ದಕ್ಷಿಣ ಕನ್ನಡ

ಸರಕಾರಿ ಬಸ್‍ ಸ್ಕೂಟರ್ ಗೆ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು

ಬಂಟ್ವಾಳ : ಸರಕಾರಿ ಬಸ್‍ ಓವರ್ ಟೇಕ್‍ ಮಾಡುವ ಭರದಲ್ಲಿ ಸ್ಕೂಟರ್‍ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ  ಪಾಣೆಮಂಗಳೂರಿನ ನೆಹರೂನಗರದಲ್ಲಿ ನಡೆದಿದೆ. ಮಂಗಳೂರು ನಿವಾಸಿ ಅಲಿಸ್ಮರ್ ಡಿಸೋಜ (24) ಅಪಘಾತದಿಂದ ಮೃತಪಟ್ಟವರು. ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರ ಜತೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್ ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್‍ ಮಾಡುವ ಭರದಲ್ಲಿ, […]

ಸರಕಾರಿ ಬಸ್‍ ಸ್ಕೂಟರ್ ಗೆ ಡಿಕ್ಕಿ : ಸ್ಕೂಟರ್ ಸವಾರ ಮೃತ್ಯು Read More »

ಧರ್ಮಸ್ಥಳದ ಯುವತಿಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್‌

ಕೊಲೆಯಲ್ಲ ಆತ್ಮಹತ್ಯೆ ಎಂದ ಪೊಲೀಸರು ಮಂಗಳೂರು: ಪಂಜಾಬಿನಲ್ಲಿ ಧರ್ಮಸ್ಥಳದ ಯುವತಿಯ ಸಾವು ಆತ್ಮಹತ್ಯೆಯಿಂದ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಧರ್ಮಸ್ಥಳದ ಏರೋನಾಟಿಕ್ಸ್ ಇಂಜಿನಿಯರ್ ಯುವತಿ ಆಕಾಂಕ್ಷಾ ನಾಯರ್‌ ಎಂಬವರು ಪಂಜಾಬಿನಲ್ಲಿ ನಿಗೂಢವಾಗಿ ಸಾವಿಘಿಡಾಗಿರುವುದು ಸಾಕಷ್ಟು ಅನುಮಾನಗಳನ್ನು ಸೃಷ್ಟಿಸಿತ್ತು.ಯುವತಿ ಆಕಾಂಕ್ಷಾ ಎಸ್ ನಾಯರ್ (22) ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪಂಜಾಬ್‌ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಧರ್ಮಸ್ಥಳದ ಬೊಳಿಯೂರು ನಿವಾಸಿಯಾಗಿರುವ ಸುರೇಂದ್ರ ನಾಯರ್ ಹಾಗೂ ಸಿಂಧೂದೇವಿ ದಂಪತಿಯ ಪುತ್ರಿ ಆಕಾಂಕ್ಷಾ ಎಸ್. ನಾಯರ್

ಧರ್ಮಸ್ಥಳದ ಯುವತಿಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್‌ Read More »

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಅಧ್ಯಕ್ಷರ ಮೇಲಿನ ಇಲ್ಲಸಲ್ಲದ ಆರೋಪ ಖಂಡನೀಯ | ಪತ್ರಿಕಾಗೋಷ್ಠಿಯಲ್ಲಿ ಕಡಬ ಬ್ಲಾಕ್‍ ಕಾಂಗ್ರೆಸ್‍ ಹಾಗೂ ಸುಬ್ರಹ್ಮಣ್ಯ ಗ್ರಾಮ ಸಮಿತಿ ಹೇಳಿಕೆ | ಹೋರಾಟದ ಎಚ್ಚರಿಕೆ

ಸುಬ್ರಹ್ಮಣ್ಯ: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಈಗಾಗಲೇ ನೂತನ ಆಡಳಿತ ಮಂಡಳಿ ರಚಿಸಲಾಗಿದ್ದು, ಅಧ್ಯಕ್ಷರಾಗಿ ಹರೀಶ್‍ ಇಂಜಾಡಿ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಅಧ್ಯಕ್ಷರಾದ ಹರೀಶ್‍ ಇಂಜಾಡಿಯವರು ರೌಶಿಡೀಟರ್‍ ಎಂಬ ಪದ ಬಳಕೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ರವಾನೆಯಾಗುತ್ತಿದ್ದು, ಇದು ಸತ್ಯಕ್ಕೆ ದೂರವಾಗಿ. ಮುಂದಿನ ದಿನಗಳಲ್ಲಿ ಈ ಕುರಿತು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ರವಾನೆಯಾದರೆ ನಾವು ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಕಡಬ ಬ್ಲಾಕ್‍ ಕಾಂಗ್ರೆಸ್‍ ಅಧ್ಯಕ್ಷ ಅಭಿಲಾಷ್‍, ಸರಕಾರದ ಗ್ಯಾರಂಟಿ ಅನುಷ್ಠಾನ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಅಧ್ಯಕ್ಷರ ಮೇಲಿನ ಇಲ್ಲಸಲ್ಲದ ಆರೋಪ ಖಂಡನೀಯ | ಪತ್ರಿಕಾಗೋಷ್ಠಿಯಲ್ಲಿ ಕಡಬ ಬ್ಲಾಕ್‍ ಕಾಂಗ್ರೆಸ್‍ ಹಾಗೂ ಸುಬ್ರಹ್ಮಣ್ಯ ಗ್ರಾಮ ಸಮಿತಿ ಹೇಳಿಕೆ | ಹೋರಾಟದ ಎಚ್ಚರಿಕೆ Read More »

ಮುಂದಿನ ಶಿಕ್ಷಣ, ಉದ್ಯೋಗಾವಕಾಶಗಳು, ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಶೈಕ್ಷಣಿಕ ಮಾರ್ಗದರ್ಶನ, ಕಾರ್ಯಾಗಾರ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಸಾರಥ್ಯ

ಕಡಬ: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಕಡಬ ತಾಲೂಕಿನ ಎಲ್ಲಾ ಸಮುದಾಯದ 8ನೇ, 10ನೇ ತರಗತಿ ಮತ್ತು  ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣ, ಉದ್ಯೋಗವಕಾಶಗಳು, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃಧ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ ಶೈಕ್ಷಣಿಕ ಮಾರ್ಗದರ್ಶನ ಮತ್ತು ಮಾಹಿತಿ ಕಾರ್ಯಾಗಾರ ಹೊಸಮಠ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಶನಿವಾರ ನಡೆಯಿತು. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ

ಮುಂದಿನ ಶಿಕ್ಷಣ, ಉದ್ಯೋಗಾವಕಾಶಗಳು, ಉದ್ಯಮಶೀಲತೆ, ಕೌಶಲ್ಯಾಭಿವೃದ್ಧಿ, ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಶೈಕ್ಷಣಿಕ ಮಾರ್ಗದರ್ಶನ, ಕಾರ್ಯಾಗಾರ | ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಸಾರಥ್ಯ Read More »

ಸುಳ್ಯ ಬಿಜೆಪಿ ಬೆಂಬಲಿತ ಚುನಾಯಿತ ಸಹಕಾರಿಗಳ ಸಮಾವೇಶ

ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮಿತಿಯ ವತಿಯಿಂದ ಬಿಜೆಪಿ ಬೆಂಬಲಿತ ಚುನಾಯಿತ ಸಹಕಾರಿಗಳ ಸಮಾವೇಶ ಶನಿವಾರ ಸುಳ್ಯ ಸಿಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ ಸಮಾವೇಶವನ್ನು ಉದ್ಘಾಟಿಸಿದರು. ಬಿಜೆಪಿ ಸುಳ್ಯ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ ಸಿಂಹ ನಾಯಕ್, ಹಿರಿಯ ಸಹಕಾರಿ, ಕ್ಯಾಂಪೋ ಮಾಜಿ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷ ಎ. ವಿ. ವಿಕ್ರಮ್ ಅಡಂಗಾಯ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿನಯ

ಸುಳ್ಯ ಬಿಜೆಪಿ ಬೆಂಬಲಿತ ಚುನಾಯಿತ ಸಹಕಾರಿಗಳ ಸಮಾವೇಶ Read More »

ನಿದ್ದೆ ಮಾತ್ರೆ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಲಾ ಶಿಕ್ಷಕ ಸಾವು

ತಾಯಿಯ ಜೊತೆ ನಿದ್ದೆ ಮಾತ್ರೆ ಸೇವಿಸಿದ್ದ ರಾಜ್ಯಮಟ್ಟದ ಕಲಾವಿದ ಬೆಳ್ತಂಗಡಿ : ತಾಯಿಯ ಜೊತೆಗೆ ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ, ಚಿತ್ರ ಕಲಾ ಶಿಕ್ಷಕ, ರಾಜ್ಯಮಟ್ಟದ ಕಲಾವಿದ ಜಯರಾಮ್ ಕೆ (58) ಶುಕ್ರವಾರ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಕೊನೆಯುಸಿರೆಳೆದಿದ್ದಾರೆ. ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಮೇ 10ರಂದು ಹಿಂದೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಪತ್ರ ಬರೆದಿಟ್ಟು ತಾಯಿಯ ಒಡಗೂಡಿ ಅಪರಿಮಿತ

ನಿದ್ದೆ ಮಾತ್ರೆ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಲಾ ಶಿಕ್ಷಕ ಸಾವು Read More »

ಕಾರು – ಆಟೋ ನಡುವೆ ಅಪಘಾತ | ಆಟೋ ಚಾಲಕ ಗಂಭೀರ

ವಿಟ್ಲ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತವಾದ ಘಟನೆ ವಿಟ್ಲ-ಕನ್ಯಾನ ರಸ್ತೆಯ ಕಾಂತಡ್ಕದಲ್ಲಿ ನಡೆದಿದೆ. ಅಪಘಾತದ ಪರಿಣಾಮ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದಿಂದ ಆಟೋ ಚಾಲಕ ಒಕ್ಕೆತ್ತೂರು ನಿವಾಸಿ ಹುಸೈನ್ ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು   ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಆಟೋದಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ಪ್ರಯಾಣಿಕರನ್ನು ದಾಖಲಿಸಲಾಗಿದೆ.

ಕಾರು – ಆಟೋ ನಡುವೆ ಅಪಘಾತ | ಆಟೋ ಚಾಲಕ ಗಂಭೀರ Read More »

ಗೇರುಕಟ್ಟೆ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

ಗೇರುಕಟ್ಟೆ : ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಕಳಿಯ ಸಹಯೋಗದಲ್ಲಿ  ಗೇರುಕಟ್ಟೆ ಅರಿವು ಗ್ರಂಥಾಲಯ ಕೇಂದ್ರದಲ್ಲಿ ಐದು ದಿನಗಳ  ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ನಡೆಯುತ್ತಿದೆ.  ದಿನಪತ್ರಿಕೆ ವಾಚನ, ಪುಸ್ತಕ ಓದುವುದು, ನೀತಿ ಕಥೆಗಳು, ಕವನ ರಚನೆ, ಪತ್ರ ಬರೆಯುವುದು, ಭಾಷಣಕಲೆ, ಊರಿನ ಇತಿಹಾಸ ತಿಳಿಯುವುದು ಮತ್ತು ವ್ಯಕ್ತಿತ್ವ ವಿಕಸನ ಸಂಬಂಧಿ ಚಟುವಟಿಕೆಗಳನ್ನು ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ನಡೆಸಿಕೊಡುತ್ತಿದ್ದಾರೆ. ಶಾಲಾ ರಜಾ ದಿನಗಳಲ್ಲಿ ಮಕ್ಕಳನ್ನು ಸಕ್ರಿಯವಾಗಿಸುವ ಈ ಶಿಬಿರವು ಗ್ರಾಮೀಣ ಪ್ರದೇಶದ

ಗೇರುಕಟ್ಟೆ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ Read More »

ಮದುವೆ ಊಟದಿಂದ ಆರೋಗ್ಯದಲ್ಲಿ ಏರುಪೇರು | ಮಹಿಳೆ ಮೃತ್ಯು

ಬಂದಾರು : ಮಹಿಳೆಯೊಬ್ಬರು ವಾಂತಿ ಭೇದಿಯಿಂದಾಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಮದುವೆ ಊಟದ ನಂತರ ತುಂಬಾ ಜನರಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ಅನೇಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಜಿರೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ 5 ಮಂದಿ ದಾಖಲಾಗಿದ್ದಾರೆ ಎನ್ನಲಾಗಿದ್ದು, ಇವರಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬಂದಾರು ಗ್ರಾಮದಲ್ಲಿ ಮದುವೆ ಸಮಾರಂಭಕ್ಕೆ ತೆರಳಿದವರಿಗೆಲ್ಲರಿಗು ವಾಂತಿ,

ಮದುವೆ ಊಟದಿಂದ ಆರೋಗ್ಯದಲ್ಲಿ ಏರುಪೇರು | ಮಹಿಳೆ ಮೃತ್ಯು Read More »

ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದಲ್ಲಿ ಕಾಮಗಾರಿ | ರೈಲು ಸಂಚಾರ ತಾತ್ಕಾಲಿಕ ಬಂದ್‍

ಸುಬ್ರಹ್ಮಣ್ಯ-ಸಕಲೇಶಪುರ ರೈಲ್ವೇ ರಸ್ತೆಯಲ್ಲಿ ಕಾಮಗಾರಿ ಪ್ರಯುಕ್ತ ಜೂ.1 ರಿಂದ ನವೆಂಬರ್ 1 ರ ವರೆಗೆ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಈ ವಿದ್ಯುದೀಕರಣ ಕಾಮಗಾರಿ ನಡೆಯುವ  ಈ ಮಾರ್ಗದಲ್ಲಿ ಶನಿವಾರ ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ ಹಾಗೂ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸಪ್ರೆಸ್  ರದ್ದಾಗಲಿದೆ. ಜೂನ್ 1 ರಿಂದ ಅಕ್ಟೋಬರ್ 30ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ ಎಕ್ಸ್‍ ಪ್ರೆಸ್ ರೈಲು, ಜೂನ್ 2 ರಿಂದ

ಸುಬ್ರಹ್ಮಣ್ಯ-ಸಕಲೇಶಪುರ ರೈಲು ಮಾರ್ಗದಲ್ಲಿ ಕಾಮಗಾರಿ | ರೈಲು ಸಂಚಾರ ತಾತ್ಕಾಲಿಕ ಬಂದ್‍ Read More »

error: Content is protected !!
Scroll to Top