ದಕ್ಷಿಣ ಕನ್ನಡ

ಪ್ರತಿಷ್ಠಿತ ಕೂಜುಗೋಡು ಕಟ್ಟೆಮನೆ ಕುಟುಂಬಸ್ಥರಿಗೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಅವಕಾಶ ನೀಡಬೇಕು : ಡಿ.ಬಿ.ಬಾಲಕೃಷ್ಣ

ಸುಬ್ರಹ್ಮಣ್ಯ: ಪ್ರತಿಷ್ಠಿತ ಕೂಜುಗೋಡು ಕಟ್ಟೆಮನೆ ಕುಟುಂಬಸ್ಥರು ಹಾಗೂ ಇವರ ಪೂರ್ವಿಕರು ಶ್ರೀ ಕ್ಷೇತ್ರಕ್ಕೆ ಸಲ್ಲಿಸಿದ ದೇವತಾ ಹಾಗೂ ಸೇವಾ ಕೈಂಕರ್ಯವನ್ನು ಪರಿಗಣಿಸಿ ಕೂಜುಗೋಡು ಕಟ್ಟೆಮನೆ ಕುಟುಬಂಸ್ಥರಿಗೆ ಹಾಗೂ ಮಲೆಕುಡಿಯ ಜನಾಂಗದವರಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಮಂಡಳಿಯಲ್ಲಿ ಸದಸ್ಯತ್ವ ಕಲ್ಪಿಸಬೇಕು ಎಂದು ಆಗ್ರಹ ಕೇಳಿ ಬಂದಿದೆ. ಹಿಂದಿನಿಂದಲೂ ಯಾವುದೇ ಸರಕಾರವಿದ್ದಾಗಲೂ ಕೂಜುಗೋಡು ಕುಟುಂಬಸ್ಥರಿಗೆ ಸೇರಿದ ಒಬ್ಬರಿಗೆ ಹಾಗೂ ಮಲೆಕುಡಿಯ ಜನಾಂಗದ ಓರ್ವರಿಗೆ ವ್ಯವಸ್ಥಾಪನಾ ಸಮಿತಿಯಲ್ಲಿ ಸದಸ್ಯತ್ವವನ್ನು ನೀಡುತ್ತಾ ಬಂದಿದೆ. ಅದರಂತೆ ಈ ಭಾರಿಯೂ […]

ಪ್ರತಿಷ್ಠಿತ ಕೂಜುಗೋಡು ಕಟ್ಟೆಮನೆ ಕುಟುಂಬಸ್ಥರಿಗೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಅವಕಾಶ ನೀಡಬೇಕು : ಡಿ.ಬಿ.ಬಾಲಕೃಷ್ಣ Read More »

ಕಾಡಿನ ಮಧ್ಯೆ ಪತ್ತೆಯಾದ ನಾಲ್ಕು ತಿಂಗಳ ಹೆಣ್ಣು ಮಗು | ಮಹಿಳೆಯಿಂದ  ಮಗು ರಕ್ಷಣೆ

ಉಜಿರೆ: ಬೆಳಾಲುವಿನ  ಕೊಡೋಳುಕೆರೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವೊಂದು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ಕೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ದ ದಾರಿಹೋಕ ಮಹಿಳೆಗೆ ಕೇಳಿದ್ದು, ತಕ್ಷಣ ಅವರು ಮಗುವನ್ನು ಕಂಡು ಸಂಬಂಧ ಪಟ್ಟವರಿಗೆ ತಿಳಿಸಿದ್ದಾರೆ. ಹಸುಕೂಸು ಆರೋಗ್ಯಕರವಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಧಾವಿಸಿದ್ದು,  ಮಹಿಳಾ ಮತ್ತು ಮಕ್ಕಳ ಇಲಾಖಾ ಬರುವಿಕೆಗಾಗಿ ಕಾಯುತ್ತಿದ್ದಾರೆ ಎಂದು ಬೆಳಾಲು ಗ್ರಾ.ಪಂ.

ಕಾಡಿನ ಮಧ್ಯೆ ಪತ್ತೆಯಾದ ನಾಲ್ಕು ತಿಂಗಳ ಹೆಣ್ಣು ಮಗು | ಮಹಿಳೆಯಿಂದ  ಮಗು ರಕ್ಷಣೆ Read More »

ಮಾ.25-26 : ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ

ಮುಗೇರು : ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಮಾ.25 ಬುಧವಾರದಂದು 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ ಬ್ರಹ್ಮಶ್ರೀ ನೀಲೇಶ್ವರ ಆರೋತ್‍ ಪದ್ಮನಾಭ ತಂತ್ರಿಗಳ ದಿವ್ಯ ನೇತೃತ್ವದಲ್ಲಿ ನಡೆಯಲಿದೆ. ಮಾ.18  ಮಂಗಳವಾರದಂದು ಬೆಳಗ್ಗೆ 10 ಗಂಟೆಗೆ ಗೊನೆ ಮುಹೂರ್ತ ನಡೆದಿದ್ದು, ಮಾ.25 ಮಂಗಳವಾರ ಬೆಳಗ್ಗೆ 6:30ಕ್ಕೆ ಅರ್ಧ ಏಕಾಹ ಭಜನೆ ಪ್ರಾರಂಭ, ಬೆಳಗ್ಗೆ 10 ಗಂಟೆಗೆ ಊರ ಭಕ್ತಾದಿಗಳಿಂದ ಹೊರೆಕಾಣಿಕೆ ಸಮರ್ಪಣೆ, ಬಳಿಕ ಭಕ್ತಾದಿಗಳಿಂದ ಸ್ವಚ್ಛತೆ ಹಾಗೂ ಅಲಂಕಾರ ಸೇವೆ, ಸಂಜೆ 5

ಮಾ.25-26 : ಮುಗೇರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ 11ನೇ ವರ್ಷದ ಪ್ರತಿಷ್ಠಾವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ ಹಾಗೂ ಭಜನಾ ಸಂಭ್ರಮ Read More »

ಮಾ. ೨೧ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್, ಎಸ್, ಎಲ್ ಸಿ ಪರೀಕ್ಷೆಗೆ ಚಾಲನೆ

ಸವಣೂರು : ವಿದ್ಯಾರಶ್ಮಿ ವಿದ್ಯಾಲಯದಲ್ಲಿ ನಿನ್ನೆ ಎಸ್, ಎಸ್, ಎಲ್ ಸಿ ಪರೀಕ್ಷೆಯ ಉದ್ಘಾಟನೆ ಕರ‍್ಯಕ್ರಮ ನಡೆಯಿತು. ಎಸ್, ಎಸ್, ಎಲ್ ಸಿ ಪರೀಕ್ಷಾ ಕೇಂದ್ರವಾದ ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಸಂಸ್ಥೆಯ ಸಂಚಾಲಕರಾದ ¸ವಣೂರು ಸೀತಾರಾಮ ರೈ ಕೆ ದೀಪ ಪ್ರಜ್ವಲನೆಯ ಮೂಲಕ ಪರೀಕ್ಷೆಗೆ ಚಾಲನೆ ನೀಡಿ ಮಕ್ಕಳಿಗೆ ಶುಭ ಹಾರೈಸಿದರು. ಈ ಸಂದಭ೯ದಲ್ಲಿ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲೆ ಶಶಿಕಲಾ ಎಸ್ ಆಳ್ವ, ಪರೀಕ್ಷಾ ಆಧಿಕ್ಷಕರಾದ ಪ್ರೇಮ್ ಕುಮಾರ್, ಉಪ ಆಧಿಕ್ಷಕರಾದ ಲಕ್ಷಿö್ಮ, ಪ್ರಶ್ನೆಪತ್ರಿಕೆ ಅಭಿರಕ್ಷಕರಾದ

ಮಾ. ೨೧ರಂದು ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಎಸ್, ಎಸ್, ಎಲ್ ಸಿ ಪರೀಕ್ಷೆಗೆ ಚಾಲನೆ Read More »

ರಸ್ತೆ ದಾಟುತ್ತಿದ್ದ ಮಹಿಳೆಗೆ ಅಪರಿಚಿತ ಕಾರು ಡಿಕ್ಕಿ : ಮಹಿಳೆ ಮೃತ್ಯು

ಬಿ.ಸಿ.ರೋಡ್  : ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಪರಂಗಿಪೇಟೆ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಅಪಘಾತವೆಸಗಿದ ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. 10 ನೇ ಮೈಲುಕಲ್ಲು ನಿವಾಸಿ ವಸಂತಿ ಶೆಟ್ಟಿ ಅಪಘಾತದಲ್ಲಿ ಮೃತಪಟ್ಟವರು. ಫರಂಗಿಪೇಟೆ ಸಮೀಪದ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ 10ನೇ ಮೈಲುಕಲ್ಲು ಎಂಬಲ್ಲಿ ಪಾದಚಾರಿ ಮಹಿಳೆಯೋರ್ವರಿಗೆ ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಮಹಿಳೆ ದೂರಕ್ಕೆ ಎಸೆಯಲ್ಪಟ್ಟ

ರಸ್ತೆ ದಾಟುತ್ತಿದ್ದ ಮಹಿಳೆಗೆ ಅಪರಿಚಿತ ಕಾರು ಡಿಕ್ಕಿ : ಮಹಿಳೆ ಮೃತ್ಯು Read More »

ಸುಳ್ಯದ ಯುವಕ ನಾಪತ್ತೆ | ಪತ್ತೆಹಚ್ಚುವಂತೆ ಬೆಳ್ಳಾರೆ ಪೊಲೀಸರಿಗೆ ದೂರು

ಸುಳ್ಯ: ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾದ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಳಿಲ ಗ್ರಾಮದ ದೇರಂಪಾಲು ಆರ್.ಸಿ.ಮನೆ ಶೀನಪ್ಪ ರೈಯವರ ಪುತ್ರ ಹರೀಶ್ ರೈ ಕಾಣೆಯಾದವರು. ಹರೀಶ್ ಸುಮಾರು 13 ವರ್ಷಗಳಿಂದ ಪುತ್ತೂರಿನ ಖಾಸಗಿ ಫೈನಾನ್ಸ್ ನಲ್ಲಿ ಸೀನಿಯರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದರು. ಅವರಿಗೆ ದೂರದ ಸಂಬಂಧಿ ಯುವತಿ ಜೊತೆ ವಿವಾಹ ನಿಶ್ಚಯವಾಗಿತ್ತು. ಹರೀಶ್ ಮಾ.20 ರಂದು ಬೆಳಿಗ್ಗೆ 7:30 ಗಂಟೆಗೆ ಯುವತಿಯ ಮನೆಗೆ ಹೋಗಿ ಬಳಿಕ ಕೆಲಸಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ಬೈಕ್‌ನಲ್ಲಿ

ಸುಳ್ಯದ ಯುವಕ ನಾಪತ್ತೆ | ಪತ್ತೆಹಚ್ಚುವಂತೆ ಬೆಳ್ಳಾರೆ ಪೊಲೀಸರಿಗೆ ದೂರು Read More »

ವಿಶ್ವವಿದ್ಯಾನಿಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ

ಕಾಣಿಯೂರು: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಬಹುಮಾನ ಪಡೆದಿದ್ದಾರೆ. ಕರಕುಶಲ ವಸ್ತುಗಳ ತಯಾರಿ ಸ್ಪರ್ಧೆಯಲ್ಲಿ  ದ್ವಿತೀಯ ಬಿಕಾಂನ ರಂಜನ್ ಕೆ.ಎಸ್., ಪ್ರಥಮ ಬಿಎ ಯ ರಶ್ಮಿ ಎಲ್. ಪ್ರಥಮ ಬಿ.ಎ. ಪ್ರಥಮ ಬಹುಮಾನ ಪಡೆದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಶಂಕರ್ ಭಟ್ ತಿಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕರು, ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.

ವಿಶ್ವವಿದ್ಯಾನಿಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ Read More »

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಅಳಿಕೆಯ  ಮುಳಿಯ ಆಶಕ್ತ ಕುಟುಂಬಕ್ಕೆ  ವಾತ್ಸಲ್ಯ  ಮನೆ ಹಸ್ತಾಂತರ

ಶ್ರೀಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ  ಟ್ರಸ್ಟ್ (ರಿ) ವಿಟ್ಲ  ಅಳಿಕೆ ಗ್ರಾಮದ ಮುಳಿಯ   ವಾತ್ಸಲ್ಯ ಮನೆ  ಹಸ್ತಾಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಪದ್ಮನಾಭ ಪೂಜಾರಿ ಮಾತನಾಡಿ, ಸಣ್ಣಗುತ್ತು  ಅವರು, ಜಾಗ ಹಾಗೂ ದಾಖಲೆ ಇದ್ದಾಗ ಮಾತ್ರ ಸರಕಾರದ ಸವಲತ್ತುಗಳನ್ನು ಪಡೆಯಬಹುದು. ಹಿಂದಿನ ಅವಧಿಯಲ್ಲಿ ಫಲಾನುಭವಿಗಳಿಗೆ ಪಂಚಾಯಿತಿಯಿಂದ 275 ಮನೆಯನ್ನು ವಿತರಿಸಲಾಗಿದೆ. ಗ್ರಾಮಕ್ಕೆ ಸರ್ಕಾರದ ಮನೆ ಬಂದರೂ  ಪಲಾನುಭವಿಗಳಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ದಾಖಲೆ ಪತ್ರ ಇರುವ ಫಲಾನುಭವಿಗಳಿಗೆ ಪಂಚಾಯಿತಿ ಹಾಗೂ ಯೋಜನೆ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಅಳಿಕೆಯ  ಮುಳಿಯ ಆಶಕ್ತ ಕುಟುಂಬಕ್ಕೆ  ವಾತ್ಸಲ್ಯ  ಮನೆ ಹಸ್ತಾಂತರ Read More »

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ  ಕೇಪು ವಲಯದ  ಮಾಣಿಲದಲ್ಲಿ  ಟೈಲರಿಂಗ್  ತರಬೇತಿ ಸಮಾರೋಪ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ವಿಟ್ಲ ತಾಲೂಕಿನ ಕೇಪು ವಲಯದ ಮಾಣಿಲ  ವ್ಯವಸಾಯ ಸೇವಾ ಸಹಕಾರ ಭವನದಲ್ಲಿ  ಕಳೆದ 3  ತಿಂಗಳಿನಿಂದ ಹೊಲಿಗೆ ತರಬೇತಿಯನ್ನು ಆರಂಭಿಸಿದ್ದು  ಈ ತರಬೇತಿಯಲ್ಲಿ 20 ಮಂದಿ ಸದಸ್ಯರು ಪ್ರಯೋಜನವನ್ನು ಪಡೆದಿದ್ದು, ಬೆರಿಪದವು   ಹೊಲಿಗೆ ಕೇಂದ್ರದ ಶಿಕ್ಷಕರಾದ ಸರೋಜಿನಿ ಇವರು ತರಬೇತಿಯನ್ನು ನೀಡಿರುತ್ತಾರೆ. ಈ ದಿನ ಹೊಲಿಗೆ ತರಬೇತಿಯ ಸಮಾರೋಪ ಕಾರ್ಯಕ್ರಮವು ಮಾಣಿಲ  ಒಕ್ಕೂಟದ ಅಧ್ಯಕ್ಷರಾದ ಕೃಷ್ಣ ಮೂಲ್ಯ  ಇವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು 

ಶ್ರೀ ಕ್ಷೇತ್ರ ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ  ಕೇಪು ವಲಯದ  ಮಾಣಿಲದಲ್ಲಿ  ಟೈಲರಿಂಗ್  ತರಬೇತಿ ಸಮಾರೋಪ ಸಮಾರಂಭ Read More »

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ದೂರು ದಾಖಲು

ಬೆಳ್ತಂಗಡಿ: ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೋರ್ವ ಅವಾಚ್ಯ ಶಬ್ದಗಳಿಂದ ನಿಂದಿಸಿ ಬ್ಯಾಗ್ ಎಳೆದು ತೊಂದರೆ ನೀಡಿರುವ ಕುರಿತು ವೇಣೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಡುಬಿದಿರೆಯ ಕಾಲೇಜೊಂದರ ವಿದ್ಯಾರ್ಥಿನಿಗೆ ಪರಿಚಯಸ್ಥ ವೇಣೂರು ಗ್ರಾಮದ ಶಿವಾಜಿನಗರ ಕಾಲೋನಿ ನಿವಾಸಿ ಆಸ್ಪಕ್ (27) ಎಂಬಾತ ತೊಂದರೆ ನೀಡಿದಾತ. ಬುಧವಾರ ಮೂಡುಬಿದ್ರೆಯಿಂದ ವೇಣೂರಿಗೆ ಬಸ್ಸಿನಲ್ಲಿ ಬರುವಾಗ ಆಕೆ ಕುಳಿತಿದ್ದ ಸೀಟಿನ ಬಳಿ ನಿಂತುಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬ್ಯಾಗ್ ಎಳೆದು ತೊಂದರೆ ನೀಡಿದ್ದಾನೆ ಎಂದು ಕುರಿತು ದೂರಿನಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ದೂರು ದಾಖಲು Read More »

error: Content is protected !!
Scroll to Top