ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡಬೇಕು: ಸೀತಾರಾಮ ಕೇವಳ | ಕಡಬ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಸಮಾರಂಭ
ಕಡಬ: ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಶನಿವಾರ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ನ್ಯೂಸ್ ಪುತ್ತೂರು ಇದರ ಅಧ್ಯಕ್ಷ ಸೀತಾರಾಮ ಕೇವಳ ಮಾತನಾಡಿ, ವಿದ್ಯಾರ್ಥಿಗಳು ಗುರುಗಳಿಗಿಂತಲೂ ಹೆಚ್ಚಿನ ಸಾಧನೆ ಮಾಡಿದಾಗ ನಿಜವಾದ ಗುರುಕಾಣಿಕೆ ನೀಡಿದಂತಾಗುತ್ತದೆ. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ನೀಡುವುದು ನಮ್ಮ ಕರ್ತವ್ಯವಾಗಬೇಕು. ಇಲ್ಲಿ ಕಾಲೇಜಿನ ಅಭಿವೃದ್ಧಿ ಮಂಡಳಿ ಬೆವರಿಳಿಸಿ ದುಡಿದು ಗಳಿಸಿದ ಸ್ವಂತ ಸಂಪಾದನೆಯ ಒಂದು ಭಾಗವನ್ನು ಕಾಲೇಜಿನ ಬಿಸಿ ಊಟದ ವ್ಯವಸ್ಥೆಗೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳಾದ ನೀವು ದುಡಿದು ಗಳಿಸಿ ಮುಂದಿನ […]










