ದಕ್ಷಿಣ ಕನ್ನಡ

ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿಯ ಮೃತ್ಯು

ಉಡುಪಿ: ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಾಗ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಂದು ಪರ್ಕಳದ ಗ್ಯಾಡ್ರನ್ ಎಂಬಲ್ಲಿ ನಡೆದಿದೆ. ಗುರುಪ್ರಸಾದ್ (49) ಮೃತ ದುರ್ದೈವಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಲು ಕೋಣೆಗೆ ಹೋಗಿದ್ದರು. ಈ ವೇಳೆ ಬೆಡ್ ಮೇಲೆ ಕುಳಿತು ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದಂತೆ ಕುಳಿತಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಯರ್ ಫೋನ್ ಹಾಕಿ ಮೊಬೈಲ್ ನೋಡುತ್ತಿದ್ದ ವ್ಯಕ್ತಿಯ ಮೃತ್ಯು Read More »

ಅಲ್ಯೂಮೀನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶ | ಕಾರ್ಮಿಕನೋರ್ವ ಮೃತ್ಯು..!

ಉಪ್ಪಿನಂಗಡಿ : ತೋಟದಲ್ಲಿ ಎಳನೀರನ್ನು ಕೀಳುತ್ತಿರುವಾಗ ಅಲ್ಯೂಮೀನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡಿದೆ. ಈ ವೇಳೆ  ತೋಟದ ಕಾರ್ಮಿಕ ದಾವಣಗೆರೆ ಮೂಲದ ವೀರಭದ್ರರವರು ಆಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಬುಧವಾರದಂದು ಬಜತ್ತೂರು ಗ್ರಾಮದ ಕುವೆಚ್ಚಾರ್ ನಲ್ಲಿ ನಡೆದಿದೆ. ಕುವೆಚ್ಚಾರ್ ತೋಟದಲ್ಲಿ ಕರ್ತವ್ಯ ನಿರ್ವಸುತ್ತಿದ್ದ ವೇಳೆ ತೋಟದಲ್ಲಿದ್ದ ತೆಂಗಿನ ಮರದಿಂದ ಸೀಯಾಳವೊಂದನ್ನು ಕೀಳಲೆಂದು ದೋಟಿ ಬಳಸಲು ಮುಂದಾದಾಗ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿ ದೋಟಿಗೆ ಸ್ಪರ್ಶವಾಗಿ ವೀರಭದ್ರ ವಿದ್ಯುತ್ ಸ್ಪರ್ಶಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ವೀರಭದ್ರ

ಅಲ್ಯೂಮೀನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶ | ಕಾರ್ಮಿಕನೋರ್ವ ಮೃತ್ಯು..! Read More »

ಪತಿ, ಅತ್ತೆ ನಾದಿನಿಯಿಂದ ದೈಹಿಕ, ಮಾನಸಿಕ ಹಿಂಸೆ | ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ

ಬೆಳ್ತಂಗಡಿ : ಪತ್ನಿಗೆ ಪತಿ ಹಾಗೂ ಅತ್ತೆ, ನಾದಿನಿಯ ನಿರಂತರ ಮಾನಸಿಕ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಎರ್ಮಾಳಪಳಿಕೆ ಎಂಬಲ್ಲಿ ನಡೆದಿದೆ. ಮಿತ್ತಬಾಗಿಲು ಜಿ.ನಗರ ನಿವಾಸಿ ಕೂಲಿ ಕಾರ್ಮಿಕ ಹಮೀದ್ ಎಂಬವರ ಪುತ್ರಿಯನ್ನು ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಎರ್ಮಾಳ್‌ಪಲ್ಕೆ ನಿವಾಸಿ ಫಾರೂಕ್ ಎಂಬಾತನಿಗೆ ಎರಡು ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಹಲವಾರು ಕನಸುಗಳನ್ನು ಹೊತ್ತು ಪತಿ ಮನೆ ಸೇರಿದ ಆಕೆಗೆ ಅಲ್ಲಿ ಪತಿಯ ನಿರಂತರ ಮಾನಸಿಕ ದೈಹಿಕ ಕಿರುಕುಳ, ಅತ್ತೆ

ಪತಿ, ಅತ್ತೆ ನಾದಿನಿಯಿಂದ ದೈಹಿಕ, ಮಾನಸಿಕ ಹಿಂಸೆ | ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ Read More »

ಬೆಳ್ತಂಗಡಿ ಮತ್ತು ಪುತ್ತೂರು ಮುಳಿಯದಲ್ಲಿ Gem Stone ಉತ್ಸವದ ಸಂಭ್ರಮ

ಬೆಳ್ತಂಗಡಿ : ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜ್ಯುವೆಲ್ಸ್ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ಪೆ.15 ರಿಂದ ಆರಂಭಗೊಂಡಿದ್ದು ಫೆ 28 ರವರೆಗೆ Gem stone ಉತ್ಸವ ನಡೆಯಲಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯದಲಿ 13 ದಿನಗಳ ಕಾಲ gem Stone ಉತ್ಸವದಲ್ಲಿ ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ಮಾಣಿಕ್ಯ, ಮುತ್ತು, ಹವಳ, ಪಚ್ಚೆ, ಪುಷ್ಯರಾಗ, ವಜ್ರ, ನೀಲ, ಗೋಮೇಧಿಕ ಮತ್ತು ವೈಢೂರ್ಯ ಗಳಾದ ನವರತ್ನ  ಆಭರಣಗಳ ಉತ್ಸವದ

ಬೆಳ್ತಂಗಡಿ ಮತ್ತು ಪುತ್ತೂರು ಮುಳಿಯದಲ್ಲಿ Gem Stone ಉತ್ಸವದ ಸಂಭ್ರಮ Read More »

ಲಾರಿ-ಬೈಕ್‍ ಡಿಕ್ಕಿ | ಬೈಕ್‍ ಸವಾರ ಗಂಭೀರ ಗಾಯ

ಕಾರ್ಕಳ : ಅಜೆಕ್ಕಾರು-ಕೈಕಂಬ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಬೈಕ್‍ ಸವಾರನಿಗೆ ಗಂಭೀರಗಾಯವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ 6.30ರ ವೇಳೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರು ರಸ್ತೆಗೆಸೆಯಲ್ಪಟ್ಟು ಇಬ್ಬರ ಕೈ ಹಾಗೂ ಕಾಲುಗಳ ಮೂಳೆ ಮುರಿತಕ್ಕೊಳಗಾಗಿ ಕೋಮಾಸ್ಥಿತಿಯಲ್ಲಿ ಇದ್ದರು. ಬಿಹಾರ ಮೂಲದವರಾಗಿದ್ದು, ಅವರಲ್ಲಿ ಓರ್ವನ ಹೆಸರು ಆರಿಫ್ (20) ಎಂದು ತಿಳಿಬಂದಿದೆ.   ಈತನನ್ನು  ಅಂಬುಲೆನ್ಸ್ ಮೂಲಕ

ಲಾರಿ-ಬೈಕ್‍ ಡಿಕ್ಕಿ | ಬೈಕ್‍ ಸವಾರ ಗಂಭೀರ ಗಾಯ Read More »

ನೇಣು ಬಿಗಿದು ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: 7 ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ತಣ್ಣೀರುವಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವಿದ್ಯಾರ್ಥಿ. ನಿನ್ನೆ ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ಇನ್ನಷ್ಟೇ ತಿಳಿಯಬೇಕಿದೆ.

ನೇಣು ಬಿಗಿದು ಬಾಲಕ ಆತ್ಮಹತ್ಯೆ Read More »

ಭಾರತೀಯ ಕುಟುಂಬ ವ್ಯವಸ್ಥೆಗೆ ತರವಾಡು ಮನೆತನಗಳಿಂದ ಶಕ್ತಿ : ಹಿರಿಯ ಚಿಂತಕ ಗೋಪಾಲಕೃಷ್ಣ ನೆಕ್ಕಿತಪುಣಿ | ನೆಕ್ಕಿತಪುಣಿ ಕರಂಬೇರ ತರವಾಡಿನಲ್ಲಿ ವಾರ್ಷಿಕ ಸಭೆ

ವಿಟ್ಲ : ತರವಾಡು ಮನೆತನಗಳಿಂದ ಭಾರತೀಯ ಕುಟುಂಬ ವ್ಯವಸ್ಥೆಗೆ ಶಕ್ತಿ ತುಂಬಿದೆ ಎಂದು ಹಿರಿಯ ಚಿಂತಕರು ಹಾಗೂ ನೆಕ್ಕಿತಪುಣಿ ತರವಾಡು ಮನೆತನದ ಮುಖ್ಯಸ್ಥರಾದ ಗೋಪಾಲಕೃಷ್ಣ ನೆಕ್ಕಿತಪುಣಿ ಹೇಳಿದರು. ವಿಟ್ಲ ಸಮೀಪದ ಅಳಿಕೆಯ ನೆಕ್ಕಿತಪುಣಿ ಕರಂಬೇರ ತರವಾಡಿನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ತರವಾಡಿನವರನ್ನುದ್ದೇಶಿಸಿ ಮಾತನಾಡಿದರು. ಕರಾವಳಿಯಲ್ಲಿರುವ ತರವಾಡು ಮನೆತನಗಳಿಂದ ಸಂಪ್ರದಾಯ ಹಾಗೂ ಪದ್ಧತಿಗಳ ರಕ್ಷಣೆಯ ಜೊತೆಗೆ ಕುಟುಂಬ ವ್ಯವಸ್ಥೆ ಗಟ್ಟಿಗೊಂಡು ಒಗ್ಗಟ್ಟು ಬೆಳೆಯಲು ಸಾಧ್ಯವಾಗಿದೆ. ಬಿಲ್ಲವರ ತರವಾಡು ಮನೆತನಗಳ ಮೂಲಕ ತಮ್ಮ ಜನಾಂಗದ ಅಸ್ಮಿತೆ ಉಳಿಸಲು ನೀಡಿದ ಕೊಡುಗೆ

ಭಾರತೀಯ ಕುಟುಂಬ ವ್ಯವಸ್ಥೆಗೆ ತರವಾಡು ಮನೆತನಗಳಿಂದ ಶಕ್ತಿ : ಹಿರಿಯ ಚಿಂತಕ ಗೋಪಾಲಕೃಷ್ಣ ನೆಕ್ಕಿತಪುಣಿ | ನೆಕ್ಕಿತಪುಣಿ ಕರಂಬೇರ ತರವಾಡಿನಲ್ಲಿ ವಾರ್ಷಿಕ ಸಭೆ Read More »

ಕರು ಮೇಲೆ ಮಚ್ಚಿನಿಂದ ದಾಳಿ |  ರಕ್ತದಿಂದ ನರಳಾಡುತ್ತಿರುವ ಕರು

ಹಾಸನ : ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿಗೆಮನಸೋ ಇಚ್ಚೆ ಬಂದಂತೆ  ಮಚ್ಚಿನಿಂದ ಕೊಚ್ಚಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಕರು ರಕ್ತದ ಮಡುವಿಲ್ಲಿ ನರಳಾಡುತ್ತಿದೆ. ನವೀನ್ ಎಂಬುವವರಿಗೆ ಸೇರಿದ ಕರು ಇದಾಗಿದೆ. ನೋವಿನಿಂದ ಬಳಲುತ್ತಿದ್ದ  ಕರುವಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ.

ಕರು ಮೇಲೆ ಮಚ್ಚಿನಿಂದ ದಾಳಿ |  ರಕ್ತದಿಂದ ನರಳಾಡುತ್ತಿರುವ ಕರು Read More »

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ

ಕೊಂಬಾರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಫೆ.13 ರಿಂದ ಫೆ. 21ರವರೆಗೆ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯುತ್ತಿದೆ. ಫೆ.13ರಂದು ಶ್ರೀ ದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ನಡೆಯಿತು. ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ ಶ್ರೀ ಸುಬ್ರಹ್ಮಣ್ಯ ಮಠ ಹಾಗೂ ಪರಮಪೂಜ್ಯ ರಾಜರ್ಷಿ ಡಾ| ಶ್ರೀ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಹಾಗೂ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಬೋಳ್ನಡ್ಕ, ಕೊಂಬಾರುವಿನಲ್ಲಿ ಪ್ರತಿಷ್ಠಾ ವಾರ್ಷಿಕ ಜಾತ್ರೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ Read More »

ಕಕ್ಕಿಂಜೆ ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ

ಬೆಳ್ತಂಗಡಿ :  ಕಕ್ಕಿಂಜೆ ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಮೇಲೆ ಹಜ್ಜೆನು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದ್ದು  ಸುಮಾರು 10ಮಕ್ಕಳು  ಹೆಜ್ಜೇನುದಾಳಿಯಿಂದ  ಅಸ್ವಸ್ಥರಾಗಿದ್ದು  ,ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ,  ಮಕ್ಕಳು ಶಾಲೆಯಲ್ಲಿ ಇದ್ದ ವೇಳೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಚಲ್ಲಾಪಿಲ್ಲಿಯಾಗಿ ಓಡಿದ್ದು ಹಲವರಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಅಳು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ. ಹಲವು ಮಕ್ಕಳಿಗೆ ಈ ವೇಳೆ ಹಜ್ಜೇನು ಕಚ್ಷಿದ್ದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಕ್ಕಿಂಜೆ ಶಾಲಾ ಮಕ್ಕಳ ಮೇಲೆ ಹೆಜ್ಜೇನು ದಾಳಿ Read More »

error: Content is protected !!
Scroll to Top