ದಕ್ಷಿಣ ಕನ್ನಡ

ಸುಳ್ಯ: ರಿಕ್ಷಾ ಚಾಲಕನ ಸಾವಿಗೆ ಕಾರಣವಾದ ಕಾರು ಮಡಿಕೇರಿಯಲ್ಲಿ ವಶ

ರಿಕ್ಷಾಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಪಲಾಯನ ಮಾಡಿದ್ದ ಕಾರು ಸುಳ್ಯ: ಕೊಡಗು ಸಂಪಾಜೆಯಲ್ಲಿ ಬುಧವಾರ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕನ ಸಾವಿಗೆ ಕಾರಣವಾಗಿದ್ದ ಕಾರನ್ನು ಮಡಿಕೇರಿಯಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಿಕ್ಷಾಕ್ಕೆ ಹಿಂದಿನಿಂದ ಕಾರು ಗುದ್ದಿದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಚಾಲಕ ಸುಂದರ ಸಾವಿಗೀಡಾಗಿದ್ದರು. ಕಾರನ್ನು ಮಡಿಕೇರಿ ಸಮೀಪದ ಕಾಟಕೇರಿಯಲ್ಲಿ ಮಡಿಕೇರಿ ಪೋಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಲ್ಲಿದ್ದವರು ಮೈಸೂರಿನವರೆಂದು ತಿಳಿದುಬಂದಿದ್ದು ಅವರನ್ನು ಪೋಲೀಸರು ತಮ್ಮ ವಶ ಇರಿಸಿಕೊಂಡಿದ್ದಾರೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು […]

ಸುಳ್ಯ: ರಿಕ್ಷಾ ಚಾಲಕನ ಸಾವಿಗೆ ಕಾರಣವಾದ ಕಾರು ಮಡಿಕೇರಿಯಲ್ಲಿ ವಶ Read More »

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ

ಪೌರಾಯುಕ್ತಗೆ ನಿಂದಿಸಿ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರಸ್‌ ಮುಖಂಡ ಮಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ ಹಾಕಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡ ತಂಗಿದ್ದ ರೆಸಾರ್ಟ್, ಆತನ ಕಾರು ಪತ್ತೆಯಾಗಿದ್ದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಗುರುವಾರ ಸಂಜೆ ಶಿಡ್ಲಘಟ್ಟದ ಪೊಲೀಸರು ಮಹಜರು ನಡೆಸಿದ್ದಾರೆ. ಗುರುವಾರ ಸಂಜೆ ಸುಮಾರು 5 ಗಂಟೆಯ ವೇಳೆಗೆ ಪೊಲೀಸ್ ವಾಹನದಲ್ಲಿ ಪಚ್ಚನಾಡಿಗೆ ಬಂದು ಒಂದು ಗಂಟೆಗೂ ಹೆಚ್ಚು ಕಾಲ ಮಹಜರು ನಡೆಸಿ ಆತ ವಾಸ್ತವ್ಯ ಇದ್ದುದಕ್ಕೆ ಪೂರಕ ಸಾಕ್ಷಿ

ಮಂಗಳೂರು: ರಾಜೀವ್‌ ಗೌಡ ತಂಗಿದ್ದ ಫಾರ್ಮ್‌ ಹೌಸ್‌ನಲ್ಲಿ ಪೊಲೀಸ್‌ ಶೋಧ Read More »

ದೈವಗಳ ಮೂರ್ತಿ, ಕಡ್ಸಲೆ ಕದ್ದವರು ಅರೆಸ್ಟ್‌

ಜನರಿಲ್ಲದ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ರೌಡಿಶೀಟರ್‌ ​ಮಂಗಳೂರು : ಭಕ್ತಿಯ ಕೇಂದ್ರವಾದ ದೈವಸ್ಥಾನದ ಪೂಜಾ ಪರಿಕರಗಳನ್ನು ಕದ್ದುಕೊಂಡು ಹೋಗಿದ್ದ ಕಳ್ಳರಿಬ್ಬರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಮನೆಯ ಛಾವಣಿಯ ಹಂಚು ತೆಗೆದು ಒಳನುಗ್ಗಿ, ದೈವಗಳ ಮೂರ್ತಿ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ್ದ ಅನ್ಯಮತೀಯ ಕಳ್ಳರು ಈಗ ಪೊಲೀಸರ ಅತಿಥಿಗಳಾಗಿದ್ದಾರೆ.​​ಕುಳಾಯಿ ಗ್ರಾಮದ ಅಮಿತಾ ಎಂಬವರ ತಾಯಿ ಮನೆಯಲ್ಲಿ ದೈವಗಳ ಆರಾಧನೆ ನಡೆಯುತ್ತಿತ್ತು. ಆದರೆ ಮನೆಯಲ್ಲಿ ಯಾರೂ ಖಾಯಂ ವಾಸವಿಲ್ಲ. ಜನ ವಾಸವಿಲ್ಲದ ಈ ಮನೆಯನ್ನೇ ಗುರಿಯಾಗಿಸಿಕೊಂಡ ಕಳ್ಳರು ಕಳೆದ

ದೈವಗಳ ಮೂರ್ತಿ, ಕಡ್ಸಲೆ ಕದ್ದವರು ಅರೆಸ್ಟ್‌ Read More »

ರಾಜೀವ್‌ ಗೌಡನಿಗೆ ಆಶ್ರಯ ನೀಡಿದ ಉದ್ಯಮಿ ಬಂಧನ, ಜಾಮೀನಿನಲ್ಲಿ ಬಿಡುಗಡೆ

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಆರೋಪಿಗೆ ಅಡಗಿಕೊಳ್ಳಲು ಮಂಗಳೂರಿನಲ್ಲಿ ಆಶ್ರಯ ನೀಡಿದ ಉದ್ಯಮಿ ಮಂಗಳೂರು : ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ್ದ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡನಿಗೆ ತಲೆಮರೆಸಿಕೊಳ್ಳಲು ಸಹಕರಿಸಿದ್ದ ಮಂಗಳೂರಿನ ಉದ್ಯಮಿಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಮಂಗಳವಾರ ರಾಜೀವ್‌ ಗೌಡನ ಜೊತೆಗೆ ಉದ್ಯಮಿಯನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ರಾಜೀವ್‌ ಗೌಡನಿಗೆ 14 ದಿನಗಳ ಕಸ್ಟಡಿ ವಿಧಿಸಿದೆ. ಉದ್ಯಮಿ ಮೈಕಲ್ ಜೋಸೇಫ್ ರೆಗೋಗೆ ಜಾಮೀನು ನೀಡಿದೆ. ಮೈಕಲ್ ಜೋಸೇಫ್ ರೆಗೋಗೆ ಸೇರಿದ್ದ ಪಚ್ಚನಾಡಿಯ

ರಾಜೀವ್‌ ಗೌಡನಿಗೆ ಆಶ್ರಯ ನೀಡಿದ ಉದ್ಯಮಿ ಬಂಧನ, ಜಾಮೀನಿನಲ್ಲಿ ಬಿಡುಗಡೆ Read More »

ಮಂಗಳೂರು: ಉದ್ಯೋಗ ಸಿಗದ ಬೇಸರದಲ್ಲಿ ಮರ ಏರಿ ಕುಳಿತ ಯುವಕ!

ಮಂಗಳೂರು: ಕೆಲಸ ಸಿಗದ ಹಿನ್ನೆಲೆಯಲ್ಲಿ ಯುವಕನೊಬ್ಬ ಮರವೇರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿ ಕೆಲಹೊತ್ತು ಆತಂಕ ಸೃಷ್ಟಿಸಿರುವ ಘಟನೆ ಮಂಗಳೂರು ನಗರದ ಕರಂಗಲ್ಪಾಡಿಯಲ್ಲಿ ಸೋಮವಾರ ಸಂಜೆ ನಡೆದಿದೆ. ಬಾಗಲಕೋಟೆಯ ಭೀಮಪ್ಪ(24) ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಎಂದು ತಿಳಿದು ಬಂದಿದೆ. ಪೊಲೀಸರು, ಅಗ್ನಿಶಾಮಕ ದಳದವರು, ಸ್ಥಳೀಯರ ನೆರವಿನಿಂದ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿದರು. ಉದ್ಯೋಗ ಹುಡುಕಿಕೊಂಡು ಸ್ನೇಹಿತರೊಂದಿಗೆ ಮಂಗಳೂರಿಗೆ ಬಂದಿದ್ದ ಈತ ಕೆಲಸ ಸಿಗದ ಕಾರಣಕ್ಕಾಗಿ ಮನನೊಂದು ಮರವೇರಿ ಆತ್ಮಹತ್ಯೆ ಮಾಡುವ ಯೋಚನೆ ಮಾಡಿದ್ದ ಎನ್ನಲಾಗಿದೆ. ಮರದಿಂದ

ಮಂಗಳೂರು: ಉದ್ಯೋಗ ಸಿಗದ ಬೇಸರದಲ್ಲಿ ಮರ ಏರಿ ಕುಳಿತ ಯುವಕ! Read More »

ಗಣರಾಜ್ಯೋತ್ಸವ ವೇದಿಕೆಯಲ್ಲೂ ದಿನೇಶ್‌ ಗುಂಡೂರಾವ್‌ ರಾಜಕೀಯ ಭಾಷಣ : ಕ್ಯಾ.ಬ್ರಿಜೇಶ್‌ ಚೌಟ ಖೇದ

ಸುಳ್ಳಿನ ಕಾರ್ಖಾನೆ ವಿಫಲಗೊಂಡ ಹತಾಶೆಯಲ್ಲಿ ರಾಜ್ಯಪಾಲರ ವಿರುದ್ಧ ಟೀಕೆ ಎಂದು ಆರೋಪ ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತಿರುಗೇಟು ನೀಡಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಟಿಯಲ್ಲಿದ್ದಾರೆ ಎನ್ನುವ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕ್ಯಾ.ಬ್ರಿಜೇಶ್‌ ಚೌಟ, ಸಂವಿಧಾನ

ಗಣರಾಜ್ಯೋತ್ಸವ ವೇದಿಕೆಯಲ್ಲೂ ದಿನೇಶ್‌ ಗುಂಡೂರಾವ್‌ ರಾಜಕೀಯ ಭಾಷಣ : ಕ್ಯಾ.ಬ್ರಿಜೇಶ್‌ ಚೌಟ ಖೇದ Read More »

ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

ಬೆಳ್ತಂಗಡಿ: ಮನೆಯ ಬಳಿ ನೀರಿನ ಪಂಪ್ ಆನ್ ಮಾಡುವ ವೇಳೆ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಗುರಿಪಳ್ಳ ಬಳಿಯ ಕಡಿಯಾರು ಗ್ರಾಮದ ‌ಬಳಿ ನಡೆದಿದೆ. ಶಿವಪ್ರಸಾದ್ ಆದಪ್ಪ (48) ಎಂಬವರೇ ‌ಮೃತ ದುರ್ದೈವಿ. ಅವರು ಪ್ರತಿನಿತ್ಯದ ಕೆಲಸ ಮುಗಿಸಿ ಬೆಳಗ್ಗೆ ತಮ್ಮ ಕೆಲಸಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಧಿಸಿದ ಪರಿಣಾಮ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟೇಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷಾ ಹಿನ್ನೆಲೆ

ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು Read More »

ಮಂಗಳೂರು : ಭೀಕರ ಅಗ್ನಿ ಅವಘಡ , ಹಲವು ಅಂಗಡಿಗಳು ಭಸ್ಮ

ಅಂಡರ್ ಗ್ರೌಂಡ್‌ನಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಮಂಗಳೂರು : ನಗರದ ಅಕ್ಬರ್ ಕಾಂಪ್ಲೆಕ್ಸ್‌ನಲ್ಲಿ ಶನಿವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿದ್ದ ಹಲವು ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ಜ್ವಾಲೆಯು ಕಟ್ಟಡದ ಹಲವು ಮಳಿಗೆಗಳಿಗೆ ವ್ಯಾಪಿಸಿದ್ದು, ಇದರಿಂದಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ ಎಂದು ವರದಿಯಾಗಿದೆ. ಅಂಡರ್ ಗ್ರೌಂಡ್‌ನಲ್ಲಿರುವ ಇಲೆಕ್ಟ್ರಾನಿಕ್ಸ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಟ್ಟೆ ಅಂಗಡಿಗೂ ಬೆಂಕಿಯಿಂದ ಹಾನಿ ಉಂಟಾಗಿದೆ. ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಂಗಡಿಗಳಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದು ಬಂದಿದೆ.

ಮಂಗಳೂರು : ಭೀಕರ ಅಗ್ನಿ ಅವಘಡ , ಹಲವು ಅಂಗಡಿಗಳು ಭಸ್ಮ Read More »

ರಾಮಕುಂಜ : ತಂದೆಗೆ ಇರಿದು ಮಗ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

ತಂದೆಯೇ ಗುಂಡು ಹಾರಿಸಿ ಮಗನನ್ನು ಸಾಯಿಸಿದ್ದಾರೆ ಎಂದು ದೂರು ಕಡಬ : ಇಲ್ಲಿನ ರಾಮಕುಂಜದಲ್ಲಿ ಶನಿವಾರ ಸಂಜೆ ಬಾಲಕನೋರ್ವ ತಂದೆಗೆ ಇರಿದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ತಂದೆಯೇ ಮಗನಿಗೆ ಕೋವಿಯಿಂದ ಗುಂಡು ಹಾರಿಸಿ ಕೊಲೆ ಮಾಡಿರುವುದಾಗಿ ದೂರು ದಾಖಲಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಕುಂಜದ ಪಾದೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿತ್ತು. ಮೋಕ್ಷ (17) ಗುಂಡೇಟು ತಗುಲಿ ಸಾವನ್ನಪ್ಪಿದ ಬಾಲಕ. ರಾಮಕುಂಜ ಗ್ರಾಮದ ಪಾದೆ ನಿವಾಸಿ ತಂದೆ

ರಾಮಕುಂಜ : ತಂದೆಗೆ ಇರಿದು ಮಗ ಆತ್ಮಹತ್ಯೆ ಪ್ರಕರಣಕ್ಕೆ ತಿರುವು Read More »

ಬ್ಯಾಂಕ್‌ ಮ್ಯಾನೇಜರ್‌ ಸಹಿ ಫೋರ್ಜರಿ ಮಾಡಿ ಲಕ್ಷಾಂತರ ವಂಚನೆ : ನಾಲ್ವರ ವಿರುದ್ಧ ಕೇಸ್‌

ವಾಹನಕ್ಕೆ ಪಡೆದ ಸಾಲ ಸಂದಾಯವಾಗಿದೆ ಎಂದು ಪತ್ರ ತಯಾರಿಸಿದ ಖದೀಮರು ಬಂಟ್ವಾಳ : ವಾಹನವೊಂದಕ್ಕೆ ಬ್ಯಾಂಕ್‌ನಿಂದ ತೆಗೆದ ಲಕ್ಷಾಂತರ ರೂ. ಸಾಲ ಮರುಪಾವತಿಸದೆ ವಂಚಿಸಿದ ಘಟನೆ ನಡೆದಿದೆ. ಬ್ಯಾಂಕ್ ಮುಖ್ಯಸ್ಥರ ಫೋರ್ಜರಿ ಸಹಿಯನ್ನು ಲೆಟರ್ ಹೆಡ್‌ನಲ್ಲಿ ಬಳಸಿ ಸಾಲ ಸಂಪೂರ್ಣ ಸಂದಾಯವಾಗಿರುವುದಾಗಿ ಸುಳ್ಳು ಪತ್ರವನ್ನು ಆರ್.ಟಿ.ಒ.ಕಚೇರಿಗೆ ನೀಡಿರುವುದರ ಕುರಿತು ದೂರು ದಾಖಲಾಗಿದೆ. ಮೂಲತಃ ಬೆಳ್ತಂಗಡಿ ನಿವಾಸಿಗಳಾದ ತನ್ವಿರ್ ಹಾಗೂ ಅವನ ತಾಯಿ ನೆಬಿಶಾ ಮತ್ತು ಜುನೈದ್ ಮೆಲ್ಕಾರ್ ಹಾಗೂ ರಮೀಝ್ ಆಲಿಶ್ ಉಪ್ಪಿನಂಗಡಿ ಅವರ ಮೇಲೆ ಬಂಟ್ವಾಳ

ಬ್ಯಾಂಕ್‌ ಮ್ಯಾನೇಜರ್‌ ಸಹಿ ಫೋರ್ಜರಿ ಮಾಡಿ ಲಕ್ಷಾಂತರ ವಂಚನೆ : ನಾಲ್ವರ ವಿರುದ್ಧ ಕೇಸ್‌ Read More »

error: Content is protected !!
Scroll to Top