ದಕ್ಷಿಣ ಕನ್ನಡ

ನಕಲಿ ದಾಖಲೆ ಬಳಸಿ ಪಾಸ್‌ಪೋರ್ಟ್‌ ಸೃಷ್ಟಿ : ಕೇಸ್‌ ದಾಖಲು

ಮಹಿಳೆಗೆ ಗೊತ್ತಿಲ್ಲದಂತೆ ಅವರ ಹೆಸರಿನಲ್ಲಿ ಪಾಸ್‌ಪೋರ್ಟ್‌ ಪಡೆದು ವಿದೇಶಕ್ಕೆ ಪ್ರಯಾಣ ಮಂಗಳೂರು : ಬೇರೊಬ್ಬರ ಗುರುತಿನ ದಾಖಲೆ ಪತ್ರಗಳನ್ನು ದುರುಪಯೋಗಪಡಿಸಿ ನಕಲಿ ಪಾಸ್‌ಪೋರ್ಟ್‌ ರಚಿಸಿ ವಂಚನೆಗೈದ ಸಂಬಂಧ ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ. ಉಳ್ಳಾಲ ನಿವಾಸಿ ಪ್ರೀತಾ ಡಿ.ಸೋಜ, ಪ್ರೇಮ್‌ ಡಿ.ಸೋಜ ಹಾಗೂ ಯಶೋದಾ ಕೇಶವ ಸೇರಿದಂತೆ ಹಲವರ ವಿರುದ್ಧ ಗಂಭೀರ ಆರೋಪಗಳಡಿ ಸಿಎಸ್‌ಬಿ ಪೊಲೀಸರು ಕ್ರಿಮಿನಲ್‌ ಪ್ರಕರಣ ದಾಖಲಿಸಿದ್ದಾರೆ. ಉಳ್ಳಾಲ ನಿವಾಸಿ ಯಶೋದಾ ಕೇಶವ ಎಂಬ ಮಹಿಳೆಯ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್‌ಪೋರ್ಟ್‌ ಪಡೆದು ವಿದೇಶಕ್ಕೆ ಪ್ರಯಾಣಿಸಿರುವ […]

ನಕಲಿ ದಾಖಲೆ ಬಳಸಿ ಪಾಸ್‌ಪೋರ್ಟ್‌ ಸೃಷ್ಟಿ : ಕೇಸ್‌ ದಾಖಲು Read More »

ತಗ್ಗಿನಲ್ಲಿ ಹಾರಿದ ಪ್ರಯಾಣಿಕ ವಿಮಾನಗಳು : ಆತಂಕಕ್ಕೊಳಗಾದ ಜನ

ಮಳೆ ಪರಿಣಾಮ ಲ್ಯಾಂಡ್‌ ಆಗಲು ಸಾಧ್ಯವಾಗದೆ ಆಕಾಶದಲ್ಲೇ ಗಿರಕಿ ಹೊಡೆದ ವಿಮಾನಗಳು ವಿಟ್ಲ: ವಿಟ್ಲ ಪರಿಸರದಲ್ಲಿ ನಿನ್ನೆ ಎರಡು ವಿಮಾನಗಳು ಬಹಳ ತಗ್ಗಿನಲ್ಲಿ ಹಾರಾಟ ನಡೆಸಿ ಸ್ಥಳೀಯರಲ್ಲಿ ಕೆಲಹೊತ್ತು ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಕೆಲ ಸಮಯದ ಹಿಂದೆಯಷ್ಟೇ ಈ ಪರಿಸರದಲ್ಲಿ ಖನಿಜ ಶೋಧಕ್ಕಾಗಿ ಕಿರು ವಿಮಾನ ತಗ್ಗಿನಲ್ಲಿ ಹಾರಾಟ ನಡೆಸಿತ್ತು. ಆರಂಭದಲ್ಲಿ ಜನರು ಇದೇ ಮಾದರಿಯ ಹಾರಾಟ ಇದಾಗಿರಬಹುದು ಎಂದು ಭಾವಿಸಿದ್ದರು. ಆದರೆ ಇದು ದೊಡ್ಡ ವಿಮಾನವಾಗಿರುವುದರಿಂದ ಜನ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿರಬಹುದು ಎಂದು

ತಗ್ಗಿನಲ್ಲಿ ಹಾರಿದ ಪ್ರಯಾಣಿಕ ವಿಮಾನಗಳು : ಆತಂಕಕ್ಕೊಳಗಾದ ಜನ Read More »

35 ಲ.ರೂ. ಮೌಲ್ಯದ ಗಾಂಜಾದ ಜೊತೆ ವಿದ್ಯಾರ್ಥಿನಿ ಅರೆಸ್ಟ್‌

ಚೆನ್ನೈನಿಂದ ಗಾಂಜಾ ತಂದು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ ಯುವತಿ ಮಂಗಳೂರು: ಗಾಂಜಾ ಮಾರಾಟ ಮಾಡಲು ಮತ್ತು ಸಾಗಾಟ ಮಾಡುತ್ತಿದ್ದ ಆರೋಪಿ ವಿದ್ಯಾರ್ಥಿನಿಯನ್ನು ಬಂಧಿಸಿರುವ ಮೂಲ್ಕಿ ಪೊಲೀಸರು, ಸುಮಾರು 35 ಲಕ್ಷ ರೂ. ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಸುಹಾನಾ (21) ಎಂಬಾಕೆಯನ್ನು ವಶಕ್ಕೆ ಪಡೆದಿದ್ದಾರೆ. ಆಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು,

35 ಲ.ರೂ. ಮೌಲ್ಯದ ಗಾಂಜಾದ ಜೊತೆ ವಿದ್ಯಾರ್ಥಿನಿ ಅರೆಸ್ಟ್‌ Read More »

ಇನ್ನೊಬ್ಬರ ರಕ್ಷಣೆಗೆ ಆದ್ಯತೆಯಿರಲಿ : ಡಾ.ಸಾಯಿಗೀತಾ ಜ್ಞಾನೇಶ್

ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ ಕಾರ್ಯಕ್ರಮ ಸುಳ್ಯ: ಸುವರ್ಣ ಸಂಭ್ರಮಾಚರಣೆಯಲ್ಲಿರುವ ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ ಬೆಳ್ಳಿಹಬ್ಬ ಸಂಭ್ರಮಾಚರಣೆಯಲ್ಲಿರುವ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ “ಪ್ರಥಮ ಚಿಕಿತ್ಸೆ ಹಾಗೂ ಬಿಸಿಗಾಳಿ ನಿವಾರಣೆ ಕುರಿತು ಮಾಹಿತಿ“ ಕಾರ್ಯಕ್ರಮವನ್ನು ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ

ಇನ್ನೊಬ್ಬರ ರಕ್ಷಣೆಗೆ ಆದ್ಯತೆಯಿರಲಿ : ಡಾ.ಸಾಯಿಗೀತಾ ಜ್ಞಾನೇಶ್ Read More »

ಕ್ಯಾಂಟೀನ್‌ನಲ್ಲಿ ಅನೈತಿಕ ವ್ಯವಹಾರ : ಮೂವರ ಸೆರೆ

ಅಕ್ರಮವಾಗಿ ನಿರ್ಮಿಸಿದ್ದ ಕ್ಯಾಂಟಿನ್‌ನಲ್ಲಿ ಅಕ್ರಮ ವ್ಯವಹಾರ ಬೆಳ್ತಂಗಡಿ : ಅಕ್ರಮವಾಗಿ ನಿರ್ಮಾಣ ಮಾಡಿದ ಕ್ಯಾಂಟಿನ್ ಒಳಗಡೆ ಇದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿದ್ದು ಮೂವವರನ್ನು ಬಂಧಿಸಿದ್ದಾರೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ ಎಂಬವರು ಪವನ್ ಕ್ಯಾಂಟಿನನ್ನು ಕಳೆದ 20 ವರ್ಷಗಳಿಂದ ನಡೆಸುತ್ತಿದ್ದರು. ಈ ಕ್ಯಾಂಟಿನ್‌ಗೆ ಭಾನುವಾರ ಮಾತ್ರ ರಜೆ ಇದ್ದು, ಈ ಸಮಯದಲ್ಲಿ ಕ್ಯಾಂಟಿನ್ ಮಾಲೀಕ

ಕ್ಯಾಂಟೀನ್‌ನಲ್ಲಿ ಅನೈತಿಕ ವ್ಯವಹಾರ : ಮೂವರ ಸೆರೆ Read More »

ಆದಾಯ ಗಳಿಕೆಯಲ್ಲಿ ಕುಕ್ಕೆ ದೇವಾಲಯ 15 ವರ್ಷಗಳಿಂದ ನಂಬರ್‌ ಒನ್‌

2025-26ನೇ ಸಾಲಿನಲ್ಲಿ ಹರಿದು ಬಂತು 167.89 ಕೋಟಿ ರೂ. ಆದಾಯ ಸುಬ್ರಹ್ಮಣ್ಯ : ಕರ್ನಾಟಕ ಮುಜರಾಯಿ ಇಲಾಖೆಯಡಿಯಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಸತತ 15ನೇ ವರ್ಷ ಆದಾಯ ಗಳಿಕೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 167.89 ಕೋಟಿ ರೂಪಾಯಿ ಆದಾಯ ಹರಿದುಬಂದಿದೆ. 2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ದೇವಾಲಯ ಒಟ್ಟು 167.89 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಇದರಲ್ಲಿ 85.20 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ

ಆದಾಯ ಗಳಿಕೆಯಲ್ಲಿ ಕುಕ್ಕೆ ದೇವಾಲಯ 15 ವರ್ಷಗಳಿಂದ ನಂಬರ್‌ ಒನ್‌ Read More »

ರಿಕ್ಷಾದಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ 15 ಚೀಲ ಪಡಿತರ ಅಕ್ಕಿ ವಶ

ವಿಟ್ಲ: ಅಟೋರಿಕ್ಷಾವೊಂದರಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ಅಕ್ಕಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ವಿಟ್ಲ ಕಸಬಾ ಗ್ರಾಮದ ನಿವಾಸಿ ಅಲಿ ಅಕ್ಬರ್ (40) ಬಂಧಿತ ಆರೋಪಿ. ಬಂಟ್ವಾಳ ತಾಲೂಕಿನ ಆಹಾರ ನಿರೀಕ್ಷಕ ಎ. ಪ್ರಶಾಂತ ಶೆಟ್ಟಿ (47) ಅವರಿಗೆ ಮೇ 9ರಂದು ವಿಟ್ಲ ಕಸಬಾ ಗ್ರಾಮದ ಶಿವಾಜಿ ನಗರದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಮೇರೆಗೆ ಆಹಾರ ಇಲಾಖೆಯ ಸಿಬ್ಬಂದಿ ಹಾಗೂ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ

ರಿಕ್ಷಾದಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ 15 ಚೀಲ ಪಡಿತರ ಅಕ್ಕಿ ವಶ Read More »

ಬೈಕ್‌-ಕಾರು ಡಿಕ್ಕಿ : ಗಂಡ ಸ್ಥಳದಲ್ಲೇ ಸಾವು, ಪತ್ನಿಗೆ ಗಂಭೀರ ಗಾಯ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್‌ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರೆ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಅಪರಾಹ್ನ ನಡೆದಿದೆ. ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಅರಸಿನಮಕ್ಕಿ ಹತ್ಯಡ್ಕ

ಬೈಕ್‌-ಕಾರು ಡಿಕ್ಕಿ : ಗಂಡ ಸ್ಥಳದಲ್ಲೇ ಸಾವು, ಪತ್ನಿಗೆ ಗಂಭೀರ ಗಾಯ Read More »

ಪ್ರಾಣಕ್ಕೆ ಎರವಾದ ರಜೆಯ ಮೋಜು : ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಯನಿಯರ ಸಾವು

ಮಂಗಳೂರು: ರಜೆಯ ಮೋಜು ಇಬ್ಬರು ವಿದ್ಯಾರ್ಥಿನಿಯರ ಪ್ರಾಣಕ್ಕೆ ಎರವಾದ ಘಟನೆ ಕಡಬದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನಾಲ್ವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯ ಹೊಳೆಯಲ್ಲಿ ಈ ದಾರುಣ ಘಟನೆ ನಡೆದಿದೆ. ಕುಟ್ರುಪ್ಪಾಡಿ ನಿವಾಸಿಗಳಾದ ಸುನೀತಾ (21), ಅರ್ಪಿತಾ (15) ಎಂಬ ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ. ನಾಲ್ವರು ವಿದ್ಯಾರ್ಥಿನಿಯರು ಶಾಲೆ-ಕಾಲೇಜಿಗೆ ರಜೆ ಇರುವ ಕಾರಣ ಸಂಜೆ ಹೊತ್ತು ಈಜಾಡಲು ನದಿಗಿಳಿದಿದ್ದರು. ಈ ಪೈಕಿ ಸುನೀತಾ

ಪ್ರಾಣಕ್ಕೆ ಎರವಾದ ರಜೆಯ ಮೋಜು : ನದಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಯನಿಯರ ಸಾವು Read More »

ರಸ್ತೆಯಲ್ಲಿದ್ದ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕದ್ದೊಯ್ದ ಖದೀಮರು

ಕಡಬ: ಸುಬ್ರಹ್ಮಣ್ಯ ಗ್ರಾಮದ ಲಾಡ್ಜ್‌ ಒಂದರ ಎದುರು ರಸ್ತೆಯಲ್ಲಿ ನಿಂತಿದ್ದ ಗೋವನ್ನು ಅಪರಿಚಿತರು ಕದ್ದು, ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡಿದ ಘಟನೆ ನಡೆದಿದೆ. ಈ ಕುಕೃತ್ಯ ‌ಮೇ 6 ರಂದು ರಾತ್ರಿ ಸಮಯದಲ್ಲಿ ನಡೆದಿದ್ದು, ಇಬ್ಬರು ಖದೀಮರು ಗೋವನ್ನು ಕಳ್ಳತನ ಮಾಡಿ ಹಿಂಸಾತ್ಮಕ ರೀತಿಯಲ್ಲಿ ಕಾರೊಂದಕ್ಕೆ ತುಂಬುತ್ತಿರುವ ದೃಶ್ಯ ಅಂಗಡಿಯೊಂದರ ಸಿಸಿಟಿವಿ‌ಯಲ್ಲಿ ‌ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸುಬ್ರಹ್ಮಣ್ಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ರಸ್ತೆಯಲ್ಲಿದ್ದ ದನವನ್ನು ಹಿಂಸಾತ್ಮಕ ರೀತಿಯಲ್ಲಿ ಕದ್ದೊಯ್ದ ಖದೀಮರು Read More »

error: Content is protected !!
Scroll to Top