ದಕ್ಷಿಣ ಕನ್ನಡ

ಅಪಘಾತದಲ್ಲಿ ಗಾಯಗೊಂಡ ತಾಯಿ-ಮಗುವಿನ ಚಿಕಿತ್ಸೆಗೆ ಬಸ್ಸನ್ನೇ ಆಸ್ಪತ್ರೆಗೊಯ್ದ ಸಿಬ್ಬಂದಿ

ಸಿಟಿ ಬಸ್‌ ಚಾಲಕ, ಕಂಡಕ್ಟರ್‌ ಮಾನವೀಯತೆಗೆ ವ್ಯಾಪಕ ಪ್ರಶಂಸೆ ಮಂಗಳೂರು : ಮಂಗಳೂರಿನಲ್ಲಿ ಶುಕ್ರವಾರ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ತಾಯಿ ಮತ್ತು ಮಗುವನ್ನು ಹಿಂದಿನಿಂದ ಬರುತ್ತಿದ್ದ ಇನ್ನೊಂದು ಸಿಟಿ ಬಸ್ಸಿನ ಚಾಲಕ ಮತ್ತು ನಿರ್ವಾಹಕರು ಅಸ್ಪತ್ರೆಗೆ ಸಾಗಿಸಲು ಸಹಾಯ ಮಾಡುವ ಮೂಲಕ ಮಾನವೀಯತೆಯ ಕಾರ್ಯ ಮಾಡಿದ್ದಾರೆ. ಕಾವೂರಿನಿಂದ ಕುಂಜತ್‌ಬೈಲ್‌ಗೆ ರೂಟ್ ನಂ. 13B ನಲ್ಲಿ ಪ್ರಯಾಣಿಸುತ್ತಿದ್ದ ಮಾಸ್ಟರ್ ಬಸ್ ಚಾಲಕ ದಯಾನಂದ್ ಮತ್ತು ಕಂಡಕ್ಟರ್ ಸಂದೀಪ್ ಮಾನವೀಯತೆ ಮೆರೆದು ಮಾದರಿಯಾದರು. ಮರಕಡ ಜಂಕ್ಷನ್ ಬಳಿ ವಿರುದ್ಧ ದಿಕ್ಕಿನಲ್ಲಿ […]

ಅಪಘಾತದಲ್ಲಿ ಗಾಯಗೊಂಡ ತಾಯಿ-ಮಗುವಿನ ಚಿಕಿತ್ಸೆಗೆ ಬಸ್ಸನ್ನೇ ಆಸ್ಪತ್ರೆಗೊಯ್ದ ಸಿಬ್ಬಂದಿ Read More »

ಬಂಟ್ವಾಳ : ಇಂಟರ್‌ಲಾಕ್‌ ಸಾಗಿಸುತ್ತಿದ್ದ ಲಾರಿ ಕಾಂಪೌಂಡ್‌ಗೆ ಡಿಕ್ಕಿ

ಬಂಟ್ವಾಳ : ಇಂಟರ್‌ಲಾಕ್ ಸಿಮೆಂಟ್ ಬ್ಲಾಕ್‌ಗಳನ್ನು ಸಾಗಿಸುತ್ತಿದ್ದ ಸರಕು ಲಾರಿಯೊಂದು ನಿಯಂತ್ರಣ ತಪ್ಪಿ ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೊಪ್ಪಳದಲ್ಲಿ ರಾತ್ರಿ ವೇಳೆ ನಡೆದಿದೆ. ಬಿ.ಸಿ.ರೋಡ್‌ – ಪೊಳಲಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಲಾರಿ ಬಿ.ಸಿ.ರೋಡ್‌ ಕಡೆಯಿಂದ ಬರುತ್ತಿದ್ದಾಗ ಏಕಾಏಕಿ ನಿಯಂತ್ರಣ ತಪ್ಪಿ ಜೆಫ್ರಿ ಫೆರ್ನಾಂಡಿಸ್ ಅವರ ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಲಾರಿ ಪಲ್ಟಿಯಾಗಿ, ಅದರಲ್ಲಿ ತುಂಬಿದ್ದ ಇಂಟರ್‌ಲಾಕ್ ಸಿಮೆಂಟ್ ಬ್ಲಾಕ್‌ಗಳು ಮನೆಯ ಅಂಗಳ ಹಾಗೂ

ಬಂಟ್ವಾಳ : ಇಂಟರ್‌ಲಾಕ್‌ ಸಾಗಿಸುತ್ತಿದ್ದ ಲಾರಿ ಕಾಂಪೌಂಡ್‌ಗೆ ಡಿಕ್ಕಿ Read More »

ಅಕ್ರಮ ಗೋಹತ್ಯೆ : ಇಬ್ಬರ ಬಂಧನ, ಆರು ಜಾನುವಾರು ರಕ್ಷಣೆ

ಬಂಟ್ವಾಳ : ಬಂಟ್ವಾಳ ಪಟ್ಟಣ ಪೊಲೀಸರು ಸಜಿಪಮೂಡ ಗ್ರಾಮದ ಪಂಜಾಜೆಯಲ್ಲಿ ಅಕ್ರಮ ಗೋಹತ್ಯೆ ಜಾಲವನ್ನು ಭೇದಿಸಿ, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಆರು ಜೀವಂತ ದನಗಳು, ಗೋಮಾಂಸ, ಒಂದು ಕಾರು ಮತ್ತು ಕೃತ್ಯಕ್ಕೆ ಬಳಸಿದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್‌ ಸಾದೀಕ್‌ (30) ಎಂದು ಗುರುತಿಸಲಾಗಿದೆ. ಬಂಟ್ವಾಳ ಪಟ್ಟಣ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್ ಶೆಟ್ಟಿಗಾರ್ ಅವರಿಗೆ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿರುವ ಬಗ್ಗೆ

ಅಕ್ರಮ ಗೋಹತ್ಯೆ : ಇಬ್ಬರ ಬಂಧನ, ಆರು ಜಾನುವಾರು ರಕ್ಷಣೆ Read More »

ಧರ್ಮಸ್ಥಳ : ವೃದ್ಧೆಯ 10 ಲ.ರೂ. ಮೌಲ್ಯದ ಬಂಗಾರ ಕಳ್ಳತನ

ದೇವಸ್ಥಾನಕ್ಕೆ ಬಂದ ಮಹಿಳೆಗೆ ಅಮಲು ಬರಿಸುವ ಲಡ್ಡು, ಜ್ಯೂಸ್‌ ನೀಡಿ ಚಿನ್ನ ಎಗರಿಸಿದ ಖದೀಮ ಬೆಳ್ತಂಗಡಿ : ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ದೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ಅಸ್ವಸ್ಥರನ್ನಾಗಿಸಿ ಹತ್ತು ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಎಗರಿಸಿ ಪರಾರಿಯಾಗಿರುವ ಘಟನೆ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರು ಜೆ.ಪಿ.ನಗರ ನಿವಾಸಿಯಾಗಿರುವ ಪ್ರೇಮಾ ಕೆ (70) ಎಂಬವರು ಮೇ 23ರಂದು ಬೆಂಗಳೂರಿನಿಂದ ಉಡುಪಿಯ ಬ್ರಹ್ಮಾವರದಲ್ಲಿರುವ ತನ್ನ ಚಿಕ್ಕಮ್ಮನ ಮಗಳ ಮನೆಗೆ

ಧರ್ಮಸ್ಥಳ : ವೃದ್ಧೆಯ 10 ಲ.ರೂ. ಮೌಲ್ಯದ ಬಂಗಾರ ಕಳ್ಳತನ Read More »

ನಿಂದನೆ ಪ್ರಕರಣ : ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು

ವಾರಕ್ಕೊಮ್ಮೆ ಪುತ್ತೂರು ಪೋಲೀಸ್ ಠಾಣೆಯಲ್ಲಿ ಸಹಿ ಹಾಕುವ ಷರತ್ತು ಬೆಳ್ತಂಗಡಿ: ಯಕ್ಷಗಾನ ಕಲಾವಿದ ದಿನೇಶ್ ಕೋಡಪದವು ಅವರ ತಾಯಿಯನ್ನು ನಿಂದಿಸಿದ ಪ್ರಕರಣದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ದಿನೇಶ್ ಕೋಡಪದವು ಅವರ ತಾಯಿ ಲೀಲಾವತಿಯವರು ಸಲ್ಲಿಸಿದ್ದ ದೂರಿನ ಮೇಲಿನ ಬಂಧನದ ಭೀತಿಯಲ್ಲಿದ್ದ ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ತಿಮರೋಡಿಯವರ ಮಾತಿನ ಬಗ್ಗೆ ಕಟುವಾದ ಟೀಕೆ ಮಾಡಿದೆ. ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯ ಡಾ.ವೀರೇಂದ್ರ ಹೆಗ್ಗಡೆಯವರ

ನಿಂದನೆ ಪ್ರಕರಣ : ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು Read More »

ಬಸ್‌-ಟೆಂಪೋ ಟ್ರಾವೆಲರ್‌ ಡಿಕ್ಕಿ : ಮಹಿಳೆ ಸಾವು, 7 ಮಂದಿಗೆ ಗಾಯ

ಸುಬ್ರಹ್ಮಣ್ಯ ದೇವಸ್ಥಾನ ಯಾತ್ರಾರ್ಥಿಗಳಿದ್ದ ಟೆಂಪೋ ಟ್ರಾವೆಲರ್‌ ಸುಳ್ಯ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಮೇ 25ರಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ಧರ್ಮಸ್ಥಳ ಕಡೆಯಿಂದ ಸುಬ್ರಹ್ಮಣ್ಯದತ್ತ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೆಂಗಳೂರು ದೇವನಹಳ್ಳಿ ಕೋಟೆ ನಿವಾಸಿ ಸಂಜು ವಿ. ಎಂಬವರು ಚಲಾಯಿಸುತ್ತಿದ್ದ ಟೆಂಪೋ ಟ್ರಾವೆಲರ್‌ನಲ್ಲಿ 14

ಬಸ್‌-ಟೆಂಪೋ ಟ್ರಾವೆಲರ್‌ ಡಿಕ್ಕಿ : ಮಹಿಳೆ ಸಾವು, 7 ಮಂದಿಗೆ ಗಾಯ Read More »

ದುಬೈಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ಕೆಲವು ತಿಂಗಳಿಂದ ಕೋಮಾದಲ್ಲಿದ್ದ ಮಹಿಳೆ ಮಂಗಳೂರು : ದುಬೈಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಕಿನ್ನಿಗೋಳಿಯ ಯುವತಿಯೊಬ್ಬರು ಮೇ 24ರಂದು ನಿಧನರಾಗಿದ್ದಾರೆ. ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ ಶ್ರೀಲತಾ ತಂತ್ರಿ (26)ಂಋತ ಮಹಿಳೆ. ಇವರು ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿದ್ದು, ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದರು. ದುಬೈನಲ್ಲಿ ಉದ್ಯೋಗದಲ್ಲಿದ್ದ ಶ್ರೀಲತಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಪ್ರಾರಂಭದಲ್ಲಿ ಅವರಿಗೆ ದುಬೈನಲ್ಲೇ

ದುಬೈಯಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು Read More »

ರೌಡಿ ಶೀಟರ್‌ ಆರೀಫ್ ಕೊಲೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ

ತೊಕ್ಕೊಟ್ಟು ಫ್ಲೈಓವರ್ ಮೇಲೆ ಬರ್ಬರವಾಗಿ ಕೊಲೆಯಾಗಿರುವ ಆರಿಫ್‌ ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ರೌಡಿ ಶೀಟರ್‌ ಆರೀಫ್ ಹುಸೈನ್ ಅಲಿಯಾಸ್ ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2026ರ ಮಾರ್ಚ್ 27ರಂದು ಮುಂಜಾನೆ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್‌ನಲ್ಲಿ ತೆರಳುತ್ತಿದ್ದ ಆರೀಫ್‌ನನ್ನು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಡಿಕ್ಕಿ ಹೊಡೆದು ಕೆಡವಿದ ಬಳಿಕ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದು ಕೃತ್ಯಕ್ಕೆ ಬಳಸಿದ್ದ ಕಾರನ್ನು

ರೌಡಿ ಶೀಟರ್‌ ಆರೀಫ್ ಕೊಲೆ ಪ್ರಕರಣ : ಇನ್ನೋರ್ವ ಆರೋಪಿ ಸೆರೆ Read More »

ಕಾರಿನೊಳಗೆ ಸಿಲುಕಿಕೊಂಡ ಮಗು : ಕಿಟಿಕಿಯ ಗಾಜು ಒಡೆದು ರಕ್ಷಿಸಿದ ಸಾರ್ವಜನಿಕರು

ಆಟೋಮ್ಯಾಟಿಕ್ ಲಾಕಿಂಗ್ ಸಿಸ್ಟಮ್ ಆನ್ ಆಗಿ ಸಿಲುಕಿದ ಮಗು ಬೆಳ್ತಂಗಡಿ: ಕಾರಿನ ಆಟೋಮ್ಯಾಟಿಕ್ ಲಾಕಿಂಗ್ ಸಿಸ್ಟಮ್ ಆನ್ ಆದ ಕಾರಣ ಮಗುವೊಂದು ಕಾರಿನೊಳಗೆ ಸಿಲುಕಿಕೊಂಡ ಆತಂಕಕಾರಿ ಘಟನೆ ನಡೆದಿದ್ದು, ಸಾರ್ವಜನಿಕರು ಸಮಯಪ್ರಜ್ಞೆಯಿಂದ ಮಗುವನ್ನು ಯಶಸ್ವಿಯಾಗಿ ರಕ್ಷಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮಡಂತ್ಯಾರಿನ ಮದ್ದಡ್ಕ ಎಂಬಲ್ಲಿ ಭಾನುವಾರ ನಡೆದಿದೆ. ಚಾಲಕ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಸಮೀಪದ ಅಂಗಡಿಯೊಂದಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ಆಟೋ-ಲಾಕ್ ವ್ಯವಸ್ಥೆಯು ಇದ್ದಕ್ಕಿದ್ದಂತೆ ಸಕ್ರಿಯಗೊಂಡಿದ್ದು, ಮಗು ಕಾರಿನೊಳಗೆ ಸಿಲುಕಿಕೊಂಡಿದೆ. ಮಗು

ಕಾರಿನೊಳಗೆ ಸಿಲುಕಿಕೊಂಡ ಮಗು : ಕಿಟಿಕಿಯ ಗಾಜು ಒಡೆದು ರಕ್ಷಿಸಿದ ಸಾರ್ವಜನಿಕರು Read More »

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಜೀವ ಉಳಿಸಿದ ಪೊಲೀಸರು

ಹಾಸನದಿಂದ ಬಂದು ಕೂಳೂರಿನಲ್ಲಿ ನದಿಗೆ ಹಾರಲು ಮುಂದಾಗಿದ್ದ ಕೃಷಿಕ ಮಂಗಳೂರು: ಕೂಳೂರು ಸೇತುವೆ ಬಳಿ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪಣಂಬೂರು ಪೊಲೀಸರು ಸಮಯ ಪ್ರಜ್ಞೆಯಿಂದ ರಕ್ಷಿಸಿ ಮಾನವೀಯತೆ ಮೆರೆದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಸಮೀಪದ ಗ್ರಾಮದ ನಿವಾಸಿಯಾಗಿರುವ ಕೃಷಿಕನೊಬ್ಬ ಆರೋಗ್ಯ ಸಮಸ್ಯೆ ಹಾಗೂ ಹಣಕಾಸಿನ ತೊಂದರೆಯಿಂದ ಮನನೊಂದು ಮೇ 22ರಂದು ಬೆಳಗ್ಗೆ ಮನೆಯಿಂದ ಯಾರಿಗೂ ತಿಳಿಸದೇ ಹೊರಟು ಮಂಗಳೂರಿಗೆ ಬಂದಿದ್ದರು. ಮೊಬೈಲ್ ಫೋನ್ ಮಾತ್ರ

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಜೀವ ಉಳಿಸಿದ ಪೊಲೀಸರು Read More »

error: Content is protected !!
Scroll to Top