ಪ್ರತಿಷ್ಠಿತ ಕೂಜುಗೋಡು ಕಟ್ಟೆಮನೆ ಕುಟುಂಬಸ್ಥರಿಗೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಅವಕಾಶ ನೀಡಬೇಕು : ಡಿ.ಬಿ.ಬಾಲಕೃಷ್ಣ
ಸುಬ್ರಹ್ಮಣ್ಯ: ಪ್ರತಿಷ್ಠಿತ ಕೂಜುಗೋಡು ಕಟ್ಟೆಮನೆ ಕುಟುಂಬಸ್ಥರು ಹಾಗೂ ಇವರ ಪೂರ್ವಿಕರು ಶ್ರೀ ಕ್ಷೇತ್ರಕ್ಕೆ ಸಲ್ಲಿಸಿದ ದೇವತಾ ಹಾಗೂ ಸೇವಾ ಕೈಂಕರ್ಯವನ್ನು ಪರಿಗಣಿಸಿ ಕೂಜುಗೋಡು ಕಟ್ಟೆಮನೆ ಕುಟುಬಂಸ್ಥರಿಗೆ ಹಾಗೂ ಮಲೆಕುಡಿಯ ಜನಾಂಗದವರಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಮಂಡಳಿಯಲ್ಲಿ ಸದಸ್ಯತ್ವ ಕಲ್ಪಿಸಬೇಕು ಎಂದು ಆಗ್ರಹ ಕೇಳಿ ಬಂದಿದೆ. ಹಿಂದಿನಿಂದಲೂ ಯಾವುದೇ ಸರಕಾರವಿದ್ದಾಗಲೂ ಕೂಜುಗೋಡು ಕುಟುಂಬಸ್ಥರಿಗೆ ಸೇರಿದ ಒಬ್ಬರಿಗೆ ಹಾಗೂ ಮಲೆಕುಡಿಯ ಜನಾಂಗದ ಓರ್ವರಿಗೆ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯತ್ವವನ್ನು ನೀಡುತ್ತಾ ಬಂದಿದೆ. ಅದರಂತೆ ಈ ಭಾರಿಯೂ […]