ಅಪರಾಧ

ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್‌

ರಾಶಿ ರಾಶಿ ಶವಗಳನ್ನು ಹೂತು ಹಾಕಿದ್ದೇನೆ ಎಂದು ತಿಮರೋಡಿಗೆ ವಿವರಿಸಿದ ಚಿನ್ನಯ್ಯ ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಪ್ರಸಕ್ತ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಡುವಿನ ಭೇಟಿಯ ಹಳೆಯ ಒಂದು ವಿಡಿಯೋ ಶುಕ್ರವಾರ ವೈರಲ್‌ ಆದ ಬಳಿಕ ಈಗ 2 ಮತ್ತು 3ನೇ ವಿಡಿಯೋ ಶನಿವಾರ ಹೊರಗೆ ಬಂದು ವೈರಲ್‌ ಆಗಿದೆ. ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು […]

ತಿಮರೋಡಿ-ಚಿನ್ನಯ್ಯ ಭೇಟಿಯ ಇನ್ನೆರಡು ವಿಡಿಯೋ ವೈರಲ್‌ Read More »

ಅಡಿಕೆ ಕಳ್ಳತನ ಮಾಡಿದ ಆರೋಪಿಗಳ ಬಂಧನ

ಸುಳ್ಯ: ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಾವರ ಪೇಟೆಯಲ್ಲಿ ನಡೆದಿದೆ.ಬಂಧಿತ ಆರೋಪಿಗಳನ್ನು ಮಂಡೆಕೋಲು ಗ್ರಾಮ ಸುಳ್ಯ ತಾಲೂಕು ಸುಪ್ರಿತ್ ಕೆ(22) ಹಾಗೂ ಜಾಲ್ಕೂರು ಗ್ರಾಮ ಸುಳ್ಯ ತಾಲೂಕು ಮಹಮ್ಮದ್ ಸಿನಾನ್21) ಎಂದು ಗುರುತಿಸಲಾಗಿದೆ. ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಞಾವರ ಪೇಟೆಯಲ್ಲಿರುವ ದಿನಸಿ ಅಂಗಡಿ ಮಾಲಕಮಹಮ್ಮದ್ ರಫೀಕ್ ಎಸ್ ಡಿ ರವರ ಬಾಬ್ತು ಅಡಿಕೆ ಸಂಗ್ರಹಿಸುವ ಗೋಡಾನ್ನಿಂದ 12.09.2025ರಂದು ರಾತ್ರಿ ಅಡಿಕೆಯನ್ನು ಯಾರೋ ಕಳ್ಳರು ಕಳ್ಳತನ

ಅಡಿಕೆ ಕಳ್ಳತನ ಮಾಡಿದ ಆರೋಪಿಗಳ ಬಂಧನ Read More »

ಕೆಎಸ್‌ಆರ್‌ಟಿಸಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ

ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಎನ್‌ಸಿ ರಸ್ತೆಯ ಬಳಿ, ಕೆಎಸ್‌ಆರ್‌ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತನನ್ನು ಬೆಳ್ತಂಗಡಿ ತಾಲೂಕಿನ ಬಜಿರೆ ಕ್ರಾಸ್ ಕಟ್ಟೆ ನಿವಾಸಿ ರಾಜೇಶ್ (36) ಎಂದು ಗುರುತಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಧರ್ಮಸ್ಥಳದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ವಗ್ಗದಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ರಾಜೇಶ್ ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ,

ಕೆಎಸ್‌ಆರ್‌ಟಿಸಿ ಬಸ್ ಗೆ ದ್ವಿಚಕ್ರ ವಾಹನ ಡಿಕ್ಕಿ Read More »

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಸಂದೇಶ : ತಮಿಳುನಾಡಿನಿಂದ ಆರೋಪಿಯನ್ನು ಬಂಧಿಸಿದ ಪೊಲೀಸರು

ಮಂಗಳೂರು: ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿರುವ ಆರೋಪದಲ್ಲಿ ಯುವಕನೋರ್ವನನ್ನು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸರು ತಮಿಳುನಾಡಿನಿಂದ ಬಂಧಿಸಿ ಕರೆತಂದಿದ್ದಾರೆ. ಮಲವಂತಿಗೆಯ ಕಿಲ್ಲೂರು ಮನೆ ನಿವಾಸಿ ಮುಹಮ್ಮದ್ ಕೈಫ್(22) ಬಂಧಿತ ಆರೋಪಿ. Karavali_tigers ಎಂಬ Instagram ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಪೋಸ್ಟ್ ಆರೋಪದಲ್ಲಿ ಕೈಫ್ ವಿರುದ್ಧ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಜುಲೈ 19ರಂದು ಪ್ರಕರಣ ದಾಖಲಾಗಿತ್ತು. ತಾಂತ್ರಿಕ ಸಾಕ್ಷ್ಯಗಳ ಮುಖಾಂತರ ಪತ್ತೆ ಮಾಡಿ, ಆರೋಪಿ ತಮಿಳುನಾಡಿಲ್ಲಿರುವ ಬಗ್ಗೆ ಮಾಹಿತಿ

ಸೋಷಿಯಲ್‌ ಮೀಡಿಯಾದಲ್ಲಿ ಪ್ರಚೋದನಕಾರಿ ಸಂದೇಶ : ತಮಿಳುನಾಡಿನಿಂದ ಆರೋಪಿಯನ್ನು ಬಂಧಿಸಿದ ಪೊಲೀಸರು Read More »

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಗೆ ನೊಟೀಸ್ ಹಚ್ಚಿದ ಪೊಲೀಸರು

ಬೆಳ್ತಂಗಡಿ: ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳನ್ನು ಇರಿಸಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಪೊಲೀಸರು ನೊಟೀಸ್ ಹಚ್ಚಿ ಬಂದಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಆರೋಪಿ ಚಿನ್ನಯ್ಯ‌ನಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ತಿಮರೋಡಿಯ ಮನೆಗೆ SIT ಅಧಿಕಾರಿಗಳು ದಾಳಿ ನಡೆಸಿದ್ದರು. ಈ‌ವೇಳೆ ಅವರ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿತ್ತು. ಈ‌ ಪ್ರಕರಣವನ್ನು SIT ಪೊಲೀಸರು ಬೆಳ್ತಂಗಡಿ ಪೊಲೀಸರಿಗೆ ವರ್ಗಾವಣೆ ಮಾಡಿದ್ದರು. ಅದರಂತೆ ತಿಮರೋಡಿ ಮನೆಗೆ ಮಹಜರು ನಡೆಸುವ ಸಲುವಾಗಿ ಸೆ. 18 ರಂದು ಪೊಲೀಸರು

ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಲ್ಲಿ ವಿಚಾರಣೆಗೆ ಹಾಜರಾಗಲು ತಿಮರೋಡಿ ಮನೆಗೆ ನೊಟೀಸ್ ಹಚ್ಚಿದ ಪೊಲೀಸರು Read More »

ಸಿಎಂ ‌ಸಿದ್ದರಾಮಯ್ಯರನ್ನು ನಿಂದಿಸಿ ಪೋಸ್ಟ್: ಮಾಜಿ ಯೋಧ ಅರೆಸ್ಟ್

ಹಾಸನ: ಸಿಎಂ ‌ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿದ ಆರೋಪದಡಿ ಸಕಲೇಶಪುರದ ನಿವೃತ್ತ ಯೋಧ ವಸಂತ ಕುಮಾರ್ (40) ಎಂಬವರನ್ನು ಸಿಸಿಬಿ ‌ಸೈಬರ್ ಪೊಲೀಸರು ಬಂಧಿಸಿದ್ದಾರೆ. ಸೇನಾ ನಿವೃತ್ತಿಯ ಬಳಿಕ ವಸಂತ ಕುಮಾರ್ ಅವರು ಸ್ವಗ್ರಾಮದಲ್ಲೇ ಕೃಷಿ ಕಾರ್ಯಗಳನ್ನು ಮಾಡಿಕೊಂಡಿದ್ದರು. ಸಿ ಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕನ್ನಡ ಬರುತ್ತದೆಯೇ? ಎಂದು ಪ್ರಶ್ನೆ ಮಾಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಹನುಮ ಭಕ್ತ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ ವಸಂತ್ ಕುಮಾರ್ ಅವರು

ಸಿಎಂ ‌ಸಿದ್ದರಾಮಯ್ಯರನ್ನು ನಿಂದಿಸಿ ಪೋಸ್ಟ್: ಮಾಜಿ ಯೋಧ ಅರೆಸ್ಟ್ Read More »

ಕಮಲಶಿಲೆಯ ಉದ್ಯಮಿ ಆತ್ಮಹತ್ಯೆ

ಉಡುಪಿ: ಕುಂದಾಪುರ ಸಮೀಪದ ಕಮಲಶಿಲೆ ಗ್ರಾಮದ ಬರೇಗುಂಡಿ ಎಂಬಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಸಿದ್ದಾಪುರದಲ್ಲಿರುವ ಛಾತ್ರ ಎಂಟರ್‌ಪ್ರೈಸಸ್‌ನ ಮಾಲೀಕ ಉದಯ ಛಾತ್ರ (43) ಸೆಪ್ಟೆಂಬರ್ 17ರಂದು ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉದಯ ಛಾತ್ರ ಬೆಳಗ್ಗೆ ಕಮಲಶಿಲೆಯಲ್ಲಿ ನಡೆದ ಮಣಂಜೆ ಕೃಷಿ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಗೆ ಪೋಷಕರು ಮತ್ತು ಪತ್ನಿಯೊಂದಿಗೆ ಹಾಜರಾಗಿದ್ದರು. ಅವರನ್ನು ಸಭೆಯಲ್ಲಿ ಬಿಟ್ಟ ನಂತರ ಸಿದ್ದಾಪುರದಲ್ಲಿರುವ ತಮ್ಮ ವ್ಯಾಪಾರ ಸಂಸ್ಥೆ ಛಾತ್ರ ಎಂಟರ್‌ಪ್ರೈಸಸ್‌ಗೆ

ಕಮಲಶಿಲೆಯ ಉದ್ಯಮಿ ಆತ್ಮಹತ್ಯೆ Read More »

ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ : ಯೋಗ ಗುರು ಪೋಕ್ಸೊ ಅಡಿ ಬಂಧನ

ಯೋಗ ಕಲಿಯಲು ಬರುತ್ತಿದ್ದ ಮಹಿಳೆಯರ ಲೈಂಗಿಕ ಶೋಷಣೆ ನಡೆಸುತ್ತಿದ್ದ ಗುರು ಬೆಂಗಳೂರು: ತನ್ನ ಯೋಗ ಸೆಂಟರ್​ಗೆ ಯೋಗ ಕಲಿಯಲು ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿ ಎಂಬಾತನನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಹದಿನೇಳು ವರ್ಷದ ಬಾಲಕಿ ದೂರಿನ ಅನ್ವಯ ಪೋಕ್ಸೊ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ಅತ್ಯಾಚಾರ ಎಸಗಿರುವುದು ತನಿಖೆ ವೇಳೆ ಬಯಲಾಗಿದೆ. ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ

ಅಪ್ರಾಪ್ತ ವಯಸ್ಕಳ ಮೇಲೆ ಅತ್ಯಾಚಾರ : ಯೋಗ ಗುರು ಪೋಕ್ಸೊ ಅಡಿ ಬಂಧನ Read More »

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ತಿಮರೋಡಿ

ರಾಜಕೀಯ ಒತ್ತಡದಿಂದ ಸುಳ್ಳು ಪ್ರಕರಣಗಳು ದಾಖಲು ಎಂದು ಆರೋಪ ಮಂಗಳೂರು: ತನ್ನ ವಿರುದ್ಧ ಶಸ್ತ್ರಾಸ್ತ್ರ ಕಾಯಿದೆ ಅಡಿಯಲ್ಲಿ ಇನ್ನೊಂದು ಪ್ರಕರಣ ದಾಖಲಾದ ಬೆನ್ನಿಗೆ ಮಹೇಶ್‌ ಶೆಟ್ಟಿ ತಿಮರೋಡಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಬಾಗಿಲು ತಟ್ಟಿದ್ದಾರೆ. ಪೊಲೀಸರು ತಮ್ಮ ಮೇಲೆ ತೀವ್ರ ದೌರ್ಜನ್ಯ ಎಸಗುತ್ತಿದ್ದಾರೆ ಮತ್ತು ರಾಜಕೀಯ ಕಾರಣಗಳಿಗಾಗಿ ತಮ್ಮನ್ನು ಗುರಿಯಾಗಿಸುತ್ತಿದ್ದಾರೆ ಎಂದು ಆರೋಪಿಸಿ ಆಯೋಗಕ್ಕೆ ಅವರು ದೂರು ನೀಡಿದ್ದಾರೆ. ತಮ್ಮ ಮತ್ತು ತಮ್ಮ ಬೆಂಬಲಿಗರ ಮೇಲೆ ದಾಖಲಾಗಿರುವ ಎಲ್ಲ ಎಫ್‌ಐಆರ್‌ಗಳ ಬಗ್ಗೆ ಸ್ವತಂತ್ರ ತನಿಖೆ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ತಿಮರೋಡಿ Read More »

ಧರ್ಮಸ್ಥಳ ಪ್ರಕರಣ : ಪತ್ತೆಯಾದ ಮೂಳೆಗಳ ವೈಜ್ಞಾನಿಕ ಪರೀಕ್ಷೆ ಮೇಲೆ ನಿಂತಿದೆ ತನಿಖೆಯ ಗತಿ

ಬಂಗ್ಲೆಗುಡ್ಡೆ ಮಹಜರು ಬಳಿಕ ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡೆ ಕಾಡಿನಲ್ಲಿ ಕೆಲವು ತಲೆಬುರುಡೆ ಮತ್ತು ಮೂಳೆಗಳು ಸಿಗುವುದರೊಂದಿಗೆ ಧರ್ಮಸ್ಥಳ ಶವ ಶೋಧ ತನಿಖೆ ಹೊಸ ತಿರುವು ಪಡೆದುಕೊಂಡಿದೆ. ಸೌಜನ್ಯ ಮಾವ ವಿಠಲಗೌಡ ಬಂಗ್ಲೆಗುಡ್ಡದಲ್ಲಿ ರಾಶಿರಾಶಿ ಕಳೇಬರ ಸಿಗುತ್ತದೆ ಎಂದು ವೀಡಿಯೋ ಹೇಳಿಕೆ ನೀಡಿದ ಬಳಿಕ ಎಸ್‌ಐಟಿ ಇಲ್ಲಿ ನಿನ್ನೆ ಮಹಜರು ಪ್ರಕ್ರಿಯೆ ನಡೆಸಿದೆ. ನೇತ್ರಾವತಿ ನದಿ ದಡದಲ್ಲೆ ಇರುವ ಬಂಗ್ಲೆಗುಡ್ಡೆಯಲ್ಲಿ ತನಿಖಾಧಿಕಾರಿ ಜಿತೇಂದ್ರ ದಯಾಮ ನೇತೃತ್ವದಲ್ಲಿ ಸುಮಾರು 7 ಗಂಟೆಗಳ ಕಾಲ ನಿನ್ನೆ

ಧರ್ಮಸ್ಥಳ ಪ್ರಕರಣ : ಪತ್ತೆಯಾದ ಮೂಳೆಗಳ ವೈಜ್ಞಾನಿಕ ಪರೀಕ್ಷೆ ಮೇಲೆ ನಿಂತಿದೆ ತನಿಖೆಯ ಗತಿ Read More »

error: Content is protected !!
Scroll to Top