನಿರಾಕರಿಸಿದ್ದಾರೆ. ಇದರಿಂದ ತಾಯಿ ಮತ್ತು ಮಗಳ ನಡುವೆ ಜಗಳ ನಡೆದು ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಕತ್ತು ಹಿಸುಕಿ ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. ಶಿಫನಾಜ್‌ ಸೆ. 20ರಂದು

ಕತ್ತು ಹಿಸುಕಿ ಮಗಳನ್ನೇ ಕೊಂದ ತಾಯಿ Read More »

ಧರ್ಮಸ್ಥಳ ಪ್ರಕರಣ : ಯೂಟ್ಯೂಬರ್‌ಗಳಿಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್‌ ಜಾರಿ

ಸಮೀರ್‌ ಎಂಡಿ ಸಹಿತ ಯೂಟ್ಯೂಬರ್‌ಗಳಿಗೆ ಮತ್ತೆ ಸಂಕಷ್ಟ ಧರ್ಮಸ್ಥಳ : ಧರ್ಮಸ್ಥಳ ಪ್ರಕರಣದ ಬೇಕಾಬಿಟ್ಟಿ ವೀಡಿಯೋಗಳನ್ನು ಮಾಡಿ ಹರಿಬಿಟ್ಟಿರುವ ಯೂಟ್ಯೂಬರ್‌ಗಳಿಗೆ ಮತ್ತೆರ ಸಂಕಷ್ಟ ಎದುರಾಗಿದೆ. ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್‌ಗಳಿಗೆ ಮತ್ತೊಮ್ಮೆ ನೋಟಿಸ್ ಜಾರಿಗೊಳಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಈ ಬೆಳವಣಿಗೆಯಿಂದ ಯೂಟ್ಯೂಬರ್‌ಗಳ ಸಂಕಷ್ಟ ಮುಗಿಯುವ ಲಕ್ಷಣಗಳು ಸದ್ಯಕ್ಕೆ ಕಾಣಿಸುತ್ತಿಲ್ಲ. ವಿವಾದಿತ ಯೂಟ್ಯೂಬರ್ ಸಮೀರ್ ಎಂ.ಡಿ ಸೇರಿದಂತೆ ಐದಕ್ಕೂ ಹೆಚ್ಚು ಯೂಟ್ಯೂಬರ್‌ಗಳಿಗೆ ನೋಟಿಸ್ ಹೋಗಿದ್ದು, ಅವರು ಬೆಳ್ತಂಗಡಿ

ಧರ್ಮಸ್ಥಳ ಪ್ರಕರಣ : ಯೂಟ್ಯೂಬರ್‌ಗಳಿಗೆ ಎಸ್‌ಐಟಿಯಿಂದ ಮತ್ತೆ ನೋಟಿಸ್‌ ಜಾರಿ Read More »

ಗಾಜಾದ ಮೇಲೆ ಇಸ್ರೇಲ್‌ ಭೀಕರ ದಾಳಿ : 57 ಮಂದಿ ಸಾವು

ಟ್ರಂಪ್‌ 20 ಅಂಶ ಶಾಂತಿ ಸಂಧಾನ ನಡೆಯುತ್ತಿರುವಾಗಲೇ ದಾಳಿ ಟೆಲ್‌ ಅವೀವ್‌ : ಕಳೆದ ಸುಮಾರು ಎರಡು ವರ್ಷದಿಂದ ನಡೆಯುತ್ತಿರುವ ಯುದ್ಧವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ 20 ಅಂಶದ ಸೂತ್ರದೊಂದಿಗೆ ಪ್ರಯತ್ನಿಸುತ್ತಿರುವಾಗಲೇ ಇಸ್ರೇಲ್ ಗಾಜಾ ಮೇಲೆ ವೈಮಾನಿಕ ದಾಳಿ ನಡೆಸಿದೆ. ಗಾಜಾಪಟ್ಟಿಯಲ್ಲಿ ಇಸ್ರೇಲಿ ವೈಮಾನಿಕ ದಾಳಿ ಮತ್ತು ಗುಂಡಿನ ದಾಳಿಯಲ್ಲಿ ಕನಿಷ್ಠ 57 ಪ್ಯಾಲೆಸ್ತೀನಿಯನ್ನರು ಸಾವನ್ನಪ್ಪಿದ್ದಾರೆ. ದಕ್ಷಿಣ ಗಾಜಾದಲ್ಲಿ ಇಸ್ರೇಲಿ ಗುಂಡಿನ ದಾಳಿಯಲ್ಲಿ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ 14 ಜನರು ಇಸ್ರೇಲಿ

ಗಾಜಾದ ಮೇಲೆ ಇಸ್ರೇಲ್‌ ಭೀಕರ ದಾಳಿ : 57 ಮಂದಿ ಸಾವು Read More »

ಬಂಟ್ವಾಳ : ಗೋ ಹತ್ಯೆ ಮಾಡಿದ ಆರೋಪಿಯ ಮನೆ ಮುಟ್ಟುಗೋಲು

ಅಕ್ರಮ ಕಸಾಯಿಖಾನೆ ಪ್ರಕರಣದಲ್ಲಿ ಮನೆಯನ್ನು ಜಪ್ತಿ ಮಾಡಿದ ಅಧಿಕಾರಿಗಳು ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ ಸಮೀಪದ ಪಾಡಿ ಎಂಬಲ್ಲಿ ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ದ.ಕ. ಜಿಲ್ಲೆಯಲ್ಲಿ ಹೀಗೆ ಮನೆ/ಕಸಾಯಿಖಾನೆ ಮುಟ್ಟುಗೋಲು ಹಾಕಿಕೊಂಡ ಮೊಪದಲ ಪ್ರಕರಣ ಇದು ಎನ್ನಲಾಗಿದೆ. ಪುದು ಗ್ರಾಮದ ಪಾಡಿ ನಿವಾಸಿ ಹಸನಬ್ಬ ಎಂಬಾತನಿಗೆ ಸೇರಿದ ಮನೆಯನ್ನು ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಜಪ್ತಿ ಮಾಡಿ ಸರ್ಕಾದದ ವಶಕ್ಕೆ ಪಡೆಯಲಾಗಿದೆ. ಹಸನಬ್ಬ

ಬಂಟ್ವಾಳ : ಗೋ ಹತ್ಯೆ ಮಾಡಿದ ಆರೋಪಿಯ ಮನೆ ಮುಟ್ಟುಗೋಲು Read More »

ಕಾರಿನಲ್ಲಿ ಡ್ರಗ್ಸ್‌ ಸಾಗಾಟ : ಆರೋಪಿ ಸೆರೆ

ಪುತ್ತೂರು : ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಮಾದಕ ದ್ರವ್ಯಗಳನ್ನು ಸೇವಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಪ್ಪಿನಂಗಡಿಯ ಮಠ ಹಿರ್ತಡ್ಕ ನಿವಾಸಿ ರಜಾಕ್ (43) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 30ರಂದು ಉಪ್ಪಿನಂಗಡಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಅವಿನಾಶ್ ಎಚ್ ಮತ್ತು ಅವರ ತಂಡ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರನ್ನು ನಿಲ್ಲಿಸಲು ಸೂಚಿಸಿದಾಗ ಚಾಲಕ ರಜಾಕ್ ಸ್ವಲ್ಪ ಮುಂದೆ ವಾಹನ ಚಲಾಯಿಸಿ ಕಾರು ನಿಲ್ಲಿಸಿ ಓಡಿ ಪರಾರಿಯಾಗಲು ಪ್ರಯತ್ನಿಸಿದ್ದ. ಪೊಲೀಸರು ಆತನನ್ನು

ಕಾರಿನಲ್ಲಿ ಡ್ರಗ್ಸ್‌ ಸಾಗಾಟ : ಆರೋಪಿ ಸೆರೆ Read More »

error: Content is protected !!
Scroll to Top