ದಕ್ಷಿಣ ಕನ್ನಡ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಪೆರ್ನೆ ಶೌರ್ಯ ಘಟಕದಿಂದ ಕಡೇಶಿವಾಲಯ ದೇವಸ್ಥಾನದಲ್ಲಿ  ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ. ಕಡೇಶಿವಾಲಯ, ಮತ್ತು  ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ, ಕಡೇಶಿವಾಲಯ ಚಿಂತಾಮಣಿ ಶ್ರೀಲಕ್ಷ್ಮೀ ನರಸಿಂಹಸ್ವಾಮಿ. ದೇವಸ್ಥಾನದಲ್ಲಿ  ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಡೇಶಿವಾಲಯ ಜಾತ್ರೋತ್ಸವದ ಸಂದರ್ಭದ  ಪ್ರಯುಕ್ತ ಏ.13 ಭಾನುವಾರದಂದು  ಸ್ವಚ್ಛತಾ ಕಾರ್ಯಕ್ರಮ ಸೇವೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ  ದೇವಸ್ಥಾನದ  ಆಡಳಿತ  ಸಮಿತಿಯವರು, ವಲಯ ಮೇಲ್ವಿಚಾರಕರು, ಸಂಯೋಜಕರು, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷರು  ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ ಪೆರ್ನೆ ಶೌರ್ಯ ಘಟಕದಿಂದ ಕಡೇಶಿವಾಲಯ ದೇವಸ್ಥಾನದಲ್ಲಿ  ಸ್ವಚ್ಛತಾ ಕಾರ್ಯಕ್ರಮ Read More »

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಆ್ಯಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ

ಮಂಗಳೂರು ವಿಶ್ವವಿದ್ಯಾಲಯದ ಉದ್ಯಮಾಡಳಿತ ವಿಭಾಗವು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ  ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿದರು. ಏಕ ವ್ಯಕ್ತಿ ಗಾಯನ ಸ್ಪರ್ಧೆಯಲ್ಲಿ  ಮಯೂರಿ ಎಂ ಜಿ   ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಆ್ಯಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ Read More »

ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭೃಗು ಶಾಪ ತಾಳಮದ್ದಳೆ

ಶ್ರೀ ದುರ್ಗಾಂಬಾ ಕಲಾ ಸಂಗಮ  ಶರವೂರು ವತಿಯಿಂದ ಶನಿವಾರದಂದು  ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭೃಗು ಶಾಪ ತಾಳಮದ್ದಳೆ ನಡೆಯಿತು  ಭಾಗವತರಾಗಿ ಕುಸುಮಾಕರ ಆಚಾರ್ಯ ಹಳೆನೇರೆಂಕಿ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ, ದಿವಾಕರ ಆಚಾರ್ಯ ಹಳೆನೇರೆಂಕಿ(ದೇವೇಂದ್ರ), ಗುರುಪ್ರಸಾದ್ ಆಲಂಕಾರು(ಬೃಹಸ್ಪತಿ), ದಿವಾಕರ ಆಚಾರ್ಯ ಹಳೆನೇರೆಂಕಿ(ತಮಾಸುರ), ಜಯರಾಂ ಗೌಡ ಬಲ್ಯ(ಖ್ಯಾತಿ 1), ದಿವಾಕರ ಆಚಾರ್ಯ ಹಳೆನೇರೆಂಕಿ(ಖ್ಯಾತಿ 2), ರಾಘವೇಂದ್ರ ಭಟ್ ತೋಟಂತಿಲ(ವಿಷ್ಣು), ರಾಮ್ ಪ್ರಸಾದ್ ಆಲಂಕಾರು(ಭೃಗು), ಹರಿಶ್ಚಂದ್ರ ಗೌಡ ಕೋಡ್ಲ ಭಾಗವಹಿಸಿದ್ದರು. ಮಹಾಬಲ ರೈ ನಗ್ರಿ

ಭಕ್ತರ ಇಷ್ಟಾರ್ಥ ಸಿದ್ಧಿಗಾಗಿ ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭೃಗು ಶಾಪ ತಾಳಮದ್ದಳೆ Read More »

ಡಿವೈಡರ್ ಗೆ ಡಿಕ್ಕಿಹೊಡೆದ  ಬಸ್‍ | 13ಮಂದಿಗೆ ಗಂಭೀರ ಗಾಯ

ನೆಲ್ಯಾಡಿ: ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ಸೊಂದು ಡಿವೈಡರ್‌ಗೆ ಡಿಕ್ಕಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆ ಹೆಚ್ ಪಿ ಪೆಟ್ರೋಲ್ ಪಂಪ್‌ನ ಮುಂಭಾಗದಲ್ಲಿ ನಿನ್ನೆ ರಾತ್ರಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ದಂಪತಿ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು 10 ಮಂದಿಗೆ ಸಣ್ಣಪುಟ್ಟ ಗಾಯವಾಗಿರುವುದಾಗಿ ವರದಿಯಾಗಿದೆ. ಕುಂದಾಪುರ ಡಿಪೋಗೆ ಸೇರಿದ ಕೆಎಸ್‌ಆರ್ ಟಿಸಿ ಬಸ್ಸು ಇದಾಗಿದ್ದು, ಬಸ್ಸಿನ ಟಯರ್ ಸ್ಪೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಡಿವೈಡರ್‌ಗೆ ಡಿಕ್ಕಿಯಾಗಿದೆ

ಡಿವೈಡರ್ ಗೆ ಡಿಕ್ಕಿಹೊಡೆದ  ಬಸ್‍ | 13ಮಂದಿಗೆ ಗಂಭೀರ ಗಾಯ Read More »

ಪೂರ್ವದ್ವೇಷದಿಂದ ಆಟೋಚಾಲಕನ ಹತ್ಯೆ : ಆರೋಪಿ ಸೆರೆ

ಆರು ತಿಂಗಳ ಹಿಂದೆ ಆದ ಜಗಳದ ಸೇಡು ತೀರಿಸಿಕೊಳ್ಳಲು ಕೊಲೆ ಮಂಗಳೂರು: ಮೂಲ್ಕಿಯ ಆಟೋರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಕೊಲೆಗೆ ಪೂರ್ವ ದ್ವೇಷವೇ ಕಾರಣ ಎಂಬ ವಿಚಾರ ಆರೋಪಿಯ ವಿಚಾರಣೆಯಿಂದ ತಿಳಿದುಬಂದಿದೆ. ಮಂಗಳೂರಿನಲ್ಲಿ ರಿಕ್ಷಾ ಬಾಡಿಗೆ ಮಾಡುತ್ತಿದ್ದ ಮೂಲ್ಕಿಯ ಮುಹಮ್ಮದ್‌ ಶರೀಫ್‌ ಅವರನ್ನು ಕೇರಳ ಗಡಿಯ ಮಂಜೇಶ್ವರ ಸಮೀಪದ ಕುಂಜತ್ತೂರು ಪದವು ಎಂಬಲ್ಲಿಗೆ ಕೊಂಡೊಯ್ದು ಕೊಲೆ ಮಾಡಿ ಶವವನ್ನು ಬಾವಿಗೆ ಎಸೆದಿದ್ದ ಆರೋಪಿ ಅಭಿಷೇಕ್‌ ಶೆಟ್ಟಿ ಎಂಬಾತನನ್ನು ಮಂಗಳೂರು ಪೊಲೀಸರು ನಿನ್ನೆ ಬಂಧಿಸಿದ್ದಾರೆ.ಆರೋಪಿ ಅಭಿಷೇಕ್ ಶೆಟ್ಟಿ

ಪೂರ್ವದ್ವೇಷದಿಂದ ಆಟೋಚಾಲಕನ ಹತ್ಯೆ : ಆರೋಪಿ ಸೆರೆ Read More »

ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮುಕ್ವೆಯಲ್ಲಿ ಅಂಬೇಡ್ಕರ್ ಜಯಂತಿ

ಮುಕ್ವೆ : ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮುಕ್ವೆ ಇಲ್ಲಿ134ನೇ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಎಸ್ ಡಿಎಂಸಿ ಅಧ್ಯಕ್ಷರು,  ಸದಸ್ಯರು,ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಮಕ್ಕಳು ಭಾಗವಹಿಸಿದ್ದರು.

ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಮುಕ್ವೆಯಲ್ಲಿ ಅಂಬೇಡ್ಕರ್ ಜಯಂತಿ Read More »

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶ್ರೀಮಠಕ್ಕೆ ಕ್ಷಮೆಯಾಚಿಸುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು | ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು : ಡಿ.ಬಿ. ಬಾಲಕೃಷ್ಣ

ಬೆಳ್ತಂಗಡಿ: ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಕಟ್ಟಡ ಮತ್ತು ಸಭಾಭವನದ ಲೋಕಾರ್ಪಣಾ ಸಮಾರಂಭ ಏಪ್ರಿಲ್ 20 ಆದಿತ್ಯವಾರ ಬೆಳ್ತಂಗಡಿಯ ವಾಣಿ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಈಗಾಗಲೇ ಬಿಡುಗಡೆಗೊಂಡಿದೆ. ಆದರೆ ಬೆಳ್ತಂಗಡಿ ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದವರು ತಮ್ಮ ಸಂಘದ ಕಚೇರಿ ಹಾಗೂ ಸಭಾಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶೃಂಗೇರಿ ಮಠದ ಸ್ವಾಮೀಜಿಗಳನ್ನು ಕರೆದು ನಮ್ಮ ಮಠದ ಸ್ವಾಮೀಜಿಗಳನ್ನು ಉದ್ದೇಶಪೂರ್ವಕವಾಗಿಯೇ ಕರೆಯದೆ ಅವಮಾನಿಸಿದ್ದಾರೆ. ಮಾತ್ರವಲ್ಲದೆ ಎರಡು ಧಾರ್ಮಿಕ ಪೀಠಗಳ ನಡುವೆ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶ್ರೀಮಠಕ್ಕೆ ಕ್ಷಮೆಯಾಚಿಸುವ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು | ಇಲ್ಲವಾದರೆ ತೀವ್ರ ಹೋರಾಟ ನಡೆಸಲಾಗುವುದು : ಡಿ.ಬಿ. ಬಾಲಕೃಷ್ಣ Read More »

ಲೋಕಕಲ್ಯಾಣಾರ್ಥವಾಗಿ ಬಾರ್ಯ ದೇವಸ್ಥಾನದಲ್ಲಿ ಮಹಾವಿಷ್ಣು ಯಾಗ

ಭಗವಂತನನ್ನು  ನಾಮಸಂಕೀರ್ತನೆ ಮೂಲಕ ಸುಲಭವಾಗಿ ಒಲಿಸಿಕೊಳ್ಳಬಹುದು. ವಿಷ್ಣು ಸಹಸ್ರನಾಮವನ್ನು ಶ್ರದ್ಧಾಭಕ್ತಿಯಿಂದ ಪಠಿಸುವುದರಿಂದ ದುರಿತಗಳು ನಿವಾರಣೆಯಾಗಿ ಶ್ರೇಯಸ್ಸನ್ನು ಪಡೆಯಲು ಸಾಧ್ಯ. ಬಾರ್ಯದಂತಹ ಗ್ರಾಮದಲ್ಲಿ ಶ್ರದ್ಧಾಭಕ್ತಿಯಿಂದ ಭಕ್ತರು ಯಾಗದಲ್ಲಿ ಪಾಲ್ಗೊಂಡಿರುವುದು ಶುಭಸಂಕೇತವೆಂದು ಬ್ರಹ್ಮಶ್ರೀ ಕೆಮ್ಮಿoಜೆ ಕಾರ್ತಿಕ ತಂತ್ರಿಗಳು ತಿಳಿಸಿದರು. ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಲೋಕಕಲ್ಯಾಣರ್ಥವಾಗಿ ಜರಗಿದ ಶ್ರೀ ಮಹಾವಿಷ್ಣುಯಾಗದ ಧಾರ್ಮಿಕ ಸಭೆಯಲ್ಲಿ ಯಾಗದ ಫಲಶ್ರುತಿಯ ಬಗ್ಗೆ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾಗಿದ್ದ  ಪುತ್ತೂರಿನ ದ್ವಾರಕಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ  ಗೋಪಾಲಕೃಷ್ಣ ಭಟ್ ಆಡಳಿತ ಟ್ರಸ್ಟ್ ಮತ್ತು ಭಕ್ತಾಭಿಮಾನಿಗಳು

ಲೋಕಕಲ್ಯಾಣಾರ್ಥವಾಗಿ ಬಾರ್ಯ ದೇವಸ್ಥಾನದಲ್ಲಿ ಮಹಾವಿಷ್ಣು ಯಾಗ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  1001ನೇ ವಾರದ ಸಭೆ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ

ಅಡ್ಕ ಸ್ಥಳ ಶ್ರೀ ರಾಮ್ ಭಟ್ ರವರ ಮನೆಯ ಆವರಣದಲ್ಲಿ ಭಾಗ್ಯಶ್ರೀ ಸಂಘದ 1001ನೇ ವಾರದ ಸಭೆ ಹಾಗೂ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟನೆಯನ್ನು ಒಕ್ಕೂಟದ ಅಧ್ಯಕ್ಷರಾದ ಪುಷ್ಪಾಕರ ರೈ ಹಾಗೂ ಯೋಜನಾಧಿಕಾರಿ ರಮೇಶ್ ರವರು ವಿಧಿವತ್ತಾಗಿ ಏ.11 ರಂದು ಉದ್ಘಾಟಿಸಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಸಂಘದ ಸದಸ್ಯರಾದ ರೇವತಿಯವರು ತಮ್ಮ ಸಂಘದ ಸಾಧನೆಯನ್ನು ವಿವರಿಸುತ್ತಾ ಸದ್ರಿ ಸಂಘ 18.05 2006 ರಂದು ಆರಂಭಗೊಂಡು ಈ ತನಕ ಸಂಘದ ಉಳಿತಾಯ 179660 ಮಾಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ  1001ನೇ ವಾರದ ಸಭೆ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ Read More »

ಛಲದಂಕ ಚಕ್ರೇಶ್ವರ ತಾಳ ಮದ್ದಳೆ ಮತ್ತು ಸನ್ಮಾನ

ಶ್ರೀ ಉಮಾ ಮಹೇಶ್ವರ ಯಕ್ಷಕಲಾ ಇಷುದಿ ನಿಡ್ಲೆ ಸಂಯೋಜನೆಯಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ ಸಹಯೋಗದೊಂದಿಗೆ ಛಲದಂಕ ಚಕ್ರೇಶ್ವರ ತಾಳ ಮದ್ದಳೆ ಜರಗಿತು. ಭಾಗವತರಾಗಿ ಮಹೇಶ ಕನ್ಯಾಡಿ, ಶಾಲಿನಿ ಹೆಬ್ಬಾರ್ ಹಿಮ್ಮೇಳದಲ್ಲಿ ಮುರಾರಿ ಕಡoಬಳಿತ್ತಾಯ, ಶ್ರೀಪತಿಭಟ್ ಉಪ್ಪಿನಂಗಡಿ, ಅರ್ಥದಾರಿಗಳಾಗಿ ನಿಡ್ಲೆ ಈಶ್ವರ ಪ್ರಸಾದ್ ಪಿ.ವಿ. (ಕೌರವ), ರವಿ ಭಟ್ ನೆಲ್ಯಾಡಿ (ಭೀಮ-1),  ದಿವಾಕರ ಆಚಾರ್ಯ ಗೇರುಕಟ್ಟೆ (ಸಂಜಯ), ಹರೀಶ ಆಚಾರ್ಯ ಬಾರ್ಯ (ಅಶ್ವತ್ಥಾಮ), ಸುಬ್ರಹ್ಮಣ್ಯ ಭಟ್ಪೆರ್ವೋಡಿ (ಬೇಹಿನಚರ),

ಛಲದಂಕ ಚಕ್ರೇಶ್ವರ ತಾಳ ಮದ್ದಳೆ ಮತ್ತು ಸನ್ಮಾನ Read More »

error: Content is protected !!
Scroll to Top